Homeಚಳವಳಿಹೋರಾಟವನ್ನು ಬೆಚ್ಚಗಿರಿಸುತ್ತಿರುವ 'ಟ್ರ್ಯಾಲಿ' ಎಂಬ ರೈತರ ಬದುಕಿನ ಬಂಡಿ!

ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ಹೊಲದಲ್ಲಿ ಕೃಷಿ ಜೀವನದ ಪ್ರಮುಖ ಅಂಗವಾಗಿದ್ದ ಈ ಟ್ರ್ಯಾಕ್ಟರ್‌ಗಳು, ಐತಿಹಾಸಿಕ ಹೋರಾಟದಲ್ಲಿಯೂ ನಮ್ಮ ಕೈ ಬಿಟ್ಟಿಲ್ಲ ಎನ್ನುತ್ತಾರೆ ರೈತರು

- Advertisement -
- Advertisement -

ಐತಿಹಾಸಿಕ ರೈತ ಹೋರಾಟದಲ್ಲಿ ರೈತರ ಜೀವನದ ಬಹುಭಾಗವನ್ನು ಆವರಿಸಿರುವುದು ಟ್ರ್ಯಾಲಿಗಳಾಗಿದೆ. ಕೃಷಿ ಕ್ಷೇತ್ರದಲ್ಲಿ ಉಳುಮೆ ಮಾಡುವ, ಬೆಳೆಯನ್ನು ಮಾರುಕಟ್ಟೆಗೆ ಕೊಂಡೊಯ್ಯುವ ಪಾತ್ರ ವಹಿಸುತ್ತಿದ್ದ ಈ ಟ್ರ್ಯಾಕ್ಟರ್‌ಗಳು ಈಗ ಹೋರಾಟನಿರತ ರೈತರ ವಾಸ್ತವ್ಯದ ಟ್ರ್ಯಾಲಿಗಳಾಗಿ ಮಾರ್ಪಾಡಾಗಿವೆ. ದೊಡ್ಡ ಹೋರಾಟಕ್ಕೆ ಸಾಕ್ಷಿಯಾಗಿರುವ ಸಿಂಘು ಗಡಿ, ಟಿಕ್ರಿ ಬಾರ್ಡರ್‌, ದಾರುಹೇರಾ ಬಾರ್ಡರ್‌ಗಳಲ್ಲಿ ಈ ಟ್ರ್ಯಾಲಿಗಳ ಪಾತ್ರ ಅತಿ ಮಹತ್ವದ್ದು. ಶಹಜಾನ್‌ಪುರ್‌, ಗಾಜಿಯಾಪುರ್ ಮತ್ತು ಚಿಲ್ಲಾ (ನೊಯಿಡಾ ಗೇಟ್)ಗಳಲ್ಲಿ ಟ್ರ್ಯಾಲಿ ಮತ್ತ ಟೆಂಟ್‌ ಎರಡರ ಬಳಕೆಯು ಹೆಚ್ಚಾಗಿದೆ.

ಪ್ರತಿಭಟನಾ ಸ್ಥಳಗಳಲ್ಲಿ ರೈತರು ಮತ್ತು ಪ್ರತಿಭಟನಾಕಾರರ ಬೆಂಬಲಿಗರ ಮನೆಗಳಾಗಿ ಮಾರ್ಪಾಡಾಗಿರುವ ಟ್ರ್ಯಾಲಿಗಳ ಒಳ ವಿನ್ಯಾಸವನ್ನು ತಮಗೆ ಅನುಕೂಲವಾಗುವಂತೆ ಬದಲಿಸಿಕೊಂಡಿದ್ದಾರೆ. ಚಳಿ, ಅತಿಯಾದ ಗಾಳಿ ಮತ್ತು ಮಳೆಗೆ ಜಗ್ಗದಂತಹ ಟ್ರ್ಯಾಲಿಗಳ ಮರುನಿರ್ಮಾಣ ಕೂಡ ಕೊಂಚ ಕಷ್ಟದ ಕೆಲಸವೆ. ಆದರೂ ಉತ್ತಮ ಟ್ರ್ಯಾಲಿಗಳನ್ನು ರೈತರು ಕಟ್ಟಿದ್ದಾರೆ.

ಇದನ್ನೂ ಓದಿ: ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು

ಟ್ರ್ಯಾಲಿಗಳಲ್ಲಿ ವಾಸಿಸುವವರಿಗೆ ಬೇಕಾದ ವಿದ್ಯುತ್‌ ದೀಪಗಳ ವ್ಯವಸ್ಥೆ, ಚಾರ್ಜಿಂಗ್‌ ವ್ಯವಸ್ಥೆ, ಮಲಗಲು ಸ್ಥಳ, ಹೊದಿಕೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಹೊರಗಡೆಯಿಂದ ಗಾಳಿ ಒಳಗೆ ಹೋಗದಂತೆ ತಡೆಯಲು ದಪ್ಪದ ಟಾರ್ಪಾಲ್‌ಗಳನ್ನು ಜೋಡಿಸಿದ್ದಾರೆ. ಇನ್ನು ಟ್ರ್ಯಾಲಿ ಹತ್ತಲು ಮತ್ತು ಇಳಿಯಲು ಉಪಯೋಗವಾಗುವಂತೆ ಮರದ ಮೆಟ್ಟಿಲುಗಳನ್ನು ಮಾಡಿ ಅದನ್ನು ಟ್ರ್ಯಾಕ್ಟರ್‌ಗಳಿಗೆ ಜೋಡಿಸಲಾಗಿದೆ.

ಕೆಲವು ಟ್ರ್ಯಾಲಿಗಳಲ್ಲಿ ಹಾಸಿಗೆ ಹಾಸುವ ಜಾಗದಲ್ಲಿ ಮೊದಲು ಭತ್ತದ ಹುಲ್ಲು ಹಾಕಲಾಗಿದೆ. ಹುಲ್ಲಿನ ಮೇಲೆ ಟಾರ್ಪಾಲ್‌ ಅದರ ಮೇಲೆ ಹಾಸಿಗೆ ನಂತರ ಅದರ ಮೇಲೆ ಬೆಡ್‌ಶೀಟ್‌ಗಳನ್ನು ಹಾಕಲಾಗುತ್ತದೆ. “ಇದು ಬೆಚ್ಚಗಿನ ಅನುಭವ ನೀಡುತ್ತದೆ, ಹಾಗಾಗಿ ಹಾಸಿದ್ದೇವೆ” ಎಂದು ರೈತರು ಹೇಳುತ್ತಾರೆ. ಮಕ್ಕಳು, ಮಹಿಳೆಯರ ಸುರಕ್ಷತೆಗೂ ಹೆಚ್ಚು ಆದ್ಯತೆ ನೀಡಬೇಕಾಗಿರುವುದರಿಂದ ಟ್ರ್ಯಾಲಿಗಳನ್ನು ಮತ್ತಷ್ಟು ಗಟ್ಟಿಯಾಗಿ ನಿರ್ಮಿಸಿರುತ್ತಾರೆ.

ಟ್ರ್ಯಾಲಿಗಳನ್ನು ನಿರ್ಮಿಸಿರುವ ಟ್ರ್ಯಾಕ್ಟರ್‌ಗಳು ನಮ್ಮ ಭಾಗದ ಟ್ರ್ಯಾಕ್ಟರ್‌ಗಳ ರೀತಿಯಲ್ಲಿ ಟೊಳ್ಳಾಗಿರದೆ, ಗಟ್ಟಿ ಮುಟ್ಟಾಗಿ ಇರುತ್ತವೆ. ಲಾರಿಗಳ ರೀತಿಯಲ್ಲಿ ಇಲ್ಲಿನ ಟ್ರ್ಯಾಕ್ಟರ್‌ಗಳಿವೆ. ತಮ್ಮ ಮನೆಯ ಸದಸ್ಯನಂತೆ ಟ್ರ್ಯಾಕ್ಟರ್‌ಗಳನ್ನು ನೋಡಿಕೊಳ್ಳುವುದಾಗಿ ಇಲ್ಲಿನ ಜನ ಹೇಳುತ್ತಾರೆ. ದೇವರಿಗೆ ಪೂಜೆ ಮಾಡುವಂತೆ ದಿನ ಟ್ರ್ಯಾಕ್ಟರ್‌ಗಳಿಗೂ ಇಲ್ಲಿನ ರೈತರು ಪೂಜೆ ಸಲ್ಲಿಸುತ್ತಾರೆ.

ಇದನ್ನೂ ಓದಿ: ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಹೊಲದಲ್ಲಿ ನಮ್ಮ ಕೃಷಿ ಜೀವನದ ಪ್ರಮುಖ ಅಂಗವಾಗಿದ್ದ ಟ್ರ್ಯಾಕ್ಟರ್‌ಗಳು, ಈ ನಮ್ಮ ಐತಿಹಾಸಿಕ ಹೋರಾಟದಲ್ಲಿಯೂ ನಮ್ಮ ಕೈ ಬಿಟ್ಟಿಲ್ಲ. ಇಲ್ಲೂ ನಮ್ಮ ಜೊತೆಗೆ ಪ್ರತಿಭಟನೆಯಲ್ಲಿ ನಮ್ಮ ಮನೆಗಳಾಗಿ ತಮ್ಮ ಕಾರ್ಯನಿವರ್ಹಿಸುತ್ತಿವೆ ಎಂದು ರೈತರು ಮನದುಂಬಿ ಹೇಳುತ್ತಾರೆ.

ಜನವರಿ 7 ರ ಟ್ರ್ಯಾಕ್ಟರ್‌ ಮಾರ್ಚ್‌ ಪೂವಾಭ್ಯಾಸದಲ್ಲೂ ಸಾಥ್‌ ನೀಡಿರುವ ಇವುಗಳು ಮುಂದೆ ಜನವರಿ 26 ರ ಗಣರಾಜ್ಯೋತ್ಸವದಂದು ನಡೆಯಲಿರುವ ಐತಿಹಾಸಿಕ ಟ್ರ್ಯಾಕ್ಟರ್‌ ರ್‍ಯಾಲಿಯಲ್ಲೂ ನಮ್ಮ ಶಕ್ತಿ ಪ್ರದರ್ಶನಕ್ಕೆ ಸಾಥ್‌ ನೀಡಲಿವೆ. ಪಂಜಾಬ್‌, ಹರಿಯಾಣ, ರಾಜಸ್ಥಾನ, ಕೇರಳದಿಂದಲೂ ಈಗಾಗಲೇ ಸಾವಿರಾರು ಟ್ರ್ಯಾಕ್ಟರ್‌ಗಳು ದೆಹಲಿಯತ್ತ ಬರುತ್ತಿವೆ. ಇವು ನಮ್ಮ ಟ್ರ್ಯಾಕ್ಟರ್‌, ಟ್ರ್ಯಾಲಿ ಮಾತ್ರವಲ್ಲ ನಮ್ಮ ಜೀವನದ ಸಾಥಿ (ಗೆಳೆಯ) ಎಂದು ರೈತರು ಹೆಮ್ಮೆಯಿಂದ ಹೇಳುತ್ತಾರೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲೆ ಲೋಹ್ರಿ (ಸಂಕ್ರಾಂತಿ) ಆಚರಿಸಿ, ಕೇಂದ್ರಕ್ಕೆ ತಲೆ ಬಾಗುವುದಿಲ್ಲವೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. As the Supreme court of India stayed the three agriculture laws and constituted a committee to resolve the issue, the so called leaders of farmers should a obey the supreme order

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...