Homeಚಳವಳಿಹೋರಾಟವನ್ನು ಬೆಚ್ಚಗಿರಿಸುತ್ತಿರುವ 'ಟ್ರ್ಯಾಲಿ' ಎಂಬ ರೈತರ ಬದುಕಿನ ಬಂಡಿ!

ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ಹೊಲದಲ್ಲಿ ಕೃಷಿ ಜೀವನದ ಪ್ರಮುಖ ಅಂಗವಾಗಿದ್ದ ಈ ಟ್ರ್ಯಾಕ್ಟರ್‌ಗಳು, ಐತಿಹಾಸಿಕ ಹೋರಾಟದಲ್ಲಿಯೂ ನಮ್ಮ ಕೈ ಬಿಟ್ಟಿಲ್ಲ ಎನ್ನುತ್ತಾರೆ ರೈತರು

- Advertisement -
- Advertisement -

ಐತಿಹಾಸಿಕ ರೈತ ಹೋರಾಟದಲ್ಲಿ ರೈತರ ಜೀವನದ ಬಹುಭಾಗವನ್ನು ಆವರಿಸಿರುವುದು ಟ್ರ್ಯಾಲಿಗಳಾಗಿದೆ. ಕೃಷಿ ಕ್ಷೇತ್ರದಲ್ಲಿ ಉಳುಮೆ ಮಾಡುವ, ಬೆಳೆಯನ್ನು ಮಾರುಕಟ್ಟೆಗೆ ಕೊಂಡೊಯ್ಯುವ ಪಾತ್ರ ವಹಿಸುತ್ತಿದ್ದ ಈ ಟ್ರ್ಯಾಕ್ಟರ್‌ಗಳು ಈಗ ಹೋರಾಟನಿರತ ರೈತರ ವಾಸ್ತವ್ಯದ ಟ್ರ್ಯಾಲಿಗಳಾಗಿ ಮಾರ್ಪಾಡಾಗಿವೆ. ದೊಡ್ಡ ಹೋರಾಟಕ್ಕೆ ಸಾಕ್ಷಿಯಾಗಿರುವ ಸಿಂಘು ಗಡಿ, ಟಿಕ್ರಿ ಬಾರ್ಡರ್‌, ದಾರುಹೇರಾ ಬಾರ್ಡರ್‌ಗಳಲ್ಲಿ ಈ ಟ್ರ್ಯಾಲಿಗಳ ಪಾತ್ರ ಅತಿ ಮಹತ್ವದ್ದು. ಶಹಜಾನ್‌ಪುರ್‌, ಗಾಜಿಯಾಪುರ್ ಮತ್ತು ಚಿಲ್ಲಾ (ನೊಯಿಡಾ ಗೇಟ್)ಗಳಲ್ಲಿ ಟ್ರ್ಯಾಲಿ ಮತ್ತ ಟೆಂಟ್‌ ಎರಡರ ಬಳಕೆಯು ಹೆಚ್ಚಾಗಿದೆ.

ಪ್ರತಿಭಟನಾ ಸ್ಥಳಗಳಲ್ಲಿ ರೈತರು ಮತ್ತು ಪ್ರತಿಭಟನಾಕಾರರ ಬೆಂಬಲಿಗರ ಮನೆಗಳಾಗಿ ಮಾರ್ಪಾಡಾಗಿರುವ ಟ್ರ್ಯಾಲಿಗಳ ಒಳ ವಿನ್ಯಾಸವನ್ನು ತಮಗೆ ಅನುಕೂಲವಾಗುವಂತೆ ಬದಲಿಸಿಕೊಂಡಿದ್ದಾರೆ. ಚಳಿ, ಅತಿಯಾದ ಗಾಳಿ ಮತ್ತು ಮಳೆಗೆ ಜಗ್ಗದಂತಹ ಟ್ರ್ಯಾಲಿಗಳ ಮರುನಿರ್ಮಾಣ ಕೂಡ ಕೊಂಚ ಕಷ್ಟದ ಕೆಲಸವೆ. ಆದರೂ ಉತ್ತಮ ಟ್ರ್ಯಾಲಿಗಳನ್ನು ರೈತರು ಕಟ್ಟಿದ್ದಾರೆ.

ಇದನ್ನೂ ಓದಿ: ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು

ಟ್ರ್ಯಾಲಿಗಳಲ್ಲಿ ವಾಸಿಸುವವರಿಗೆ ಬೇಕಾದ ವಿದ್ಯುತ್‌ ದೀಪಗಳ ವ್ಯವಸ್ಥೆ, ಚಾರ್ಜಿಂಗ್‌ ವ್ಯವಸ್ಥೆ, ಮಲಗಲು ಸ್ಥಳ, ಹೊದಿಕೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಹೊರಗಡೆಯಿಂದ ಗಾಳಿ ಒಳಗೆ ಹೋಗದಂತೆ ತಡೆಯಲು ದಪ್ಪದ ಟಾರ್ಪಾಲ್‌ಗಳನ್ನು ಜೋಡಿಸಿದ್ದಾರೆ. ಇನ್ನು ಟ್ರ್ಯಾಲಿ ಹತ್ತಲು ಮತ್ತು ಇಳಿಯಲು ಉಪಯೋಗವಾಗುವಂತೆ ಮರದ ಮೆಟ್ಟಿಲುಗಳನ್ನು ಮಾಡಿ ಅದನ್ನು ಟ್ರ್ಯಾಕ್ಟರ್‌ಗಳಿಗೆ ಜೋಡಿಸಲಾಗಿದೆ.

ಕೆಲವು ಟ್ರ್ಯಾಲಿಗಳಲ್ಲಿ ಹಾಸಿಗೆ ಹಾಸುವ ಜಾಗದಲ್ಲಿ ಮೊದಲು ಭತ್ತದ ಹುಲ್ಲು ಹಾಕಲಾಗಿದೆ. ಹುಲ್ಲಿನ ಮೇಲೆ ಟಾರ್ಪಾಲ್‌ ಅದರ ಮೇಲೆ ಹಾಸಿಗೆ ನಂತರ ಅದರ ಮೇಲೆ ಬೆಡ್‌ಶೀಟ್‌ಗಳನ್ನು ಹಾಕಲಾಗುತ್ತದೆ. “ಇದು ಬೆಚ್ಚಗಿನ ಅನುಭವ ನೀಡುತ್ತದೆ, ಹಾಗಾಗಿ ಹಾಸಿದ್ದೇವೆ” ಎಂದು ರೈತರು ಹೇಳುತ್ತಾರೆ. ಮಕ್ಕಳು, ಮಹಿಳೆಯರ ಸುರಕ್ಷತೆಗೂ ಹೆಚ್ಚು ಆದ್ಯತೆ ನೀಡಬೇಕಾಗಿರುವುದರಿಂದ ಟ್ರ್ಯಾಲಿಗಳನ್ನು ಮತ್ತಷ್ಟು ಗಟ್ಟಿಯಾಗಿ ನಿರ್ಮಿಸಿರುತ್ತಾರೆ.

ಟ್ರ್ಯಾಲಿಗಳನ್ನು ನಿರ್ಮಿಸಿರುವ ಟ್ರ್ಯಾಕ್ಟರ್‌ಗಳು ನಮ್ಮ ಭಾಗದ ಟ್ರ್ಯಾಕ್ಟರ್‌ಗಳ ರೀತಿಯಲ್ಲಿ ಟೊಳ್ಳಾಗಿರದೆ, ಗಟ್ಟಿ ಮುಟ್ಟಾಗಿ ಇರುತ್ತವೆ. ಲಾರಿಗಳ ರೀತಿಯಲ್ಲಿ ಇಲ್ಲಿನ ಟ್ರ್ಯಾಕ್ಟರ್‌ಗಳಿವೆ. ತಮ್ಮ ಮನೆಯ ಸದಸ್ಯನಂತೆ ಟ್ರ್ಯಾಕ್ಟರ್‌ಗಳನ್ನು ನೋಡಿಕೊಳ್ಳುವುದಾಗಿ ಇಲ್ಲಿನ ಜನ ಹೇಳುತ್ತಾರೆ. ದೇವರಿಗೆ ಪೂಜೆ ಮಾಡುವಂತೆ ದಿನ ಟ್ರ್ಯಾಕ್ಟರ್‌ಗಳಿಗೂ ಇಲ್ಲಿನ ರೈತರು ಪೂಜೆ ಸಲ್ಲಿಸುತ್ತಾರೆ.

ಇದನ್ನೂ ಓದಿ: ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಹೊಲದಲ್ಲಿ ನಮ್ಮ ಕೃಷಿ ಜೀವನದ ಪ್ರಮುಖ ಅಂಗವಾಗಿದ್ದ ಟ್ರ್ಯಾಕ್ಟರ್‌ಗಳು, ಈ ನಮ್ಮ ಐತಿಹಾಸಿಕ ಹೋರಾಟದಲ್ಲಿಯೂ ನಮ್ಮ ಕೈ ಬಿಟ್ಟಿಲ್ಲ. ಇಲ್ಲೂ ನಮ್ಮ ಜೊತೆಗೆ ಪ್ರತಿಭಟನೆಯಲ್ಲಿ ನಮ್ಮ ಮನೆಗಳಾಗಿ ತಮ್ಮ ಕಾರ್ಯನಿವರ್ಹಿಸುತ್ತಿವೆ ಎಂದು ರೈತರು ಮನದುಂಬಿ ಹೇಳುತ್ತಾರೆ.

ಜನವರಿ 7 ರ ಟ್ರ್ಯಾಕ್ಟರ್‌ ಮಾರ್ಚ್‌ ಪೂವಾಭ್ಯಾಸದಲ್ಲೂ ಸಾಥ್‌ ನೀಡಿರುವ ಇವುಗಳು ಮುಂದೆ ಜನವರಿ 26 ರ ಗಣರಾಜ್ಯೋತ್ಸವದಂದು ನಡೆಯಲಿರುವ ಐತಿಹಾಸಿಕ ಟ್ರ್ಯಾಕ್ಟರ್‌ ರ್‍ಯಾಲಿಯಲ್ಲೂ ನಮ್ಮ ಶಕ್ತಿ ಪ್ರದರ್ಶನಕ್ಕೆ ಸಾಥ್‌ ನೀಡಲಿವೆ. ಪಂಜಾಬ್‌, ಹರಿಯಾಣ, ರಾಜಸ್ಥಾನ, ಕೇರಳದಿಂದಲೂ ಈಗಾಗಲೇ ಸಾವಿರಾರು ಟ್ರ್ಯಾಕ್ಟರ್‌ಗಳು ದೆಹಲಿಯತ್ತ ಬರುತ್ತಿವೆ. ಇವು ನಮ್ಮ ಟ್ರ್ಯಾಕ್ಟರ್‌, ಟ್ರ್ಯಾಲಿ ಮಾತ್ರವಲ್ಲ ನಮ್ಮ ಜೀವನದ ಸಾಥಿ (ಗೆಳೆಯ) ಎಂದು ರೈತರು ಹೆಮ್ಮೆಯಿಂದ ಹೇಳುತ್ತಾರೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲೆ ಲೋಹ್ರಿ (ಸಂಕ್ರಾಂತಿ) ಆಚರಿಸಿ, ಕೇಂದ್ರಕ್ಕೆ ತಲೆ ಬಾಗುವುದಿಲ್ಲವೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. As the Supreme court of India stayed the three agriculture laws and constituted a committee to resolve the issue, the so called leaders of farmers should a obey the supreme order

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....