Homeಮುಖಪುಟಅಮೆರಿಕದ ವೈಟ್​ಹೌಸ್​ ತಡೆಗೋಡೆಗೆ ಟ್ರಕ್​ ಡಿಕ್ಕಿ; ಭಾರತೀಯ ಮೂಲದ ವ್ಯಕ್ತಿಯಿಂದ ಜೋ ಬೈಡನ್ ​ಹತ್ಯೆಗೆ ಯತ್ನ:...

ಅಮೆರಿಕದ ವೈಟ್​ಹೌಸ್​ ತಡೆಗೋಡೆಗೆ ಟ್ರಕ್​ ಡಿಕ್ಕಿ; ಭಾರತೀಯ ಮೂಲದ ವ್ಯಕ್ತಿಯಿಂದ ಜೋ ಬೈಡನ್ ​ಹತ್ಯೆಗೆ ಯತ್ನ: ಆರೋಪ

- Advertisement -
- Advertisement -

ಭಾರತೀಯ ಮೂಲದ ಸಾಯಿ ವರ್ಷಿತ್ ಕಂದುಲಾ ಎನ್ನುವ ವ್ಯಕ್ತಿ ಸೋಮವಾರ ಅಮೆರಿಕದ ಶ್ವೇತಭವನದ ಬಳಿ ಭದ್ರತಾ ತಡೆಗೋಡೆಗಳಿಗೆ ಟ್ರಕ್‌ನಿಂದ ಡಿಕ್ಕಿ ಹೊಡೆದಿದ್ದಾನೆ. ಆತನನ್ನು ವಾಷಿಂಗ್ಟನ್‌ನಲ್ಲಿ ಬಂಧಿಸಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಟ್ರಕ್​ನಲ್ಲಿ ಸ್ವಸ್ತಿಕ್ ಚಿಹ್ನೆಯ ಬಾವುಟವೊಂದು ಪತ್ತೆಯಾಗಿದೆ, ಎರಡು ಬಾರಿ ತಡೆಗೋಡೆಗೆ ಚಾಲಕ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಉದ್ದೇಶಪೂರ್ವಕವಾಗಿಯೇ ತಡೆಗೋಡೆಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ​ನನ್ನು ಹತ್ಯೆ ಮಾಡಲು ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಈ ಅಪಘಾತದ ಬಳಿಕ ಸಾಯಿ ವರ್ಷಿತ್ ಕಂದುಲಾ, ನಾಜಿ ಧ್ವಜವನ್ನು ಬೆನ್ನಹಿಂದಿನಿಂದ ಹೊರತಗೆದು, ಅಮೆರಿಕಾ ಅಧ್ಯಕ್ಷರನ್ನು ಕೊಲ್ಲಲು ಬಯಸಿದ್ದೇನೆ. ನಾನು ಅಡಾಲ್ಫ್ ಹಿಟ್ಲರ್‌ನನ್ನು ಇಷ್ಟಪಡುತ್ತೇನೆ ಎಂದು ಹೇಳಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಸಾಯಿ ವರ್ಷಿತ್ ಕಂದುಲಾ ಯಾರು?

19ವರ್ಷದ ಸಾಯಿ ವರ್ಷ್ ಕಂದುಲಾ ಭಾರತೀಯ ಮೂಲದ ವ್ಯಕ್ತಿಯಾಗಿದ್ದು, ಶ್ವೇತಭವನದ ಉದ್ಯಾನವನದಲ್ಲಿ ಅಡ್ಡಲಾಗಿರುವ ಭದ್ರತಾ ತಡೆಗೋಡೆಗೆ ಉದ್ದೇಶಪೂರ್ವಕವಾಗಿ ಟ್ರಕ್‌ನ್ನು ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ನಾಜಿ, ಹಿಟ್ಲರ್ ಅಭಿಮಾನಿಯಾಗಿರುವ ಕಂದುಲಾ, ಅಮೆರಿಕಾ ಸರ್ಕಾರದಿಂದ “ಅಧಿಕಾರವನ್ನು ವಶಪಡಿಸಿಕೊಳ್ಳುವ” ಯೋಜನೆ ಹಾಕಿಕೊಂಡಿದ್ದೇನೆ ಎಂದು ನಾಜಿ ಧ್ವಜವನ್ನು ಸುತ್ತಲೂ ಬೀಸಿದನು ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಅಧ್ಯಕ್ಷರು, ಉಪಾಧ್ಯಕ್ಷರು ಅಥವಾ ಕುಟುಂಬದ ಸದಸ್ಯರನ್ನು ಕೊಲ್ಲುವ ಅಥವಾ ಅಪಹರಿಸುವ ಅಥವಾ ಹಾನಿ ಮಾಡುವ ಬೆದರಿಕೆ ಹಾಕುವ ಆರೋಪವನ್ನು ಕುಂದುಲಾ ವಿರುದ್ಧ ಹೊರಿಸಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಮಿಸೌರಿಯ ನಿವಾಸಿ ಕಂದುಲಾ ಅವರು ಸೋಮವಾರ ಸಂಜೆ ವಾಷಿಂಗ್ಟನ್‌ಗೆ ತಲುಪಿದರು. ಅಲ್ಲಿ ವಿಮಾನ ನಿಲ್ದಾಣದ ಬಳಿಯಿಂದ ಟ್ರಕ್ ಅನ್ನು ಬಾಡಿಗೆಗೆ ಪಡೆದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. ರಾತ್ರಿ 9.35 ರ ಸುಮಾರಿಗೆ, ಅವರು ಶ್ವೇತಭವನದ ಮುಂಭಾಗದ ಉದ್ಯಾನವನವಾದ ಲಫಯೆಟ್ಟೆ ಸ್ಕ್ವೇರ್ ಬಳಿಯ ಪಾದಚಾರಿ ಮಾರ್ಗದಲ್ಲಿ ಭದ್ರತಾ ತಡೆಗೋಡೆಗಳಿಗೆ ಡಿಕ್ಕಿ ಹೊಡೆದು, ಆ ನಂತರ ಟ್ರಕ್ ಅನ್ನು ಹಿಮ್ಮುಖವಾಗಿ ಚಲಿಸಿ ತಡೆಗೋಡೆಗೆ ಪದೇ ಪದೇ ಡಿಕ್ಕಿ ಹೊಡೆದಿದ್ದಾರೆ.

ಇದನ್ನೂ ಓದಿ: ಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್ ವಾಗ್ದಾಳಿ

ಕುಂದುಲಾನನ್ನು ಬಂಧಿಸಿದ ನಂತರ, ಅವರು ನಾಜಿಗಳ “ಮಹಾ ಇತಿಹಾಸ” ಮತ್ತು ಅವರ “ಸರ್ವಾಧಿಕಾರಿ ಸ್ವಭಾವದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅವರ ಆಡಳಿತಾತ್ಮಕ ಕ್ರಮ ಇಷ್ಟವಾಗಿ ನಾನು ಆನ್ಲೈನ್‌ನಲ್ಲಿ ನಾಜಿಯಾದ ಧ್ವಜ ಖರಿಸಿದ್ದೇನೆ ಎಂದು ಭದ್ರತಾ ಅಧಿಕಾರಿಗಳಿಗೆ ತಿಳಿಸಿದರು. ಹಿಟ್ಲರ್ ಪ್ರಬಲ ನಾಯಕರಾಗಿದ್ದರು, ಅಫಿಡವಿಟ್‌ನಲ್ಲಿ ಕುಂದುಲಾ ಹೇಳಿಕೊಂಡಿದ್ದಾನೆ.

ಟ್ರಕ್‌ನಲ್ಲಿ ಯಾವುದೇ ಸ್ಫೋಟಕಗಳು ಅಥವಾ ಶಸ್ತ್ರಾಸ್ತ್ರಗಳು ಕಂಡುಬಂದಿಲ್ಲ. ಕಂದುಲಾ ಅವರೊಂದಿಗೆ ವರ್ಜೀನಿಯಾದ ಹೆರ್ಂಡನ್‌ನಲ್ಲಿ ಯು-ಹಾಲ್ ಟ್ರಕ್‌ಅನ್ನು ಬಾಡಿಗೆಗೆ ಪಡೆದಿದ್ದರ ಬಗ್ಗೆ ಕಂಪನಿ ದಾಖಲೆ ನೀಡಿದೆ.

ಅಧಿಕಾರಿಗಳು ಕಂದುಲಾ ವಿರುದ್ಧ ಹೆಚ್ಚಿನ ಆರೋಪಗಳನ್ನು ಹೊರಿಸುವ ನಿರೀಕ್ಷೆಯಿದೆ ಮತ್ತು ಅವರು ಬುಧವಾರ ಫೆಡರಲ್ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...