Homeಮುಖಪುಟಅಮೆರಿಕದ ವೈಟ್​ಹೌಸ್​ ತಡೆಗೋಡೆಗೆ ಟ್ರಕ್​ ಡಿಕ್ಕಿ; ಭಾರತೀಯ ಮೂಲದ ವ್ಯಕ್ತಿಯಿಂದ ಜೋ ಬೈಡನ್ ​ಹತ್ಯೆಗೆ ಯತ್ನ:...

ಅಮೆರಿಕದ ವೈಟ್​ಹೌಸ್​ ತಡೆಗೋಡೆಗೆ ಟ್ರಕ್​ ಡಿಕ್ಕಿ; ಭಾರತೀಯ ಮೂಲದ ವ್ಯಕ್ತಿಯಿಂದ ಜೋ ಬೈಡನ್ ​ಹತ್ಯೆಗೆ ಯತ್ನ: ಆರೋಪ

- Advertisement -
- Advertisement -

ಭಾರತೀಯ ಮೂಲದ ಸಾಯಿ ವರ್ಷಿತ್ ಕಂದುಲಾ ಎನ್ನುವ ವ್ಯಕ್ತಿ ಸೋಮವಾರ ಅಮೆರಿಕದ ಶ್ವೇತಭವನದ ಬಳಿ ಭದ್ರತಾ ತಡೆಗೋಡೆಗಳಿಗೆ ಟ್ರಕ್‌ನಿಂದ ಡಿಕ್ಕಿ ಹೊಡೆದಿದ್ದಾನೆ. ಆತನನ್ನು ವಾಷಿಂಗ್ಟನ್‌ನಲ್ಲಿ ಬಂಧಿಸಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಟ್ರಕ್​ನಲ್ಲಿ ಸ್ವಸ್ತಿಕ್ ಚಿಹ್ನೆಯ ಬಾವುಟವೊಂದು ಪತ್ತೆಯಾಗಿದೆ, ಎರಡು ಬಾರಿ ತಡೆಗೋಡೆಗೆ ಚಾಲಕ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಉದ್ದೇಶಪೂರ್ವಕವಾಗಿಯೇ ತಡೆಗೋಡೆಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ​ನನ್ನು ಹತ್ಯೆ ಮಾಡಲು ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಈ ಅಪಘಾತದ ಬಳಿಕ ಸಾಯಿ ವರ್ಷಿತ್ ಕಂದುಲಾ, ನಾಜಿ ಧ್ವಜವನ್ನು ಬೆನ್ನಹಿಂದಿನಿಂದ ಹೊರತಗೆದು, ಅಮೆರಿಕಾ ಅಧ್ಯಕ್ಷರನ್ನು ಕೊಲ್ಲಲು ಬಯಸಿದ್ದೇನೆ. ನಾನು ಅಡಾಲ್ಫ್ ಹಿಟ್ಲರ್‌ನನ್ನು ಇಷ್ಟಪಡುತ್ತೇನೆ ಎಂದು ಹೇಳಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಸಾಯಿ ವರ್ಷಿತ್ ಕಂದುಲಾ ಯಾರು?

19ವರ್ಷದ ಸಾಯಿ ವರ್ಷ್ ಕಂದುಲಾ ಭಾರತೀಯ ಮೂಲದ ವ್ಯಕ್ತಿಯಾಗಿದ್ದು, ಶ್ವೇತಭವನದ ಉದ್ಯಾನವನದಲ್ಲಿ ಅಡ್ಡಲಾಗಿರುವ ಭದ್ರತಾ ತಡೆಗೋಡೆಗೆ ಉದ್ದೇಶಪೂರ್ವಕವಾಗಿ ಟ್ರಕ್‌ನ್ನು ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ನಾಜಿ, ಹಿಟ್ಲರ್ ಅಭಿಮಾನಿಯಾಗಿರುವ ಕಂದುಲಾ, ಅಮೆರಿಕಾ ಸರ್ಕಾರದಿಂದ “ಅಧಿಕಾರವನ್ನು ವಶಪಡಿಸಿಕೊಳ್ಳುವ” ಯೋಜನೆ ಹಾಕಿಕೊಂಡಿದ್ದೇನೆ ಎಂದು ನಾಜಿ ಧ್ವಜವನ್ನು ಸುತ್ತಲೂ ಬೀಸಿದನು ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಅಧ್ಯಕ್ಷರು, ಉಪಾಧ್ಯಕ್ಷರು ಅಥವಾ ಕುಟುಂಬದ ಸದಸ್ಯರನ್ನು ಕೊಲ್ಲುವ ಅಥವಾ ಅಪಹರಿಸುವ ಅಥವಾ ಹಾನಿ ಮಾಡುವ ಬೆದರಿಕೆ ಹಾಕುವ ಆರೋಪವನ್ನು ಕುಂದುಲಾ ವಿರುದ್ಧ ಹೊರಿಸಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಮಿಸೌರಿಯ ನಿವಾಸಿ ಕಂದುಲಾ ಅವರು ಸೋಮವಾರ ಸಂಜೆ ವಾಷಿಂಗ್ಟನ್‌ಗೆ ತಲುಪಿದರು. ಅಲ್ಲಿ ವಿಮಾನ ನಿಲ್ದಾಣದ ಬಳಿಯಿಂದ ಟ್ರಕ್ ಅನ್ನು ಬಾಡಿಗೆಗೆ ಪಡೆದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. ರಾತ್ರಿ 9.35 ರ ಸುಮಾರಿಗೆ, ಅವರು ಶ್ವೇತಭವನದ ಮುಂಭಾಗದ ಉದ್ಯಾನವನವಾದ ಲಫಯೆಟ್ಟೆ ಸ್ಕ್ವೇರ್ ಬಳಿಯ ಪಾದಚಾರಿ ಮಾರ್ಗದಲ್ಲಿ ಭದ್ರತಾ ತಡೆಗೋಡೆಗಳಿಗೆ ಡಿಕ್ಕಿ ಹೊಡೆದು, ಆ ನಂತರ ಟ್ರಕ್ ಅನ್ನು ಹಿಮ್ಮುಖವಾಗಿ ಚಲಿಸಿ ತಡೆಗೋಡೆಗೆ ಪದೇ ಪದೇ ಡಿಕ್ಕಿ ಹೊಡೆದಿದ್ದಾರೆ.

ಇದನ್ನೂ ಓದಿ: ಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್ ವಾಗ್ದಾಳಿ

ಕುಂದುಲಾನನ್ನು ಬಂಧಿಸಿದ ನಂತರ, ಅವರು ನಾಜಿಗಳ “ಮಹಾ ಇತಿಹಾಸ” ಮತ್ತು ಅವರ “ಸರ್ವಾಧಿಕಾರಿ ಸ್ವಭಾವದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅವರ ಆಡಳಿತಾತ್ಮಕ ಕ್ರಮ ಇಷ್ಟವಾಗಿ ನಾನು ಆನ್ಲೈನ್‌ನಲ್ಲಿ ನಾಜಿಯಾದ ಧ್ವಜ ಖರಿಸಿದ್ದೇನೆ ಎಂದು ಭದ್ರತಾ ಅಧಿಕಾರಿಗಳಿಗೆ ತಿಳಿಸಿದರು. ಹಿಟ್ಲರ್ ಪ್ರಬಲ ನಾಯಕರಾಗಿದ್ದರು, ಅಫಿಡವಿಟ್‌ನಲ್ಲಿ ಕುಂದುಲಾ ಹೇಳಿಕೊಂಡಿದ್ದಾನೆ.

ಟ್ರಕ್‌ನಲ್ಲಿ ಯಾವುದೇ ಸ್ಫೋಟಕಗಳು ಅಥವಾ ಶಸ್ತ್ರಾಸ್ತ್ರಗಳು ಕಂಡುಬಂದಿಲ್ಲ. ಕಂದುಲಾ ಅವರೊಂದಿಗೆ ವರ್ಜೀನಿಯಾದ ಹೆರ್ಂಡನ್‌ನಲ್ಲಿ ಯು-ಹಾಲ್ ಟ್ರಕ್‌ಅನ್ನು ಬಾಡಿಗೆಗೆ ಪಡೆದಿದ್ದರ ಬಗ್ಗೆ ಕಂಪನಿ ದಾಖಲೆ ನೀಡಿದೆ.

ಅಧಿಕಾರಿಗಳು ಕಂದುಲಾ ವಿರುದ್ಧ ಹೆಚ್ಚಿನ ಆರೋಪಗಳನ್ನು ಹೊರಿಸುವ ನಿರೀಕ್ಷೆಯಿದೆ ಮತ್ತು ಅವರು ಬುಧವಾರ ಫೆಡರಲ್ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...