Homeಮುಖಪುಟಅಮೆರಿಕದ ವೈಟ್​ಹೌಸ್​ ತಡೆಗೋಡೆಗೆ ಟ್ರಕ್​ ಡಿಕ್ಕಿ; ಭಾರತೀಯ ಮೂಲದ ವ್ಯಕ್ತಿಯಿಂದ ಜೋ ಬೈಡನ್ ​ಹತ್ಯೆಗೆ ಯತ್ನ:...

ಅಮೆರಿಕದ ವೈಟ್​ಹೌಸ್​ ತಡೆಗೋಡೆಗೆ ಟ್ರಕ್​ ಡಿಕ್ಕಿ; ಭಾರತೀಯ ಮೂಲದ ವ್ಯಕ್ತಿಯಿಂದ ಜೋ ಬೈಡನ್ ​ಹತ್ಯೆಗೆ ಯತ್ನ: ಆರೋಪ

- Advertisement -
- Advertisement -

ಭಾರತೀಯ ಮೂಲದ ಸಾಯಿ ವರ್ಷಿತ್ ಕಂದುಲಾ ಎನ್ನುವ ವ್ಯಕ್ತಿ ಸೋಮವಾರ ಅಮೆರಿಕದ ಶ್ವೇತಭವನದ ಬಳಿ ಭದ್ರತಾ ತಡೆಗೋಡೆಗಳಿಗೆ ಟ್ರಕ್‌ನಿಂದ ಡಿಕ್ಕಿ ಹೊಡೆದಿದ್ದಾನೆ. ಆತನನ್ನು ವಾಷಿಂಗ್ಟನ್‌ನಲ್ಲಿ ಬಂಧಿಸಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಟ್ರಕ್​ನಲ್ಲಿ ಸ್ವಸ್ತಿಕ್ ಚಿಹ್ನೆಯ ಬಾವುಟವೊಂದು ಪತ್ತೆಯಾಗಿದೆ, ಎರಡು ಬಾರಿ ತಡೆಗೋಡೆಗೆ ಚಾಲಕ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಉದ್ದೇಶಪೂರ್ವಕವಾಗಿಯೇ ತಡೆಗೋಡೆಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ​ನನ್ನು ಹತ್ಯೆ ಮಾಡಲು ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಈ ಅಪಘಾತದ ಬಳಿಕ ಸಾಯಿ ವರ್ಷಿತ್ ಕಂದುಲಾ, ನಾಜಿ ಧ್ವಜವನ್ನು ಬೆನ್ನಹಿಂದಿನಿಂದ ಹೊರತಗೆದು, ಅಮೆರಿಕಾ ಅಧ್ಯಕ್ಷರನ್ನು ಕೊಲ್ಲಲು ಬಯಸಿದ್ದೇನೆ. ನಾನು ಅಡಾಲ್ಫ್ ಹಿಟ್ಲರ್‌ನನ್ನು ಇಷ್ಟಪಡುತ್ತೇನೆ ಎಂದು ಹೇಳಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಸಾಯಿ ವರ್ಷಿತ್ ಕಂದುಲಾ ಯಾರು?

19ವರ್ಷದ ಸಾಯಿ ವರ್ಷ್ ಕಂದುಲಾ ಭಾರತೀಯ ಮೂಲದ ವ್ಯಕ್ತಿಯಾಗಿದ್ದು, ಶ್ವೇತಭವನದ ಉದ್ಯಾನವನದಲ್ಲಿ ಅಡ್ಡಲಾಗಿರುವ ಭದ್ರತಾ ತಡೆಗೋಡೆಗೆ ಉದ್ದೇಶಪೂರ್ವಕವಾಗಿ ಟ್ರಕ್‌ನ್ನು ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ನಾಜಿ, ಹಿಟ್ಲರ್ ಅಭಿಮಾನಿಯಾಗಿರುವ ಕಂದುಲಾ, ಅಮೆರಿಕಾ ಸರ್ಕಾರದಿಂದ “ಅಧಿಕಾರವನ್ನು ವಶಪಡಿಸಿಕೊಳ್ಳುವ” ಯೋಜನೆ ಹಾಕಿಕೊಂಡಿದ್ದೇನೆ ಎಂದು ನಾಜಿ ಧ್ವಜವನ್ನು ಸುತ್ತಲೂ ಬೀಸಿದನು ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಅಧ್ಯಕ್ಷರು, ಉಪಾಧ್ಯಕ್ಷರು ಅಥವಾ ಕುಟುಂಬದ ಸದಸ್ಯರನ್ನು ಕೊಲ್ಲುವ ಅಥವಾ ಅಪಹರಿಸುವ ಅಥವಾ ಹಾನಿ ಮಾಡುವ ಬೆದರಿಕೆ ಹಾಕುವ ಆರೋಪವನ್ನು ಕುಂದುಲಾ ವಿರುದ್ಧ ಹೊರಿಸಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಮಿಸೌರಿಯ ನಿವಾಸಿ ಕಂದುಲಾ ಅವರು ಸೋಮವಾರ ಸಂಜೆ ವಾಷಿಂಗ್ಟನ್‌ಗೆ ತಲುಪಿದರು. ಅಲ್ಲಿ ವಿಮಾನ ನಿಲ್ದಾಣದ ಬಳಿಯಿಂದ ಟ್ರಕ್ ಅನ್ನು ಬಾಡಿಗೆಗೆ ಪಡೆದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. ರಾತ್ರಿ 9.35 ರ ಸುಮಾರಿಗೆ, ಅವರು ಶ್ವೇತಭವನದ ಮುಂಭಾಗದ ಉದ್ಯಾನವನವಾದ ಲಫಯೆಟ್ಟೆ ಸ್ಕ್ವೇರ್ ಬಳಿಯ ಪಾದಚಾರಿ ಮಾರ್ಗದಲ್ಲಿ ಭದ್ರತಾ ತಡೆಗೋಡೆಗಳಿಗೆ ಡಿಕ್ಕಿ ಹೊಡೆದು, ಆ ನಂತರ ಟ್ರಕ್ ಅನ್ನು ಹಿಮ್ಮುಖವಾಗಿ ಚಲಿಸಿ ತಡೆಗೋಡೆಗೆ ಪದೇ ಪದೇ ಡಿಕ್ಕಿ ಹೊಡೆದಿದ್ದಾರೆ.

ಇದನ್ನೂ ಓದಿ: ಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್ ವಾಗ್ದಾಳಿ

ಕುಂದುಲಾನನ್ನು ಬಂಧಿಸಿದ ನಂತರ, ಅವರು ನಾಜಿಗಳ “ಮಹಾ ಇತಿಹಾಸ” ಮತ್ತು ಅವರ “ಸರ್ವಾಧಿಕಾರಿ ಸ್ವಭಾವದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅವರ ಆಡಳಿತಾತ್ಮಕ ಕ್ರಮ ಇಷ್ಟವಾಗಿ ನಾನು ಆನ್ಲೈನ್‌ನಲ್ಲಿ ನಾಜಿಯಾದ ಧ್ವಜ ಖರಿಸಿದ್ದೇನೆ ಎಂದು ಭದ್ರತಾ ಅಧಿಕಾರಿಗಳಿಗೆ ತಿಳಿಸಿದರು. ಹಿಟ್ಲರ್ ಪ್ರಬಲ ನಾಯಕರಾಗಿದ್ದರು, ಅಫಿಡವಿಟ್‌ನಲ್ಲಿ ಕುಂದುಲಾ ಹೇಳಿಕೊಂಡಿದ್ದಾನೆ.

ಟ್ರಕ್‌ನಲ್ಲಿ ಯಾವುದೇ ಸ್ಫೋಟಕಗಳು ಅಥವಾ ಶಸ್ತ್ರಾಸ್ತ್ರಗಳು ಕಂಡುಬಂದಿಲ್ಲ. ಕಂದುಲಾ ಅವರೊಂದಿಗೆ ವರ್ಜೀನಿಯಾದ ಹೆರ್ಂಡನ್‌ನಲ್ಲಿ ಯು-ಹಾಲ್ ಟ್ರಕ್‌ಅನ್ನು ಬಾಡಿಗೆಗೆ ಪಡೆದಿದ್ದರ ಬಗ್ಗೆ ಕಂಪನಿ ದಾಖಲೆ ನೀಡಿದೆ.

ಅಧಿಕಾರಿಗಳು ಕಂದುಲಾ ವಿರುದ್ಧ ಹೆಚ್ಚಿನ ಆರೋಪಗಳನ್ನು ಹೊರಿಸುವ ನಿರೀಕ್ಷೆಯಿದೆ ಮತ್ತು ಅವರು ಬುಧವಾರ ಫೆಡರಲ್ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...