Homeಮುಖಪುಟಅಮೆರಿಕದ ವೈಟ್​ಹೌಸ್​ ತಡೆಗೋಡೆಗೆ ಟ್ರಕ್​ ಡಿಕ್ಕಿ; ಭಾರತೀಯ ಮೂಲದ ವ್ಯಕ್ತಿಯಿಂದ ಜೋ ಬೈಡನ್ ​ಹತ್ಯೆಗೆ ಯತ್ನ:...

ಅಮೆರಿಕದ ವೈಟ್​ಹೌಸ್​ ತಡೆಗೋಡೆಗೆ ಟ್ರಕ್​ ಡಿಕ್ಕಿ; ಭಾರತೀಯ ಮೂಲದ ವ್ಯಕ್ತಿಯಿಂದ ಜೋ ಬೈಡನ್ ​ಹತ್ಯೆಗೆ ಯತ್ನ: ಆರೋಪ

- Advertisement -
- Advertisement -

ಭಾರತೀಯ ಮೂಲದ ಸಾಯಿ ವರ್ಷಿತ್ ಕಂದುಲಾ ಎನ್ನುವ ವ್ಯಕ್ತಿ ಸೋಮವಾರ ಅಮೆರಿಕದ ಶ್ವೇತಭವನದ ಬಳಿ ಭದ್ರತಾ ತಡೆಗೋಡೆಗಳಿಗೆ ಟ್ರಕ್‌ನಿಂದ ಡಿಕ್ಕಿ ಹೊಡೆದಿದ್ದಾನೆ. ಆತನನ್ನು ವಾಷಿಂಗ್ಟನ್‌ನಲ್ಲಿ ಬಂಧಿಸಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಟ್ರಕ್​ನಲ್ಲಿ ಸ್ವಸ್ತಿಕ್ ಚಿಹ್ನೆಯ ಬಾವುಟವೊಂದು ಪತ್ತೆಯಾಗಿದೆ, ಎರಡು ಬಾರಿ ತಡೆಗೋಡೆಗೆ ಚಾಲಕ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಉದ್ದೇಶಪೂರ್ವಕವಾಗಿಯೇ ತಡೆಗೋಡೆಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ​ನನ್ನು ಹತ್ಯೆ ಮಾಡಲು ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಈ ಅಪಘಾತದ ಬಳಿಕ ಸಾಯಿ ವರ್ಷಿತ್ ಕಂದುಲಾ, ನಾಜಿ ಧ್ವಜವನ್ನು ಬೆನ್ನಹಿಂದಿನಿಂದ ಹೊರತಗೆದು, ಅಮೆರಿಕಾ ಅಧ್ಯಕ್ಷರನ್ನು ಕೊಲ್ಲಲು ಬಯಸಿದ್ದೇನೆ. ನಾನು ಅಡಾಲ್ಫ್ ಹಿಟ್ಲರ್‌ನನ್ನು ಇಷ್ಟಪಡುತ್ತೇನೆ ಎಂದು ಹೇಳಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಸಾಯಿ ವರ್ಷಿತ್ ಕಂದುಲಾ ಯಾರು?

19ವರ್ಷದ ಸಾಯಿ ವರ್ಷ್ ಕಂದುಲಾ ಭಾರತೀಯ ಮೂಲದ ವ್ಯಕ್ತಿಯಾಗಿದ್ದು, ಶ್ವೇತಭವನದ ಉದ್ಯಾನವನದಲ್ಲಿ ಅಡ್ಡಲಾಗಿರುವ ಭದ್ರತಾ ತಡೆಗೋಡೆಗೆ ಉದ್ದೇಶಪೂರ್ವಕವಾಗಿ ಟ್ರಕ್‌ನ್ನು ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ನಾಜಿ, ಹಿಟ್ಲರ್ ಅಭಿಮಾನಿಯಾಗಿರುವ ಕಂದುಲಾ, ಅಮೆರಿಕಾ ಸರ್ಕಾರದಿಂದ “ಅಧಿಕಾರವನ್ನು ವಶಪಡಿಸಿಕೊಳ್ಳುವ” ಯೋಜನೆ ಹಾಕಿಕೊಂಡಿದ್ದೇನೆ ಎಂದು ನಾಜಿ ಧ್ವಜವನ್ನು ಸುತ್ತಲೂ ಬೀಸಿದನು ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಅಧ್ಯಕ್ಷರು, ಉಪಾಧ್ಯಕ್ಷರು ಅಥವಾ ಕುಟುಂಬದ ಸದಸ್ಯರನ್ನು ಕೊಲ್ಲುವ ಅಥವಾ ಅಪಹರಿಸುವ ಅಥವಾ ಹಾನಿ ಮಾಡುವ ಬೆದರಿಕೆ ಹಾಕುವ ಆರೋಪವನ್ನು ಕುಂದುಲಾ ವಿರುದ್ಧ ಹೊರಿಸಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಮಿಸೌರಿಯ ನಿವಾಸಿ ಕಂದುಲಾ ಅವರು ಸೋಮವಾರ ಸಂಜೆ ವಾಷಿಂಗ್ಟನ್‌ಗೆ ತಲುಪಿದರು. ಅಲ್ಲಿ ವಿಮಾನ ನಿಲ್ದಾಣದ ಬಳಿಯಿಂದ ಟ್ರಕ್ ಅನ್ನು ಬಾಡಿಗೆಗೆ ಪಡೆದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. ರಾತ್ರಿ 9.35 ರ ಸುಮಾರಿಗೆ, ಅವರು ಶ್ವೇತಭವನದ ಮುಂಭಾಗದ ಉದ್ಯಾನವನವಾದ ಲಫಯೆಟ್ಟೆ ಸ್ಕ್ವೇರ್ ಬಳಿಯ ಪಾದಚಾರಿ ಮಾರ್ಗದಲ್ಲಿ ಭದ್ರತಾ ತಡೆಗೋಡೆಗಳಿಗೆ ಡಿಕ್ಕಿ ಹೊಡೆದು, ಆ ನಂತರ ಟ್ರಕ್ ಅನ್ನು ಹಿಮ್ಮುಖವಾಗಿ ಚಲಿಸಿ ತಡೆಗೋಡೆಗೆ ಪದೇ ಪದೇ ಡಿಕ್ಕಿ ಹೊಡೆದಿದ್ದಾರೆ.

ಇದನ್ನೂ ಓದಿ: ಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್ ವಾಗ್ದಾಳಿ

ಕುಂದುಲಾನನ್ನು ಬಂಧಿಸಿದ ನಂತರ, ಅವರು ನಾಜಿಗಳ “ಮಹಾ ಇತಿಹಾಸ” ಮತ್ತು ಅವರ “ಸರ್ವಾಧಿಕಾರಿ ಸ್ವಭಾವದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅವರ ಆಡಳಿತಾತ್ಮಕ ಕ್ರಮ ಇಷ್ಟವಾಗಿ ನಾನು ಆನ್ಲೈನ್‌ನಲ್ಲಿ ನಾಜಿಯಾದ ಧ್ವಜ ಖರಿಸಿದ್ದೇನೆ ಎಂದು ಭದ್ರತಾ ಅಧಿಕಾರಿಗಳಿಗೆ ತಿಳಿಸಿದರು. ಹಿಟ್ಲರ್ ಪ್ರಬಲ ನಾಯಕರಾಗಿದ್ದರು, ಅಫಿಡವಿಟ್‌ನಲ್ಲಿ ಕುಂದುಲಾ ಹೇಳಿಕೊಂಡಿದ್ದಾನೆ.

ಟ್ರಕ್‌ನಲ್ಲಿ ಯಾವುದೇ ಸ್ಫೋಟಕಗಳು ಅಥವಾ ಶಸ್ತ್ರಾಸ್ತ್ರಗಳು ಕಂಡುಬಂದಿಲ್ಲ. ಕಂದುಲಾ ಅವರೊಂದಿಗೆ ವರ್ಜೀನಿಯಾದ ಹೆರ್ಂಡನ್‌ನಲ್ಲಿ ಯು-ಹಾಲ್ ಟ್ರಕ್‌ಅನ್ನು ಬಾಡಿಗೆಗೆ ಪಡೆದಿದ್ದರ ಬಗ್ಗೆ ಕಂಪನಿ ದಾಖಲೆ ನೀಡಿದೆ.

ಅಧಿಕಾರಿಗಳು ಕಂದುಲಾ ವಿರುದ್ಧ ಹೆಚ್ಚಿನ ಆರೋಪಗಳನ್ನು ಹೊರಿಸುವ ನಿರೀಕ್ಷೆಯಿದೆ ಮತ್ತು ಅವರು ಬುಧವಾರ ಫೆಡರಲ್ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...