Homeಮುಖಪುಟನಾಳೆಯಿಂದ ಎರಡು ದಿನ ದೇಶಾದ್ಯಂತ ಕಾರ್ಮಿಕರ ಮುಷ್ಕರ

ನಾಳೆಯಿಂದ ಎರಡು ದಿನ ದೇಶಾದ್ಯಂತ ಕಾರ್ಮಿಕರ ಮುಷ್ಕರ

- Advertisement -
- Advertisement -

ಸಂವಿಧಾನದ ಪ್ರಜಾಪ್ರಭುತ್ವೀಯ ಮೌಲ್ಯಗಳ ಉಳಿವಿಗಾಗಿ ಜನತೆಯ ಹಕ್ಕುಗಳ ಸಂರಕ್ಷಣೆಗಾಗಿ, ರೈತ ವಿರೋಧಿ ಕಾರ್ಮಿಕ ವಿರೋಧಿ ಕಾನೂನುಗಳ ರದ್ಧತಿಗಾಗಿ, ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಅಂಸಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗಾಗಿ ಮಾರ್ಚ್ 28 ಹಾಗೂ 29ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸಲಾಗುತ್ತಿದೆ. ಸಿಐಟಿಯು (ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌) ಮುಷ್ಕರಕ್ಕೆ ಕರೆ ನೀಡಿದೆ.

ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ತಡೆಗಾಗಿ ಆಗ್ರಹಿಸಲಾಗಿದ್ದು, ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸಬೇಕು. ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಕೇಂದ್ರೀಯ ಅಬಕಾರಿ ತೆರಿಗೆಯನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಲಾಗಿದೆ.

ಬೇಡಿಕೆಗಳು

  • ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿ ಕುಟುಂಬಕ್ಕೂ ಮಾಸಿಕ ರೂ. 7500 ನೇರ ನಗದು ವರ್ಗಾವಣೆ ಮಾಡಬೇಕು. ಪ್ರತಿ ವ್ಯಕ್ತಿಗೂ ತಲಾ 10 ಕೆಜಿ ಆಹಾರ ಧಾನ್ಯಗಳನ್ನು ನೀಡಬೇಕು.
  • ಕಾರ್ಪೋರೇಟ್‌ ಬಂಡವಾಳ ಪರ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಕಾರ್ಮಿಕರ ಹಕ್ಕುಗಳನ್ನು ಉಳಿಸಬೇಕು.
  • ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳ ಜೊತೆಗೆ ವಿದ್ಯುತ್ (ತಿದ್ದುಪಡಿ) ಮಸೂದೆಯನ್ನು ವಾಪಸ್ ಪಡೆಯಬೇಕು. ಶಾಸನಬದ್ಧ ಬೆಂಬಲ ಬೆಲೆ ಕಾಯ್ದೆ ರೂಪಿಸಬೇಕು. ರಾಜ್ಯ ಸರ್ಕಾರ ಸಹ ರೈತ ವಿರೋಧಿ, ಜನ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು.
  • ದೇಶದ ಸಂಪತ್ತಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು. ಅಸಂಘಟಿತ ಕಾರ್ಮಿಕರಿಗೆ ಸಾರ್ವತ್ರಿಕ ಸಾಮಾಜಿಕ ಭದ್ರತೆ ಒದಗಿಸಬೇಕು. ಕೋವಿಡ್‌ ಲಾಕ್‌ಡೌನ್‌ ಸಂಕಷ್ಟಕ್ಕೆ ಒಳಗಾದ ಅಸಂಘಟಿತರಿಗೆ ಪರಿಹಾರ ಒದಗಿಸಬೇಕು.
  • ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು. ಕೆಲಸದ ದಿನಗಳನ್ನು 200 ದಿನಗಳಿಗೆ ಹೆಚ್ಚಿಸಬೇಕು. ಹೆಚ್ಚಿನ ಅನುದಾನ ಬಜೆಟ್‌ನಲ್ಲಿ ನೀಡಬೇಕು.
  • ಕೋವಿಡ್‌ ಎದುರಿಸಲು ಕೆಲಸ ಮಾಡುತ್ತಿರುವ ಮಂಚೂಣಿ ಕಾರ್ಮಿಕರಿಗೆ ಸೂಕ್ತ ರಕ್ಷಣೆ  ಮತ್ತು ವಿಮಾ ಸೌಲಭ್ಯ ಒದಗಿಸಬೇಕು.
  • ಅಂಗನವಾಡಿ, ಆಶಾ, ಬಿಸಿಯೂಟ ಮತ್ತು ಇತರೆ ಸ್ಕೀಂ ನೌಕರರಿಗೆ ಶಾಸನಬದ್ಧ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆ ಜಾರಿ ಮಾಡಬೇಕು.
  • ರಾಷ್ಟ್ರೀಯ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಶ್ರೀಮಂತರಿಗೆ ಆಸ್ತಿ ತೆರಿಗೆ ಇತ್ಯಾದಿಗಳನ್ನು ವಿಧಿಸುವ ಮೂಲಕ ಕೃಷಿ, ಶಿಕ್ಷಣ, ಆರೋಗ್ಯ ಮತ್ತು ಇತರೆ ನಿರ್ಣಾಯಕ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಬೇಕು.
  • ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಪುನರ್‌ ಸ್ಥಾಪಿಸಬೇಕು.
  • ರೂ. 26 ಸಾವಿರ ಸಮಾನ ಕನಿಷ್ಠ ವೇತನಕ್ಕಾಗಿ, ಸಂಘ ಮಾನ್ಯತೆ, ಗುತ್ತಿಗೆ ಮುಂತಾದ ಖಾಯಂಯೇತರರ ಖಾಯಂಗೆ, ಅಸಂಘಟಿತರಿಗೆ ಭವಿಷ್ಯನಿಧಿಗೆ ಶಾಸನ ರೂಪಿಸಬೇಕು.

ಇದನ್ನೂ ಓದಿರಿ: ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...