Homeಕರ್ನಾಟಕಹಾಸನದಲ್ಲೊಂದು ಯುಪಿ ಮಾದರಿ | ಕಳ್ಳತನ ಆರೋಪ | ಮರಕ್ಕೆ ನೇತು ಹಾಕಿ ದಲಿತ ಯುವಕನಿಗೆ...

ಹಾಸನದಲ್ಲೊಂದು ಯುಪಿ ಮಾದರಿ | ಕಳ್ಳತನ ಆರೋಪ | ಮರಕ್ಕೆ ನೇತು ಹಾಕಿ ದಲಿತ ಯುವಕನಿಗೆ ಚಿತ್ರಹಿಂಸೆ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ದಲಿತರ ಮೇಲೆ ನಡೆಯುವಂತಹ ದೌರ್ಜನ್ಯದ ಘಟನೆಯೊಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಶುಕ್ರವಾರ ನಡೆದಿದೆ. ಹಲವು ದುಷ್ಕರ್ಮಿಗಳು ಸೇರಿಕೊಂಡು ದಲಿತ ಯುವಕನ ಮೇಲೆ ಕಳ್ಳತನದ ಆರೋಪ ಹೊರಿಸಿ, ಅವರನ್ನು ಮರಕ್ಕೆ ಕಟ್ಟಿಹಾಕಿ, ಅವಾಚ್ಯವಾಗಿ ನಿಂದಿಸುತ್ತಾ ಚಿತ್ರಹಿಂಸೆ ನೀಡಲಾಗಿದೆ.

ಘಟನೆಯು ಶುಕ್ರವಾರ ಮುಂಜಾನೆ ಅರೇಹಳ್ಳಿ ಹೋಬಳಿಯ ಬೆಳ್ಳಾವರ ಗ್ರಾಮದಲ್ಲಿ ನಡೆದಿದೆ. ಸಂತ್ರಸ್ತ ಯುವಕನನ್ನು ಕಿತ್ತಾವರ ಗ್ರಾಮದ ಮಂಜುನಾಥ್‌ ಎಂದು ಗುರುತಿಸಲಾಗಿದ್ದು, ಬೇಲೂರು ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವಕನ ಮೇಲೆ ನಡೆದ ಅಮಾನವೀಯ ದೌರ್ಜನ್ಯದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶ ಹುಟ್ಟುಹಾಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಜುನಾಥ್‌ ಅವರು ಕಳ್ಳತನ ನಡೆಸಿದ್ದಾರೆ ಎಂದು ಆರೋಪಿಸಿದ್ದ ದುಷ್ಕರ್ಮಿಗಳು ಅವರನ್ನು ಮರಕ್ಕೆ ನೇತುಹಾಕಿ, ಅವಾಚ್ಯವಾಗಿ ನಿಂದಿಸುತ್ತಾ ಥಳಿಸಿದ್ದಾರೆ. ಸಂತ್ರಸ್ತ ಯುವಕನ ಅವರ ಸೊಂಟಕ್ಕೆ ಮತ್ತು ಕಾಲಿನ ಹೆಬ್ಬೆರಳಿಗೆ ಹಗ್ಗ ಕಟ್ಟಿ ಚಿತ್ರಹಿಂಸೆ ನೀಡಿದ್ದಲ್ಲದೆ, ನಾಯಿಯನ್ನು ಛೂ ಬಿಟ್ಟು ದಾಳಿ ಮಾಡಿಸಲಾಗಿದೆ ಎಂದು ಅರೋಪಿಸಲಾಗಿದೆ.

ದುಷ್ಕರ್ಮಿಗಳ ದಾಳಿಯಿಂದ ತೀವ್ರವಾಗಿ ಗಾಯಗೊಂಡಿರುವ ಯುವಕನಿಗೆ ಅರೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕೆತ್ಸೆಗೆ ಬೇಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೂಲಗಳು ನಾನುಗೌರಿ.ಕಾಂಗೆ ಹೇಳಿವೆ.

ಬೆಲ್ಳಾವರ ಗ್ರಾಮದ ಕೆಪಿ ರಾಘವೇಂದ್ರ (40), ಉಮೇಶ (36), ಮಲ್ಲಿಗನೂರು ಕೀರ್ತಿ (31) ಧೋಲನ ಮನೆ ಶಾಮ್ರುಲ್ (43), ಕಿತ್ತಾವರ ಗ್ರಾಮದ ನವೀನ್ ರಾಜ್ (36) ಎಂಬವರನ್ನು ಬಂಧಿಸಲಾಗಿದೆ ಎಂದು ನಾನುಗೌರಿ.ಕಾಂಗೆ ಮೂಲಗಳು ತಿಳಿಸಿವೆ. ಈ ಬಗ್ಗೆ ಮಾಹಿತಿಗಾಗಿ ಅರೆಹಳ್ಳಿ ಪೊಲೀಸ್‌ ಠಾಣೆಯ ಎಸ್‌ಐ ಅವರನ್ನು ನಾನುಗೌರಿ.ಕಾಂ ಸಂಪರ್ಕಿಸಿತ್ತಾಗಿದ್ದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಘಟನೆ ಬಗ್ಗೆ ಮಾಹಿತಿಗೆ ಬೇಲೂರು ಸರ್ಕಲ್‌ ಇನ್ಸ್‌ಪೆಕ್ಟರ್‌‌ ಶ್ರೀಕಾಂತ ಅವರನ್ನು ಕೂಡಾ ನಾನುಗೌರಿ.ಕಾಂ ಸಂಪರ್ಕಿಸಿದೆ. ಆದರೆ ಕರೆ ಸ್ವೀಕರಿಸಿದ ಅವರು, “ನಾನು ಎರಡು ದಿನಗಳಿಂದ ಬೆಂಗಳೂರಿನಲ್ಲಿ ಇದ್ದು, ಈ ಬಗ್ಗೆ ಯಾವುದೆ ಮಾಹಿತಿ ಇಲ್ಲ” ಎಂದು ಹೇಳಿದ್ದಾರೆ.

ವಿಡಿಯೊ ಎಚ್ಚರಿಕೆ: ಅಶ್ಲೀಲ ಬೈಗುಳ ಮತ್ತು ಹಿಂಸೆಯಿದೆ

ದಲಿತರ ಮೇಲೆ ನಡೆಯುವ ದೌರ್ಜನ್ಯಗಳ ಎಲ್ಲಾ ವರದಿಗಳನ್ನು ನಾನುಗೌರಿ.ಕಾಂ ದಲಿತ್‌ ಫೈಲ್ಸ್‌ ಎಂಬುವುದಾಗಿ ವರದಿ ಮಾಡುತ್ತಿದೆ. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...