Homeಕರ್ನಾಟಕಹಾಸನದಲ್ಲೊಂದು ಯುಪಿ ಮಾದರಿ | ಕಳ್ಳತನ ಆರೋಪ | ಮರಕ್ಕೆ ನೇತು ಹಾಕಿ ದಲಿತ ಯುವಕನಿಗೆ...

ಹಾಸನದಲ್ಲೊಂದು ಯುಪಿ ಮಾದರಿ | ಕಳ್ಳತನ ಆರೋಪ | ಮರಕ್ಕೆ ನೇತು ಹಾಕಿ ದಲಿತ ಯುವಕನಿಗೆ ಚಿತ್ರಹಿಂಸೆ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ದಲಿತರ ಮೇಲೆ ನಡೆಯುವಂತಹ ದೌರ್ಜನ್ಯದ ಘಟನೆಯೊಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಶುಕ್ರವಾರ ನಡೆದಿದೆ. ಹಲವು ದುಷ್ಕರ್ಮಿಗಳು ಸೇರಿಕೊಂಡು ದಲಿತ ಯುವಕನ ಮೇಲೆ ಕಳ್ಳತನದ ಆರೋಪ ಹೊರಿಸಿ, ಅವರನ್ನು ಮರಕ್ಕೆ ಕಟ್ಟಿಹಾಕಿ, ಅವಾಚ್ಯವಾಗಿ ನಿಂದಿಸುತ್ತಾ ಚಿತ್ರಹಿಂಸೆ ನೀಡಲಾಗಿದೆ.

ಘಟನೆಯು ಶುಕ್ರವಾರ ಮುಂಜಾನೆ ಅರೇಹಳ್ಳಿ ಹೋಬಳಿಯ ಬೆಳ್ಳಾವರ ಗ್ರಾಮದಲ್ಲಿ ನಡೆದಿದೆ. ಸಂತ್ರಸ್ತ ಯುವಕನನ್ನು ಕಿತ್ತಾವರ ಗ್ರಾಮದ ಮಂಜುನಾಥ್‌ ಎಂದು ಗುರುತಿಸಲಾಗಿದ್ದು, ಬೇಲೂರು ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವಕನ ಮೇಲೆ ನಡೆದ ಅಮಾನವೀಯ ದೌರ್ಜನ್ಯದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶ ಹುಟ್ಟುಹಾಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಜುನಾಥ್‌ ಅವರು ಕಳ್ಳತನ ನಡೆಸಿದ್ದಾರೆ ಎಂದು ಆರೋಪಿಸಿದ್ದ ದುಷ್ಕರ್ಮಿಗಳು ಅವರನ್ನು ಮರಕ್ಕೆ ನೇತುಹಾಕಿ, ಅವಾಚ್ಯವಾಗಿ ನಿಂದಿಸುತ್ತಾ ಥಳಿಸಿದ್ದಾರೆ. ಸಂತ್ರಸ್ತ ಯುವಕನ ಅವರ ಸೊಂಟಕ್ಕೆ ಮತ್ತು ಕಾಲಿನ ಹೆಬ್ಬೆರಳಿಗೆ ಹಗ್ಗ ಕಟ್ಟಿ ಚಿತ್ರಹಿಂಸೆ ನೀಡಿದ್ದಲ್ಲದೆ, ನಾಯಿಯನ್ನು ಛೂ ಬಿಟ್ಟು ದಾಳಿ ಮಾಡಿಸಲಾಗಿದೆ ಎಂದು ಅರೋಪಿಸಲಾಗಿದೆ.

ದುಷ್ಕರ್ಮಿಗಳ ದಾಳಿಯಿಂದ ತೀವ್ರವಾಗಿ ಗಾಯಗೊಂಡಿರುವ ಯುವಕನಿಗೆ ಅರೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕೆತ್ಸೆಗೆ ಬೇಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೂಲಗಳು ನಾನುಗೌರಿ.ಕಾಂಗೆ ಹೇಳಿವೆ.

ಬೆಲ್ಳಾವರ ಗ್ರಾಮದ ಕೆಪಿ ರಾಘವೇಂದ್ರ (40), ಉಮೇಶ (36), ಮಲ್ಲಿಗನೂರು ಕೀರ್ತಿ (31) ಧೋಲನ ಮನೆ ಶಾಮ್ರುಲ್ (43), ಕಿತ್ತಾವರ ಗ್ರಾಮದ ನವೀನ್ ರಾಜ್ (36) ಎಂಬವರನ್ನು ಬಂಧಿಸಲಾಗಿದೆ ಎಂದು ನಾನುಗೌರಿ.ಕಾಂಗೆ ಮೂಲಗಳು ತಿಳಿಸಿವೆ. ಈ ಬಗ್ಗೆ ಮಾಹಿತಿಗಾಗಿ ಅರೆಹಳ್ಳಿ ಪೊಲೀಸ್‌ ಠಾಣೆಯ ಎಸ್‌ಐ ಅವರನ್ನು ನಾನುಗೌರಿ.ಕಾಂ ಸಂಪರ್ಕಿಸಿತ್ತಾಗಿದ್ದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಘಟನೆ ಬಗ್ಗೆ ಮಾಹಿತಿಗೆ ಬೇಲೂರು ಸರ್ಕಲ್‌ ಇನ್ಸ್‌ಪೆಕ್ಟರ್‌‌ ಶ್ರೀಕಾಂತ ಅವರನ್ನು ಕೂಡಾ ನಾನುಗೌರಿ.ಕಾಂ ಸಂಪರ್ಕಿಸಿದೆ. ಆದರೆ ಕರೆ ಸ್ವೀಕರಿಸಿದ ಅವರು, “ನಾನು ಎರಡು ದಿನಗಳಿಂದ ಬೆಂಗಳೂರಿನಲ್ಲಿ ಇದ್ದು, ಈ ಬಗ್ಗೆ ಯಾವುದೆ ಮಾಹಿತಿ ಇಲ್ಲ” ಎಂದು ಹೇಳಿದ್ದಾರೆ.

ವಿಡಿಯೊ ಎಚ್ಚರಿಕೆ: ಅಶ್ಲೀಲ ಬೈಗುಳ ಮತ್ತು ಹಿಂಸೆಯಿದೆ

ದಲಿತರ ಮೇಲೆ ನಡೆಯುವ ದೌರ್ಜನ್ಯಗಳ ಎಲ್ಲಾ ವರದಿಗಳನ್ನು ನಾನುಗೌರಿ.ಕಾಂ ದಲಿತ್‌ ಫೈಲ್ಸ್‌ ಎಂಬುವುದಾಗಿ ವರದಿ ಮಾಡುತ್ತಿದೆ. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...