Homeಮುಖಪುಟಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ 'ಬ್ಯಾಕಪ್' ವೆಂಟಿಲೇಟರ್ ಅಗತ್ಯ..!

ಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ ‘ಬ್ಯಾಕಪ್’ ವೆಂಟಿಲೇಟರ್ ಅಗತ್ಯ..!

- Advertisement -
- Advertisement -

ಕೇಂದ್ರ ಸರ್ಕಾರವು ಆದೇಶಿಸಿರುವ 10,000 ಕಡಿಮೆ ಬೆಲೆಯ ವೆಂಟಿಲೇಟರ್ ‌ಗಳ ವಿಶ್ವಾಸಾರ್ಹತೆ ಮತ್ತು ಸಾಮರ್ಥ್ಯದ ಬಗ್ಗೆ ಸರ್ಕಾರದಿಂದ ನೇಮಕಗೊಂಡ ಎರಡು ಸಮಿತಿಗಳು ಕಳವಳ ವ್ಯಕ್ತಪಡಿಸಿದೆ ಎಂದು ‘ಹಫ್‌ಪೋಸ್ಟ್ ಇಂಡಿಯಾ’ ವರದಿ ಮಾಡಿದೆ.

ಭಾರತೀಯ ಸ್ಟಾರ್ಟ್ಅಪ್ ‘ಆಗ್ವಾ ಹೆಲ್ತ್‌ಕೇರ್’ ತಯಾರಿಸಿದ ಈ ವೆಂಟಿಲೇಟರ್‌ಗಳನ್ನು ಕೇಂದ್ರ ಸರ್ಕಾರ ಖರೀದಿಸಬಹುದು ಎಂದು ವೈದ್ಯರ ಸಮಿತಿಯೊಂದು ಜೂನ್ 1, 2020 ರ ಕ್ಲಿನಿಕಲ್ ಮೌಲ್ಯಮಾಪನ ವರದಿಯಲ್ಲಿ ಹೇಳಿದೆ, ಆದರೆ ಆಗ್ವಾ ಅವರ ಕೋವಿಡ್-ಮಾದರಿ ವೆಂಟಿಲೇಟರ್‌ಗಳನ್ನು ತೃತೀಯ ಆರೈಕೆಯ ಹೈಎಂಡ್ ಐಸಿಯುಗಳ ವೆಂಟಿಲೇಟರುಗಳ ಬದಲಿಯಾಗಿ ಪರಿಗಣಿಸಬಾರದು, ಈ ವೆಂಟಿಲೇಟರ್‌ಗಳನ್ನು ಬಳಸುವಾಗ ಬ್ಯಾಕಪ್ ವೆಂಟಿಲೇಟರ್‌ ಕೂಡಾ ಇರಬೇಕು ಎಂದು ತಜ್ಞರು ಹೇಳಿದ್ದಾರೆ.

ಜೂನ್ 1 ರ ವರದಿಯು ಆಗ್ವಾ ವೆಂಟಿಲೇಟರ್‌ಗಳನ್ನು ಸರ್ಕಾರವು ಎರಡನೇ ಬಾರಿಗೆ ಮೌಲ್ಯಮಾಪನ ಮಾಡಿದೆ. ಎರಡು ವಾರಗಳ ಹಿಂದೆ ಮೇ 16 ರಂದು, ಮತ್ತೊಂದು ಕ್ಲಿನಿಕಲ್ ಮೌಲ್ಯಮಾಪನ ಸಮಿತಿಯು ಆಗ್ವಾ ಸಾಧನಗಳನ್ನು ಅನುಮೋದಿಸುವ ಮೊದಲು “ಹೆಚ್ಚಿನ ತಾಂತ್ರಿಕ ಮೌಲ್ಯಮಾಪನ” ಅಗತ್ಯವಿದೆ ಎಂದು ತೀರ್ಮಾನಿಸಿತ್ತು.

ಕೋವಿಡ್ ರೋಗಿಗಳ ನಿರೀಕ್ಷಿತ ಉಲ್ಬಣವನ್ನು ನಿಭಾಯಿಸಲು ಆಸ್ಪತ್ರೆಗಳಿಗೆ 50,000 ವೆಂಟಿಲೇಟರ್‌ಗಳನ್ನು ಖರೀದಿಸುವ ಕೇಂದ್ರ ಸರ್ಕಾರದ ಯೋಜನೆಯ ಭಾಗವಾಗಿ ಮಾರ್ಚ್ 27 ರಂದು 10,000 ಆಗ್ವಾ ವೆಂಟಿಲೇಟರ್‌ಗಳಿಗೆ ಆದೇಶ ನೀಡಲಾಯಿತು. ವಿವಾದಾತ್ಮಕ ಪಿಎಂಕೇರ್ಸ್ ನಿಧಿಯಡಿಯಲ್ಲಿ ಈ ವೆಂಟಿಲೇಟರ್ಗಳನ್ನು ಖರೀದಿಸಲಾಗಿದೆ.

ವೆಂಟಿಲೇಟರ್‌ಗಳ ಜಾಗತಿಕ ಕೊರತೆಯನ್ನು ಗಮನದಲ್ಲಿಟ್ಟುಕೊಂಡು, ಒಮ್ಮೆ ಆದೇಶವನ್ನು ನೀಡಿದರೆ, ತಜ್ಞರ ಸಮಿತಿಯು ಅನುಮೋದಿಸಿದ ನಂತರವೇ ಸರ್ಕಾರವು ಸಾಧನಗಳನ್ನು ಸ್ವೀಕರಿಸುತ್ತದೆ ಎಂಬ ಷರತ್ತಿನ ಮೇಲೆ ಬಿಡ್ ಮಾಡಲು ಭಾರತೀಯ ಕಂಪನಿಗಳನ್ನು ಆಹ್ವಾನಿಸಲಾಗಿತ್ತು.


ಓದಿ: ದೆಹಲಿಯಲ್ಲಿ ಅಮಿತ್ ಶಾ ಹಾಗೂ ಕೇಜ್ರಿವಾಲ್ ಎಂಬ ಎರಡು ಮಾದರಿಯಿದೆ; ಸಿಸೋಡಿಯಾ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...