Homeಮುಖಪುಟಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ 'ಬ್ಯಾಕಪ್' ವೆಂಟಿಲೇಟರ್ ಅಗತ್ಯ..!

ಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ ‘ಬ್ಯಾಕಪ್’ ವೆಂಟಿಲೇಟರ್ ಅಗತ್ಯ..!

- Advertisement -
- Advertisement -

ಕೇಂದ್ರ ಸರ್ಕಾರವು ಆದೇಶಿಸಿರುವ 10,000 ಕಡಿಮೆ ಬೆಲೆಯ ವೆಂಟಿಲೇಟರ್ ‌ಗಳ ವಿಶ್ವಾಸಾರ್ಹತೆ ಮತ್ತು ಸಾಮರ್ಥ್ಯದ ಬಗ್ಗೆ ಸರ್ಕಾರದಿಂದ ನೇಮಕಗೊಂಡ ಎರಡು ಸಮಿತಿಗಳು ಕಳವಳ ವ್ಯಕ್ತಪಡಿಸಿದೆ ಎಂದು ‘ಹಫ್‌ಪೋಸ್ಟ್ ಇಂಡಿಯಾ’ ವರದಿ ಮಾಡಿದೆ.

ಭಾರತೀಯ ಸ್ಟಾರ್ಟ್ಅಪ್ ‘ಆಗ್ವಾ ಹೆಲ್ತ್‌ಕೇರ್’ ತಯಾರಿಸಿದ ಈ ವೆಂಟಿಲೇಟರ್‌ಗಳನ್ನು ಕೇಂದ್ರ ಸರ್ಕಾರ ಖರೀದಿಸಬಹುದು ಎಂದು ವೈದ್ಯರ ಸಮಿತಿಯೊಂದು ಜೂನ್ 1, 2020 ರ ಕ್ಲಿನಿಕಲ್ ಮೌಲ್ಯಮಾಪನ ವರದಿಯಲ್ಲಿ ಹೇಳಿದೆ, ಆದರೆ ಆಗ್ವಾ ಅವರ ಕೋವಿಡ್-ಮಾದರಿ ವೆಂಟಿಲೇಟರ್‌ಗಳನ್ನು ತೃತೀಯ ಆರೈಕೆಯ ಹೈಎಂಡ್ ಐಸಿಯುಗಳ ವೆಂಟಿಲೇಟರುಗಳ ಬದಲಿಯಾಗಿ ಪರಿಗಣಿಸಬಾರದು, ಈ ವೆಂಟಿಲೇಟರ್‌ಗಳನ್ನು ಬಳಸುವಾಗ ಬ್ಯಾಕಪ್ ವೆಂಟಿಲೇಟರ್‌ ಕೂಡಾ ಇರಬೇಕು ಎಂದು ತಜ್ಞರು ಹೇಳಿದ್ದಾರೆ.

ಜೂನ್ 1 ರ ವರದಿಯು ಆಗ್ವಾ ವೆಂಟಿಲೇಟರ್‌ಗಳನ್ನು ಸರ್ಕಾರವು ಎರಡನೇ ಬಾರಿಗೆ ಮೌಲ್ಯಮಾಪನ ಮಾಡಿದೆ. ಎರಡು ವಾರಗಳ ಹಿಂದೆ ಮೇ 16 ರಂದು, ಮತ್ತೊಂದು ಕ್ಲಿನಿಕಲ್ ಮೌಲ್ಯಮಾಪನ ಸಮಿತಿಯು ಆಗ್ವಾ ಸಾಧನಗಳನ್ನು ಅನುಮೋದಿಸುವ ಮೊದಲು “ಹೆಚ್ಚಿನ ತಾಂತ್ರಿಕ ಮೌಲ್ಯಮಾಪನ” ಅಗತ್ಯವಿದೆ ಎಂದು ತೀರ್ಮಾನಿಸಿತ್ತು.

ಕೋವಿಡ್ ರೋಗಿಗಳ ನಿರೀಕ್ಷಿತ ಉಲ್ಬಣವನ್ನು ನಿಭಾಯಿಸಲು ಆಸ್ಪತ್ರೆಗಳಿಗೆ 50,000 ವೆಂಟಿಲೇಟರ್‌ಗಳನ್ನು ಖರೀದಿಸುವ ಕೇಂದ್ರ ಸರ್ಕಾರದ ಯೋಜನೆಯ ಭಾಗವಾಗಿ ಮಾರ್ಚ್ 27 ರಂದು 10,000 ಆಗ್ವಾ ವೆಂಟಿಲೇಟರ್‌ಗಳಿಗೆ ಆದೇಶ ನೀಡಲಾಯಿತು. ವಿವಾದಾತ್ಮಕ ಪಿಎಂಕೇರ್ಸ್ ನಿಧಿಯಡಿಯಲ್ಲಿ ಈ ವೆಂಟಿಲೇಟರ್ಗಳನ್ನು ಖರೀದಿಸಲಾಗಿದೆ.

ವೆಂಟಿಲೇಟರ್‌ಗಳ ಜಾಗತಿಕ ಕೊರತೆಯನ್ನು ಗಮನದಲ್ಲಿಟ್ಟುಕೊಂಡು, ಒಮ್ಮೆ ಆದೇಶವನ್ನು ನೀಡಿದರೆ, ತಜ್ಞರ ಸಮಿತಿಯು ಅನುಮೋದಿಸಿದ ನಂತರವೇ ಸರ್ಕಾರವು ಸಾಧನಗಳನ್ನು ಸ್ವೀಕರಿಸುತ್ತದೆ ಎಂಬ ಷರತ್ತಿನ ಮೇಲೆ ಬಿಡ್ ಮಾಡಲು ಭಾರತೀಯ ಕಂಪನಿಗಳನ್ನು ಆಹ್ವಾನಿಸಲಾಗಿತ್ತು.


ಓದಿ: ದೆಹಲಿಯಲ್ಲಿ ಅಮಿತ್ ಶಾ ಹಾಗೂ ಕೇಜ್ರಿವಾಲ್ ಎಂಬ ಎರಡು ಮಾದರಿಯಿದೆ; ಸಿಸೋಡಿಯಾ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...