Homeಕರ್ನಾಟಕನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ಎಸ್‌ಡಿಪಿಐನವರ ಮೇಲೆ ಆರೋಪ ಮಾಡುವ ಭರದಲ್ಲಿ ವಿಎಚ್‌ಪಿ ಮತ್ತು ಬಿಜೆಪಿಯ ನಡುವಿನ ’ಒಳ ಒಪ್ಪಂದ’ದ ವಿಡಿಯೋವನ್ನು ಶರಣ್ ಪಂಪ್‌ವೆಲ್‌ ಟ್ವೀಟ್‌ ಮಾಡಿಬಿಟ್ಟಿದ್ದರು

- Advertisement -
- Advertisement -

‘ನಿಮ್ಮ ಮೇಲೆ ಯಾವುದೇ ಕೇಸಿದ್ದರೂ, ಎಲ್ಲಾ ತೆಗೆದು ಹಾಕುತ್ತೇವೆʼ ಎಂದು ಸ್ವತಃ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿರುವ ವಿವಾದಾತ್ಮಕ ವಿಡಿಯೋವೊಂದನ್ನು ಅಕಸ್ಮಾತಾಗಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಇದನ್ನು ನಾನುಗೌರಿ.ಕಾಮ್ ಬಯಲಿಗೆಳೆದಿದ್ದು, ಪ್ರಸ್ತುತ ವಿಡಿಯೊವನ್ನು ತನ್ನ ಟ್ವಿಟ್ಟರ್‌ನಿಂದ ಶರಣ್ ಪಂಪ್ವೆಲ್ ಡಿಲೀಟ್ ಮಾಡಿದ್ದಾರೆ.

ಪ್ರವಾಹ ಪರಿಸ್ಥಿತಿ ಬಗ್ಗೆ ಪರಿಶೀಲಿಸಲು ಗೃಹಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿಯವರು ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಅದರ ಬಗ್ಗೆ ತನ್ನ ಟ್ವಿಟ್ಟರಿನಲ್ಲಿ ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆಯನ್ನು ಉಲ್ಲೇಖಿಸಿ “ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮತ್ತು SDPI ಸಂಘಟನೆಯನ್ನು ನಿಷೇಧಿಸಬೇಕು ಮತ್ತು ಈ ಘಟನೆಯ ಹಿಂದೆ ರಾಷ್ಟ್ರವಿದ್ರೋಹಿ ಸಂಘಟನೆ ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್ಐ, ಭಯೋದ್ಪಾದಕರ ಕೈವಾಡವಿರುದರಿಂದ ಈ ಘಟನೆಯನ್ನು ರಾಷ್ಟ್ರೀಯ ತನಿಖಾ ದಳದ (NIA ) ಮುಖಾಂತರ ತನಿಖೆಗೆ ನಡೆಸಲು ಮಾನ್ಯ ಗೃಹಸಚಿವರಿಗೆ ಆಗ್ರಹಿಸಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಟ್ವೀಟ್‌ನ ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನು ಗಮನಿಸಿ ನಾನುಗೌರಿ ತಂಡ “ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!” ಎಂಬ ಶಿರ್ಷಿಕೆಯ ವರದಿಯನ್ನು ಮಾಡಿತ್ತು. ವರದಿ ವೈರಲಾಗುತ್ತಿದ್ದಂತೆ ಶರಣ್ ಪಂಪ್‌ವೆಲ್ ಟ್ವಿಟ್ಟರ್‌ನಲ್ಲಿರುವ ತನ್ನ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಅಲ್ಲದೆ ಅಲ್ಲಿ ಬೇರೆಯೆ ಹೊಸ ಟ್ವೀಟ್ ಹಾಕಿದ್ದಾರೆ.

ಹೊಸ ಟ್ವೀಟ್‌ನಲ್ಲಿ ಶರಣ್ ಪಂಪ್‌ವೆಲ್, “ಮೂರೂ ದಿವಸಗಳ ಹಿಂದೆ ದೇಶದ ಗೃಹ ಇಲಾಖೆಯು ದೇಶದಲ್ಲಿ ಕೋಮುಗಲಭೆ ಸೃಷ್ಟಿಸಲು ISI ಸಂಚು ರೂಪಿಸುತ್ತದೆ ಎಂದು ವರದಿ ನೀಡಿತ್ತು. ಹಾಗಾಗಿ ಘಟನೆಯ ಹಿಂದೆ ಪಾಕಿಸ್ತಾನ ಗುಪ್ತಚರ ಸಂಸ್ಥೆಯಾದ ISI ಯ ಕೈವಾಡವಿದೆ ಎಂದು ಸಂಶಯ ವ್ಯಕ್ತವಾಗಿರುತ್ತದೆ, #ಡಿಜೆಹಳ್ಳಿಜಿಹಾದಿಗಳಅಟ್ಟಹಾಸ” ಎಂದು ಟ್ವೀಟ್ ಮಾಡಿದ್ದಾರೆ.

ಡಿಲೀಟ್ ಮಾಡಿರುವ ವಿಡಿಯೋದಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿಯವರು ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಲವು ಗಲಭೆಗಳಲ್ಲಿ ಭಾಗಿಯಾಗಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ ಎದುರು ‘ನೋಡ್ರಿ ನಿಮ್ಮ ಮೇಲೆ ಯಾವುದೇ ಕೇಸು ಇದ್ದರೂ ತೆಗೆದು ಹಾಕುತ್ತೇವೆ’ ಎಂದು ಹೇಳಿದ್ದಾರೆ. ವಿಡಿಯೋವನ್ನು ಕೆಳಗೆ ನೋಡಬಹುದಾಗಿದೆ.

ಒಂದು ಕಡೆ ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಸಿದ್ದರಾಮಯ್ಯ ಸರ್ಕಾರ ಕೈಬಿಟ್ಟಿತೆಂದು ವಿರುದ್ಧ ಟೀಕಿಸುವ ಬಿಜೆಪಿ ಸರ್ಕಾರ ಮತ್ತು ಅದರ ಸದಸ್ಯರು ಈಗ ಬಲಪಂಥೀಯ ಕಾರ್ಯಕರ್ತರು ಭಾಗಿಯಾದ ಪ್ರಕರಣಗಳನ್ನು ವಾಪಸ್ ಪಡೆಯುವುದಾಗಿ ಅದೇ ಪಕ್ಷಕ್ಕೆ ಸೇರಿದ ಗೃಹ ಸಚಿವರೇ ಹೇಳುತ್ತಿದ್ದಾರೆ. ಹಾಗಾಗಿ ಈ ವಿಡಿಯೋಗೆ ವಿಶೇಷ ಮಹತ್ವ ಬಂದಿದೆ.

ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಯ ಮೇಲೆ ಆರೋಪ ಮಾಡುತ್ತಿರುವ ಬಿಜೆಪಿ ನಾಯಕರುಗಳು ಮತ್ತು ಇತರರು ಇದೀಗ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಶರಣ್‌  ಪಂಪ್‌ವೆಲ್‌ ವಿರುದ್ಧದ ಕೇಸುಗಳನ್ನು ವಾಪಸ್ ಪಡೆಯುತ್ತೇವೆ ಎಂದು ಸ್ವತಃ ಗೃಹ ಸಚಿವರು ಹೇಳಿರುವುದಕ್ಕೆ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಕಾದು ನೋಡಬೇಕು.


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...