Homeಕರ್ನಾಟಕಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

ಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

- Advertisement -
- Advertisement -

ಬಿಜೆಪಿ ಸರ್ಕಾರ ನಡೆಸಿದ ಪಠ್ಯಪುಸ್ತಕ ಹಗರಣದ ವಿರುದ್ಧದ ಹೋರಾಟ ರಾಜ್ಯದ ಇತರ ಪ್ರದೇಶಗಳಲ್ಲೂ ಅನುರಣಿಸಿದ್ದು, ಹಲವು ಭಾಗಗಳಲ್ಲಿ ನೂರಾರು ಪ್ರತಿಭಟನೆಗಳು ನಡೆದಿವೆ. ರಾಜಕೀಯ ದುರುದ್ದೇಶದಿಂದ ಮಾಡಲಾಗಿರುವ ತಿದ್ದುಪಡಿಯ ಕಾರಣಕ್ಕೆ ಸಾಹಿತಿ ದೇವನೂರು ಮಹಾದೇವ ಸೇರಿದಂತೆ ಹಲವಾರು ಸಾಹಿತಿಗಳು ತಮ್ಮ ಪಠ್ಯಗಳನ್ನು ಹಿಂಪಡೆದುಕೊಂಡಿದ್ದಾರೆ. ಈ ನಡುವೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರ ಸ್ವ-ಕ್ಷೇತ್ರವಾದ ತಿಪಟೂರಿನಲ್ಲಿ ಜನಸ್ಪಂದನಾ ಟ್ರಸ್ಟ್‌ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಒಕ್ಕೂಟ ‘ಜಾಗೃತ ತಿಪಟೂರು’ ಪರಿಷ್ಕೃತ ಪಠ್ಯಗಳ ವಿರುದ್ಧ ಜಾಗೃತಿ ಪಾದಯಾತ್ರೆ ನಡೆಸುತ್ತಿದೆ.

ಜುಲೈ 4 ರಂದು ತಿಪಟೂರು ತಾಲೂಕಿನ ಹಾಲ್ಕುರಿಕೆಯಲ್ಲಿ ಆರಂಭವಾಗಿರುವ ಪಾದಯಾತ್ರೆಯು ಬೈರಾಪುರ, ಘಟಕನಕೆರೆ, ರಾಮನಹಳ್ಳಿ, ಭಟ್ರಹಳ್ಳಿ ಹಾಗೂ ಹೊನ್ನವಳ್ಳಿ ಗ್ರಾಮಗಳಲ್ಲಿ ಸಂಚರಿಸಿದೆ. ಎಲ್ಲ ಗ್ರಾಮಗಳಲ್ಲಿಯೂ ಸಾರ್ವಜನಿಕ ಸಭೆ ನಡೆಸಿ, ಜನರಿಗೆ ಪಠ್ಯಪುಸ್ತಕದಲ್ಲಿರುವ ಲೋಪಗಳು ಹಾಗೂ ಅದರಿಂದ ಭವಿಷ್ಯದ ಮೇಲಾಗುವ ಪರಿಣಾಮಗಳ ಕುರಿತು ಅರಿವು ಮೂಡಿಸುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾದಯಾತ್ರೆಯ ಉದ್ದಕ್ಕೂ ಸಿಗುವ ಜನರಿಗೆ ಒಕ್ಕೂಟದ ಕಾರ್ಯಕರ್ತರು ಮರುಪರಿಷ್ಕೃತ ಪಠ್ಯದಲ್ಲಿರುವ ಲೋಪಗಳ ಕುರಿತು ವಿವರಿಸುತ್ತಿದ್ದಾರೆ. ತಮ್ಮ ಮಕ್ಕಳ ಭವಿಷ್ಯದ ಹಿತದೃಷ್ಠಿಯಿಂದ ಪಠ್ಯವನ್ನು ಹಿಂಪಡೆಯಲು ಒತ್ತಾಯಿಸಿ ಎಲ್ಲರೂ ಜೊತೆಗೂಡಬೇಕೆಂದು ಮನವಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಮರು ಷರಿಷ್ಕರಣಾ ಸಮಿತಿಯ ರಚನೆಯ ವಿರುದ್ಧವೂ ಕಿಡಿಕಾರಿರುವ ಹೋರಾಟಗಾರರು, “ಪಠ್ಯಪುಸ್ತಕಗಳ ಮರುಪರಿಷ್ಕರಣಾ ಸಮಿತಿಗೆ ವಿಕೃತ ಮನಸ್ಸಿನ, ಯಾವುದೇ ಶಿಕ್ಷಣದ ವಿದ್ವತ್ತಿನ ಹಿನ್ನೆಲೆ ಇಲ್ಲದ ವ್ಯಕ್ತಿಯಾದ ರೋಹಿತ್ ಚಕ್ರತೀರ್ಥನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ. ಆತ ಐದು ವರ್ಷಗಳ ಹಿಂದೆ ನಾಡಕವಿ ಕುವೆಂಪು ರಚಿಸಿದ್ದ ನಾಡಗೀತೆಯನ್ನು ಅಸಭ್ಯಗೊಳಿಸಿದ್ದ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ, ಸಮಿತಿಯ ಸದಸ್ಯರುಗಳು ಒಂದೇ ಕೋಮುವಿನವರಾಗಿದ್ದು, ದುರುದ್ದೇಶದಿಂದ ಬೆಳೆಯುವ ಮಕ್ಕಳ ಏಳಿಗೆಗೆ ಮಾರಕವಾಗುವಂತಹ ಬಲಪಂಥೀಯ ಮತ್ತು ತಿರುಚಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮರುಪರಿಷ್ಕರಣೆಗೆ ಒಳಪಡಿಸಿದ ಸಂಪೂರ್ಣ ಪಠ್ಯವನ್ನು ಕೈಬಿಡಬೇಕು. ತಾಲೂಕಿನವರೇ ಆದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ಕುಮ್ಮಕ್ಕಿನಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಅವರು ಕೂಡಲೇ ರಾಜ್ಯದ ಜನತೆ ಎದುರು ಕ್ಷಮೆಯಾಚಿಸಬೇಕು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಪಾದಯಾತ್ರೆಯಲ್ಲಿ ಜಾಗೃತ ತಿಪಟೂರು ಆಗ್ರಹಿಸಿದೆ.

“ಪಠ್ಯಪುಸ್ತಕಗಳಲ್ಲಿ ದೇಶದ ಸ್ವಾತಂತ್ರ್ಯ, ದಲಿತರು, ಮಹಿಳೆಯರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಸಮಾನತೆಗಾಗಿ ದುಡಿದ ಸಾವಿತ್ರಿ ಬಾ ಪುಲೆ, ಬಸವಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್, ಟಿಪ್ಪು ಸುಲ್ತಾನ್, ಕನಕದಾಸರು, ವಾಲ್ಮೀಕಿ, ಪೆರಿಯಾರ್ ರಾಮಸ್ವಾಮಿ, ಸಂಗೊಳ್ಳಿ ರಾಯಣ್ಣ, ನಾರಾಯಣ ಗುರು, ಅಕ್ಕಮಹಾದೇವಿ, ಸುರಪುರ ನಾಯಕರು, ಕುವೆಂಪು ಸೇರಿದಂತೆ ಹಲವಾರು ಮಹನೀಯರ ಇತಿಹಾಸವನ್ನು ತಿರುಚಲಾಗಿದೆ”

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

“ತಪ್ಪು ಮಾಹಿತಿಗಳನ್ನೂ ಹಾಗೂ ಬಲಪಂಥೀಯ ಸಿದ್ಧಾಂತಗಳನ್ನು ಮಕ್ಕಳ ಮನಸ್ಸಿನಲ್ಲಿ ತುಂಬಿಸಿ, ಮಕ್ಕಳಲ್ಲಿ ದ್ವೇಷ ಬಿತ್ತುವ ಹುನ್ನಾರ ನಡೆದಿದೆ. ಇಂತಹ ತಿರುಚಿದ ವಿಚಾರಗಳನ್ನು ಮಕ್ಕಳು ಓದಬಾರದು. ಎಲ್ಲರೂ ಈ ಹುನ್ನಾರಗಳ ವಿರುದ್ಧ ಎಚ್ಚೆತ್ತುಕೊಳ್ಳಬೇಕು” ಎಂದು ಪಾದಯಾತ್ರೆಯಲ್ಲಿ ವಿವರಿಸಲಾಗುತ್ತಿದೆ.

ಪಾದಯಾತ್ರೆಯಲ್ಲಿ ಮಾತನಾಡಿದ ಜನಸ್ಪಂದನಾ ಟ್ರಸ್ಟ್‌ನ ಅಧ್ಯಕ್ಷ ಶಶಿಧರ್, “ನಾವು ಯಾವುದೇ ಪಕ್ಷದ ಪರ ಕೆಲಸ ಮಾಡುತ್ತಿಲ್ಲ. ಆದರೆ, ಬಿಜೆಪಿಗರು ತಮ್ಮ ರಾಜಕೀಯಕ್ಕೆ ನಾಡಿನ ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದು ನ್ಯಾಯವಲ್ಲ. ಸೌಹಾರ್ದಯುತ ನಾಡಿನಲ್ಲಿ ಒಳಗೊಳ್ಳುವಿಕೆಯಿಂದ ಬದುಕುವುದು ಮುಖ್ಯವಾಗುತ್ತದೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಸಾಹಿತಿ ಎಸ್‌.ಜಿ ಸಿದ್ದರಾಮಯ್ಯ, “35 ವರ್ಷಗಳ ಕಾಲ ಶಿಕ್ಷಕನಾಗಿ ಸೇವೆ ಸಲ್ಲಿಸಿದ್ದೇನೆ. ಮಕ್ಕಳಿಗೆ ಯಾವ ಪಾಠ ಮುಖ್ಯವಾಗುತ್ತದೆ, ಹಿತವಾಗುತ್ತದೆ, ಬೆಳವಣಿಗೆ ಪೂರಕವಾಗಿರುತ್ತದೆ ಎಂಬುದನ್ನು ಅರಿತಿದ್ದೇನೆ. ಯಾವುದೇ ವಿಷಯದ ತಜ್ಞನಲ್ಲದವರನ್ನು ಮರುಪರಿಷ್ಕಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿ, ಅವರಿಂದ ಪಠ್ಯಗಳನ್ನು ತಿರುಚಿ ನಾಡಿಗೆ ಅನ್ಯಾಯ ಮಾಡುತ್ತಿದ್ದಾರೆ. ಕುರಿ ಕಾಯಬೇಕಾಗಿದ್ದ ನಾನು ಅಂಬೇಡ್ಕರ್ ಅವರ ಸಂವಿಧಾನದಿಂದಾಗಿ ನಿಮ್ಮ ಮುಂದೆ ನಿಂತು ಮಾತನಾಡುತ್ತಿದ್ದೇನೆ. ರಾಜಕೀಯ ದುರುದ್ದೇಶ ಮತ್ತು ಮತೀಯವಾದಿಗಳ ಪಿತೂರಿಗಳ ವಿರುದ್ಧ ನಾವೆಲ್ಲವೂ ಒಗ್ಗೂಡಬೇಕು” ಎಂದು ಕರೆಕೊಟ್ಟಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

ಸಭೆಗೆ ಅಡ್ಡಿಪಡಿಸಿದ ಬಿ.ಸಿ. ನಾಗೇಶ್‌ ಬೆಂಬಲಿಗರು

ಹೊನ್ನವಳ್ಳಿಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಸಭೆಗೆ ಸಚಿವ ಬಿ.ಸಿ ನಾಗೇಶ್‌ ಬೆಂಬಲಿಗರು ಅಡ್ಡಿಪಡಿಸಿದ ಘಟನೆಯೂ ನಡೆದಿದೆ. ಈ ವೇಳೆ, ಬಿಜೆಪಿ ಕಾರ್ಯಕರ್ತರು ಹಾಗೂ ಹೋರಾಟಗಾರರ ನಡುವೆ ವಾಗ್ವಾದವೂ ನಡೆಯಿತು. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಆದರೂ ಪಟ್ಟುಬಿಡದ ಹೋರಾಟಗಾರರು ತಮ್ಮ ಸಭೆಯನ್ನು ಮುಂದುವರೆಸಿದ್ದಾರೆ. ‘‘ಬೆದರಿಕೆಗಳಿಗೆ ನಾವು ಬಗ್ಗುವುದಿಲ್ಲ. ಬಿ.ಸಿ ನಾಗೇಶ್ ರಾಜೀನಾಮೆಯನ್ನು ಪಡೆದೇ ತೀರುತ್ತೇವೆ. ನಿಮಗೆ (ಬಿಜೆಪಿ) ಲಿಂಗಾಯಿತರ ಮತ ಬೇಕು, ಬಸವಣ್ಣ ಬೇಡ. ಒಕ್ಕಲಿಗರ ಮತ ಬೇಕು, ಕುವೆಂಪು-ನಾಡಪ್ರಭು ಕೆಂಪೇಗೌಡ ಬೇಡ. ದಲಿತರ ಮತ ಬೇಕು, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಬೇಡ. ಕುರುಬರ ಮತ ಬೇಕು, ಕನಕದಾಸರು ಬೇಡ. ಮಹಿಳೆಯರ ಮತ ಬೇಕು, ಅಕ್ಕಮಹಾದೇವಿ-ಸಾವಿತ್ರಿ ಬಾ ಪುಲೆಯರಂತಹ ಮಹಾನ್‌ ತಾಯಂದಿರು ಬೇಡವಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿ ಪಾದಯಾತ್ರೆಯನ್ನು ಮುಂದುವರೆಸಿದ್ದಾರೆ.

ಪಾದಯಾತ್ರೆಯಲ್ಲಿ ಜನ ಸ್ಪಂದನ ಟ್ರಸ್ಟ್, ರೈತ ಸಂಘ, ದಲಿತ ಸಂಘ ಕನ್ನಡ ರಕ್ಷಣಾ ವೇದಿಕೆ, ಸೌಹಾರ್ದ ವೇದಿಕೆ, ಕುವೆಂಪು ಯುವ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ ಸ್ವಾಮೀಜಿಗಳು

ಪಾದಯಾತ್ರೆ ನಡೆಯುತ್ತಿರುವ ಎಲ್ಲ ಗ್ರಾಮಗಳಲ್ಲಿಯೂ ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆಗಳೂ ವ್ಯಕ್ತವಾಗುತ್ತಿವೆ ಎಂದು ಸಂಘಟಕರು ಹೇಳಿದ್ದಾರೆ. ಜಾಗೃತಿ ಪಾದಯಾತ್ರೆಯು ಜೂನ್‌ 9 ರವರೆಗೆ ನಡೆಯಲಿದ್ದು, ಶನಿವಾರದಂದು ತಿಪಟೂರಿನಲ್ಲಿ ಸಮಾವೇಶಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...