Homeಕರ್ನಾಟಕಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

ಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

- Advertisement -
- Advertisement -

ಬಿಜೆಪಿ ಸರ್ಕಾರ ನಡೆಸಿದ ಪಠ್ಯಪುಸ್ತಕ ಹಗರಣದ ವಿರುದ್ಧದ ಹೋರಾಟ ರಾಜ್ಯದ ಇತರ ಪ್ರದೇಶಗಳಲ್ಲೂ ಅನುರಣಿಸಿದ್ದು, ಹಲವು ಭಾಗಗಳಲ್ಲಿ ನೂರಾರು ಪ್ರತಿಭಟನೆಗಳು ನಡೆದಿವೆ. ರಾಜಕೀಯ ದುರುದ್ದೇಶದಿಂದ ಮಾಡಲಾಗಿರುವ ತಿದ್ದುಪಡಿಯ ಕಾರಣಕ್ಕೆ ಸಾಹಿತಿ ದೇವನೂರು ಮಹಾದೇವ ಸೇರಿದಂತೆ ಹಲವಾರು ಸಾಹಿತಿಗಳು ತಮ್ಮ ಪಠ್ಯಗಳನ್ನು ಹಿಂಪಡೆದುಕೊಂಡಿದ್ದಾರೆ. ಈ ನಡುವೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರ ಸ್ವ-ಕ್ಷೇತ್ರವಾದ ತಿಪಟೂರಿನಲ್ಲಿ ಜನಸ್ಪಂದನಾ ಟ್ರಸ್ಟ್‌ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಒಕ್ಕೂಟ ‘ಜಾಗೃತ ತಿಪಟೂರು’ ಪರಿಷ್ಕೃತ ಪಠ್ಯಗಳ ವಿರುದ್ಧ ಜಾಗೃತಿ ಪಾದಯಾತ್ರೆ ನಡೆಸುತ್ತಿದೆ.

ಜುಲೈ 4 ರಂದು ತಿಪಟೂರು ತಾಲೂಕಿನ ಹಾಲ್ಕುರಿಕೆಯಲ್ಲಿ ಆರಂಭವಾಗಿರುವ ಪಾದಯಾತ್ರೆಯು ಬೈರಾಪುರ, ಘಟಕನಕೆರೆ, ರಾಮನಹಳ್ಳಿ, ಭಟ್ರಹಳ್ಳಿ ಹಾಗೂ ಹೊನ್ನವಳ್ಳಿ ಗ್ರಾಮಗಳಲ್ಲಿ ಸಂಚರಿಸಿದೆ. ಎಲ್ಲ ಗ್ರಾಮಗಳಲ್ಲಿಯೂ ಸಾರ್ವಜನಿಕ ಸಭೆ ನಡೆಸಿ, ಜನರಿಗೆ ಪಠ್ಯಪುಸ್ತಕದಲ್ಲಿರುವ ಲೋಪಗಳು ಹಾಗೂ ಅದರಿಂದ ಭವಿಷ್ಯದ ಮೇಲಾಗುವ ಪರಿಣಾಮಗಳ ಕುರಿತು ಅರಿವು ಮೂಡಿಸುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾದಯಾತ್ರೆಯ ಉದ್ದಕ್ಕೂ ಸಿಗುವ ಜನರಿಗೆ ಒಕ್ಕೂಟದ ಕಾರ್ಯಕರ್ತರು ಮರುಪರಿಷ್ಕೃತ ಪಠ್ಯದಲ್ಲಿರುವ ಲೋಪಗಳ ಕುರಿತು ವಿವರಿಸುತ್ತಿದ್ದಾರೆ. ತಮ್ಮ ಮಕ್ಕಳ ಭವಿಷ್ಯದ ಹಿತದೃಷ್ಠಿಯಿಂದ ಪಠ್ಯವನ್ನು ಹಿಂಪಡೆಯಲು ಒತ್ತಾಯಿಸಿ ಎಲ್ಲರೂ ಜೊತೆಗೂಡಬೇಕೆಂದು ಮನವಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಮರು ಷರಿಷ್ಕರಣಾ ಸಮಿತಿಯ ರಚನೆಯ ವಿರುದ್ಧವೂ ಕಿಡಿಕಾರಿರುವ ಹೋರಾಟಗಾರರು, “ಪಠ್ಯಪುಸ್ತಕಗಳ ಮರುಪರಿಷ್ಕರಣಾ ಸಮಿತಿಗೆ ವಿಕೃತ ಮನಸ್ಸಿನ, ಯಾವುದೇ ಶಿಕ್ಷಣದ ವಿದ್ವತ್ತಿನ ಹಿನ್ನೆಲೆ ಇಲ್ಲದ ವ್ಯಕ್ತಿಯಾದ ರೋಹಿತ್ ಚಕ್ರತೀರ್ಥನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ. ಆತ ಐದು ವರ್ಷಗಳ ಹಿಂದೆ ನಾಡಕವಿ ಕುವೆಂಪು ರಚಿಸಿದ್ದ ನಾಡಗೀತೆಯನ್ನು ಅಸಭ್ಯಗೊಳಿಸಿದ್ದ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ, ಸಮಿತಿಯ ಸದಸ್ಯರುಗಳು ಒಂದೇ ಕೋಮುವಿನವರಾಗಿದ್ದು, ದುರುದ್ದೇಶದಿಂದ ಬೆಳೆಯುವ ಮಕ್ಕಳ ಏಳಿಗೆಗೆ ಮಾರಕವಾಗುವಂತಹ ಬಲಪಂಥೀಯ ಮತ್ತು ತಿರುಚಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮರುಪರಿಷ್ಕರಣೆಗೆ ಒಳಪಡಿಸಿದ ಸಂಪೂರ್ಣ ಪಠ್ಯವನ್ನು ಕೈಬಿಡಬೇಕು. ತಾಲೂಕಿನವರೇ ಆದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ಕುಮ್ಮಕ್ಕಿನಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಅವರು ಕೂಡಲೇ ರಾಜ್ಯದ ಜನತೆ ಎದುರು ಕ್ಷಮೆಯಾಚಿಸಬೇಕು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಪಾದಯಾತ್ರೆಯಲ್ಲಿ ಜಾಗೃತ ತಿಪಟೂರು ಆಗ್ರಹಿಸಿದೆ.

“ಪಠ್ಯಪುಸ್ತಕಗಳಲ್ಲಿ ದೇಶದ ಸ್ವಾತಂತ್ರ್ಯ, ದಲಿತರು, ಮಹಿಳೆಯರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಸಮಾನತೆಗಾಗಿ ದುಡಿದ ಸಾವಿತ್ರಿ ಬಾ ಪುಲೆ, ಬಸವಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್, ಟಿಪ್ಪು ಸುಲ್ತಾನ್, ಕನಕದಾಸರು, ವಾಲ್ಮೀಕಿ, ಪೆರಿಯಾರ್ ರಾಮಸ್ವಾಮಿ, ಸಂಗೊಳ್ಳಿ ರಾಯಣ್ಣ, ನಾರಾಯಣ ಗುರು, ಅಕ್ಕಮಹಾದೇವಿ, ಸುರಪುರ ನಾಯಕರು, ಕುವೆಂಪು ಸೇರಿದಂತೆ ಹಲವಾರು ಮಹನೀಯರ ಇತಿಹಾಸವನ್ನು ತಿರುಚಲಾಗಿದೆ”

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

“ತಪ್ಪು ಮಾಹಿತಿಗಳನ್ನೂ ಹಾಗೂ ಬಲಪಂಥೀಯ ಸಿದ್ಧಾಂತಗಳನ್ನು ಮಕ್ಕಳ ಮನಸ್ಸಿನಲ್ಲಿ ತುಂಬಿಸಿ, ಮಕ್ಕಳಲ್ಲಿ ದ್ವೇಷ ಬಿತ್ತುವ ಹುನ್ನಾರ ನಡೆದಿದೆ. ಇಂತಹ ತಿರುಚಿದ ವಿಚಾರಗಳನ್ನು ಮಕ್ಕಳು ಓದಬಾರದು. ಎಲ್ಲರೂ ಈ ಹುನ್ನಾರಗಳ ವಿರುದ್ಧ ಎಚ್ಚೆತ್ತುಕೊಳ್ಳಬೇಕು” ಎಂದು ಪಾದಯಾತ್ರೆಯಲ್ಲಿ ವಿವರಿಸಲಾಗುತ್ತಿದೆ.

ಪಾದಯಾತ್ರೆಯಲ್ಲಿ ಮಾತನಾಡಿದ ಜನಸ್ಪಂದನಾ ಟ್ರಸ್ಟ್‌ನ ಅಧ್ಯಕ್ಷ ಶಶಿಧರ್, “ನಾವು ಯಾವುದೇ ಪಕ್ಷದ ಪರ ಕೆಲಸ ಮಾಡುತ್ತಿಲ್ಲ. ಆದರೆ, ಬಿಜೆಪಿಗರು ತಮ್ಮ ರಾಜಕೀಯಕ್ಕೆ ನಾಡಿನ ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದು ನ್ಯಾಯವಲ್ಲ. ಸೌಹಾರ್ದಯುತ ನಾಡಿನಲ್ಲಿ ಒಳಗೊಳ್ಳುವಿಕೆಯಿಂದ ಬದುಕುವುದು ಮುಖ್ಯವಾಗುತ್ತದೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಸಾಹಿತಿ ಎಸ್‌.ಜಿ ಸಿದ್ದರಾಮಯ್ಯ, “35 ವರ್ಷಗಳ ಕಾಲ ಶಿಕ್ಷಕನಾಗಿ ಸೇವೆ ಸಲ್ಲಿಸಿದ್ದೇನೆ. ಮಕ್ಕಳಿಗೆ ಯಾವ ಪಾಠ ಮುಖ್ಯವಾಗುತ್ತದೆ, ಹಿತವಾಗುತ್ತದೆ, ಬೆಳವಣಿಗೆ ಪೂರಕವಾಗಿರುತ್ತದೆ ಎಂಬುದನ್ನು ಅರಿತಿದ್ದೇನೆ. ಯಾವುದೇ ವಿಷಯದ ತಜ್ಞನಲ್ಲದವರನ್ನು ಮರುಪರಿಷ್ಕಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿ, ಅವರಿಂದ ಪಠ್ಯಗಳನ್ನು ತಿರುಚಿ ನಾಡಿಗೆ ಅನ್ಯಾಯ ಮಾಡುತ್ತಿದ್ದಾರೆ. ಕುರಿ ಕಾಯಬೇಕಾಗಿದ್ದ ನಾನು ಅಂಬೇಡ್ಕರ್ ಅವರ ಸಂವಿಧಾನದಿಂದಾಗಿ ನಿಮ್ಮ ಮುಂದೆ ನಿಂತು ಮಾತನಾಡುತ್ತಿದ್ದೇನೆ. ರಾಜಕೀಯ ದುರುದ್ದೇಶ ಮತ್ತು ಮತೀಯವಾದಿಗಳ ಪಿತೂರಿಗಳ ವಿರುದ್ಧ ನಾವೆಲ್ಲವೂ ಒಗ್ಗೂಡಬೇಕು” ಎಂದು ಕರೆಕೊಟ್ಟಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

ಸಭೆಗೆ ಅಡ್ಡಿಪಡಿಸಿದ ಬಿ.ಸಿ. ನಾಗೇಶ್‌ ಬೆಂಬಲಿಗರು

ಹೊನ್ನವಳ್ಳಿಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಸಭೆಗೆ ಸಚಿವ ಬಿ.ಸಿ ನಾಗೇಶ್‌ ಬೆಂಬಲಿಗರು ಅಡ್ಡಿಪಡಿಸಿದ ಘಟನೆಯೂ ನಡೆದಿದೆ. ಈ ವೇಳೆ, ಬಿಜೆಪಿ ಕಾರ್ಯಕರ್ತರು ಹಾಗೂ ಹೋರಾಟಗಾರರ ನಡುವೆ ವಾಗ್ವಾದವೂ ನಡೆಯಿತು. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಆದರೂ ಪಟ್ಟುಬಿಡದ ಹೋರಾಟಗಾರರು ತಮ್ಮ ಸಭೆಯನ್ನು ಮುಂದುವರೆಸಿದ್ದಾರೆ. ‘‘ಬೆದರಿಕೆಗಳಿಗೆ ನಾವು ಬಗ್ಗುವುದಿಲ್ಲ. ಬಿ.ಸಿ ನಾಗೇಶ್ ರಾಜೀನಾಮೆಯನ್ನು ಪಡೆದೇ ತೀರುತ್ತೇವೆ. ನಿಮಗೆ (ಬಿಜೆಪಿ) ಲಿಂಗಾಯಿತರ ಮತ ಬೇಕು, ಬಸವಣ್ಣ ಬೇಡ. ಒಕ್ಕಲಿಗರ ಮತ ಬೇಕು, ಕುವೆಂಪು-ನಾಡಪ್ರಭು ಕೆಂಪೇಗೌಡ ಬೇಡ. ದಲಿತರ ಮತ ಬೇಕು, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಬೇಡ. ಕುರುಬರ ಮತ ಬೇಕು, ಕನಕದಾಸರು ಬೇಡ. ಮಹಿಳೆಯರ ಮತ ಬೇಕು, ಅಕ್ಕಮಹಾದೇವಿ-ಸಾವಿತ್ರಿ ಬಾ ಪುಲೆಯರಂತಹ ಮಹಾನ್‌ ತಾಯಂದಿರು ಬೇಡವಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿ ಪಾದಯಾತ್ರೆಯನ್ನು ಮುಂದುವರೆಸಿದ್ದಾರೆ.

ಪಾದಯಾತ್ರೆಯಲ್ಲಿ ಜನ ಸ್ಪಂದನ ಟ್ರಸ್ಟ್, ರೈತ ಸಂಘ, ದಲಿತ ಸಂಘ ಕನ್ನಡ ರಕ್ಷಣಾ ವೇದಿಕೆ, ಸೌಹಾರ್ದ ವೇದಿಕೆ, ಕುವೆಂಪು ಯುವ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ ಸ್ವಾಮೀಜಿಗಳು

ಪಾದಯಾತ್ರೆ ನಡೆಯುತ್ತಿರುವ ಎಲ್ಲ ಗ್ರಾಮಗಳಲ್ಲಿಯೂ ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆಗಳೂ ವ್ಯಕ್ತವಾಗುತ್ತಿವೆ ಎಂದು ಸಂಘಟಕರು ಹೇಳಿದ್ದಾರೆ. ಜಾಗೃತಿ ಪಾದಯಾತ್ರೆಯು ಜೂನ್‌ 9 ರವರೆಗೆ ನಡೆಯಲಿದ್ದು, ಶನಿವಾರದಂದು ತಿಪಟೂರಿನಲ್ಲಿ ಸಮಾವೇಶಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...