Homeಕರ್ನಾಟಕಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

ಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

- Advertisement -
- Advertisement -

ಬಿಜೆಪಿ ಸರ್ಕಾರ ನಡೆಸಿದ ಪಠ್ಯಪುಸ್ತಕ ಹಗರಣದ ವಿರುದ್ಧದ ಹೋರಾಟ ರಾಜ್ಯದ ಇತರ ಪ್ರದೇಶಗಳಲ್ಲೂ ಅನುರಣಿಸಿದ್ದು, ಹಲವು ಭಾಗಗಳಲ್ಲಿ ನೂರಾರು ಪ್ರತಿಭಟನೆಗಳು ನಡೆದಿವೆ. ರಾಜಕೀಯ ದುರುದ್ದೇಶದಿಂದ ಮಾಡಲಾಗಿರುವ ತಿದ್ದುಪಡಿಯ ಕಾರಣಕ್ಕೆ ಸಾಹಿತಿ ದೇವನೂರು ಮಹಾದೇವ ಸೇರಿದಂತೆ ಹಲವಾರು ಸಾಹಿತಿಗಳು ತಮ್ಮ ಪಠ್ಯಗಳನ್ನು ಹಿಂಪಡೆದುಕೊಂಡಿದ್ದಾರೆ. ಈ ನಡುವೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರ ಸ್ವ-ಕ್ಷೇತ್ರವಾದ ತಿಪಟೂರಿನಲ್ಲಿ ಜನಸ್ಪಂದನಾ ಟ್ರಸ್ಟ್‌ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಒಕ್ಕೂಟ ‘ಜಾಗೃತ ತಿಪಟೂರು’ ಪರಿಷ್ಕೃತ ಪಠ್ಯಗಳ ವಿರುದ್ಧ ಜಾಗೃತಿ ಪಾದಯಾತ್ರೆ ನಡೆಸುತ್ತಿದೆ.

ಜುಲೈ 4 ರಂದು ತಿಪಟೂರು ತಾಲೂಕಿನ ಹಾಲ್ಕುರಿಕೆಯಲ್ಲಿ ಆರಂಭವಾಗಿರುವ ಪಾದಯಾತ್ರೆಯು ಬೈರಾಪುರ, ಘಟಕನಕೆರೆ, ರಾಮನಹಳ್ಳಿ, ಭಟ್ರಹಳ್ಳಿ ಹಾಗೂ ಹೊನ್ನವಳ್ಳಿ ಗ್ರಾಮಗಳಲ್ಲಿ ಸಂಚರಿಸಿದೆ. ಎಲ್ಲ ಗ್ರಾಮಗಳಲ್ಲಿಯೂ ಸಾರ್ವಜನಿಕ ಸಭೆ ನಡೆಸಿ, ಜನರಿಗೆ ಪಠ್ಯಪುಸ್ತಕದಲ್ಲಿರುವ ಲೋಪಗಳು ಹಾಗೂ ಅದರಿಂದ ಭವಿಷ್ಯದ ಮೇಲಾಗುವ ಪರಿಣಾಮಗಳ ಕುರಿತು ಅರಿವು ಮೂಡಿಸುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾದಯಾತ್ರೆಯ ಉದ್ದಕ್ಕೂ ಸಿಗುವ ಜನರಿಗೆ ಒಕ್ಕೂಟದ ಕಾರ್ಯಕರ್ತರು ಮರುಪರಿಷ್ಕೃತ ಪಠ್ಯದಲ್ಲಿರುವ ಲೋಪಗಳ ಕುರಿತು ವಿವರಿಸುತ್ತಿದ್ದಾರೆ. ತಮ್ಮ ಮಕ್ಕಳ ಭವಿಷ್ಯದ ಹಿತದೃಷ್ಠಿಯಿಂದ ಪಠ್ಯವನ್ನು ಹಿಂಪಡೆಯಲು ಒತ್ತಾಯಿಸಿ ಎಲ್ಲರೂ ಜೊತೆಗೂಡಬೇಕೆಂದು ಮನವಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಮರು ಷರಿಷ್ಕರಣಾ ಸಮಿತಿಯ ರಚನೆಯ ವಿರುದ್ಧವೂ ಕಿಡಿಕಾರಿರುವ ಹೋರಾಟಗಾರರು, “ಪಠ್ಯಪುಸ್ತಕಗಳ ಮರುಪರಿಷ್ಕರಣಾ ಸಮಿತಿಗೆ ವಿಕೃತ ಮನಸ್ಸಿನ, ಯಾವುದೇ ಶಿಕ್ಷಣದ ವಿದ್ವತ್ತಿನ ಹಿನ್ನೆಲೆ ಇಲ್ಲದ ವ್ಯಕ್ತಿಯಾದ ರೋಹಿತ್ ಚಕ್ರತೀರ್ಥನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ. ಆತ ಐದು ವರ್ಷಗಳ ಹಿಂದೆ ನಾಡಕವಿ ಕುವೆಂಪು ರಚಿಸಿದ್ದ ನಾಡಗೀತೆಯನ್ನು ಅಸಭ್ಯಗೊಳಿಸಿದ್ದ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ, ಸಮಿತಿಯ ಸದಸ್ಯರುಗಳು ಒಂದೇ ಕೋಮುವಿನವರಾಗಿದ್ದು, ದುರುದ್ದೇಶದಿಂದ ಬೆಳೆಯುವ ಮಕ್ಕಳ ಏಳಿಗೆಗೆ ಮಾರಕವಾಗುವಂತಹ ಬಲಪಂಥೀಯ ಮತ್ತು ತಿರುಚಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮರುಪರಿಷ್ಕರಣೆಗೆ ಒಳಪಡಿಸಿದ ಸಂಪೂರ್ಣ ಪಠ್ಯವನ್ನು ಕೈಬಿಡಬೇಕು. ತಾಲೂಕಿನವರೇ ಆದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ಕುಮ್ಮಕ್ಕಿನಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಅವರು ಕೂಡಲೇ ರಾಜ್ಯದ ಜನತೆ ಎದುರು ಕ್ಷಮೆಯಾಚಿಸಬೇಕು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಪಾದಯಾತ್ರೆಯಲ್ಲಿ ಜಾಗೃತ ತಿಪಟೂರು ಆಗ್ರಹಿಸಿದೆ.

“ಪಠ್ಯಪುಸ್ತಕಗಳಲ್ಲಿ ದೇಶದ ಸ್ವಾತಂತ್ರ್ಯ, ದಲಿತರು, ಮಹಿಳೆಯರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಸಮಾನತೆಗಾಗಿ ದುಡಿದ ಸಾವಿತ್ರಿ ಬಾ ಪುಲೆ, ಬಸವಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್, ಟಿಪ್ಪು ಸುಲ್ತಾನ್, ಕನಕದಾಸರು, ವಾಲ್ಮೀಕಿ, ಪೆರಿಯಾರ್ ರಾಮಸ್ವಾಮಿ, ಸಂಗೊಳ್ಳಿ ರಾಯಣ್ಣ, ನಾರಾಯಣ ಗುರು, ಅಕ್ಕಮಹಾದೇವಿ, ಸುರಪುರ ನಾಯಕರು, ಕುವೆಂಪು ಸೇರಿದಂತೆ ಹಲವಾರು ಮಹನೀಯರ ಇತಿಹಾಸವನ್ನು ತಿರುಚಲಾಗಿದೆ”

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

“ತಪ್ಪು ಮಾಹಿತಿಗಳನ್ನೂ ಹಾಗೂ ಬಲಪಂಥೀಯ ಸಿದ್ಧಾಂತಗಳನ್ನು ಮಕ್ಕಳ ಮನಸ್ಸಿನಲ್ಲಿ ತುಂಬಿಸಿ, ಮಕ್ಕಳಲ್ಲಿ ದ್ವೇಷ ಬಿತ್ತುವ ಹುನ್ನಾರ ನಡೆದಿದೆ. ಇಂತಹ ತಿರುಚಿದ ವಿಚಾರಗಳನ್ನು ಮಕ್ಕಳು ಓದಬಾರದು. ಎಲ್ಲರೂ ಈ ಹುನ್ನಾರಗಳ ವಿರುದ್ಧ ಎಚ್ಚೆತ್ತುಕೊಳ್ಳಬೇಕು” ಎಂದು ಪಾದಯಾತ್ರೆಯಲ್ಲಿ ವಿವರಿಸಲಾಗುತ್ತಿದೆ.

ಪಾದಯಾತ್ರೆಯಲ್ಲಿ ಮಾತನಾಡಿದ ಜನಸ್ಪಂದನಾ ಟ್ರಸ್ಟ್‌ನ ಅಧ್ಯಕ್ಷ ಶಶಿಧರ್, “ನಾವು ಯಾವುದೇ ಪಕ್ಷದ ಪರ ಕೆಲಸ ಮಾಡುತ್ತಿಲ್ಲ. ಆದರೆ, ಬಿಜೆಪಿಗರು ತಮ್ಮ ರಾಜಕೀಯಕ್ಕೆ ನಾಡಿನ ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದು ನ್ಯಾಯವಲ್ಲ. ಸೌಹಾರ್ದಯುತ ನಾಡಿನಲ್ಲಿ ಒಳಗೊಳ್ಳುವಿಕೆಯಿಂದ ಬದುಕುವುದು ಮುಖ್ಯವಾಗುತ್ತದೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಸಾಹಿತಿ ಎಸ್‌.ಜಿ ಸಿದ್ದರಾಮಯ್ಯ, “35 ವರ್ಷಗಳ ಕಾಲ ಶಿಕ್ಷಕನಾಗಿ ಸೇವೆ ಸಲ್ಲಿಸಿದ್ದೇನೆ. ಮಕ್ಕಳಿಗೆ ಯಾವ ಪಾಠ ಮುಖ್ಯವಾಗುತ್ತದೆ, ಹಿತವಾಗುತ್ತದೆ, ಬೆಳವಣಿಗೆ ಪೂರಕವಾಗಿರುತ್ತದೆ ಎಂಬುದನ್ನು ಅರಿತಿದ್ದೇನೆ. ಯಾವುದೇ ವಿಷಯದ ತಜ್ಞನಲ್ಲದವರನ್ನು ಮರುಪರಿಷ್ಕಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿ, ಅವರಿಂದ ಪಠ್ಯಗಳನ್ನು ತಿರುಚಿ ನಾಡಿಗೆ ಅನ್ಯಾಯ ಮಾಡುತ್ತಿದ್ದಾರೆ. ಕುರಿ ಕಾಯಬೇಕಾಗಿದ್ದ ನಾನು ಅಂಬೇಡ್ಕರ್ ಅವರ ಸಂವಿಧಾನದಿಂದಾಗಿ ನಿಮ್ಮ ಮುಂದೆ ನಿಂತು ಮಾತನಾಡುತ್ತಿದ್ದೇನೆ. ರಾಜಕೀಯ ದುರುದ್ದೇಶ ಮತ್ತು ಮತೀಯವಾದಿಗಳ ಪಿತೂರಿಗಳ ವಿರುದ್ಧ ನಾವೆಲ್ಲವೂ ಒಗ್ಗೂಡಬೇಕು” ಎಂದು ಕರೆಕೊಟ್ಟಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

ಸಭೆಗೆ ಅಡ್ಡಿಪಡಿಸಿದ ಬಿ.ಸಿ. ನಾಗೇಶ್‌ ಬೆಂಬಲಿಗರು

ಹೊನ್ನವಳ್ಳಿಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಸಭೆಗೆ ಸಚಿವ ಬಿ.ಸಿ ನಾಗೇಶ್‌ ಬೆಂಬಲಿಗರು ಅಡ್ಡಿಪಡಿಸಿದ ಘಟನೆಯೂ ನಡೆದಿದೆ. ಈ ವೇಳೆ, ಬಿಜೆಪಿ ಕಾರ್ಯಕರ್ತರು ಹಾಗೂ ಹೋರಾಟಗಾರರ ನಡುವೆ ವಾಗ್ವಾದವೂ ನಡೆಯಿತು. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಆದರೂ ಪಟ್ಟುಬಿಡದ ಹೋರಾಟಗಾರರು ತಮ್ಮ ಸಭೆಯನ್ನು ಮುಂದುವರೆಸಿದ್ದಾರೆ. ‘‘ಬೆದರಿಕೆಗಳಿಗೆ ನಾವು ಬಗ್ಗುವುದಿಲ್ಲ. ಬಿ.ಸಿ ನಾಗೇಶ್ ರಾಜೀನಾಮೆಯನ್ನು ಪಡೆದೇ ತೀರುತ್ತೇವೆ. ನಿಮಗೆ (ಬಿಜೆಪಿ) ಲಿಂಗಾಯಿತರ ಮತ ಬೇಕು, ಬಸವಣ್ಣ ಬೇಡ. ಒಕ್ಕಲಿಗರ ಮತ ಬೇಕು, ಕುವೆಂಪು-ನಾಡಪ್ರಭು ಕೆಂಪೇಗೌಡ ಬೇಡ. ದಲಿತರ ಮತ ಬೇಕು, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಬೇಡ. ಕುರುಬರ ಮತ ಬೇಕು, ಕನಕದಾಸರು ಬೇಡ. ಮಹಿಳೆಯರ ಮತ ಬೇಕು, ಅಕ್ಕಮಹಾದೇವಿ-ಸಾವಿತ್ರಿ ಬಾ ಪುಲೆಯರಂತಹ ಮಹಾನ್‌ ತಾಯಂದಿರು ಬೇಡವಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿ ಪಾದಯಾತ್ರೆಯನ್ನು ಮುಂದುವರೆಸಿದ್ದಾರೆ.

ಪಾದಯಾತ್ರೆಯಲ್ಲಿ ಜನ ಸ್ಪಂದನ ಟ್ರಸ್ಟ್, ರೈತ ಸಂಘ, ದಲಿತ ಸಂಘ ಕನ್ನಡ ರಕ್ಷಣಾ ವೇದಿಕೆ, ಸೌಹಾರ್ದ ವೇದಿಕೆ, ಕುವೆಂಪು ಯುವ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ ಸ್ವಾಮೀಜಿಗಳು

ಪಾದಯಾತ್ರೆ ನಡೆಯುತ್ತಿರುವ ಎಲ್ಲ ಗ್ರಾಮಗಳಲ್ಲಿಯೂ ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆಗಳೂ ವ್ಯಕ್ತವಾಗುತ್ತಿವೆ ಎಂದು ಸಂಘಟಕರು ಹೇಳಿದ್ದಾರೆ. ಜಾಗೃತಿ ಪಾದಯಾತ್ರೆಯು ಜೂನ್‌ 9 ರವರೆಗೆ ನಡೆಯಲಿದ್ದು, ಶನಿವಾರದಂದು ತಿಪಟೂರಿನಲ್ಲಿ ಸಮಾವೇಶಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...