Homeಮುಖಪುಟದಲಿತ ವ್ಯಕ್ತಿಯನ್ನು ವಿವಾಹವಾಗಿದ್ದಕ್ಕೆ ಮಹಿಳಾ ಪೇದೆಯನ್ನು ಹತ್ಯೆ ಮಾಡಿದ ಸಹೋದರ

ದಲಿತ ವ್ಯಕ್ತಿಯನ್ನು ವಿವಾಹವಾಗಿದ್ದಕ್ಕೆ ಮಹಿಳಾ ಪೇದೆಯನ್ನು ಹತ್ಯೆ ಮಾಡಿದ ಸಹೋದರ

- Advertisement -
- Advertisement -

ಹೈದರಾಬಾದ್‌: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಇಬ್ರಾಹಿಂಪಟ್ಟಣಂ ಮಂಡಲದ ರಾಯಪೋಲ್ ಗ್ರಾಮದ ಬಳಿ ಸೋಮವಾರ ಮರ್ಯಾದಾ ಹತ್ಯೆಯ ಶಂಕಿತ ಪ್ರಕರಣದಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರನ್ನು ಆಕೆಯ ಸಹೋದರ ಬರ್ಬರವಾಗಿ ಹತ್ಯೆಗೈದಿರುವ ದುರ್ಘಟನೆ ವರದಿಯಾಗಿದೆ.

ಸಂತ್ರಸ್ತೆ ನಾಗಮಣಿ (26) ಹಯಾತ್‌ನಗರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, 15 ದಿನಗಳ ಹಿಂದೆ ಅಂದರೆ ನ.21ರಂದು ಯಾದಗಿರಿಗುಟ್ಟಾದಲ್ಲಿ ದಲಿತ ಸಮುದಾಯದ ಯುವಕ ಶ್ರೀಕಾಂತ್ ಎಂಬಾತನನ್ನು ಮದುವೆಯಾಗಿದ್ದರು. ಅಂತರ್ಜಾತಿ ವಿವಾಹಕ್ಕೆ ಆಕೆಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ನಾಗಮಣಿ ರಾಯಪೋಲ್‌ನಿಂದ ಮಣ್ಣೇಗೌಡ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಈ ದಾಳಿ ನಡೆದಿದೆ. ಆಕೆಯ ಸಹೋದರ ಪರಮೇಶ್ ಉದ್ದೇಶಪೂರ್ವಕವಾಗಿ ತನ್ನ ಕಾರಿಗೆ ಆಕೆಯ ಸ್ಕೂಟರ್ ಅನ್ನು ಡಿಕ್ಕಿ ಹೊಡೆಸಿದ್ದಾನೆ. ಆಕೆ ನೆಲಕ್ಕುರುಳಿ ಬಿದ್ದಾಗ ಆರೋಪಿ ಸಹೋದರ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.  ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ನಾಗಮಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ನಾಗಮಣಿಯ ಸಾವನ್ನು ದೃಢಪಡಿಸಿದ್ದಾರೆ. “ಅವಳ ಪ್ರೇಮ ವಿವಾಹದಿಂದ ಆಕೆಯ ಸಹೋದರ ಕೋಪಗೊಂಡಿದ್ದ ಮತ್ತು ಮರ್ಯಾದಾ ಹತ್ಯೆಯ ಕೃತ್ಯದಲ್ಲಿ ಅವಳನ್ನು ಕೊಂದಿದ್ದಾನೆ ಎಂದು ನಾವು ಶಂಕಿಸುತ್ತೇವೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಗಮಣಿ, 2020 ರ ಬ್ಯಾಚ್ ಪೊಲೀಸ್ ಕಾನ್ಸ್‌ಟೇಬಲ್, ಶ್ರೀಕಾಂತ್ ಅವರನ್ನು ಮದುವೆಯಾಗುವ ಮೂಲಕ ತನ್ನ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಮದುವೆಯು ಕುಟುಂಬದಲ್ಲಿ ಉದ್ವಿಗ್ನತೆಗೆ ಕಾರಣವಾಗಿತ್ತು. ಹತ ಮಹಿಳೆ ಮತ್ತು ಸೋದರನ ನಡುವೆ ಆಸ್ತಿ ವಿವಾದವಿದ್ದು, ಈ ಕೋನದಿಂದಲೂ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್ ನಲ್ಲಿ ವಾಸವಿದ್ದ ದಂಪತಿ ವಾರಾಂತ್ಯದಲ್ಲಿ ಇಬ್ರಾಹೀಂಪಟ್ಟಣದಲ್ಲಿಯ ಶ್ರೀಕಾಂತ್‌ ಅವರ ಮನೆಗೆ ತೆರಳಿದ್ದರು. ಸೋಮವಾರ ಬೆಳಗ್ಗೆ ಕೆಲಸಕ್ಕೆ ಹೊರಟು ಹೋಗಿದ್ದ ಶ್ರೀಕಾಂತ್‌ ಪತ್ನಿ ನಾಗಮಣಿ ಕೂಡ ಕೆಲಸಕ್ಕೆ ತೆರಳಿದ್ದಾಳೆಯೇ ಎನ್ನುವುದನ್ನು ತಿಳಿದುಕೊಳ್ಲಲು ಆಕೆಗೆ ಕರೆ ಮಾಡಿದ್ದ. ಈ ವೇಳೆ ತನ್ನ ಸೋದರ ಪರಮೇಶ ತನ್ನ ಮೇಲೆ ಹಲ್ಲೆ ನಡೆಸುತ್ತಿದ್ದಾನೆ ಎಂದು ನಾಗಮಣಿ ತಿಳಿಸಿದ್ದು, ಬಳಿಕ ಕರೆ ಕಡಿತಗೊಂಡಿತ್ತು.

ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಆರೋಪಿಯು ಬಳಿಕ ಪೊಲೀಸರಿಗೆ ಶರಣಾಗಿದ್ದು, ಆತನನ್ನು ಬಂಧಿಸಲಾಗಿದೆ. ತನ್ನ ತಂದೆ ತಾಯಿಯನ್ನು ಕಳೆದುಕೊಂಡಿದ್ದ ನಾಗಮಣಿ ತನ್ನ ಸಹೋದರರನ್ನು ಮಾತ್ರ ಹೊಂದಿದ್ದಳು.  ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ…ಕನಿಮೋಳಿ, ಪೆರಿಯಾರ್ ಪ್ರತಿಮೆ ಕುರಿತು ವಿವಾದಾತ್ಮಕ ಹೇಳಿಕೆ; ತಮಿಳುನಾಡು ಬಿಜೆಪಿ ನಾಯಕನಿಗೆ 6 ತಿಂಗಳ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...