Homeಕರ್ನಾಟಕಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಸಾವು

ಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಸಾವು

- Advertisement -
- Advertisement -

ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ, “ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ” ಎಂದು ಆರೋಪಿಸಿ, ದೂರು ದಾಖಲಿಸಿದ್ದ ಮಹಿಳೆಯು ಭಾನುವಾರ (ಮೇ 26) ಬೆಂಗಳೂರಿನ ಹುಳಿಮಾವು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೂಲಗಳ ಪ್ರಕಾರ, 53 ವರ್ಷದ ಮಹಿಳೆ ಮೇ 26 ರಂದು ರಾತ್ರಿ ಉಸಿರಾಟದ ತೊಂದರೆ ಅನುಭವಿಸಿದ ನಂತರ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ ಎಂದು ಮೂಲಗಳು ತಿಳಿಸಿವೆ. ‘ಮಹಿಳೆ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು’ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಮೃತ ಮಹಿಳೆಯ ಮಗಳು, ಆಕೆಯೊಂದಿಗೆ ಆಸ್ಪತ್ರೆಗೆ ಬಂದಿದ್ದಳು. ರಾತ್ರಿ 9.21ರ ಸುಮಾರಿಗೆ ತನ್ನ ತಾಯಿ ಆಸ್ಪತ್ರೆಯಲ್ಲಿದ್ದಾರೆ ಎಂದು 17 ವರ್ಷದ ಬಾಲಕಿ ಪೋಕ್ಸೊ ಪ್ರಕರಣದ ಸಾಕ್ಷಿಯೊಬ್ಬರಿಗೆ ಸಂದೇಶ ಕಳುಹಿಸಿದ್ದಳು. ನಂತರ ಆಕೆ ತನ್ನ ತಾಯಿ ಇನ್ನಿಲ್ಲ ಎಂದು ಸಂದೇಶ ಕಳುಹಿಸಿದ್ದಳು.

ಆರೋಪ ನಿರಾಕರಿಸಿದ ಬಿಎಸ್‌ವೈ:

ಲೈಂಗಿಕ ದೌರ್ಜನ್ಯದ ಆರೋಪವನ್ನು ಮಾಜಿ ಸಿಎಂ ಯಡಿಯೂರಪ್ಪ ನಿರಾಕರಿಸಿದ್ದರು. “ತಾಯಿ-ಮಗಳಿಗೆ ಸಹಾಯ ಮಾಡಲು ಪ್ರಯತ್ನಿಸಿದ್ದೆ” ಎಂದು ಹೇಳಿಕೊಂಡಿದ್ದಾರೆ.

ಪ್ರಕರಣದ ಬೆನ್ನತ್ತಿದ ಮಹಿಳೆಗೆ ಸಹಾಯ ಮಾಡುತ್ತಿದ್ದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (ಎಬಿಜೆಎಂಎಸ್) ಕಾರ್ಯಕರ್ತರು ಶವದ ಮರಣೋತ್ತರ ಪರೀಕ್ಷೆಗೆ ಒತ್ತಾಯಿಸುತ್ತಿದ್ದಾರೆ. ಆದರೆ, ಪೊಲೀಸರು ಇದನ್ನು ಸಹಜ ಸಾವು ಎಂದು ವೈದ್ಯರು ಉಲ್ಲೇಖಿಸಿದ್ದಾರೆ. ಕಾನೂನು ಮಾರ್ಗದರ್ಶನ ಪಡೆಯಲು ದೂರುದಾರರು ಇಂದು (ಮೇ 27 ರಂದು) ವಕೀಲರನ್ನು ಭೇಟಿಯಾಗಬೇಕಿತ್ತು.

ಯಡಿಯೂರಪ್ಪ ವಿರುದ್ಧ ಮಾರ್ಚ್ 14 ರಂದು 53 ವರ್ಷದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮರುದಿನ ರಾಜ್ಯ ಸರ್ಕಾರ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಿತ್ತು. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ, ಇದುವರೆಗೆ ಸಿಆರ್‌ಪಿಸಿಯ ಸೆಕ್ಷನ್ 164 ರ ಅಡಿಯಲ್ಲಿ ಬದುಕುಳಿದಿರುವ ಮಹಿಳೆ ಮತ್ತು ತಾಯಿಯ ಹೇಳಿಕೆಗಳನ್ನು ದಾಖಲಿಸಿದೆ.

‘ಅನುಮಾನಾಸ್ಪದ ಸಾವು..’; ಪತ್ರಕರ್ತ ನವೀನ್ ಸೂರಿಂಜೆ:

ಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ಸಾವನ್ನಪ್ಪಿರುವ ಬಗ್ಗೆ ಪತ್ರಕರ್ತ ನವೀನ್ ಸೂರಿಂಜೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, “ಇದೊಂದು ‘ದಿಡೀರ್ ಅನುಮಾನಾಸ್ಪದ ಸಾವು’ ಚರ್ಚೆಯಾಗುತ್ತೆ ಅಂದುಕೊಂಡಿದ್ದೆ. ಆದರೆ, ಚರ್ಚೆಯಾಗದ ಹಿನ್ನಲೆಯಲ್ಲಿ ಚರ್ಚೆಯನ್ನು ಹುಟ್ಟುಹಾಕಬೇಕಿದೆ. ಮಹಿಳೆಯೊಬ್ಬರು ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ದ ಪೋಕ್ಸೋ ಕೇಸ್ ದಾಖಲಿಸಿದ್ದರು. ಆ ಮಹಿಳೆಗೆ ಪ್ರಾರಂಭದಲ್ಲಿ ಹಲವು ಸಂಘಟನೆಗಳು ಬೆಂಬಲ ನೀಡಿದ್ದರೂ ಕೊನೆಗೆ ಕಾನೂನಿನ ನೆರವು ಕೇಳಿ ಬಂದಿದ್ದು ಜನವಾದಿ ಮಹಿಳಾ ಸಂಘಟನೆಗೆ‌. ಜನವಾದಿ ಮಹಿಳಾ ಸಂಘಟನೆಯ ಗೌರಮ್ಮ ಅವರು ನನಗೆ ಕರೆ ಮಾಡಿ ಈ ಮಹಿಳೆಗೆ ಕಾನೂನು ಹೋರಾಟಕ್ಕೆ ಬೆಂಬಲ ಬೇಕಾಗಿದೆ ಎಂದರು. ನಾನು ಹಿರಿಯ ವಕೀಲ ಎಸ್ ಬಾಲನ್ ಅವರ ಜೊತೆ ಮಾತನಾಡಿದ್ದೆ” ಎಂದು ಹೇಳಿದ್ದಾರೆ.

“ದುರ್ಬಲರನ್ನು ಗುರಿಯಾಗಿಸಿ ನಡೆಸುವ ಇಂತಹ ದೌರ್ಜನ್ಯ ಕೊನೆಯಾಗಬೇಕು‌. ಫೀಸ್ ಇರಲಿ, ಇಲ್ಲದಿರಲಿ. ಇಂತಹ ಕೇಸ್ ಗಳನ್ನು ಮನುಷ್ಯರಾಗಿ ನಾವು ನಡೆಸಬೇಕು. ನನ್ನಲ್ಲಿಗೆ ಕಳುಹಿಸಿ” ಎಂದಿದ್ದರು. ಶನಿವಾರ ಸಂಜೆಯ ವೇಳೆಗೆ ಸಂತ್ರಸ್ತ ಮಹಿಳೆ ನನಗೆ ಮರಳಿ ಕರೆ ಮಾಡಿ ಸುಧೀರ್ಘವಾಗಿ ಮಾತನಾಡಿದ್ದರು. “ಕೇಸ್ ಮುಚ್ಚಿ ಹಾಕಲು ಹೇಗೆಲ್ಲಾ ಪ್ರಯತ್ನ ಮಾಡಲಾಯಿತು” ಎಂದು ನನಗೆ ವಿವರಿಸಿದ್ದರು. “ನಾನು ಎಸ್ ಬಾಲನ್ ಅವರ ಜೊತೆ ಮಾತಾಡಿದ್ದೇನೆ. ಸೋಮವಾರ ಎಸ್ ಬಾಲನ್ ಅವರನ್ನು ಭೇಟಿಯಾಗಿ. ಫೀಸೂ ತಗೊಳ್ಳಲ್ಲ. ನಿಮ್ಮ ಪ್ರಕರಣದಲ್ಲಿ ನೀವು ಪ್ರಾಮಾಣಿಕರಾಗಿದ್ದರೆ ನಾವು ನಿಮ್ಮ ಜೊತೆ ಇರ್ತೀವಿ. ಜನವಾದಿ ಗೌರಮ್ಮ ಅಂತವರು ನಿಮ್ ಜೊತೆ ಇದ್ದಾರೆ ಅಂದರೆ ಯಾರೂ ನಿಮ್ಮ ವಿಷಯಕ್ಕೆ ಬರಲ್ಲ. ಹೆದರ್ಕೋಬೇಡಿ” ಎಂದಿದ್ದೆ. ಎಸ್ ಬಾಲನ್ ಅವರ ಜೊತೆ ಮಾತನಾಡುವಾಗ “ಕಾಮ್ರೇಡ್, ನೀವು ಹೇಳಿರುವ ಮಹಿಳೆಗೆ ಇಂದು ಸಂಜೆ ಆಫೀಸ್ ಬರಲು ಹೇಳಿದ್ದೇನೆ. ಕೇಸ್ ಮಹಿಳೆ ಹೇಳಿದಂತೆಯೇ ಸರಿಯಾಗಿದ್ದರೆ ಯಡಿಯೂರಪ್ಪ ಮತ್ತೆ ಜೈಲಿಗೆ ಹೋಗ್ತಾರೆ” ಎಂದು ಎಸ್ ಬಾಲನ್ ನನ್ನಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದರು” ಎಂದು ನವೀನ್ ಸೂರಿಂಜೆ ಬರೆದುಕೊಂಡಿದ್ದಾರೆ.

ಇಂದು ಸಂತ್ರಸ್ತ ಮಹಿಳೆ ಹೋರಾಟಗಾರರೂ ಆಗಿರುವ ಹಿರಿಯ ವಕೀಲ ಎಸ್ ಬಾಲನ್ ಅವರನ್ನು ಭೇಟಿಯಾಗಿ, ಯಡಿಯೂರಪ್ಪ ಪೋಕ್ಸೋ ಕೇಸ್ ಬಗೆಗೆ ಚರ್ಚೆ ನಡೆಸಿ ಕಾನೂನು ಹೋರಾಟದ ಇನ್ನೊಂದು ಹೆಜ್ಜೆ ಇಡಬೇಕಿತ್ತು. ಅಷ್ಟರಲ್ಲಿ ಆ ಸಂತ್ರಸ್ತ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಬಂದಿದೆ. ಮಾಜಿ ಮುಖ್ಯಮಂತ್ರಿ ವಿರುದ್ದ ಪೋಕ್ಸೋ ದೂರು ಕೊಟ್ಟ ಮಹಿಳೆ ದಿಡೀರ್ ಸಾವನ್ನಪ್ಪುತ್ತಾರೆ ಎಂದರೆ ಅನುಮಾನದಿಂದ ನೋಡಬೇಕಾಗುತ್ತದೆ ಮತ್ತು ತನಿಖೆಗೆ ಆಗ್ರಹಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಮೃತ್ಯು: ಸಾವಿನ ಸುತ್ತ ಹಲವು ಅನುಮಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...