Homeಕರ್ನಾಟಕಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಸಾವು

ಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಸಾವು

- Advertisement -
- Advertisement -

ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ, “ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ” ಎಂದು ಆರೋಪಿಸಿ, ದೂರು ದಾಖಲಿಸಿದ್ದ ಮಹಿಳೆಯು ಭಾನುವಾರ (ಮೇ 26) ಬೆಂಗಳೂರಿನ ಹುಳಿಮಾವು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೂಲಗಳ ಪ್ರಕಾರ, 53 ವರ್ಷದ ಮಹಿಳೆ ಮೇ 26 ರಂದು ರಾತ್ರಿ ಉಸಿರಾಟದ ತೊಂದರೆ ಅನುಭವಿಸಿದ ನಂತರ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ ಎಂದು ಮೂಲಗಳು ತಿಳಿಸಿವೆ. ‘ಮಹಿಳೆ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು’ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಮೃತ ಮಹಿಳೆಯ ಮಗಳು, ಆಕೆಯೊಂದಿಗೆ ಆಸ್ಪತ್ರೆಗೆ ಬಂದಿದ್ದಳು. ರಾತ್ರಿ 9.21ರ ಸುಮಾರಿಗೆ ತನ್ನ ತಾಯಿ ಆಸ್ಪತ್ರೆಯಲ್ಲಿದ್ದಾರೆ ಎಂದು 17 ವರ್ಷದ ಬಾಲಕಿ ಪೋಕ್ಸೊ ಪ್ರಕರಣದ ಸಾಕ್ಷಿಯೊಬ್ಬರಿಗೆ ಸಂದೇಶ ಕಳುಹಿಸಿದ್ದಳು. ನಂತರ ಆಕೆ ತನ್ನ ತಾಯಿ ಇನ್ನಿಲ್ಲ ಎಂದು ಸಂದೇಶ ಕಳುಹಿಸಿದ್ದಳು.

ಆರೋಪ ನಿರಾಕರಿಸಿದ ಬಿಎಸ್‌ವೈ:

ಲೈಂಗಿಕ ದೌರ್ಜನ್ಯದ ಆರೋಪವನ್ನು ಮಾಜಿ ಸಿಎಂ ಯಡಿಯೂರಪ್ಪ ನಿರಾಕರಿಸಿದ್ದರು. “ತಾಯಿ-ಮಗಳಿಗೆ ಸಹಾಯ ಮಾಡಲು ಪ್ರಯತ್ನಿಸಿದ್ದೆ” ಎಂದು ಹೇಳಿಕೊಂಡಿದ್ದಾರೆ.

ಪ್ರಕರಣದ ಬೆನ್ನತ್ತಿದ ಮಹಿಳೆಗೆ ಸಹಾಯ ಮಾಡುತ್ತಿದ್ದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (ಎಬಿಜೆಎಂಎಸ್) ಕಾರ್ಯಕರ್ತರು ಶವದ ಮರಣೋತ್ತರ ಪರೀಕ್ಷೆಗೆ ಒತ್ತಾಯಿಸುತ್ತಿದ್ದಾರೆ. ಆದರೆ, ಪೊಲೀಸರು ಇದನ್ನು ಸಹಜ ಸಾವು ಎಂದು ವೈದ್ಯರು ಉಲ್ಲೇಖಿಸಿದ್ದಾರೆ. ಕಾನೂನು ಮಾರ್ಗದರ್ಶನ ಪಡೆಯಲು ದೂರುದಾರರು ಇಂದು (ಮೇ 27 ರಂದು) ವಕೀಲರನ್ನು ಭೇಟಿಯಾಗಬೇಕಿತ್ತು.

ಯಡಿಯೂರಪ್ಪ ವಿರುದ್ಧ ಮಾರ್ಚ್ 14 ರಂದು 53 ವರ್ಷದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮರುದಿನ ರಾಜ್ಯ ಸರ್ಕಾರ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಿತ್ತು. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ, ಇದುವರೆಗೆ ಸಿಆರ್‌ಪಿಸಿಯ ಸೆಕ್ಷನ್ 164 ರ ಅಡಿಯಲ್ಲಿ ಬದುಕುಳಿದಿರುವ ಮಹಿಳೆ ಮತ್ತು ತಾಯಿಯ ಹೇಳಿಕೆಗಳನ್ನು ದಾಖಲಿಸಿದೆ.

‘ಅನುಮಾನಾಸ್ಪದ ಸಾವು..’; ಪತ್ರಕರ್ತ ನವೀನ್ ಸೂರಿಂಜೆ:

ಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ಸಾವನ್ನಪ್ಪಿರುವ ಬಗ್ಗೆ ಪತ್ರಕರ್ತ ನವೀನ್ ಸೂರಿಂಜೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, “ಇದೊಂದು ‘ದಿಡೀರ್ ಅನುಮಾನಾಸ್ಪದ ಸಾವು’ ಚರ್ಚೆಯಾಗುತ್ತೆ ಅಂದುಕೊಂಡಿದ್ದೆ. ಆದರೆ, ಚರ್ಚೆಯಾಗದ ಹಿನ್ನಲೆಯಲ್ಲಿ ಚರ್ಚೆಯನ್ನು ಹುಟ್ಟುಹಾಕಬೇಕಿದೆ. ಮಹಿಳೆಯೊಬ್ಬರು ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ದ ಪೋಕ್ಸೋ ಕೇಸ್ ದಾಖಲಿಸಿದ್ದರು. ಆ ಮಹಿಳೆಗೆ ಪ್ರಾರಂಭದಲ್ಲಿ ಹಲವು ಸಂಘಟನೆಗಳು ಬೆಂಬಲ ನೀಡಿದ್ದರೂ ಕೊನೆಗೆ ಕಾನೂನಿನ ನೆರವು ಕೇಳಿ ಬಂದಿದ್ದು ಜನವಾದಿ ಮಹಿಳಾ ಸಂಘಟನೆಗೆ‌. ಜನವಾದಿ ಮಹಿಳಾ ಸಂಘಟನೆಯ ಗೌರಮ್ಮ ಅವರು ನನಗೆ ಕರೆ ಮಾಡಿ ಈ ಮಹಿಳೆಗೆ ಕಾನೂನು ಹೋರಾಟಕ್ಕೆ ಬೆಂಬಲ ಬೇಕಾಗಿದೆ ಎಂದರು. ನಾನು ಹಿರಿಯ ವಕೀಲ ಎಸ್ ಬಾಲನ್ ಅವರ ಜೊತೆ ಮಾತನಾಡಿದ್ದೆ” ಎಂದು ಹೇಳಿದ್ದಾರೆ.

“ದುರ್ಬಲರನ್ನು ಗುರಿಯಾಗಿಸಿ ನಡೆಸುವ ಇಂತಹ ದೌರ್ಜನ್ಯ ಕೊನೆಯಾಗಬೇಕು‌. ಫೀಸ್ ಇರಲಿ, ಇಲ್ಲದಿರಲಿ. ಇಂತಹ ಕೇಸ್ ಗಳನ್ನು ಮನುಷ್ಯರಾಗಿ ನಾವು ನಡೆಸಬೇಕು. ನನ್ನಲ್ಲಿಗೆ ಕಳುಹಿಸಿ” ಎಂದಿದ್ದರು. ಶನಿವಾರ ಸಂಜೆಯ ವೇಳೆಗೆ ಸಂತ್ರಸ್ತ ಮಹಿಳೆ ನನಗೆ ಮರಳಿ ಕರೆ ಮಾಡಿ ಸುಧೀರ್ಘವಾಗಿ ಮಾತನಾಡಿದ್ದರು. “ಕೇಸ್ ಮುಚ್ಚಿ ಹಾಕಲು ಹೇಗೆಲ್ಲಾ ಪ್ರಯತ್ನ ಮಾಡಲಾಯಿತು” ಎಂದು ನನಗೆ ವಿವರಿಸಿದ್ದರು. “ನಾನು ಎಸ್ ಬಾಲನ್ ಅವರ ಜೊತೆ ಮಾತಾಡಿದ್ದೇನೆ. ಸೋಮವಾರ ಎಸ್ ಬಾಲನ್ ಅವರನ್ನು ಭೇಟಿಯಾಗಿ. ಫೀಸೂ ತಗೊಳ್ಳಲ್ಲ. ನಿಮ್ಮ ಪ್ರಕರಣದಲ್ಲಿ ನೀವು ಪ್ರಾಮಾಣಿಕರಾಗಿದ್ದರೆ ನಾವು ನಿಮ್ಮ ಜೊತೆ ಇರ್ತೀವಿ. ಜನವಾದಿ ಗೌರಮ್ಮ ಅಂತವರು ನಿಮ್ ಜೊತೆ ಇದ್ದಾರೆ ಅಂದರೆ ಯಾರೂ ನಿಮ್ಮ ವಿಷಯಕ್ಕೆ ಬರಲ್ಲ. ಹೆದರ್ಕೋಬೇಡಿ” ಎಂದಿದ್ದೆ. ಎಸ್ ಬಾಲನ್ ಅವರ ಜೊತೆ ಮಾತನಾಡುವಾಗ “ಕಾಮ್ರೇಡ್, ನೀವು ಹೇಳಿರುವ ಮಹಿಳೆಗೆ ಇಂದು ಸಂಜೆ ಆಫೀಸ್ ಬರಲು ಹೇಳಿದ್ದೇನೆ. ಕೇಸ್ ಮಹಿಳೆ ಹೇಳಿದಂತೆಯೇ ಸರಿಯಾಗಿದ್ದರೆ ಯಡಿಯೂರಪ್ಪ ಮತ್ತೆ ಜೈಲಿಗೆ ಹೋಗ್ತಾರೆ” ಎಂದು ಎಸ್ ಬಾಲನ್ ನನ್ನಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದರು” ಎಂದು ನವೀನ್ ಸೂರಿಂಜೆ ಬರೆದುಕೊಂಡಿದ್ದಾರೆ.

ಇಂದು ಸಂತ್ರಸ್ತ ಮಹಿಳೆ ಹೋರಾಟಗಾರರೂ ಆಗಿರುವ ಹಿರಿಯ ವಕೀಲ ಎಸ್ ಬಾಲನ್ ಅವರನ್ನು ಭೇಟಿಯಾಗಿ, ಯಡಿಯೂರಪ್ಪ ಪೋಕ್ಸೋ ಕೇಸ್ ಬಗೆಗೆ ಚರ್ಚೆ ನಡೆಸಿ ಕಾನೂನು ಹೋರಾಟದ ಇನ್ನೊಂದು ಹೆಜ್ಜೆ ಇಡಬೇಕಿತ್ತು. ಅಷ್ಟರಲ್ಲಿ ಆ ಸಂತ್ರಸ್ತ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಬಂದಿದೆ. ಮಾಜಿ ಮುಖ್ಯಮಂತ್ರಿ ವಿರುದ್ದ ಪೋಕ್ಸೋ ದೂರು ಕೊಟ್ಟ ಮಹಿಳೆ ದಿಡೀರ್ ಸಾವನ್ನಪ್ಪುತ್ತಾರೆ ಎಂದರೆ ಅನುಮಾನದಿಂದ ನೋಡಬೇಕಾಗುತ್ತದೆ ಮತ್ತು ತನಿಖೆಗೆ ಆಗ್ರಹಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಮೃತ್ಯು: ಸಾವಿನ ಸುತ್ತ ಹಲವು ಅನುಮಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...