Homeಕರ್ನಾಟಕಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಸಾವು

ಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಸಾವು

- Advertisement -
- Advertisement -

ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ, “ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ” ಎಂದು ಆರೋಪಿಸಿ, ದೂರು ದಾಖಲಿಸಿದ್ದ ಮಹಿಳೆಯು ಭಾನುವಾರ (ಮೇ 26) ಬೆಂಗಳೂರಿನ ಹುಳಿಮಾವು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೂಲಗಳ ಪ್ರಕಾರ, 53 ವರ್ಷದ ಮಹಿಳೆ ಮೇ 26 ರಂದು ರಾತ್ರಿ ಉಸಿರಾಟದ ತೊಂದರೆ ಅನುಭವಿಸಿದ ನಂತರ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ ಎಂದು ಮೂಲಗಳು ತಿಳಿಸಿವೆ. ‘ಮಹಿಳೆ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು’ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಮೃತ ಮಹಿಳೆಯ ಮಗಳು, ಆಕೆಯೊಂದಿಗೆ ಆಸ್ಪತ್ರೆಗೆ ಬಂದಿದ್ದಳು. ರಾತ್ರಿ 9.21ರ ಸುಮಾರಿಗೆ ತನ್ನ ತಾಯಿ ಆಸ್ಪತ್ರೆಯಲ್ಲಿದ್ದಾರೆ ಎಂದು 17 ವರ್ಷದ ಬಾಲಕಿ ಪೋಕ್ಸೊ ಪ್ರಕರಣದ ಸಾಕ್ಷಿಯೊಬ್ಬರಿಗೆ ಸಂದೇಶ ಕಳುಹಿಸಿದ್ದಳು. ನಂತರ ಆಕೆ ತನ್ನ ತಾಯಿ ಇನ್ನಿಲ್ಲ ಎಂದು ಸಂದೇಶ ಕಳುಹಿಸಿದ್ದಳು.

ಆರೋಪ ನಿರಾಕರಿಸಿದ ಬಿಎಸ್‌ವೈ:

ಲೈಂಗಿಕ ದೌರ್ಜನ್ಯದ ಆರೋಪವನ್ನು ಮಾಜಿ ಸಿಎಂ ಯಡಿಯೂರಪ್ಪ ನಿರಾಕರಿಸಿದ್ದರು. “ತಾಯಿ-ಮಗಳಿಗೆ ಸಹಾಯ ಮಾಡಲು ಪ್ರಯತ್ನಿಸಿದ್ದೆ” ಎಂದು ಹೇಳಿಕೊಂಡಿದ್ದಾರೆ.

ಪ್ರಕರಣದ ಬೆನ್ನತ್ತಿದ ಮಹಿಳೆಗೆ ಸಹಾಯ ಮಾಡುತ್ತಿದ್ದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (ಎಬಿಜೆಎಂಎಸ್) ಕಾರ್ಯಕರ್ತರು ಶವದ ಮರಣೋತ್ತರ ಪರೀಕ್ಷೆಗೆ ಒತ್ತಾಯಿಸುತ್ತಿದ್ದಾರೆ. ಆದರೆ, ಪೊಲೀಸರು ಇದನ್ನು ಸಹಜ ಸಾವು ಎಂದು ವೈದ್ಯರು ಉಲ್ಲೇಖಿಸಿದ್ದಾರೆ. ಕಾನೂನು ಮಾರ್ಗದರ್ಶನ ಪಡೆಯಲು ದೂರುದಾರರು ಇಂದು (ಮೇ 27 ರಂದು) ವಕೀಲರನ್ನು ಭೇಟಿಯಾಗಬೇಕಿತ್ತು.

ಯಡಿಯೂರಪ್ಪ ವಿರುದ್ಧ ಮಾರ್ಚ್ 14 ರಂದು 53 ವರ್ಷದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮರುದಿನ ರಾಜ್ಯ ಸರ್ಕಾರ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಿತ್ತು. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ, ಇದುವರೆಗೆ ಸಿಆರ್‌ಪಿಸಿಯ ಸೆಕ್ಷನ್ 164 ರ ಅಡಿಯಲ್ಲಿ ಬದುಕುಳಿದಿರುವ ಮಹಿಳೆ ಮತ್ತು ತಾಯಿಯ ಹೇಳಿಕೆಗಳನ್ನು ದಾಖಲಿಸಿದೆ.

‘ಅನುಮಾನಾಸ್ಪದ ಸಾವು..’; ಪತ್ರಕರ್ತ ನವೀನ್ ಸೂರಿಂಜೆ:

ಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ಸಾವನ್ನಪ್ಪಿರುವ ಬಗ್ಗೆ ಪತ್ರಕರ್ತ ನವೀನ್ ಸೂರಿಂಜೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, “ಇದೊಂದು ‘ದಿಡೀರ್ ಅನುಮಾನಾಸ್ಪದ ಸಾವು’ ಚರ್ಚೆಯಾಗುತ್ತೆ ಅಂದುಕೊಂಡಿದ್ದೆ. ಆದರೆ, ಚರ್ಚೆಯಾಗದ ಹಿನ್ನಲೆಯಲ್ಲಿ ಚರ್ಚೆಯನ್ನು ಹುಟ್ಟುಹಾಕಬೇಕಿದೆ. ಮಹಿಳೆಯೊಬ್ಬರು ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ದ ಪೋಕ್ಸೋ ಕೇಸ್ ದಾಖಲಿಸಿದ್ದರು. ಆ ಮಹಿಳೆಗೆ ಪ್ರಾರಂಭದಲ್ಲಿ ಹಲವು ಸಂಘಟನೆಗಳು ಬೆಂಬಲ ನೀಡಿದ್ದರೂ ಕೊನೆಗೆ ಕಾನೂನಿನ ನೆರವು ಕೇಳಿ ಬಂದಿದ್ದು ಜನವಾದಿ ಮಹಿಳಾ ಸಂಘಟನೆಗೆ‌. ಜನವಾದಿ ಮಹಿಳಾ ಸಂಘಟನೆಯ ಗೌರಮ್ಮ ಅವರು ನನಗೆ ಕರೆ ಮಾಡಿ ಈ ಮಹಿಳೆಗೆ ಕಾನೂನು ಹೋರಾಟಕ್ಕೆ ಬೆಂಬಲ ಬೇಕಾಗಿದೆ ಎಂದರು. ನಾನು ಹಿರಿಯ ವಕೀಲ ಎಸ್ ಬಾಲನ್ ಅವರ ಜೊತೆ ಮಾತನಾಡಿದ್ದೆ” ಎಂದು ಹೇಳಿದ್ದಾರೆ.

“ದುರ್ಬಲರನ್ನು ಗುರಿಯಾಗಿಸಿ ನಡೆಸುವ ಇಂತಹ ದೌರ್ಜನ್ಯ ಕೊನೆಯಾಗಬೇಕು‌. ಫೀಸ್ ಇರಲಿ, ಇಲ್ಲದಿರಲಿ. ಇಂತಹ ಕೇಸ್ ಗಳನ್ನು ಮನುಷ್ಯರಾಗಿ ನಾವು ನಡೆಸಬೇಕು. ನನ್ನಲ್ಲಿಗೆ ಕಳುಹಿಸಿ” ಎಂದಿದ್ದರು. ಶನಿವಾರ ಸಂಜೆಯ ವೇಳೆಗೆ ಸಂತ್ರಸ್ತ ಮಹಿಳೆ ನನಗೆ ಮರಳಿ ಕರೆ ಮಾಡಿ ಸುಧೀರ್ಘವಾಗಿ ಮಾತನಾಡಿದ್ದರು. “ಕೇಸ್ ಮುಚ್ಚಿ ಹಾಕಲು ಹೇಗೆಲ್ಲಾ ಪ್ರಯತ್ನ ಮಾಡಲಾಯಿತು” ಎಂದು ನನಗೆ ವಿವರಿಸಿದ್ದರು. “ನಾನು ಎಸ್ ಬಾಲನ್ ಅವರ ಜೊತೆ ಮಾತಾಡಿದ್ದೇನೆ. ಸೋಮವಾರ ಎಸ್ ಬಾಲನ್ ಅವರನ್ನು ಭೇಟಿಯಾಗಿ. ಫೀಸೂ ತಗೊಳ್ಳಲ್ಲ. ನಿಮ್ಮ ಪ್ರಕರಣದಲ್ಲಿ ನೀವು ಪ್ರಾಮಾಣಿಕರಾಗಿದ್ದರೆ ನಾವು ನಿಮ್ಮ ಜೊತೆ ಇರ್ತೀವಿ. ಜನವಾದಿ ಗೌರಮ್ಮ ಅಂತವರು ನಿಮ್ ಜೊತೆ ಇದ್ದಾರೆ ಅಂದರೆ ಯಾರೂ ನಿಮ್ಮ ವಿಷಯಕ್ಕೆ ಬರಲ್ಲ. ಹೆದರ್ಕೋಬೇಡಿ” ಎಂದಿದ್ದೆ. ಎಸ್ ಬಾಲನ್ ಅವರ ಜೊತೆ ಮಾತನಾಡುವಾಗ “ಕಾಮ್ರೇಡ್, ನೀವು ಹೇಳಿರುವ ಮಹಿಳೆಗೆ ಇಂದು ಸಂಜೆ ಆಫೀಸ್ ಬರಲು ಹೇಳಿದ್ದೇನೆ. ಕೇಸ್ ಮಹಿಳೆ ಹೇಳಿದಂತೆಯೇ ಸರಿಯಾಗಿದ್ದರೆ ಯಡಿಯೂರಪ್ಪ ಮತ್ತೆ ಜೈಲಿಗೆ ಹೋಗ್ತಾರೆ” ಎಂದು ಎಸ್ ಬಾಲನ್ ನನ್ನಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದರು” ಎಂದು ನವೀನ್ ಸೂರಿಂಜೆ ಬರೆದುಕೊಂಡಿದ್ದಾರೆ.

ಇಂದು ಸಂತ್ರಸ್ತ ಮಹಿಳೆ ಹೋರಾಟಗಾರರೂ ಆಗಿರುವ ಹಿರಿಯ ವಕೀಲ ಎಸ್ ಬಾಲನ್ ಅವರನ್ನು ಭೇಟಿಯಾಗಿ, ಯಡಿಯೂರಪ್ಪ ಪೋಕ್ಸೋ ಕೇಸ್ ಬಗೆಗೆ ಚರ್ಚೆ ನಡೆಸಿ ಕಾನೂನು ಹೋರಾಟದ ಇನ್ನೊಂದು ಹೆಜ್ಜೆ ಇಡಬೇಕಿತ್ತು. ಅಷ್ಟರಲ್ಲಿ ಆ ಸಂತ್ರಸ್ತ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಬಂದಿದೆ. ಮಾಜಿ ಮುಖ್ಯಮಂತ್ರಿ ವಿರುದ್ದ ಪೋಕ್ಸೋ ದೂರು ಕೊಟ್ಟ ಮಹಿಳೆ ದಿಡೀರ್ ಸಾವನ್ನಪ್ಪುತ್ತಾರೆ ಎಂದರೆ ಅನುಮಾನದಿಂದ ನೋಡಬೇಕಾಗುತ್ತದೆ ಮತ್ತು ತನಿಖೆಗೆ ಆಗ್ರಹಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಮೃತ್ಯು: ಸಾವಿನ ಸುತ್ತ ಹಲವು ಅನುಮಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...