Homeಕರ್ನಾಟಕಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಸಾವು

ಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಸಾವು

- Advertisement -
- Advertisement -

ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ, “ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ” ಎಂದು ಆರೋಪಿಸಿ, ದೂರು ದಾಖಲಿಸಿದ್ದ ಮಹಿಳೆಯು ಭಾನುವಾರ (ಮೇ 26) ಬೆಂಗಳೂರಿನ ಹುಳಿಮಾವು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೂಲಗಳ ಪ್ರಕಾರ, 53 ವರ್ಷದ ಮಹಿಳೆ ಮೇ 26 ರಂದು ರಾತ್ರಿ ಉಸಿರಾಟದ ತೊಂದರೆ ಅನುಭವಿಸಿದ ನಂತರ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ ಎಂದು ಮೂಲಗಳು ತಿಳಿಸಿವೆ. ‘ಮಹಿಳೆ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು’ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಮೃತ ಮಹಿಳೆಯ ಮಗಳು, ಆಕೆಯೊಂದಿಗೆ ಆಸ್ಪತ್ರೆಗೆ ಬಂದಿದ್ದಳು. ರಾತ್ರಿ 9.21ರ ಸುಮಾರಿಗೆ ತನ್ನ ತಾಯಿ ಆಸ್ಪತ್ರೆಯಲ್ಲಿದ್ದಾರೆ ಎಂದು 17 ವರ್ಷದ ಬಾಲಕಿ ಪೋಕ್ಸೊ ಪ್ರಕರಣದ ಸಾಕ್ಷಿಯೊಬ್ಬರಿಗೆ ಸಂದೇಶ ಕಳುಹಿಸಿದ್ದಳು. ನಂತರ ಆಕೆ ತನ್ನ ತಾಯಿ ಇನ್ನಿಲ್ಲ ಎಂದು ಸಂದೇಶ ಕಳುಹಿಸಿದ್ದಳು.

ಆರೋಪ ನಿರಾಕರಿಸಿದ ಬಿಎಸ್‌ವೈ:

ಲೈಂಗಿಕ ದೌರ್ಜನ್ಯದ ಆರೋಪವನ್ನು ಮಾಜಿ ಸಿಎಂ ಯಡಿಯೂರಪ್ಪ ನಿರಾಕರಿಸಿದ್ದರು. “ತಾಯಿ-ಮಗಳಿಗೆ ಸಹಾಯ ಮಾಡಲು ಪ್ರಯತ್ನಿಸಿದ್ದೆ” ಎಂದು ಹೇಳಿಕೊಂಡಿದ್ದಾರೆ.

ಪ್ರಕರಣದ ಬೆನ್ನತ್ತಿದ ಮಹಿಳೆಗೆ ಸಹಾಯ ಮಾಡುತ್ತಿದ್ದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (ಎಬಿಜೆಎಂಎಸ್) ಕಾರ್ಯಕರ್ತರು ಶವದ ಮರಣೋತ್ತರ ಪರೀಕ್ಷೆಗೆ ಒತ್ತಾಯಿಸುತ್ತಿದ್ದಾರೆ. ಆದರೆ, ಪೊಲೀಸರು ಇದನ್ನು ಸಹಜ ಸಾವು ಎಂದು ವೈದ್ಯರು ಉಲ್ಲೇಖಿಸಿದ್ದಾರೆ. ಕಾನೂನು ಮಾರ್ಗದರ್ಶನ ಪಡೆಯಲು ದೂರುದಾರರು ಇಂದು (ಮೇ 27 ರಂದು) ವಕೀಲರನ್ನು ಭೇಟಿಯಾಗಬೇಕಿತ್ತು.

ಯಡಿಯೂರಪ್ಪ ವಿರುದ್ಧ ಮಾರ್ಚ್ 14 ರಂದು 53 ವರ್ಷದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮರುದಿನ ರಾಜ್ಯ ಸರ್ಕಾರ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಿತ್ತು. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ, ಇದುವರೆಗೆ ಸಿಆರ್‌ಪಿಸಿಯ ಸೆಕ್ಷನ್ 164 ರ ಅಡಿಯಲ್ಲಿ ಬದುಕುಳಿದಿರುವ ಮಹಿಳೆ ಮತ್ತು ತಾಯಿಯ ಹೇಳಿಕೆಗಳನ್ನು ದಾಖಲಿಸಿದೆ.

‘ಅನುಮಾನಾಸ್ಪದ ಸಾವು..’; ಪತ್ರಕರ್ತ ನವೀನ್ ಸೂರಿಂಜೆ:

ಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ಸಾವನ್ನಪ್ಪಿರುವ ಬಗ್ಗೆ ಪತ್ರಕರ್ತ ನವೀನ್ ಸೂರಿಂಜೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, “ಇದೊಂದು ‘ದಿಡೀರ್ ಅನುಮಾನಾಸ್ಪದ ಸಾವು’ ಚರ್ಚೆಯಾಗುತ್ತೆ ಅಂದುಕೊಂಡಿದ್ದೆ. ಆದರೆ, ಚರ್ಚೆಯಾಗದ ಹಿನ್ನಲೆಯಲ್ಲಿ ಚರ್ಚೆಯನ್ನು ಹುಟ್ಟುಹಾಕಬೇಕಿದೆ. ಮಹಿಳೆಯೊಬ್ಬರು ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ದ ಪೋಕ್ಸೋ ಕೇಸ್ ದಾಖಲಿಸಿದ್ದರು. ಆ ಮಹಿಳೆಗೆ ಪ್ರಾರಂಭದಲ್ಲಿ ಹಲವು ಸಂಘಟನೆಗಳು ಬೆಂಬಲ ನೀಡಿದ್ದರೂ ಕೊನೆಗೆ ಕಾನೂನಿನ ನೆರವು ಕೇಳಿ ಬಂದಿದ್ದು ಜನವಾದಿ ಮಹಿಳಾ ಸಂಘಟನೆಗೆ‌. ಜನವಾದಿ ಮಹಿಳಾ ಸಂಘಟನೆಯ ಗೌರಮ್ಮ ಅವರು ನನಗೆ ಕರೆ ಮಾಡಿ ಈ ಮಹಿಳೆಗೆ ಕಾನೂನು ಹೋರಾಟಕ್ಕೆ ಬೆಂಬಲ ಬೇಕಾಗಿದೆ ಎಂದರು. ನಾನು ಹಿರಿಯ ವಕೀಲ ಎಸ್ ಬಾಲನ್ ಅವರ ಜೊತೆ ಮಾತನಾಡಿದ್ದೆ” ಎಂದು ಹೇಳಿದ್ದಾರೆ.

“ದುರ್ಬಲರನ್ನು ಗುರಿಯಾಗಿಸಿ ನಡೆಸುವ ಇಂತಹ ದೌರ್ಜನ್ಯ ಕೊನೆಯಾಗಬೇಕು‌. ಫೀಸ್ ಇರಲಿ, ಇಲ್ಲದಿರಲಿ. ಇಂತಹ ಕೇಸ್ ಗಳನ್ನು ಮನುಷ್ಯರಾಗಿ ನಾವು ನಡೆಸಬೇಕು. ನನ್ನಲ್ಲಿಗೆ ಕಳುಹಿಸಿ” ಎಂದಿದ್ದರು. ಶನಿವಾರ ಸಂಜೆಯ ವೇಳೆಗೆ ಸಂತ್ರಸ್ತ ಮಹಿಳೆ ನನಗೆ ಮರಳಿ ಕರೆ ಮಾಡಿ ಸುಧೀರ್ಘವಾಗಿ ಮಾತನಾಡಿದ್ದರು. “ಕೇಸ್ ಮುಚ್ಚಿ ಹಾಕಲು ಹೇಗೆಲ್ಲಾ ಪ್ರಯತ್ನ ಮಾಡಲಾಯಿತು” ಎಂದು ನನಗೆ ವಿವರಿಸಿದ್ದರು. “ನಾನು ಎಸ್ ಬಾಲನ್ ಅವರ ಜೊತೆ ಮಾತಾಡಿದ್ದೇನೆ. ಸೋಮವಾರ ಎಸ್ ಬಾಲನ್ ಅವರನ್ನು ಭೇಟಿಯಾಗಿ. ಫೀಸೂ ತಗೊಳ್ಳಲ್ಲ. ನಿಮ್ಮ ಪ್ರಕರಣದಲ್ಲಿ ನೀವು ಪ್ರಾಮಾಣಿಕರಾಗಿದ್ದರೆ ನಾವು ನಿಮ್ಮ ಜೊತೆ ಇರ್ತೀವಿ. ಜನವಾದಿ ಗೌರಮ್ಮ ಅಂತವರು ನಿಮ್ ಜೊತೆ ಇದ್ದಾರೆ ಅಂದರೆ ಯಾರೂ ನಿಮ್ಮ ವಿಷಯಕ್ಕೆ ಬರಲ್ಲ. ಹೆದರ್ಕೋಬೇಡಿ” ಎಂದಿದ್ದೆ. ಎಸ್ ಬಾಲನ್ ಅವರ ಜೊತೆ ಮಾತನಾಡುವಾಗ “ಕಾಮ್ರೇಡ್, ನೀವು ಹೇಳಿರುವ ಮಹಿಳೆಗೆ ಇಂದು ಸಂಜೆ ಆಫೀಸ್ ಬರಲು ಹೇಳಿದ್ದೇನೆ. ಕೇಸ್ ಮಹಿಳೆ ಹೇಳಿದಂತೆಯೇ ಸರಿಯಾಗಿದ್ದರೆ ಯಡಿಯೂರಪ್ಪ ಮತ್ತೆ ಜೈಲಿಗೆ ಹೋಗ್ತಾರೆ” ಎಂದು ಎಸ್ ಬಾಲನ್ ನನ್ನಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದರು” ಎಂದು ನವೀನ್ ಸೂರಿಂಜೆ ಬರೆದುಕೊಂಡಿದ್ದಾರೆ.

ಇಂದು ಸಂತ್ರಸ್ತ ಮಹಿಳೆ ಹೋರಾಟಗಾರರೂ ಆಗಿರುವ ಹಿರಿಯ ವಕೀಲ ಎಸ್ ಬಾಲನ್ ಅವರನ್ನು ಭೇಟಿಯಾಗಿ, ಯಡಿಯೂರಪ್ಪ ಪೋಕ್ಸೋ ಕೇಸ್ ಬಗೆಗೆ ಚರ್ಚೆ ನಡೆಸಿ ಕಾನೂನು ಹೋರಾಟದ ಇನ್ನೊಂದು ಹೆಜ್ಜೆ ಇಡಬೇಕಿತ್ತು. ಅಷ್ಟರಲ್ಲಿ ಆ ಸಂತ್ರಸ್ತ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಬಂದಿದೆ. ಮಾಜಿ ಮುಖ್ಯಮಂತ್ರಿ ವಿರುದ್ದ ಪೋಕ್ಸೋ ದೂರು ಕೊಟ್ಟ ಮಹಿಳೆ ದಿಡೀರ್ ಸಾವನ್ನಪ್ಪುತ್ತಾರೆ ಎಂದರೆ ಅನುಮಾನದಿಂದ ನೋಡಬೇಕಾಗುತ್ತದೆ ಮತ್ತು ತನಿಖೆಗೆ ಆಗ್ರಹಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಮೃತ್ಯು: ಸಾವಿನ ಸುತ್ತ ಹಲವು ಅನುಮಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...