Homeಮುಖಪುಟಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ ಮಹಿಳೆ

ಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ ಮಹಿಳೆ

- Advertisement -
- Advertisement -

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ನಿರಾಕರಿಸಿದ ಕಾರಣಕ್ಕೆ ಮಹಿಳೆಯೊಬ್ಬರು ರಸ್ತೆಯಲ್ಲೇ ಆರು ತಿಂಗಳ ಶಿಶುವಿಗೆ ಜನ್ಮ ನೀಡಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಆರು ತಿಂಗಳ ಗರ್ಭಿಣಿಯಾಗಿದ್ದ ಕಲ್ಲೋ ಬಾಯಿಯನ್ನು ತೀವ್ರ ಹೆರಿಗೆ ನೋವಿನ ಕಾರಣಕ್ಕೆ ಸಂಬಂಧಿಕರು ಭಿಂಡ್ ಜಿಲ್ಲೆಯ ರಾಜುಪುರ ಗ್ರಾಮದಿಂದ ಭಿಂಡ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯ ಸಿಬ್ಬಂದಿ ಲಂಚ ಕೇಳಿ, ಅದನ್ನು ಪಾವತಿಸಲು ಸಾಧ್ಯವಿರದ ಬಡ ಮಹಿಳೆಯನ್ನು ಆಸ್ಪತ್ರೆಯಿಂದ ಬಲವಂತವಾಗಿ ಹೊರ ಹಾಕಿದ್ದರು. ಅಲ್ಲಿಂದ ಹೊರಗೆ ಬಂದ ಮೇಲೆ ಗರ್ಭಿಣಿ ರಸ್ತೆಯಲ್ಲೇ ಕುಸಿದು ಬಿದ್ದು, ಆರು ತಿಂಗಳ ಮಗುವಿಗೆ ಜನ್ಮ ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

“ನಾವು ಭಿಂಡ್ ಜಿಲ್ಲಾ ಆಸ್ಪತ್ರೆಗೆ ಬಂದಾಗ, ಕರ್ತವ್ಯದಲ್ಲಿರುವ ನರ್ಸಿಂಗ್ ಸಿಬ್ಬಂದಿ, ನನ್ನ ಸೊಸೆಗೆ ಚಿಕಿತ್ಸೆ ನೀಡುವ ಬದಲು, ಚಿಕಿತ್ಸೆ ಪ್ರಾರಂಭಿಸುವ ಮೊದಲು ನಮ್ಮಿಂದ 5000 ರೂಪಾಯಿ ಲಂಚ ಕೇಳಿದರು. ನಾವು ತೀರಾ ಬಡವರಾಗಿದ್ದರಿಂದ ಅದನ್ನು ಪಾವತಿಸಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ. ಹೀಗಾಗಿ ಶುಶ್ರೂಷಕ ಸಿಬ್ಬಂದಿ ನನ್ನ ಸೊಸೆ ಮತ್ತು ನಮ್ಮೆಲ್ಲರನ್ನೂ ಆಸ್ಪತ್ರೆಯಿಂದ ಹೊರದಬ್ಬಿ, ಆಸ್ಪತ್ರೆಯ ಹೊರಗೆ ಅಲ್ಟ್ರಾಸೌಂಡ್ ಪರೀಕ್ಷೆಯನ್ನು ಮಾಡುವಂತೆ ಹೇಳಿದ್ದಾರೆ” ಎಂದು ಮಹಿಳೆಯ ಅತ್ತೆ ಮಿಥಿಲೇಶ್ ಮಿರ್ಧಾ ಆರೋಪಿಸಿದ್ದಾರೆ.

“ಆಸ್ಪತ್ರೆಯಿಂದ ಬಲವಂತವಾಗಿ ಹೊರಗೆ ಹಾಕಿಸಿಕೊಂಡ ನಾವು ರಸ್ತೆಗೆ ಬಂದೆವು. ಈ ವೇಳೆ ನನ್ನ ಸೊಸೆ ರಸ್ತೆಯಲ್ಲಿ ಕುಸಿದು ಬಿದ್ದು, ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆಗೆ ನಮ್ಮ ಬಳಿ ಸ್ವಚ್ಛವಾದ ಬಟ್ಟೆ ಇರಲಿಲ್ಲ, ಇದರಿಂದಾಗಿ ನನ್ನ ಮಗನ ಟವೆಲ್ ಅನ್ನು ಮುಚ್ಚಲು ಬಳಸಿದ್ದೇವೆ. ನವಜಾತ ಶಿಶು, ಸರಿಯಾದ ವೈದ್ಯಕೀಯ ಆರೈಕೆಯ ಕೊರತೆಯಿಂದ ಸಾವನ್ನಪ್ಪಿದೆ” ಎಂದು ಮಿಥಿಲೇಶ್ ಹೇಳಿದ್ದಾರೆ.

ಸಂತ್ರಸ್ತರ ಆರೋಪವನ್ನು ಭಿಂಡ್ ಜಿಲ್ಲಾ ಆಸ್ಪತ್ರೆಯ ಕರ್ತವ್ಯ ನಿರತ ಶುಶ್ರೂಷಾ ಸಿಬ್ಬಂದಿ ನಿರಾಕರಿಸಿದ್ದಾರೆ. “ಮಿರ್ಧಾ ಕುಟುಂಬವು ತಾವಾಗಿಯೇ ಆಸ್ಪತ್ರೆಯನ್ನು ತೊರೆದಿದ್ದಾರೆ” ಎಂದು ನರ್ಸ್ ಹೇಳಿದ್ದಾರೆ. ಜೊತೆಗೆ ಆರು ತಿಂಗಳ ಅಕಾಲಿಕ ಹೆರಿಯಾದ ಶಿಶುಗಳು ಬದುಕುಳಿಯುವುದಿಲ್ಲ ಎಂದು ಅವರು ಸೂಚಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ಇಲಾಖೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್‌ ವರ್ಗಾವಣೆ

ಭಿಂಡ್ ಜಿಲ್ಲಾ ಆಸ್ಪತ್ರೆಯ ಆಡಳಿತವು ಇಡೀ ಪ್ರಕರಣದ ವಿಚಾರಣೆ ನಡೆಸಲು ಮೂವರು ವೈದ್ಯರ ಸಮಿತಿಯನ್ನು ರಚಿಸಿದೆ.

“ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ಭ್ರೂಣವು ಗರ್ಭಾಶಯದೊಳಗೆ ಸಾವನ್ನಪ್ಪಿದೆ. ರೋಗಿಯ ಸಂಬಂಧಿಕರಿಗೆ ಕರ್ತವ್ಯ ನಿರತ ಸಿಬ್ಬಂದಿ ಈ ಬಗ್ಗೆ ಮಾಹಿತಿ ನೀಡಿದರು, ಆದರೆ ರೋಗಿಯ ಸಂಬಂಧಿಕರು ನಿರಾಕರಿಸಿದರು. ಈ ಮಾಹಿತಿ ಪಡೆದು ಅವರು ಆಸ್ಪತ್ರೆಯಿಂದ ಹೊರನಡೆದರು. ಯಾರೂ ಅವರನ್ನು ಆಸ್ಪತ್ರೆಯಿಂದ ಹೊರಹಾಕಲಿಲ್ಲ” ಎಂದು ಭಿಂಡ್‌ ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಅನಿಲ್ ಗೋಯಲ್ ಅವರು ಹೇಳಿದ್ದಾರೆ.

“ಇಡೀ ಘಟನೆಯ ವಿಚಾರಣೆ ನಡೆಸಲು ಮೂವರು ವೈದ್ಯರ ಸಮಿತಿಯನ್ನು ರಚಿಸಲಾಗಿದೆ. ತನಿಖಾ ಸಮಿತಿಯ ವರದಿಯ ಆಧಾರದ ಮೇಲೆ, ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...