Homeಮುಖಪುಟಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ ಮಹಿಳೆ

ಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ ಮಹಿಳೆ

- Advertisement -
- Advertisement -

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ನಿರಾಕರಿಸಿದ ಕಾರಣಕ್ಕೆ ಮಹಿಳೆಯೊಬ್ಬರು ರಸ್ತೆಯಲ್ಲೇ ಆರು ತಿಂಗಳ ಶಿಶುವಿಗೆ ಜನ್ಮ ನೀಡಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಆರು ತಿಂಗಳ ಗರ್ಭಿಣಿಯಾಗಿದ್ದ ಕಲ್ಲೋ ಬಾಯಿಯನ್ನು ತೀವ್ರ ಹೆರಿಗೆ ನೋವಿನ ಕಾರಣಕ್ಕೆ ಸಂಬಂಧಿಕರು ಭಿಂಡ್ ಜಿಲ್ಲೆಯ ರಾಜುಪುರ ಗ್ರಾಮದಿಂದ ಭಿಂಡ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯ ಸಿಬ್ಬಂದಿ ಲಂಚ ಕೇಳಿ, ಅದನ್ನು ಪಾವತಿಸಲು ಸಾಧ್ಯವಿರದ ಬಡ ಮಹಿಳೆಯನ್ನು ಆಸ್ಪತ್ರೆಯಿಂದ ಬಲವಂತವಾಗಿ ಹೊರ ಹಾಕಿದ್ದರು. ಅಲ್ಲಿಂದ ಹೊರಗೆ ಬಂದ ಮೇಲೆ ಗರ್ಭಿಣಿ ರಸ್ತೆಯಲ್ಲೇ ಕುಸಿದು ಬಿದ್ದು, ಆರು ತಿಂಗಳ ಮಗುವಿಗೆ ಜನ್ಮ ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

“ನಾವು ಭಿಂಡ್ ಜಿಲ್ಲಾ ಆಸ್ಪತ್ರೆಗೆ ಬಂದಾಗ, ಕರ್ತವ್ಯದಲ್ಲಿರುವ ನರ್ಸಿಂಗ್ ಸಿಬ್ಬಂದಿ, ನನ್ನ ಸೊಸೆಗೆ ಚಿಕಿತ್ಸೆ ನೀಡುವ ಬದಲು, ಚಿಕಿತ್ಸೆ ಪ್ರಾರಂಭಿಸುವ ಮೊದಲು ನಮ್ಮಿಂದ 5000 ರೂಪಾಯಿ ಲಂಚ ಕೇಳಿದರು. ನಾವು ತೀರಾ ಬಡವರಾಗಿದ್ದರಿಂದ ಅದನ್ನು ಪಾವತಿಸಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ. ಹೀಗಾಗಿ ಶುಶ್ರೂಷಕ ಸಿಬ್ಬಂದಿ ನನ್ನ ಸೊಸೆ ಮತ್ತು ನಮ್ಮೆಲ್ಲರನ್ನೂ ಆಸ್ಪತ್ರೆಯಿಂದ ಹೊರದಬ್ಬಿ, ಆಸ್ಪತ್ರೆಯ ಹೊರಗೆ ಅಲ್ಟ್ರಾಸೌಂಡ್ ಪರೀಕ್ಷೆಯನ್ನು ಮಾಡುವಂತೆ ಹೇಳಿದ್ದಾರೆ” ಎಂದು ಮಹಿಳೆಯ ಅತ್ತೆ ಮಿಥಿಲೇಶ್ ಮಿರ್ಧಾ ಆರೋಪಿಸಿದ್ದಾರೆ.

“ಆಸ್ಪತ್ರೆಯಿಂದ ಬಲವಂತವಾಗಿ ಹೊರಗೆ ಹಾಕಿಸಿಕೊಂಡ ನಾವು ರಸ್ತೆಗೆ ಬಂದೆವು. ಈ ವೇಳೆ ನನ್ನ ಸೊಸೆ ರಸ್ತೆಯಲ್ಲಿ ಕುಸಿದು ಬಿದ್ದು, ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆಗೆ ನಮ್ಮ ಬಳಿ ಸ್ವಚ್ಛವಾದ ಬಟ್ಟೆ ಇರಲಿಲ್ಲ, ಇದರಿಂದಾಗಿ ನನ್ನ ಮಗನ ಟವೆಲ್ ಅನ್ನು ಮುಚ್ಚಲು ಬಳಸಿದ್ದೇವೆ. ನವಜಾತ ಶಿಶು, ಸರಿಯಾದ ವೈದ್ಯಕೀಯ ಆರೈಕೆಯ ಕೊರತೆಯಿಂದ ಸಾವನ್ನಪ್ಪಿದೆ” ಎಂದು ಮಿಥಿಲೇಶ್ ಹೇಳಿದ್ದಾರೆ.

ಸಂತ್ರಸ್ತರ ಆರೋಪವನ್ನು ಭಿಂಡ್ ಜಿಲ್ಲಾ ಆಸ್ಪತ್ರೆಯ ಕರ್ತವ್ಯ ನಿರತ ಶುಶ್ರೂಷಾ ಸಿಬ್ಬಂದಿ ನಿರಾಕರಿಸಿದ್ದಾರೆ. “ಮಿರ್ಧಾ ಕುಟುಂಬವು ತಾವಾಗಿಯೇ ಆಸ್ಪತ್ರೆಯನ್ನು ತೊರೆದಿದ್ದಾರೆ” ಎಂದು ನರ್ಸ್ ಹೇಳಿದ್ದಾರೆ. ಜೊತೆಗೆ ಆರು ತಿಂಗಳ ಅಕಾಲಿಕ ಹೆರಿಯಾದ ಶಿಶುಗಳು ಬದುಕುಳಿಯುವುದಿಲ್ಲ ಎಂದು ಅವರು ಸೂಚಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ಇಲಾಖೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್‌ ವರ್ಗಾವಣೆ

ಭಿಂಡ್ ಜಿಲ್ಲಾ ಆಸ್ಪತ್ರೆಯ ಆಡಳಿತವು ಇಡೀ ಪ್ರಕರಣದ ವಿಚಾರಣೆ ನಡೆಸಲು ಮೂವರು ವೈದ್ಯರ ಸಮಿತಿಯನ್ನು ರಚಿಸಿದೆ.

“ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ಭ್ರೂಣವು ಗರ್ಭಾಶಯದೊಳಗೆ ಸಾವನ್ನಪ್ಪಿದೆ. ರೋಗಿಯ ಸಂಬಂಧಿಕರಿಗೆ ಕರ್ತವ್ಯ ನಿರತ ಸಿಬ್ಬಂದಿ ಈ ಬಗ್ಗೆ ಮಾಹಿತಿ ನೀಡಿದರು, ಆದರೆ ರೋಗಿಯ ಸಂಬಂಧಿಕರು ನಿರಾಕರಿಸಿದರು. ಈ ಮಾಹಿತಿ ಪಡೆದು ಅವರು ಆಸ್ಪತ್ರೆಯಿಂದ ಹೊರನಡೆದರು. ಯಾರೂ ಅವರನ್ನು ಆಸ್ಪತ್ರೆಯಿಂದ ಹೊರಹಾಕಲಿಲ್ಲ” ಎಂದು ಭಿಂಡ್‌ ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಅನಿಲ್ ಗೋಯಲ್ ಅವರು ಹೇಳಿದ್ದಾರೆ.

“ಇಡೀ ಘಟನೆಯ ವಿಚಾರಣೆ ನಡೆಸಲು ಮೂವರು ವೈದ್ಯರ ಸಮಿತಿಯನ್ನು ರಚಿಸಲಾಗಿದೆ. ತನಿಖಾ ಸಮಿತಿಯ ವರದಿಯ ಆಧಾರದ ಮೇಲೆ, ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...