Homeಮುಖಪುಟಕೋವಿಡ್‌ನಿಂದ ಪಾರಾಗಲು 3 ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿದ್ದ ಮಹಿಳೆ!

ಕೋವಿಡ್‌ನಿಂದ ಪಾರಾಗಲು 3 ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿದ್ದ ಮಹಿಳೆ!

- Advertisement -
- Advertisement -

ಮಹಿಳೆಯೊಬ್ಬಳು ಕೋವಿಡ್-19 ಸೋಂಕಿಗೆ ಒಳಗಾಗುವ ತೀವ್ರ ಭಯದಿಂದ ಮೂರು ವ‍ರ್ಷಗಳ ಕಾಲ ತನ್ನನ್ನು ಮತ್ತು ತನ್ನ ಅಪ್ರಾಪ್ತ ಮಗನನ್ನು ಮನೆಯೊಳಗೆ ಬೀಗ ಹಾಕಿಕೊಂಡು ಗೃಹಬಂಧನದಲ್ಲಿದ್ದರು. ಅವರನ್ನು ಈಗ ರಕ್ಷಣೆ ಮಾಡಲಾಗಿದ್ದು, ಈ ಘಟನೆ ಗುರುಗ್ರಾಮ್‌ನ ಚಕ್ಕರ್‌ಪುರದಲ್ಲಿ ನಡೆದಿದೆ. ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿರುವ ಈ ಮಹಿಳೆಯ ಪತಿ ಸುಜನ್ ಮಾಝಿ ಅವರು, ಚಕ್ಕರ್‌ಪುರ ಪೊಲೀಸರನ್ನು ಸಂಪರ್ಕಿಸಿದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಸುಜನ್ ಮಾಝಿ ಅವರ ಕೋರಿಕೆಯ ಮೇರೆಗೆ, ಪೊಲೀಸರು, ಆರೋಗ್ಯ ಅಧಿಕಾರಿಗಳು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸದಸ್ಯರ ತಂಡ ಮಂಗಳವಾರ ನಿವಾಸಕ್ಕೆ ತಲುಪಿ, ಮುಖ್ಯ ಬಾಗಿಲು ಮುರಿದು ಮುನ್ಮುನ್ ಮಾಝಿ ಮತ್ತು ಆಕೆಯ 10 ವರ್ಷದ ಮಗನನ್ನು ರಕ್ಷಿಸಿದ್ದಾರೆ. ಇನ್ನು ಮನೆಯೊಳಗಿನ ಕಸದ ರಾಶಿಯೇ ತುಂಬಿದೆ. ಬಟ್ಟೆ, ಕೂದಲು, ಕಸ, ಮಣ್ಣು ಮತ್ತು ದಿನಸಿಗಳು ಸುತ್ತಲೂ ಹರಡಿಕೊಂಡಿವೆ.

qbfanc1

ಮುನ್ಮುನ್ ಮಾಝಿ ಅವರು, ಮನೆಯಲ್ಲಿಯೇ ಮಗುವಿನ ಮತ್ತು ಅವಳ ಕೂದಲನ್ನು ಕತ್ತರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇದೇ ವೇಳೆ ಮನೆಯಲ್ಲಿ ಗ್ಯಾಸ್ ಸ್ಟೌ ಬದಲು ಇಂಡಕ್ಷನ್ ಮೂಲಕ ಅಡುಗೆ ಮಾಡಲಾಗಿತ್ತು. ಮೂರು ವರ್ಷಗಳಿಂದ ಮನೆಯಲ್ಲಿದ್ದ ಕಸವನ್ನು ಕೂಡ ಹೊರಗೆ ಹಾಕಿರಲಿಲ್ಲ, ಈ ವೇಳೆ ಮನೆಗೆ ಯಾರೂ ಭೇಟಿ ನೀಡಿರಲಿಲ್ಲ. ಮಗು ಮನೆಯ ಗೋಡೆಗಳ ಮೇಲೆ ಪೇಂಟಿಂಗ್ ಮಾಡುತ್ತಿತ್ತು ಮತ್ತು ಪೆನ್ಸಿಲ್‌ನಿಂದ ಮಾತ್ರ ಅಧ್ಯಯನ ಮಾಡುತ್ತಿತ್ತು. ಆಘಾತಕಾರಿ ಸಂಗತಿಯೆಂದರೆ, ಮಹಿಳೆಯ ಮಗ ಕಳೆದ ಮೂರು ವರ್ಷಗಳಿಂದ ಸೂರ್ಯನನ್ನೇ ನೋಡಿರಲಿಲ್ಲ.

ಇದನ್ನೂ ಓದಿ: ಕೋವಿಡ್ ಸಂಬಂಧಿತ ನಿರ್ಬಂಧ ಹೇರುವ ಯೋಜನೆ ಇಲ್ಲ: ಕೇಂದ್ರ ಸರ್ಕಾರ

ಇಷ್ಟು ದಿನಗಳ ಕಾಲ ತಾಯಿ ಮಗ ಮನೆಯೊಳಗೆ ಬೀಗ ಹಾಕಿಕೊಂಡು ವಾಸಿಸುತ್ತಿರುವ ಬಗ್ಗೆ ಅಕ್ಕಪಕ್ಕದವರಿಗೆ ಸುಳಿವು ಸಿಕ್ಕಿರಲಿಲ್ಲ.

ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ”ಕೋವಿಡ್ -19 ಕಾರಣದಿಂದಾಗಿ ಮಹಿಳೆ ಭಯಭೀತರಾಗಿದ್ದರು ಮತ್ತು ಮನೆಯಿಂದ ಹೊರಗೆ ಕಾಲಿಟ್ಟರೆ ಮಗ ಸಾಯುತ್ತಾನೆಂದು ನಂಬಿದ್ದರು” ಎಂದು ಅವರು ತಿಳಿಸಿದ್ದಾರೆ.

2020ರಲ್ಲಿ ಮೊದಲ ಲಾಕ್‌ಡೌನ್ ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಕಚೇರಿಗಾಗಿ ಮಹಿಳೆಯ ಪತಿ ಮನೆಯಿಂದ ಹೊರಬಂದಿದ್ದರು. ಹಾಗಾಗಿ ಆ ಮಹಿಳೆ ತನ್ನ ಪತಿಯನ್ನು ಸಹ ಮನೆಯೊಳಗೆ ಬಿಟ್ಟುಕೊಳ್ಳದೇ ತನ್ನ ಮಗನೊಂದಿಗಿನ ಮೂರು ವರ್ಷಗಳ ಬಂಧನದಲ್ಲಿದ್ದರು.

ಮುನ್ಮುನ್ ಮಾಝಿ ಅವರು, ವೀಡಿಯೊ ಕರೆಗಳ ಮೂಲಕ ತಮ್ಮ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದರು. ಅದು ಬಿಟ್ಟರೆ ಮನೆಯವರೊಂದಿಗಾಗಲಿ ಹೊರ ಜಗತ್ತಿನ ಯಾರೊಂದಿಗೂ ಆಕೆ ಸಂಪರ್ಕದಲ್ಲಿರಲಿಲ್ಲ. ಇನ್ನು, ಮನೆಯ ಮಾಸಿಕ ಬಾಡಿಗೆ ಕಟ್ಟುವುದು, ವಿದ್ಯುತ್ ಬಿಲ್ ಕಟ್ಟುವುದು, ಮಗನ ಶಾಲಾ ಶುಲ್ಕ ಕಟ್ಟುವುದು, ದಿನಸಿ ಸಾಮಾನು, ತರಕಾರಿ ಕೊಂಡುಕೊಳ್ಳುವುದು, ಪಡಿತರ ಚೀಲಗಳನ್ನು ಮುಖ್ಯ ಬಾಗಿಲಿನ ಹೊರಗೆ ಇಡುತ್ತಿದ್ದರು.

ಇದೀಗ ಆ ತಾಯಿ ಮಗನ ರಕ್ಷಣೆ ಮಾಡಲಾಗಿದ್ದು, ಇಬ್ಬರನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...