Homeಮುಖಪುಟಕೋವಿಡ್‌ನಿಂದ ಪಾರಾಗಲು 3 ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿದ್ದ ಮಹಿಳೆ!

ಕೋವಿಡ್‌ನಿಂದ ಪಾರಾಗಲು 3 ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿದ್ದ ಮಹಿಳೆ!

- Advertisement -
- Advertisement -

ಮಹಿಳೆಯೊಬ್ಬಳು ಕೋವಿಡ್-19 ಸೋಂಕಿಗೆ ಒಳಗಾಗುವ ತೀವ್ರ ಭಯದಿಂದ ಮೂರು ವ‍ರ್ಷಗಳ ಕಾಲ ತನ್ನನ್ನು ಮತ್ತು ತನ್ನ ಅಪ್ರಾಪ್ತ ಮಗನನ್ನು ಮನೆಯೊಳಗೆ ಬೀಗ ಹಾಕಿಕೊಂಡು ಗೃಹಬಂಧನದಲ್ಲಿದ್ದರು. ಅವರನ್ನು ಈಗ ರಕ್ಷಣೆ ಮಾಡಲಾಗಿದ್ದು, ಈ ಘಟನೆ ಗುರುಗ್ರಾಮ್‌ನ ಚಕ್ಕರ್‌ಪುರದಲ್ಲಿ ನಡೆದಿದೆ. ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿರುವ ಈ ಮಹಿಳೆಯ ಪತಿ ಸುಜನ್ ಮಾಝಿ ಅವರು, ಚಕ್ಕರ್‌ಪುರ ಪೊಲೀಸರನ್ನು ಸಂಪರ್ಕಿಸಿದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಸುಜನ್ ಮಾಝಿ ಅವರ ಕೋರಿಕೆಯ ಮೇರೆಗೆ, ಪೊಲೀಸರು, ಆರೋಗ್ಯ ಅಧಿಕಾರಿಗಳು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸದಸ್ಯರ ತಂಡ ಮಂಗಳವಾರ ನಿವಾಸಕ್ಕೆ ತಲುಪಿ, ಮುಖ್ಯ ಬಾಗಿಲು ಮುರಿದು ಮುನ್ಮುನ್ ಮಾಝಿ ಮತ್ತು ಆಕೆಯ 10 ವರ್ಷದ ಮಗನನ್ನು ರಕ್ಷಿಸಿದ್ದಾರೆ. ಇನ್ನು ಮನೆಯೊಳಗಿನ ಕಸದ ರಾಶಿಯೇ ತುಂಬಿದೆ. ಬಟ್ಟೆ, ಕೂದಲು, ಕಸ, ಮಣ್ಣು ಮತ್ತು ದಿನಸಿಗಳು ಸುತ್ತಲೂ ಹರಡಿಕೊಂಡಿವೆ.

qbfanc1

ಮುನ್ಮುನ್ ಮಾಝಿ ಅವರು, ಮನೆಯಲ್ಲಿಯೇ ಮಗುವಿನ ಮತ್ತು ಅವಳ ಕೂದಲನ್ನು ಕತ್ತರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇದೇ ವೇಳೆ ಮನೆಯಲ್ಲಿ ಗ್ಯಾಸ್ ಸ್ಟೌ ಬದಲು ಇಂಡಕ್ಷನ್ ಮೂಲಕ ಅಡುಗೆ ಮಾಡಲಾಗಿತ್ತು. ಮೂರು ವರ್ಷಗಳಿಂದ ಮನೆಯಲ್ಲಿದ್ದ ಕಸವನ್ನು ಕೂಡ ಹೊರಗೆ ಹಾಕಿರಲಿಲ್ಲ, ಈ ವೇಳೆ ಮನೆಗೆ ಯಾರೂ ಭೇಟಿ ನೀಡಿರಲಿಲ್ಲ. ಮಗು ಮನೆಯ ಗೋಡೆಗಳ ಮೇಲೆ ಪೇಂಟಿಂಗ್ ಮಾಡುತ್ತಿತ್ತು ಮತ್ತು ಪೆನ್ಸಿಲ್‌ನಿಂದ ಮಾತ್ರ ಅಧ್ಯಯನ ಮಾಡುತ್ತಿತ್ತು. ಆಘಾತಕಾರಿ ಸಂಗತಿಯೆಂದರೆ, ಮಹಿಳೆಯ ಮಗ ಕಳೆದ ಮೂರು ವರ್ಷಗಳಿಂದ ಸೂರ್ಯನನ್ನೇ ನೋಡಿರಲಿಲ್ಲ.

ಇದನ್ನೂ ಓದಿ: ಕೋವಿಡ್ ಸಂಬಂಧಿತ ನಿರ್ಬಂಧ ಹೇರುವ ಯೋಜನೆ ಇಲ್ಲ: ಕೇಂದ್ರ ಸರ್ಕಾರ

ಇಷ್ಟು ದಿನಗಳ ಕಾಲ ತಾಯಿ ಮಗ ಮನೆಯೊಳಗೆ ಬೀಗ ಹಾಕಿಕೊಂಡು ವಾಸಿಸುತ್ತಿರುವ ಬಗ್ಗೆ ಅಕ್ಕಪಕ್ಕದವರಿಗೆ ಸುಳಿವು ಸಿಕ್ಕಿರಲಿಲ್ಲ.

ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ”ಕೋವಿಡ್ -19 ಕಾರಣದಿಂದಾಗಿ ಮಹಿಳೆ ಭಯಭೀತರಾಗಿದ್ದರು ಮತ್ತು ಮನೆಯಿಂದ ಹೊರಗೆ ಕಾಲಿಟ್ಟರೆ ಮಗ ಸಾಯುತ್ತಾನೆಂದು ನಂಬಿದ್ದರು” ಎಂದು ಅವರು ತಿಳಿಸಿದ್ದಾರೆ.

2020ರಲ್ಲಿ ಮೊದಲ ಲಾಕ್‌ಡೌನ್ ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಕಚೇರಿಗಾಗಿ ಮಹಿಳೆಯ ಪತಿ ಮನೆಯಿಂದ ಹೊರಬಂದಿದ್ದರು. ಹಾಗಾಗಿ ಆ ಮಹಿಳೆ ತನ್ನ ಪತಿಯನ್ನು ಸಹ ಮನೆಯೊಳಗೆ ಬಿಟ್ಟುಕೊಳ್ಳದೇ ತನ್ನ ಮಗನೊಂದಿಗಿನ ಮೂರು ವರ್ಷಗಳ ಬಂಧನದಲ್ಲಿದ್ದರು.

ಮುನ್ಮುನ್ ಮಾಝಿ ಅವರು, ವೀಡಿಯೊ ಕರೆಗಳ ಮೂಲಕ ತಮ್ಮ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದರು. ಅದು ಬಿಟ್ಟರೆ ಮನೆಯವರೊಂದಿಗಾಗಲಿ ಹೊರ ಜಗತ್ತಿನ ಯಾರೊಂದಿಗೂ ಆಕೆ ಸಂಪರ್ಕದಲ್ಲಿರಲಿಲ್ಲ. ಇನ್ನು, ಮನೆಯ ಮಾಸಿಕ ಬಾಡಿಗೆ ಕಟ್ಟುವುದು, ವಿದ್ಯುತ್ ಬಿಲ್ ಕಟ್ಟುವುದು, ಮಗನ ಶಾಲಾ ಶುಲ್ಕ ಕಟ್ಟುವುದು, ದಿನಸಿ ಸಾಮಾನು, ತರಕಾರಿ ಕೊಂಡುಕೊಳ್ಳುವುದು, ಪಡಿತರ ಚೀಲಗಳನ್ನು ಮುಖ್ಯ ಬಾಗಿಲಿನ ಹೊರಗೆ ಇಡುತ್ತಿದ್ದರು.

ಇದೀಗ ಆ ತಾಯಿ ಮಗನ ರಕ್ಷಣೆ ಮಾಡಲಾಗಿದ್ದು, ಇಬ್ಬರನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...