Homeಮುಖಪುಟಕೋವಿಡ್‌ನಿಂದ ಪಾರಾಗಲು 3 ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿದ್ದ ಮಹಿಳೆ!

ಕೋವಿಡ್‌ನಿಂದ ಪಾರಾಗಲು 3 ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿದ್ದ ಮಹಿಳೆ!

- Advertisement -
- Advertisement -

ಮಹಿಳೆಯೊಬ್ಬಳು ಕೋವಿಡ್-19 ಸೋಂಕಿಗೆ ಒಳಗಾಗುವ ತೀವ್ರ ಭಯದಿಂದ ಮೂರು ವ‍ರ್ಷಗಳ ಕಾಲ ತನ್ನನ್ನು ಮತ್ತು ತನ್ನ ಅಪ್ರಾಪ್ತ ಮಗನನ್ನು ಮನೆಯೊಳಗೆ ಬೀಗ ಹಾಕಿಕೊಂಡು ಗೃಹಬಂಧನದಲ್ಲಿದ್ದರು. ಅವರನ್ನು ಈಗ ರಕ್ಷಣೆ ಮಾಡಲಾಗಿದ್ದು, ಈ ಘಟನೆ ಗುರುಗ್ರಾಮ್‌ನ ಚಕ್ಕರ್‌ಪುರದಲ್ಲಿ ನಡೆದಿದೆ. ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿರುವ ಈ ಮಹಿಳೆಯ ಪತಿ ಸುಜನ್ ಮಾಝಿ ಅವರು, ಚಕ್ಕರ್‌ಪುರ ಪೊಲೀಸರನ್ನು ಸಂಪರ್ಕಿಸಿದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಸುಜನ್ ಮಾಝಿ ಅವರ ಕೋರಿಕೆಯ ಮೇರೆಗೆ, ಪೊಲೀಸರು, ಆರೋಗ್ಯ ಅಧಿಕಾರಿಗಳು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸದಸ್ಯರ ತಂಡ ಮಂಗಳವಾರ ನಿವಾಸಕ್ಕೆ ತಲುಪಿ, ಮುಖ್ಯ ಬಾಗಿಲು ಮುರಿದು ಮುನ್ಮುನ್ ಮಾಝಿ ಮತ್ತು ಆಕೆಯ 10 ವರ್ಷದ ಮಗನನ್ನು ರಕ್ಷಿಸಿದ್ದಾರೆ. ಇನ್ನು ಮನೆಯೊಳಗಿನ ಕಸದ ರಾಶಿಯೇ ತುಂಬಿದೆ. ಬಟ್ಟೆ, ಕೂದಲು, ಕಸ, ಮಣ್ಣು ಮತ್ತು ದಿನಸಿಗಳು ಸುತ್ತಲೂ ಹರಡಿಕೊಂಡಿವೆ.

qbfanc1

ಮುನ್ಮುನ್ ಮಾಝಿ ಅವರು, ಮನೆಯಲ್ಲಿಯೇ ಮಗುವಿನ ಮತ್ತು ಅವಳ ಕೂದಲನ್ನು ಕತ್ತರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇದೇ ವೇಳೆ ಮನೆಯಲ್ಲಿ ಗ್ಯಾಸ್ ಸ್ಟೌ ಬದಲು ಇಂಡಕ್ಷನ್ ಮೂಲಕ ಅಡುಗೆ ಮಾಡಲಾಗಿತ್ತು. ಮೂರು ವರ್ಷಗಳಿಂದ ಮನೆಯಲ್ಲಿದ್ದ ಕಸವನ್ನು ಕೂಡ ಹೊರಗೆ ಹಾಕಿರಲಿಲ್ಲ, ಈ ವೇಳೆ ಮನೆಗೆ ಯಾರೂ ಭೇಟಿ ನೀಡಿರಲಿಲ್ಲ. ಮಗು ಮನೆಯ ಗೋಡೆಗಳ ಮೇಲೆ ಪೇಂಟಿಂಗ್ ಮಾಡುತ್ತಿತ್ತು ಮತ್ತು ಪೆನ್ಸಿಲ್‌ನಿಂದ ಮಾತ್ರ ಅಧ್ಯಯನ ಮಾಡುತ್ತಿತ್ತು. ಆಘಾತಕಾರಿ ಸಂಗತಿಯೆಂದರೆ, ಮಹಿಳೆಯ ಮಗ ಕಳೆದ ಮೂರು ವರ್ಷಗಳಿಂದ ಸೂರ್ಯನನ್ನೇ ನೋಡಿರಲಿಲ್ಲ.

ಇದನ್ನೂ ಓದಿ: ಕೋವಿಡ್ ಸಂಬಂಧಿತ ನಿರ್ಬಂಧ ಹೇರುವ ಯೋಜನೆ ಇಲ್ಲ: ಕೇಂದ್ರ ಸರ್ಕಾರ

ಇಷ್ಟು ದಿನಗಳ ಕಾಲ ತಾಯಿ ಮಗ ಮನೆಯೊಳಗೆ ಬೀಗ ಹಾಕಿಕೊಂಡು ವಾಸಿಸುತ್ತಿರುವ ಬಗ್ಗೆ ಅಕ್ಕಪಕ್ಕದವರಿಗೆ ಸುಳಿವು ಸಿಕ್ಕಿರಲಿಲ್ಲ.

ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ”ಕೋವಿಡ್ -19 ಕಾರಣದಿಂದಾಗಿ ಮಹಿಳೆ ಭಯಭೀತರಾಗಿದ್ದರು ಮತ್ತು ಮನೆಯಿಂದ ಹೊರಗೆ ಕಾಲಿಟ್ಟರೆ ಮಗ ಸಾಯುತ್ತಾನೆಂದು ನಂಬಿದ್ದರು” ಎಂದು ಅವರು ತಿಳಿಸಿದ್ದಾರೆ.

2020ರಲ್ಲಿ ಮೊದಲ ಲಾಕ್‌ಡೌನ್ ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಕಚೇರಿಗಾಗಿ ಮಹಿಳೆಯ ಪತಿ ಮನೆಯಿಂದ ಹೊರಬಂದಿದ್ದರು. ಹಾಗಾಗಿ ಆ ಮಹಿಳೆ ತನ್ನ ಪತಿಯನ್ನು ಸಹ ಮನೆಯೊಳಗೆ ಬಿಟ್ಟುಕೊಳ್ಳದೇ ತನ್ನ ಮಗನೊಂದಿಗಿನ ಮೂರು ವರ್ಷಗಳ ಬಂಧನದಲ್ಲಿದ್ದರು.

ಮುನ್ಮುನ್ ಮಾಝಿ ಅವರು, ವೀಡಿಯೊ ಕರೆಗಳ ಮೂಲಕ ತಮ್ಮ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದರು. ಅದು ಬಿಟ್ಟರೆ ಮನೆಯವರೊಂದಿಗಾಗಲಿ ಹೊರ ಜಗತ್ತಿನ ಯಾರೊಂದಿಗೂ ಆಕೆ ಸಂಪರ್ಕದಲ್ಲಿರಲಿಲ್ಲ. ಇನ್ನು, ಮನೆಯ ಮಾಸಿಕ ಬಾಡಿಗೆ ಕಟ್ಟುವುದು, ವಿದ್ಯುತ್ ಬಿಲ್ ಕಟ್ಟುವುದು, ಮಗನ ಶಾಲಾ ಶುಲ್ಕ ಕಟ್ಟುವುದು, ದಿನಸಿ ಸಾಮಾನು, ತರಕಾರಿ ಕೊಂಡುಕೊಳ್ಳುವುದು, ಪಡಿತರ ಚೀಲಗಳನ್ನು ಮುಖ್ಯ ಬಾಗಿಲಿನ ಹೊರಗೆ ಇಡುತ್ತಿದ್ದರು.

ಇದೀಗ ಆ ತಾಯಿ ಮಗನ ರಕ್ಷಣೆ ಮಾಡಲಾಗಿದ್ದು, ಇಬ್ಬರನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...