Homeಮುಖಪುಟಕೋವಿಡ್‌ನಿಂದ ಪಾರಾಗಲು 3 ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿದ್ದ ಮಹಿಳೆ!

ಕೋವಿಡ್‌ನಿಂದ ಪಾರಾಗಲು 3 ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿದ್ದ ಮಹಿಳೆ!

- Advertisement -
- Advertisement -

ಮಹಿಳೆಯೊಬ್ಬಳು ಕೋವಿಡ್-19 ಸೋಂಕಿಗೆ ಒಳಗಾಗುವ ತೀವ್ರ ಭಯದಿಂದ ಮೂರು ವ‍ರ್ಷಗಳ ಕಾಲ ತನ್ನನ್ನು ಮತ್ತು ತನ್ನ ಅಪ್ರಾಪ್ತ ಮಗನನ್ನು ಮನೆಯೊಳಗೆ ಬೀಗ ಹಾಕಿಕೊಂಡು ಗೃಹಬಂಧನದಲ್ಲಿದ್ದರು. ಅವರನ್ನು ಈಗ ರಕ್ಷಣೆ ಮಾಡಲಾಗಿದ್ದು, ಈ ಘಟನೆ ಗುರುಗ್ರಾಮ್‌ನ ಚಕ್ಕರ್‌ಪುರದಲ್ಲಿ ನಡೆದಿದೆ. ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿರುವ ಈ ಮಹಿಳೆಯ ಪತಿ ಸುಜನ್ ಮಾಝಿ ಅವರು, ಚಕ್ಕರ್‌ಪುರ ಪೊಲೀಸರನ್ನು ಸಂಪರ್ಕಿಸಿದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಸುಜನ್ ಮಾಝಿ ಅವರ ಕೋರಿಕೆಯ ಮೇರೆಗೆ, ಪೊಲೀಸರು, ಆರೋಗ್ಯ ಅಧಿಕಾರಿಗಳು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸದಸ್ಯರ ತಂಡ ಮಂಗಳವಾರ ನಿವಾಸಕ್ಕೆ ತಲುಪಿ, ಮುಖ್ಯ ಬಾಗಿಲು ಮುರಿದು ಮುನ್ಮುನ್ ಮಾಝಿ ಮತ್ತು ಆಕೆಯ 10 ವರ್ಷದ ಮಗನನ್ನು ರಕ್ಷಿಸಿದ್ದಾರೆ. ಇನ್ನು ಮನೆಯೊಳಗಿನ ಕಸದ ರಾಶಿಯೇ ತುಂಬಿದೆ. ಬಟ್ಟೆ, ಕೂದಲು, ಕಸ, ಮಣ್ಣು ಮತ್ತು ದಿನಸಿಗಳು ಸುತ್ತಲೂ ಹರಡಿಕೊಂಡಿವೆ.

qbfanc1

ಮುನ್ಮುನ್ ಮಾಝಿ ಅವರು, ಮನೆಯಲ್ಲಿಯೇ ಮಗುವಿನ ಮತ್ತು ಅವಳ ಕೂದಲನ್ನು ಕತ್ತರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇದೇ ವೇಳೆ ಮನೆಯಲ್ಲಿ ಗ್ಯಾಸ್ ಸ್ಟೌ ಬದಲು ಇಂಡಕ್ಷನ್ ಮೂಲಕ ಅಡುಗೆ ಮಾಡಲಾಗಿತ್ತು. ಮೂರು ವರ್ಷಗಳಿಂದ ಮನೆಯಲ್ಲಿದ್ದ ಕಸವನ್ನು ಕೂಡ ಹೊರಗೆ ಹಾಕಿರಲಿಲ್ಲ, ಈ ವೇಳೆ ಮನೆಗೆ ಯಾರೂ ಭೇಟಿ ನೀಡಿರಲಿಲ್ಲ. ಮಗು ಮನೆಯ ಗೋಡೆಗಳ ಮೇಲೆ ಪೇಂಟಿಂಗ್ ಮಾಡುತ್ತಿತ್ತು ಮತ್ತು ಪೆನ್ಸಿಲ್‌ನಿಂದ ಮಾತ್ರ ಅಧ್ಯಯನ ಮಾಡುತ್ತಿತ್ತು. ಆಘಾತಕಾರಿ ಸಂಗತಿಯೆಂದರೆ, ಮಹಿಳೆಯ ಮಗ ಕಳೆದ ಮೂರು ವರ್ಷಗಳಿಂದ ಸೂರ್ಯನನ್ನೇ ನೋಡಿರಲಿಲ್ಲ.

ಇದನ್ನೂ ಓದಿ: ಕೋವಿಡ್ ಸಂಬಂಧಿತ ನಿರ್ಬಂಧ ಹೇರುವ ಯೋಜನೆ ಇಲ್ಲ: ಕೇಂದ್ರ ಸರ್ಕಾರ

ಇಷ್ಟು ದಿನಗಳ ಕಾಲ ತಾಯಿ ಮಗ ಮನೆಯೊಳಗೆ ಬೀಗ ಹಾಕಿಕೊಂಡು ವಾಸಿಸುತ್ತಿರುವ ಬಗ್ಗೆ ಅಕ್ಕಪಕ್ಕದವರಿಗೆ ಸುಳಿವು ಸಿಕ್ಕಿರಲಿಲ್ಲ.

ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ”ಕೋವಿಡ್ -19 ಕಾರಣದಿಂದಾಗಿ ಮಹಿಳೆ ಭಯಭೀತರಾಗಿದ್ದರು ಮತ್ತು ಮನೆಯಿಂದ ಹೊರಗೆ ಕಾಲಿಟ್ಟರೆ ಮಗ ಸಾಯುತ್ತಾನೆಂದು ನಂಬಿದ್ದರು” ಎಂದು ಅವರು ತಿಳಿಸಿದ್ದಾರೆ.

2020ರಲ್ಲಿ ಮೊದಲ ಲಾಕ್‌ಡೌನ್ ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಕಚೇರಿಗಾಗಿ ಮಹಿಳೆಯ ಪತಿ ಮನೆಯಿಂದ ಹೊರಬಂದಿದ್ದರು. ಹಾಗಾಗಿ ಆ ಮಹಿಳೆ ತನ್ನ ಪತಿಯನ್ನು ಸಹ ಮನೆಯೊಳಗೆ ಬಿಟ್ಟುಕೊಳ್ಳದೇ ತನ್ನ ಮಗನೊಂದಿಗಿನ ಮೂರು ವರ್ಷಗಳ ಬಂಧನದಲ್ಲಿದ್ದರು.

ಮುನ್ಮುನ್ ಮಾಝಿ ಅವರು, ವೀಡಿಯೊ ಕರೆಗಳ ಮೂಲಕ ತಮ್ಮ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದರು. ಅದು ಬಿಟ್ಟರೆ ಮನೆಯವರೊಂದಿಗಾಗಲಿ ಹೊರ ಜಗತ್ತಿನ ಯಾರೊಂದಿಗೂ ಆಕೆ ಸಂಪರ್ಕದಲ್ಲಿರಲಿಲ್ಲ. ಇನ್ನು, ಮನೆಯ ಮಾಸಿಕ ಬಾಡಿಗೆ ಕಟ್ಟುವುದು, ವಿದ್ಯುತ್ ಬಿಲ್ ಕಟ್ಟುವುದು, ಮಗನ ಶಾಲಾ ಶುಲ್ಕ ಕಟ್ಟುವುದು, ದಿನಸಿ ಸಾಮಾನು, ತರಕಾರಿ ಕೊಂಡುಕೊಳ್ಳುವುದು, ಪಡಿತರ ಚೀಲಗಳನ್ನು ಮುಖ್ಯ ಬಾಗಿಲಿನ ಹೊರಗೆ ಇಡುತ್ತಿದ್ದರು.

ಇದೀಗ ಆ ತಾಯಿ ಮಗನ ರಕ್ಷಣೆ ಮಾಡಲಾಗಿದ್ದು, ಇಬ್ಬರನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...