Homeಮುಖಪುಟಕೋವಿಡ್‌ನಿಂದ ಪಾರಾಗಲು 3 ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿದ್ದ ಮಹಿಳೆ!

ಕೋವಿಡ್‌ನಿಂದ ಪಾರಾಗಲು 3 ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿದ್ದ ಮಹಿಳೆ!

- Advertisement -
- Advertisement -

ಮಹಿಳೆಯೊಬ್ಬಳು ಕೋವಿಡ್-19 ಸೋಂಕಿಗೆ ಒಳಗಾಗುವ ತೀವ್ರ ಭಯದಿಂದ ಮೂರು ವ‍ರ್ಷಗಳ ಕಾಲ ತನ್ನನ್ನು ಮತ್ತು ತನ್ನ ಅಪ್ರಾಪ್ತ ಮಗನನ್ನು ಮನೆಯೊಳಗೆ ಬೀಗ ಹಾಕಿಕೊಂಡು ಗೃಹಬಂಧನದಲ್ಲಿದ್ದರು. ಅವರನ್ನು ಈಗ ರಕ್ಷಣೆ ಮಾಡಲಾಗಿದ್ದು, ಈ ಘಟನೆ ಗುರುಗ್ರಾಮ್‌ನ ಚಕ್ಕರ್‌ಪುರದಲ್ಲಿ ನಡೆದಿದೆ. ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿರುವ ಈ ಮಹಿಳೆಯ ಪತಿ ಸುಜನ್ ಮಾಝಿ ಅವರು, ಚಕ್ಕರ್‌ಪುರ ಪೊಲೀಸರನ್ನು ಸಂಪರ್ಕಿಸಿದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಸುಜನ್ ಮಾಝಿ ಅವರ ಕೋರಿಕೆಯ ಮೇರೆಗೆ, ಪೊಲೀಸರು, ಆರೋಗ್ಯ ಅಧಿಕಾರಿಗಳು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸದಸ್ಯರ ತಂಡ ಮಂಗಳವಾರ ನಿವಾಸಕ್ಕೆ ತಲುಪಿ, ಮುಖ್ಯ ಬಾಗಿಲು ಮುರಿದು ಮುನ್ಮುನ್ ಮಾಝಿ ಮತ್ತು ಆಕೆಯ 10 ವರ್ಷದ ಮಗನನ್ನು ರಕ್ಷಿಸಿದ್ದಾರೆ. ಇನ್ನು ಮನೆಯೊಳಗಿನ ಕಸದ ರಾಶಿಯೇ ತುಂಬಿದೆ. ಬಟ್ಟೆ, ಕೂದಲು, ಕಸ, ಮಣ್ಣು ಮತ್ತು ದಿನಸಿಗಳು ಸುತ್ತಲೂ ಹರಡಿಕೊಂಡಿವೆ.

qbfanc1

ಮುನ್ಮುನ್ ಮಾಝಿ ಅವರು, ಮನೆಯಲ್ಲಿಯೇ ಮಗುವಿನ ಮತ್ತು ಅವಳ ಕೂದಲನ್ನು ಕತ್ತರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇದೇ ವೇಳೆ ಮನೆಯಲ್ಲಿ ಗ್ಯಾಸ್ ಸ್ಟೌ ಬದಲು ಇಂಡಕ್ಷನ್ ಮೂಲಕ ಅಡುಗೆ ಮಾಡಲಾಗಿತ್ತು. ಮೂರು ವರ್ಷಗಳಿಂದ ಮನೆಯಲ್ಲಿದ್ದ ಕಸವನ್ನು ಕೂಡ ಹೊರಗೆ ಹಾಕಿರಲಿಲ್ಲ, ಈ ವೇಳೆ ಮನೆಗೆ ಯಾರೂ ಭೇಟಿ ನೀಡಿರಲಿಲ್ಲ. ಮಗು ಮನೆಯ ಗೋಡೆಗಳ ಮೇಲೆ ಪೇಂಟಿಂಗ್ ಮಾಡುತ್ತಿತ್ತು ಮತ್ತು ಪೆನ್ಸಿಲ್‌ನಿಂದ ಮಾತ್ರ ಅಧ್ಯಯನ ಮಾಡುತ್ತಿತ್ತು. ಆಘಾತಕಾರಿ ಸಂಗತಿಯೆಂದರೆ, ಮಹಿಳೆಯ ಮಗ ಕಳೆದ ಮೂರು ವರ್ಷಗಳಿಂದ ಸೂರ್ಯನನ್ನೇ ನೋಡಿರಲಿಲ್ಲ.

ಇದನ್ನೂ ಓದಿ: ಕೋವಿಡ್ ಸಂಬಂಧಿತ ನಿರ್ಬಂಧ ಹೇರುವ ಯೋಜನೆ ಇಲ್ಲ: ಕೇಂದ್ರ ಸರ್ಕಾರ

ಇಷ್ಟು ದಿನಗಳ ಕಾಲ ತಾಯಿ ಮಗ ಮನೆಯೊಳಗೆ ಬೀಗ ಹಾಕಿಕೊಂಡು ವಾಸಿಸುತ್ತಿರುವ ಬಗ್ಗೆ ಅಕ್ಕಪಕ್ಕದವರಿಗೆ ಸುಳಿವು ಸಿಕ್ಕಿರಲಿಲ್ಲ.

ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ”ಕೋವಿಡ್ -19 ಕಾರಣದಿಂದಾಗಿ ಮಹಿಳೆ ಭಯಭೀತರಾಗಿದ್ದರು ಮತ್ತು ಮನೆಯಿಂದ ಹೊರಗೆ ಕಾಲಿಟ್ಟರೆ ಮಗ ಸಾಯುತ್ತಾನೆಂದು ನಂಬಿದ್ದರು” ಎಂದು ಅವರು ತಿಳಿಸಿದ್ದಾರೆ.

2020ರಲ್ಲಿ ಮೊದಲ ಲಾಕ್‌ಡೌನ್ ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಕಚೇರಿಗಾಗಿ ಮಹಿಳೆಯ ಪತಿ ಮನೆಯಿಂದ ಹೊರಬಂದಿದ್ದರು. ಹಾಗಾಗಿ ಆ ಮಹಿಳೆ ತನ್ನ ಪತಿಯನ್ನು ಸಹ ಮನೆಯೊಳಗೆ ಬಿಟ್ಟುಕೊಳ್ಳದೇ ತನ್ನ ಮಗನೊಂದಿಗಿನ ಮೂರು ವರ್ಷಗಳ ಬಂಧನದಲ್ಲಿದ್ದರು.

ಮುನ್ಮುನ್ ಮಾಝಿ ಅವರು, ವೀಡಿಯೊ ಕರೆಗಳ ಮೂಲಕ ತಮ್ಮ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದರು. ಅದು ಬಿಟ್ಟರೆ ಮನೆಯವರೊಂದಿಗಾಗಲಿ ಹೊರ ಜಗತ್ತಿನ ಯಾರೊಂದಿಗೂ ಆಕೆ ಸಂಪರ್ಕದಲ್ಲಿರಲಿಲ್ಲ. ಇನ್ನು, ಮನೆಯ ಮಾಸಿಕ ಬಾಡಿಗೆ ಕಟ್ಟುವುದು, ವಿದ್ಯುತ್ ಬಿಲ್ ಕಟ್ಟುವುದು, ಮಗನ ಶಾಲಾ ಶುಲ್ಕ ಕಟ್ಟುವುದು, ದಿನಸಿ ಸಾಮಾನು, ತರಕಾರಿ ಕೊಂಡುಕೊಳ್ಳುವುದು, ಪಡಿತರ ಚೀಲಗಳನ್ನು ಮುಖ್ಯ ಬಾಗಿಲಿನ ಹೊರಗೆ ಇಡುತ್ತಿದ್ದರು.

ಇದೀಗ ಆ ತಾಯಿ ಮಗನ ರಕ್ಷಣೆ ಮಾಡಲಾಗಿದ್ದು, ಇಬ್ಬರನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...