Homeಮುಖಪುಟಕೋವಿಡ್‌ನಿಂದ ಪಾರಾಗಲು 3 ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿದ್ದ ಮಹಿಳೆ!

ಕೋವಿಡ್‌ನಿಂದ ಪಾರಾಗಲು 3 ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿದ್ದ ಮಹಿಳೆ!

- Advertisement -
- Advertisement -

ಮಹಿಳೆಯೊಬ್ಬಳು ಕೋವಿಡ್-19 ಸೋಂಕಿಗೆ ಒಳಗಾಗುವ ತೀವ್ರ ಭಯದಿಂದ ಮೂರು ವ‍ರ್ಷಗಳ ಕಾಲ ತನ್ನನ್ನು ಮತ್ತು ತನ್ನ ಅಪ್ರಾಪ್ತ ಮಗನನ್ನು ಮನೆಯೊಳಗೆ ಬೀಗ ಹಾಕಿಕೊಂಡು ಗೃಹಬಂಧನದಲ್ಲಿದ್ದರು. ಅವರನ್ನು ಈಗ ರಕ್ಷಣೆ ಮಾಡಲಾಗಿದ್ದು, ಈ ಘಟನೆ ಗುರುಗ್ರಾಮ್‌ನ ಚಕ್ಕರ್‌ಪುರದಲ್ಲಿ ನಡೆದಿದೆ. ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿರುವ ಈ ಮಹಿಳೆಯ ಪತಿ ಸುಜನ್ ಮಾಝಿ ಅವರು, ಚಕ್ಕರ್‌ಪುರ ಪೊಲೀಸರನ್ನು ಸಂಪರ್ಕಿಸಿದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಸುಜನ್ ಮಾಝಿ ಅವರ ಕೋರಿಕೆಯ ಮೇರೆಗೆ, ಪೊಲೀಸರು, ಆರೋಗ್ಯ ಅಧಿಕಾರಿಗಳು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸದಸ್ಯರ ತಂಡ ಮಂಗಳವಾರ ನಿವಾಸಕ್ಕೆ ತಲುಪಿ, ಮುಖ್ಯ ಬಾಗಿಲು ಮುರಿದು ಮುನ್ಮುನ್ ಮಾಝಿ ಮತ್ತು ಆಕೆಯ 10 ವರ್ಷದ ಮಗನನ್ನು ರಕ್ಷಿಸಿದ್ದಾರೆ. ಇನ್ನು ಮನೆಯೊಳಗಿನ ಕಸದ ರಾಶಿಯೇ ತುಂಬಿದೆ. ಬಟ್ಟೆ, ಕೂದಲು, ಕಸ, ಮಣ್ಣು ಮತ್ತು ದಿನಸಿಗಳು ಸುತ್ತಲೂ ಹರಡಿಕೊಂಡಿವೆ.

qbfanc1

ಮುನ್ಮುನ್ ಮಾಝಿ ಅವರು, ಮನೆಯಲ್ಲಿಯೇ ಮಗುವಿನ ಮತ್ತು ಅವಳ ಕೂದಲನ್ನು ಕತ್ತರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇದೇ ವೇಳೆ ಮನೆಯಲ್ಲಿ ಗ್ಯಾಸ್ ಸ್ಟೌ ಬದಲು ಇಂಡಕ್ಷನ್ ಮೂಲಕ ಅಡುಗೆ ಮಾಡಲಾಗಿತ್ತು. ಮೂರು ವರ್ಷಗಳಿಂದ ಮನೆಯಲ್ಲಿದ್ದ ಕಸವನ್ನು ಕೂಡ ಹೊರಗೆ ಹಾಕಿರಲಿಲ್ಲ, ಈ ವೇಳೆ ಮನೆಗೆ ಯಾರೂ ಭೇಟಿ ನೀಡಿರಲಿಲ್ಲ. ಮಗು ಮನೆಯ ಗೋಡೆಗಳ ಮೇಲೆ ಪೇಂಟಿಂಗ್ ಮಾಡುತ್ತಿತ್ತು ಮತ್ತು ಪೆನ್ಸಿಲ್‌ನಿಂದ ಮಾತ್ರ ಅಧ್ಯಯನ ಮಾಡುತ್ತಿತ್ತು. ಆಘಾತಕಾರಿ ಸಂಗತಿಯೆಂದರೆ, ಮಹಿಳೆಯ ಮಗ ಕಳೆದ ಮೂರು ವರ್ಷಗಳಿಂದ ಸೂರ್ಯನನ್ನೇ ನೋಡಿರಲಿಲ್ಲ.

ಇದನ್ನೂ ಓದಿ: ಕೋವಿಡ್ ಸಂಬಂಧಿತ ನಿರ್ಬಂಧ ಹೇರುವ ಯೋಜನೆ ಇಲ್ಲ: ಕೇಂದ್ರ ಸರ್ಕಾರ

ಇಷ್ಟು ದಿನಗಳ ಕಾಲ ತಾಯಿ ಮಗ ಮನೆಯೊಳಗೆ ಬೀಗ ಹಾಕಿಕೊಂಡು ವಾಸಿಸುತ್ತಿರುವ ಬಗ್ಗೆ ಅಕ್ಕಪಕ್ಕದವರಿಗೆ ಸುಳಿವು ಸಿಕ್ಕಿರಲಿಲ್ಲ.

ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ”ಕೋವಿಡ್ -19 ಕಾರಣದಿಂದಾಗಿ ಮಹಿಳೆ ಭಯಭೀತರಾಗಿದ್ದರು ಮತ್ತು ಮನೆಯಿಂದ ಹೊರಗೆ ಕಾಲಿಟ್ಟರೆ ಮಗ ಸಾಯುತ್ತಾನೆಂದು ನಂಬಿದ್ದರು” ಎಂದು ಅವರು ತಿಳಿಸಿದ್ದಾರೆ.

2020ರಲ್ಲಿ ಮೊದಲ ಲಾಕ್‌ಡೌನ್ ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಕಚೇರಿಗಾಗಿ ಮಹಿಳೆಯ ಪತಿ ಮನೆಯಿಂದ ಹೊರಬಂದಿದ್ದರು. ಹಾಗಾಗಿ ಆ ಮಹಿಳೆ ತನ್ನ ಪತಿಯನ್ನು ಸಹ ಮನೆಯೊಳಗೆ ಬಿಟ್ಟುಕೊಳ್ಳದೇ ತನ್ನ ಮಗನೊಂದಿಗಿನ ಮೂರು ವರ್ಷಗಳ ಬಂಧನದಲ್ಲಿದ್ದರು.

ಮುನ್ಮುನ್ ಮಾಝಿ ಅವರು, ವೀಡಿಯೊ ಕರೆಗಳ ಮೂಲಕ ತಮ್ಮ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದರು. ಅದು ಬಿಟ್ಟರೆ ಮನೆಯವರೊಂದಿಗಾಗಲಿ ಹೊರ ಜಗತ್ತಿನ ಯಾರೊಂದಿಗೂ ಆಕೆ ಸಂಪರ್ಕದಲ್ಲಿರಲಿಲ್ಲ. ಇನ್ನು, ಮನೆಯ ಮಾಸಿಕ ಬಾಡಿಗೆ ಕಟ್ಟುವುದು, ವಿದ್ಯುತ್ ಬಿಲ್ ಕಟ್ಟುವುದು, ಮಗನ ಶಾಲಾ ಶುಲ್ಕ ಕಟ್ಟುವುದು, ದಿನಸಿ ಸಾಮಾನು, ತರಕಾರಿ ಕೊಂಡುಕೊಳ್ಳುವುದು, ಪಡಿತರ ಚೀಲಗಳನ್ನು ಮುಖ್ಯ ಬಾಗಿಲಿನ ಹೊರಗೆ ಇಡುತ್ತಿದ್ದರು.

ಇದೀಗ ಆ ತಾಯಿ ಮಗನ ರಕ್ಷಣೆ ಮಾಡಲಾಗಿದ್ದು, ಇಬ್ಬರನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...