Homeಕರ್ನಾಟಕತೇಜಸ್ವಿ ಸೂರ್ಯ ವಿರುದ್ಧ ಪ್ರತಾಪ್ ಸಿಂಹನಿಗೆ ದೂರಿದ ನೊಂದ ಮಹಿಳೆ?

ತೇಜಸ್ವಿ ಸೂರ್ಯ ವಿರುದ್ಧ ಪ್ರತಾಪ್ ಸಿಂಹನಿಗೆ ದೂರಿದ ನೊಂದ ಮಹಿಳೆ?

- Advertisement -
- Advertisement -

ಪಾರ್ಲಿಮೆಂಟ್ ಅಭ್ಯರ್ಥಿಯ ಅರ್ಹತೆಯ ಬಗ್ಗೆ ಗಂಭೀರ ಪ್ರಶ್ನೆಗಳು

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಅರ್ಹತೆಯ ಬಗ್ಗೆ ಬಹಳ ಗಂಭೀರ ಪ್ರಶ್ನೆಗಳು ಎದ್ದಿವೆ. ಈ ಪ್ರಶ್ನೆಗಳು ಏಳುತ್ತಿರುವುದು ಜನಸಾಮಾನ್ಯರಲ್ಲಿ ಮಾತ್ರವಲ್ಲಾ, ಬಿಜೆಪಿಯೊಳಗೇ ದಿಗಿಲು ಉಂಟಾಗಿದೆ. ಒಂದು ವೇಳೆ ಆತನಿಗೆ ಸಂಬಂಧಿಸಿದ ಎಲ್ಲಾ ಸಂಗತಿಗಳೂ ಹೊರಗೆ ಬಿದ್ದರೆ ಅದು ಪಕ್ಷಕ್ಕೆ ಬಹಳ ಕೆಟ್ಟ ಹೆಸರು ತರುತ್ತದೆ ಎಂಬುದೇ ಅವರ ಆತಂಕಕ್ಕೆ ಕಾರಣ. ಇದು ತೇಜಸ್ವಿಗೂ ಗೊತ್ತಿರುವುದರಿಂದಲೇ, ಮೊದಲ ಸುದ್ದಿ ಹೊರಗೆ ಬಂದ 2ನೇ ದಿನಕ್ಕೇ ಕೋರ್ಟಿನಿಂದ ತಡೆ ತಂದದ್ದು. ಅಷ್ಟೇ ಅಲ್ಲ, ನಾನು ಪುರಾವೆಗಳ ಸಮೇತ ಈತನ ಚಾರಿತ್ರ್ಯ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಮಹಿಳೆ, ನಂತರ ಆ ಟ್ವೀಟ್‍ಗಳನ್ನು ಅಳಿಸಿ ಹಾಕಿದರು.

ತರುವಾಯ, ಇದನ್ನು ಯಾರೂ ಮುಂದುವರೆಸಬೇಡಿ ಎಂದು ಮನವಿ ಮಾಡಿದರು. ಆ ನಂತರ ಟ್ವಿಟ್ಟರ್‍ನಿಂದಲೇ ಹೊರಗೆ ಹೋದರು. ಇದು ಆ ಮಹಿಳೆಯ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ ಎನ್ನುವುದನ್ನಷ್ಟೇ ಅಲ್ಲದೇ, ಸ್ವತಃ ತೇಜಸ್ವಿ ಸೂರ್ಯ ಬಹಳ ಬೆದರಿರಬೇಕು ಎಂಬುದನ್ನೇ ತೋರುತ್ತದೆ. ಈ ಹಿಂದೆ ಗೌರಿ ಲಂಕೇಶರ ಹತ್ಯೆ ಆದಾಗ, ಬಿಜೆಪಿಯಲ್ಲಿ ಬಹುತೇಕರು ಖಂಡನೆ ಹೇಳಿಕೆ ನೀಡಿ ಸುಮ್ಮನಾದರು. ಆದರೆ, ಕೆಲವರಷ್ಟೇ ಅದನ್ನು ಪರೋಕ್ಷವಾಗಿ ಸಮರ್ಥಿಸುವ ಹೀನ ಮನಸ್ಸನ್ನು ತೋರ್ಪಡಿಸಿದರು. ಅಂತಹವರಲ್ಲಿ ತೇಜಸ್ವಿ ಮುಂಚೂಣಿಯಲ್ಲಿದ್ದರು. 26 ವರ್ಷ (ಆಗ) ವಯಸ್ಸಿನ ಒಬ್ಬ ವಕೀಲನಲ್ಲಿ ಇಂತಹ ದುಷ್ಟ ಮನಸ್ಸಿದೆಯಲ್ಲಾ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದರು. ಆದರೆ, ಆತನನ್ನು ಹತ್ತಿರದಿಂದ ಬಲ್ಲವರಿಗೆ ಇದೇನೂ ವಿಶೇಷ ಎನಿಸಿರಲಿಲ್ಲ. ಇದೀಗ ತೇಜಸ್ವಿ ತನಗೆ ಕೈ ಕೊಟ್ಟಿದ್ದು ಮಾತ್ರವಲ್ಲಾ, ‘ಇದು ಮೊದಲ ಪ್ರಕರಣವೂ ಅಲ್ಲ, ಕೊನೆಯ ಪ್ರಕರಣವೂ ಅಲ್ಲ’ ಎಂದು ಆ ಮಹಿಳೆ ಹೇಳಿದ್ದರು. ನಂತರದಲ್ಲಿ ಮಹಿಳೆಯರಿಗೆ ಹಿಂಸೆ ಕೊಡುವುದು, ಬಡಿಯುವುದು, ಅಸಭ್ಯವಾಗಿ ವರ್ತಿಸುವ ವ್ಯಕ್ತಿ ಈತ ಎಂಬ ವಿಚಾರ ಹೊರಗೆ ಬಂದಿತು. ಬಿಜೆಪಿಯ ವರ್ತುಲದಲ್ಲೇ ಓಡಾಡಿದ ಇನ್ನೊಂದು ವಿಚಾರದಲ್ಲಿ ಇಂಗ್ಲಿಷ್ ಚಾನೆಲ್ಲೊಂದರ ವರದಿಗಾರ್ತಿಯು ಅನುಭವಿಸಿದ ಕಿರುಕುಳದ ವಿಚಾರವೂ ಇತ್ತು.

ಇದರ ಕುರಿತು ಆಗಲೇ ಅದನ್ನು ನಮ್ಮಲ್ಲಿ ಸುದ್ದಿ ಮಾಡಿದ್ದರೂ, ಸ್ಕ್ರೀನ್‍ಷಾಟ್‍ಗಳನ್ನು ಹಾಕಿರಲಿಲ್ಲ. ಆದರೆ, ಇದೀಗ ನಮಗೆ ಲಭ್ಯವಾದ ಹಲವಾರು ಸ್ಕ್ರೀನ್‍ಷಾಟ್‍ಗಳಲ್ಲಿ ಒಂದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಅಮೆರಿಕದಲ್ಲಿ ನೆಲೆಸಿರುವ ಮಹಿಳೆಯೊಬ್ಬರು ತೇಜಸ್ವಿಯ ಕಿರುಕುಳವನ್ನು ತಾಳದೇ ಪ್ರತಾಪ್‍ಸಿಂಹರಲ್ಲಿ ದೂರಿದ್ದಾರೆ. ಬೆಂಗಳೂರು ಬಿಟ್ಟು ಸ್ವಲ್ಪ ಹೊರಗೆ ಬಂದುಬಿಡಬೇಕು ಎನಿಸಿದೆ ಎಂತಲೂ ಹೇಳುತ್ತಾರೆ. ನಿನ್ನ ಬಗ್ಗೆ ನನಗೆ ಕಾಳಜಿ ಇದೆ. ಆದರೆ ನಾನೇನು ಮಾಡಬೇಕೆಂದು ಗೊತ್ತಾಗುತ್ತಿಲ್ಲವೆಂದು ಹೇಳುವ ಸಿಂಹ ಕೈತೊಳೆದುಕೊಳ್ಳುವ ಪ್ರಯತ್ನ ನಡೆಸುತ್ತಾರೆ. ನಂತರ ಆತನ ಜೊತೆಗೆ ತಾನು ಮಾತಾಡಿದ್ದಾಗಿಯೂ, ತೇಜಸ್ವಿಯ ಹತ್ತಿರ ಈ ವಿಚಾರವನ್ನು ತಾನೇನೂ ಪ್ರಸ್ತಾಪಿಸಿಲ್ಲ, ಆತ ಚೆನ್ನಾಗಿದ್ದಾನೆ, ನೀನೂ ಚೆನ್ನಾಗಿದ್ದುಬಿಡು ಹೇಳುವ ಒಂದು ವಾಟ್ಸಾಪ್ ಚಾಟ್ ಸ್ಕ್ರೀನ್‍ಷಾಟ್‍ನಿಂದ ಆರಂಭವಾಗುವ ಈ ಸರಣಿಯಲ್ಲಿ ಹಲವಾರು ಅಂಶಗಳು ಒಂದೊಂದಾಗಿ ತೆರೆದುಕೊಳ್ಳುತ್ತವೆ.

ಪ್ರತಾಪ್ ಸಿಂಹನ ಬಳಿ ಅಳಲು ತೋಡಿಕೊಂಡಿರುವ ಸಂತ್ರಸ್ತೆ

ತಾವೇ ಬಹಿರಂಗಗೊಳಿಸಲಿಚ್ಛಿಸದ ನೊಂದವರ ಐಡೆಂಟಿಟಿಗಳನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬಯಲುಗೊಳಿಸುವ ಸುದ್ದಿಗಳನ್ನು ಸುದ್ದಿಯ ‘ರೋಚಕತೆ’ಯ ಕಾರಣಕ್ಕೆ ಮಾಡುತ್ತಾ ಹೋಗದೆ, ಕೆಲವು ಪ್ರಶ್ನೆಗಳನ್ನು ಮುಂದಿಡುತ್ತಿದ್ದೇವೆ. ಕೇವಲ 28 ವರ್ಷ ವಯಸ್ಸಿನ ಈ ವ್ಯಕ್ತಿಯು ಸಂಸತ್ ಸದಸ್ಯನಾಗುವಷ್ಟು ಅರ್ಹತೆ ಪಡೆದುಕೊಂಡಿದ್ದಾನೆಂದು ರಾಷ್ಟ್ರೀಯ ಪಕ್ಷವೊಂದು ಭಾವಿಸಿರುವುದಾದರೆ, ಈ ಅವಗುಣಗಳನ್ನು, ಅನರ್ಹತೆಗಳನ್ನು ಅವರು ಗಮನಕ್ಕೆ ತೆಗೆದುಕೊಂಡಿಲ್ಲವೇ? ಬಿಜೆಪಿ ಸರ್ಕಾರವು ಮುಂದಿಟ್ಟ ಮಹಿಳಾ ಮೀಸಲಾತಿಯ ಪ್ರಸ್ತಾಪಕ್ಕೆ ಅಷ್ಟೇ ತೇಜಸ್ವಿಯ ವಿರೋಧವಿರಲಿಲ್ಲ; ಮಹಿಳೆಯರ ಬಗ್ಗೆ ಬಹಳ ಕೀಳು ಮಟ್ಟದ ಮನಸ್ಥಿತಿಯನ್ನು ಈತ ಹೊಂದಿರುವುದಕ್ಕೆ ಹಲವು ಪುರಾವೆಗಳು ಹೊರಬೀಳುತ್ತಿವೆ. ಇದು ಬಿಜೆಪಿ ಪಕ್ಷದ ನೀತಿಯಾ? ಇಂತಹ ವ್ಯಕ್ತಿಯು ದೇಶಕ್ಕೇ ಅನ್ವಯಿಸುವ ಕಾನೂನುಗಳನ್ನು ರೂಪಿಸುವ ಸಂಸತ್‍ನಲ್ಲಿ ಇರುವುದಕ್ಕೆ ಎಷ್ಟರ ಮಟ್ಟಿಗೆ ಅರ್ಹ? ಈ ಎಲ್ಲಾ ಸುದ್ದಿಗಳು ಒಂದೊಂದಾಗಿ ಹೊರಗೆ ಬರುತ್ತಿರುವುದು ಬಿಜೆಪಿಯ ವಲಯದಿಂದಲೇ ಆಗಿದೆ. ಹಾಗಿದ್ದ ಮೇಲೆ ಬಿಜೆಪಿಯ ಇತರ ‘ಸಭ್ಯರು’ ಇದನ್ನು ಬಹಿರಂಗಗೊಳಿಸದೇ ಪಕ್ಷ ನಿಷ್ಠೆಯ ಹೆಸರಿನಲ್ಲಿ, ಅಪಾಯಕಾರಿ ವ್ಯಕ್ತಿಯು ಪಕ್ಷದ ಪ್ರತಿನಿಧಿಯಾಗಿ ಆರಿಸಿ ಹೋದರೆ ಪರವಾಗಿಲ್ಲವೆಂದು ಭಾವಿಸಿದ್ದಾರೆಯೇ? ಸ್ವತಃ ತೇಜಸ್ವಿ ಸೂರ್ಯ ತನ್ನ ಆತ್ಮವಿಮರ್ಶೆಯನ್ನು, ಪಶ್ಚಾತ್ತಾಪವನ್ನು ಮುಂದಿಡಲು ಇದು ಸುಸಮಯ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...