Homeಕರ್ನಾಟಕತೇಜಸ್ವಿ ಸೂರ್ಯ ವಿರುದ್ಧ ಪ್ರತಾಪ್ ಸಿಂಹನಿಗೆ ದೂರಿದ ನೊಂದ ಮಹಿಳೆ?

ತೇಜಸ್ವಿ ಸೂರ್ಯ ವಿರುದ್ಧ ಪ್ರತಾಪ್ ಸಿಂಹನಿಗೆ ದೂರಿದ ನೊಂದ ಮಹಿಳೆ?

- Advertisement -
- Advertisement -

ಪಾರ್ಲಿಮೆಂಟ್ ಅಭ್ಯರ್ಥಿಯ ಅರ್ಹತೆಯ ಬಗ್ಗೆ ಗಂಭೀರ ಪ್ರಶ್ನೆಗಳು

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಅರ್ಹತೆಯ ಬಗ್ಗೆ ಬಹಳ ಗಂಭೀರ ಪ್ರಶ್ನೆಗಳು ಎದ್ದಿವೆ. ಈ ಪ್ರಶ್ನೆಗಳು ಏಳುತ್ತಿರುವುದು ಜನಸಾಮಾನ್ಯರಲ್ಲಿ ಮಾತ್ರವಲ್ಲಾ, ಬಿಜೆಪಿಯೊಳಗೇ ದಿಗಿಲು ಉಂಟಾಗಿದೆ. ಒಂದು ವೇಳೆ ಆತನಿಗೆ ಸಂಬಂಧಿಸಿದ ಎಲ್ಲಾ ಸಂಗತಿಗಳೂ ಹೊರಗೆ ಬಿದ್ದರೆ ಅದು ಪಕ್ಷಕ್ಕೆ ಬಹಳ ಕೆಟ್ಟ ಹೆಸರು ತರುತ್ತದೆ ಎಂಬುದೇ ಅವರ ಆತಂಕಕ್ಕೆ ಕಾರಣ. ಇದು ತೇಜಸ್ವಿಗೂ ಗೊತ್ತಿರುವುದರಿಂದಲೇ, ಮೊದಲ ಸುದ್ದಿ ಹೊರಗೆ ಬಂದ 2ನೇ ದಿನಕ್ಕೇ ಕೋರ್ಟಿನಿಂದ ತಡೆ ತಂದದ್ದು. ಅಷ್ಟೇ ಅಲ್ಲ, ನಾನು ಪುರಾವೆಗಳ ಸಮೇತ ಈತನ ಚಾರಿತ್ರ್ಯ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಮಹಿಳೆ, ನಂತರ ಆ ಟ್ವೀಟ್‍ಗಳನ್ನು ಅಳಿಸಿ ಹಾಕಿದರು.

ತರುವಾಯ, ಇದನ್ನು ಯಾರೂ ಮುಂದುವರೆಸಬೇಡಿ ಎಂದು ಮನವಿ ಮಾಡಿದರು. ಆ ನಂತರ ಟ್ವಿಟ್ಟರ್‍ನಿಂದಲೇ ಹೊರಗೆ ಹೋದರು. ಇದು ಆ ಮಹಿಳೆಯ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ ಎನ್ನುವುದನ್ನಷ್ಟೇ ಅಲ್ಲದೇ, ಸ್ವತಃ ತೇಜಸ್ವಿ ಸೂರ್ಯ ಬಹಳ ಬೆದರಿರಬೇಕು ಎಂಬುದನ್ನೇ ತೋರುತ್ತದೆ. ಈ ಹಿಂದೆ ಗೌರಿ ಲಂಕೇಶರ ಹತ್ಯೆ ಆದಾಗ, ಬಿಜೆಪಿಯಲ್ಲಿ ಬಹುತೇಕರು ಖಂಡನೆ ಹೇಳಿಕೆ ನೀಡಿ ಸುಮ್ಮನಾದರು. ಆದರೆ, ಕೆಲವರಷ್ಟೇ ಅದನ್ನು ಪರೋಕ್ಷವಾಗಿ ಸಮರ್ಥಿಸುವ ಹೀನ ಮನಸ್ಸನ್ನು ತೋರ್ಪಡಿಸಿದರು. ಅಂತಹವರಲ್ಲಿ ತೇಜಸ್ವಿ ಮುಂಚೂಣಿಯಲ್ಲಿದ್ದರು. 26 ವರ್ಷ (ಆಗ) ವಯಸ್ಸಿನ ಒಬ್ಬ ವಕೀಲನಲ್ಲಿ ಇಂತಹ ದುಷ್ಟ ಮನಸ್ಸಿದೆಯಲ್ಲಾ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದರು. ಆದರೆ, ಆತನನ್ನು ಹತ್ತಿರದಿಂದ ಬಲ್ಲವರಿಗೆ ಇದೇನೂ ವಿಶೇಷ ಎನಿಸಿರಲಿಲ್ಲ. ಇದೀಗ ತೇಜಸ್ವಿ ತನಗೆ ಕೈ ಕೊಟ್ಟಿದ್ದು ಮಾತ್ರವಲ್ಲಾ, ‘ಇದು ಮೊದಲ ಪ್ರಕರಣವೂ ಅಲ್ಲ, ಕೊನೆಯ ಪ್ರಕರಣವೂ ಅಲ್ಲ’ ಎಂದು ಆ ಮಹಿಳೆ ಹೇಳಿದ್ದರು. ನಂತರದಲ್ಲಿ ಮಹಿಳೆಯರಿಗೆ ಹಿಂಸೆ ಕೊಡುವುದು, ಬಡಿಯುವುದು, ಅಸಭ್ಯವಾಗಿ ವರ್ತಿಸುವ ವ್ಯಕ್ತಿ ಈತ ಎಂಬ ವಿಚಾರ ಹೊರಗೆ ಬಂದಿತು. ಬಿಜೆಪಿಯ ವರ್ತುಲದಲ್ಲೇ ಓಡಾಡಿದ ಇನ್ನೊಂದು ವಿಚಾರದಲ್ಲಿ ಇಂಗ್ಲಿಷ್ ಚಾನೆಲ್ಲೊಂದರ ವರದಿಗಾರ್ತಿಯು ಅನುಭವಿಸಿದ ಕಿರುಕುಳದ ವಿಚಾರವೂ ಇತ್ತು.

ಇದರ ಕುರಿತು ಆಗಲೇ ಅದನ್ನು ನಮ್ಮಲ್ಲಿ ಸುದ್ದಿ ಮಾಡಿದ್ದರೂ, ಸ್ಕ್ರೀನ್‍ಷಾಟ್‍ಗಳನ್ನು ಹಾಕಿರಲಿಲ್ಲ. ಆದರೆ, ಇದೀಗ ನಮಗೆ ಲಭ್ಯವಾದ ಹಲವಾರು ಸ್ಕ್ರೀನ್‍ಷಾಟ್‍ಗಳಲ್ಲಿ ಒಂದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಅಮೆರಿಕದಲ್ಲಿ ನೆಲೆಸಿರುವ ಮಹಿಳೆಯೊಬ್ಬರು ತೇಜಸ್ವಿಯ ಕಿರುಕುಳವನ್ನು ತಾಳದೇ ಪ್ರತಾಪ್‍ಸಿಂಹರಲ್ಲಿ ದೂರಿದ್ದಾರೆ. ಬೆಂಗಳೂರು ಬಿಟ್ಟು ಸ್ವಲ್ಪ ಹೊರಗೆ ಬಂದುಬಿಡಬೇಕು ಎನಿಸಿದೆ ಎಂತಲೂ ಹೇಳುತ್ತಾರೆ. ನಿನ್ನ ಬಗ್ಗೆ ನನಗೆ ಕಾಳಜಿ ಇದೆ. ಆದರೆ ನಾನೇನು ಮಾಡಬೇಕೆಂದು ಗೊತ್ತಾಗುತ್ತಿಲ್ಲವೆಂದು ಹೇಳುವ ಸಿಂಹ ಕೈತೊಳೆದುಕೊಳ್ಳುವ ಪ್ರಯತ್ನ ನಡೆಸುತ್ತಾರೆ. ನಂತರ ಆತನ ಜೊತೆಗೆ ತಾನು ಮಾತಾಡಿದ್ದಾಗಿಯೂ, ತೇಜಸ್ವಿಯ ಹತ್ತಿರ ಈ ವಿಚಾರವನ್ನು ತಾನೇನೂ ಪ್ರಸ್ತಾಪಿಸಿಲ್ಲ, ಆತ ಚೆನ್ನಾಗಿದ್ದಾನೆ, ನೀನೂ ಚೆನ್ನಾಗಿದ್ದುಬಿಡು ಹೇಳುವ ಒಂದು ವಾಟ್ಸಾಪ್ ಚಾಟ್ ಸ್ಕ್ರೀನ್‍ಷಾಟ್‍ನಿಂದ ಆರಂಭವಾಗುವ ಈ ಸರಣಿಯಲ್ಲಿ ಹಲವಾರು ಅಂಶಗಳು ಒಂದೊಂದಾಗಿ ತೆರೆದುಕೊಳ್ಳುತ್ತವೆ.

ಪ್ರತಾಪ್ ಸಿಂಹನ ಬಳಿ ಅಳಲು ತೋಡಿಕೊಂಡಿರುವ ಸಂತ್ರಸ್ತೆ

ತಾವೇ ಬಹಿರಂಗಗೊಳಿಸಲಿಚ್ಛಿಸದ ನೊಂದವರ ಐಡೆಂಟಿಟಿಗಳನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬಯಲುಗೊಳಿಸುವ ಸುದ್ದಿಗಳನ್ನು ಸುದ್ದಿಯ ‘ರೋಚಕತೆ’ಯ ಕಾರಣಕ್ಕೆ ಮಾಡುತ್ತಾ ಹೋಗದೆ, ಕೆಲವು ಪ್ರಶ್ನೆಗಳನ್ನು ಮುಂದಿಡುತ್ತಿದ್ದೇವೆ. ಕೇವಲ 28 ವರ್ಷ ವಯಸ್ಸಿನ ಈ ವ್ಯಕ್ತಿಯು ಸಂಸತ್ ಸದಸ್ಯನಾಗುವಷ್ಟು ಅರ್ಹತೆ ಪಡೆದುಕೊಂಡಿದ್ದಾನೆಂದು ರಾಷ್ಟ್ರೀಯ ಪಕ್ಷವೊಂದು ಭಾವಿಸಿರುವುದಾದರೆ, ಈ ಅವಗುಣಗಳನ್ನು, ಅನರ್ಹತೆಗಳನ್ನು ಅವರು ಗಮನಕ್ಕೆ ತೆಗೆದುಕೊಂಡಿಲ್ಲವೇ? ಬಿಜೆಪಿ ಸರ್ಕಾರವು ಮುಂದಿಟ್ಟ ಮಹಿಳಾ ಮೀಸಲಾತಿಯ ಪ್ರಸ್ತಾಪಕ್ಕೆ ಅಷ್ಟೇ ತೇಜಸ್ವಿಯ ವಿರೋಧವಿರಲಿಲ್ಲ; ಮಹಿಳೆಯರ ಬಗ್ಗೆ ಬಹಳ ಕೀಳು ಮಟ್ಟದ ಮನಸ್ಥಿತಿಯನ್ನು ಈತ ಹೊಂದಿರುವುದಕ್ಕೆ ಹಲವು ಪುರಾವೆಗಳು ಹೊರಬೀಳುತ್ತಿವೆ. ಇದು ಬಿಜೆಪಿ ಪಕ್ಷದ ನೀತಿಯಾ? ಇಂತಹ ವ್ಯಕ್ತಿಯು ದೇಶಕ್ಕೇ ಅನ್ವಯಿಸುವ ಕಾನೂನುಗಳನ್ನು ರೂಪಿಸುವ ಸಂಸತ್‍ನಲ್ಲಿ ಇರುವುದಕ್ಕೆ ಎಷ್ಟರ ಮಟ್ಟಿಗೆ ಅರ್ಹ? ಈ ಎಲ್ಲಾ ಸುದ್ದಿಗಳು ಒಂದೊಂದಾಗಿ ಹೊರಗೆ ಬರುತ್ತಿರುವುದು ಬಿಜೆಪಿಯ ವಲಯದಿಂದಲೇ ಆಗಿದೆ. ಹಾಗಿದ್ದ ಮೇಲೆ ಬಿಜೆಪಿಯ ಇತರ ‘ಸಭ್ಯರು’ ಇದನ್ನು ಬಹಿರಂಗಗೊಳಿಸದೇ ಪಕ್ಷ ನಿಷ್ಠೆಯ ಹೆಸರಿನಲ್ಲಿ, ಅಪಾಯಕಾರಿ ವ್ಯಕ್ತಿಯು ಪಕ್ಷದ ಪ್ರತಿನಿಧಿಯಾಗಿ ಆರಿಸಿ ಹೋದರೆ ಪರವಾಗಿಲ್ಲವೆಂದು ಭಾವಿಸಿದ್ದಾರೆಯೇ? ಸ್ವತಃ ತೇಜಸ್ವಿ ಸೂರ್ಯ ತನ್ನ ಆತ್ಮವಿಮರ್ಶೆಯನ್ನು, ಪಶ್ಚಾತ್ತಾಪವನ್ನು ಮುಂದಿಡಲು ಇದು ಸುಸಮಯ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...