Homeಕರ್ನಾಟಕತೇಜಸ್ವಿ ಸೂರ್ಯ ವಿರುದ್ಧ ಪ್ರತಾಪ್ ಸಿಂಹನಿಗೆ ದೂರಿದ ನೊಂದ ಮಹಿಳೆ?

ತೇಜಸ್ವಿ ಸೂರ್ಯ ವಿರುದ್ಧ ಪ್ರತಾಪ್ ಸಿಂಹನಿಗೆ ದೂರಿದ ನೊಂದ ಮಹಿಳೆ?

- Advertisement -
- Advertisement -

ಪಾರ್ಲಿಮೆಂಟ್ ಅಭ್ಯರ್ಥಿಯ ಅರ್ಹತೆಯ ಬಗ್ಗೆ ಗಂಭೀರ ಪ್ರಶ್ನೆಗಳು

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಅರ್ಹತೆಯ ಬಗ್ಗೆ ಬಹಳ ಗಂಭೀರ ಪ್ರಶ್ನೆಗಳು ಎದ್ದಿವೆ. ಈ ಪ್ರಶ್ನೆಗಳು ಏಳುತ್ತಿರುವುದು ಜನಸಾಮಾನ್ಯರಲ್ಲಿ ಮಾತ್ರವಲ್ಲಾ, ಬಿಜೆಪಿಯೊಳಗೇ ದಿಗಿಲು ಉಂಟಾಗಿದೆ. ಒಂದು ವೇಳೆ ಆತನಿಗೆ ಸಂಬಂಧಿಸಿದ ಎಲ್ಲಾ ಸಂಗತಿಗಳೂ ಹೊರಗೆ ಬಿದ್ದರೆ ಅದು ಪಕ್ಷಕ್ಕೆ ಬಹಳ ಕೆಟ್ಟ ಹೆಸರು ತರುತ್ತದೆ ಎಂಬುದೇ ಅವರ ಆತಂಕಕ್ಕೆ ಕಾರಣ. ಇದು ತೇಜಸ್ವಿಗೂ ಗೊತ್ತಿರುವುದರಿಂದಲೇ, ಮೊದಲ ಸುದ್ದಿ ಹೊರಗೆ ಬಂದ 2ನೇ ದಿನಕ್ಕೇ ಕೋರ್ಟಿನಿಂದ ತಡೆ ತಂದದ್ದು. ಅಷ್ಟೇ ಅಲ್ಲ, ನಾನು ಪುರಾವೆಗಳ ಸಮೇತ ಈತನ ಚಾರಿತ್ರ್ಯ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಮಹಿಳೆ, ನಂತರ ಆ ಟ್ವೀಟ್‍ಗಳನ್ನು ಅಳಿಸಿ ಹಾಕಿದರು.

ತರುವಾಯ, ಇದನ್ನು ಯಾರೂ ಮುಂದುವರೆಸಬೇಡಿ ಎಂದು ಮನವಿ ಮಾಡಿದರು. ಆ ನಂತರ ಟ್ವಿಟ್ಟರ್‍ನಿಂದಲೇ ಹೊರಗೆ ಹೋದರು. ಇದು ಆ ಮಹಿಳೆಯ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ ಎನ್ನುವುದನ್ನಷ್ಟೇ ಅಲ್ಲದೇ, ಸ್ವತಃ ತೇಜಸ್ವಿ ಸೂರ್ಯ ಬಹಳ ಬೆದರಿರಬೇಕು ಎಂಬುದನ್ನೇ ತೋರುತ್ತದೆ. ಈ ಹಿಂದೆ ಗೌರಿ ಲಂಕೇಶರ ಹತ್ಯೆ ಆದಾಗ, ಬಿಜೆಪಿಯಲ್ಲಿ ಬಹುತೇಕರು ಖಂಡನೆ ಹೇಳಿಕೆ ನೀಡಿ ಸುಮ್ಮನಾದರು. ಆದರೆ, ಕೆಲವರಷ್ಟೇ ಅದನ್ನು ಪರೋಕ್ಷವಾಗಿ ಸಮರ್ಥಿಸುವ ಹೀನ ಮನಸ್ಸನ್ನು ತೋರ್ಪಡಿಸಿದರು. ಅಂತಹವರಲ್ಲಿ ತೇಜಸ್ವಿ ಮುಂಚೂಣಿಯಲ್ಲಿದ್ದರು. 26 ವರ್ಷ (ಆಗ) ವಯಸ್ಸಿನ ಒಬ್ಬ ವಕೀಲನಲ್ಲಿ ಇಂತಹ ದುಷ್ಟ ಮನಸ್ಸಿದೆಯಲ್ಲಾ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದರು. ಆದರೆ, ಆತನನ್ನು ಹತ್ತಿರದಿಂದ ಬಲ್ಲವರಿಗೆ ಇದೇನೂ ವಿಶೇಷ ಎನಿಸಿರಲಿಲ್ಲ. ಇದೀಗ ತೇಜಸ್ವಿ ತನಗೆ ಕೈ ಕೊಟ್ಟಿದ್ದು ಮಾತ್ರವಲ್ಲಾ, ‘ಇದು ಮೊದಲ ಪ್ರಕರಣವೂ ಅಲ್ಲ, ಕೊನೆಯ ಪ್ರಕರಣವೂ ಅಲ್ಲ’ ಎಂದು ಆ ಮಹಿಳೆ ಹೇಳಿದ್ದರು. ನಂತರದಲ್ಲಿ ಮಹಿಳೆಯರಿಗೆ ಹಿಂಸೆ ಕೊಡುವುದು, ಬಡಿಯುವುದು, ಅಸಭ್ಯವಾಗಿ ವರ್ತಿಸುವ ವ್ಯಕ್ತಿ ಈತ ಎಂಬ ವಿಚಾರ ಹೊರಗೆ ಬಂದಿತು. ಬಿಜೆಪಿಯ ವರ್ತುಲದಲ್ಲೇ ಓಡಾಡಿದ ಇನ್ನೊಂದು ವಿಚಾರದಲ್ಲಿ ಇಂಗ್ಲಿಷ್ ಚಾನೆಲ್ಲೊಂದರ ವರದಿಗಾರ್ತಿಯು ಅನುಭವಿಸಿದ ಕಿರುಕುಳದ ವಿಚಾರವೂ ಇತ್ತು.

ಇದರ ಕುರಿತು ಆಗಲೇ ಅದನ್ನು ನಮ್ಮಲ್ಲಿ ಸುದ್ದಿ ಮಾಡಿದ್ದರೂ, ಸ್ಕ್ರೀನ್‍ಷಾಟ್‍ಗಳನ್ನು ಹಾಕಿರಲಿಲ್ಲ. ಆದರೆ, ಇದೀಗ ನಮಗೆ ಲಭ್ಯವಾದ ಹಲವಾರು ಸ್ಕ್ರೀನ್‍ಷಾಟ್‍ಗಳಲ್ಲಿ ಒಂದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಅಮೆರಿಕದಲ್ಲಿ ನೆಲೆಸಿರುವ ಮಹಿಳೆಯೊಬ್ಬರು ತೇಜಸ್ವಿಯ ಕಿರುಕುಳವನ್ನು ತಾಳದೇ ಪ್ರತಾಪ್‍ಸಿಂಹರಲ್ಲಿ ದೂರಿದ್ದಾರೆ. ಬೆಂಗಳೂರು ಬಿಟ್ಟು ಸ್ವಲ್ಪ ಹೊರಗೆ ಬಂದುಬಿಡಬೇಕು ಎನಿಸಿದೆ ಎಂತಲೂ ಹೇಳುತ್ತಾರೆ. ನಿನ್ನ ಬಗ್ಗೆ ನನಗೆ ಕಾಳಜಿ ಇದೆ. ಆದರೆ ನಾನೇನು ಮಾಡಬೇಕೆಂದು ಗೊತ್ತಾಗುತ್ತಿಲ್ಲವೆಂದು ಹೇಳುವ ಸಿಂಹ ಕೈತೊಳೆದುಕೊಳ್ಳುವ ಪ್ರಯತ್ನ ನಡೆಸುತ್ತಾರೆ. ನಂತರ ಆತನ ಜೊತೆಗೆ ತಾನು ಮಾತಾಡಿದ್ದಾಗಿಯೂ, ತೇಜಸ್ವಿಯ ಹತ್ತಿರ ಈ ವಿಚಾರವನ್ನು ತಾನೇನೂ ಪ್ರಸ್ತಾಪಿಸಿಲ್ಲ, ಆತ ಚೆನ್ನಾಗಿದ್ದಾನೆ, ನೀನೂ ಚೆನ್ನಾಗಿದ್ದುಬಿಡು ಹೇಳುವ ಒಂದು ವಾಟ್ಸಾಪ್ ಚಾಟ್ ಸ್ಕ್ರೀನ್‍ಷಾಟ್‍ನಿಂದ ಆರಂಭವಾಗುವ ಈ ಸರಣಿಯಲ್ಲಿ ಹಲವಾರು ಅಂಶಗಳು ಒಂದೊಂದಾಗಿ ತೆರೆದುಕೊಳ್ಳುತ್ತವೆ.

ಪ್ರತಾಪ್ ಸಿಂಹನ ಬಳಿ ಅಳಲು ತೋಡಿಕೊಂಡಿರುವ ಸಂತ್ರಸ್ತೆ

ತಾವೇ ಬಹಿರಂಗಗೊಳಿಸಲಿಚ್ಛಿಸದ ನೊಂದವರ ಐಡೆಂಟಿಟಿಗಳನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬಯಲುಗೊಳಿಸುವ ಸುದ್ದಿಗಳನ್ನು ಸುದ್ದಿಯ ‘ರೋಚಕತೆ’ಯ ಕಾರಣಕ್ಕೆ ಮಾಡುತ್ತಾ ಹೋಗದೆ, ಕೆಲವು ಪ್ರಶ್ನೆಗಳನ್ನು ಮುಂದಿಡುತ್ತಿದ್ದೇವೆ. ಕೇವಲ 28 ವರ್ಷ ವಯಸ್ಸಿನ ಈ ವ್ಯಕ್ತಿಯು ಸಂಸತ್ ಸದಸ್ಯನಾಗುವಷ್ಟು ಅರ್ಹತೆ ಪಡೆದುಕೊಂಡಿದ್ದಾನೆಂದು ರಾಷ್ಟ್ರೀಯ ಪಕ್ಷವೊಂದು ಭಾವಿಸಿರುವುದಾದರೆ, ಈ ಅವಗುಣಗಳನ್ನು, ಅನರ್ಹತೆಗಳನ್ನು ಅವರು ಗಮನಕ್ಕೆ ತೆಗೆದುಕೊಂಡಿಲ್ಲವೇ? ಬಿಜೆಪಿ ಸರ್ಕಾರವು ಮುಂದಿಟ್ಟ ಮಹಿಳಾ ಮೀಸಲಾತಿಯ ಪ್ರಸ್ತಾಪಕ್ಕೆ ಅಷ್ಟೇ ತೇಜಸ್ವಿಯ ವಿರೋಧವಿರಲಿಲ್ಲ; ಮಹಿಳೆಯರ ಬಗ್ಗೆ ಬಹಳ ಕೀಳು ಮಟ್ಟದ ಮನಸ್ಥಿತಿಯನ್ನು ಈತ ಹೊಂದಿರುವುದಕ್ಕೆ ಹಲವು ಪುರಾವೆಗಳು ಹೊರಬೀಳುತ್ತಿವೆ. ಇದು ಬಿಜೆಪಿ ಪಕ್ಷದ ನೀತಿಯಾ? ಇಂತಹ ವ್ಯಕ್ತಿಯು ದೇಶಕ್ಕೇ ಅನ್ವಯಿಸುವ ಕಾನೂನುಗಳನ್ನು ರೂಪಿಸುವ ಸಂಸತ್‍ನಲ್ಲಿ ಇರುವುದಕ್ಕೆ ಎಷ್ಟರ ಮಟ್ಟಿಗೆ ಅರ್ಹ? ಈ ಎಲ್ಲಾ ಸುದ್ದಿಗಳು ಒಂದೊಂದಾಗಿ ಹೊರಗೆ ಬರುತ್ತಿರುವುದು ಬಿಜೆಪಿಯ ವಲಯದಿಂದಲೇ ಆಗಿದೆ. ಹಾಗಿದ್ದ ಮೇಲೆ ಬಿಜೆಪಿಯ ಇತರ ‘ಸಭ್ಯರು’ ಇದನ್ನು ಬಹಿರಂಗಗೊಳಿಸದೇ ಪಕ್ಷ ನಿಷ್ಠೆಯ ಹೆಸರಿನಲ್ಲಿ, ಅಪಾಯಕಾರಿ ವ್ಯಕ್ತಿಯು ಪಕ್ಷದ ಪ್ರತಿನಿಧಿಯಾಗಿ ಆರಿಸಿ ಹೋದರೆ ಪರವಾಗಿಲ್ಲವೆಂದು ಭಾವಿಸಿದ್ದಾರೆಯೇ? ಸ್ವತಃ ತೇಜಸ್ವಿ ಸೂರ್ಯ ತನ್ನ ಆತ್ಮವಿಮರ್ಶೆಯನ್ನು, ಪಶ್ಚಾತ್ತಾಪವನ್ನು ಮುಂದಿಡಲು ಇದು ಸುಸಮಯ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...