Homeಮುಖಪುಟಆರೋಗ್ಯ ಸೇತು ಆ್ಯಪ್ ಕಡ್ಡಾಯ ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ

ಆರೋಗ್ಯ ಸೇತು ಆ್ಯಪ್ ಕಡ್ಡಾಯ ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ

- Advertisement -
- Advertisement -

ಸಾರ್ವಜನಿಕ ಮತ್ತು ಖಾಸಗಿ ಉದ್ಯೋಗಿಗಳಿಗೆ ‘ಆರೋಗ್ಯ ಸೇತು’ ಆ್ಯಪ್ ಬಳಕೆಯನ್ನು ಕಡ್ಡಾಯಗೊಳಿಸುವಂತೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನಗಳನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಆರೋಗ್ಯ ಸೇತು ಆ್ಯಪ್ ಸುರಕ್ಷಿತವಲ್ಲ ಮತ್ತು ಖಾಸಗಿ ಮಾಹಿತಿಗಳ ಸೋರಿಕೆ ಹೆಚ್ಚು ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕಡ್ಡಾಯಗೊಳಿಸುವುದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ಮೇ 04 ರಿಂದ ದೇಶದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ನೌಕರರು ಆರೋಗ್ಯ ಸೇತು ಆ್ಯಪ್ ಅನ್ನು ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶಿಸಿತ್ತು. ಇದಕ್ಕೆ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅಪಸ್ವರ ಎತ್ತಿದ್ದರು.

ಆರೋಗ್ಯ ಸೇತು ಅಪ್ಲಿಕೇಶನ್, ಒಂದು ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದ್ದು, ಖಾಸಗಿ ಕಂಪನಿಗೆ ಇದರ ನಿಯಂತ್ರಣ ಜವಾಬ್ದಾರಿ ನೀಡಲಾಗಿದೆ. ಯಾವುದೇ ಸಾಂಸ್ಥಿಕ ಮೇಲ್ವಿಚಾರಣೆಯಿಲ್ಲದಿರುವುದರಿಂದ ದತ್ತಾಂಶ ಸುರಕ್ಷತೆ ಮತ್ತು ಗೌಪ್ಯತೆಯ ಕುರಿತು ಇದು ಗಂಭೀರವಾದ ಪ್ರಶ್ನೆಗಳನ್ನು ಎತ್ತುತ್ತದೆ. ತಂತ್ರಜ್ಞಾನವು ನಮ್ಮನ್ನು ಸುರಕ್ಷಿತವಾಗಿಡಲು ಸಹಾಯ ಮಾಡುತ್ತದೆ; ಆದರೆ ನಾಗರಿಕರನ್ನು ಅವರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ವಿಷಯಗಳನ್ನು ಪತ್ತೆಹಚ್ಚಲು ಬಳಕೆಯಾಗುವ ವಸ್ತುವಾಗಬಾರದು” ಎಂದು ರಾಹುಲ್ ಗಾಂಧಿ ಶನಿವಾರ ಟ್ವೀಟ್ ಮಾಡಿದ್ದರು.

ಸರ್ಕಾರದ ಪರವಾಗಿ ನೀತಿ ಆಯೋಗವು ಆ್ಯಪ್ ಬಳಕೆಯನ್ನು ಸಮರ್ಥಿಸಿಕೊಂಡಿದೆ. ಜಿಪಿಎಸ್ ಡೇಟಾ ಹೊಸ ಹಾಟ್‌ಸ್ಪಾಟ್‌ಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಸ್ಥಳದ ಡೇಟಾವನ್ನು ಅಪ್ಲಿಕೇಶನ್‌ನಿಂದ ವೈಯಕ್ತಿಕ ಆಧಾರದ ಮೇಲೆ ಬಳಸುವ ಬದಲಾಗಿ, ಒಟ್ಟು ಆಧಾರದ ಮೇಲೆ ಬಳಸಲಾಗುತ್ತದೆ ಎಂದು ಅದು ಹೇಳಿದೆ.

ರಾಹುಲ್‌ ಗಾಂಧಿಯವರ ಟೀಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಈ ಅಪ್ಲಿಕೇಶನ್ “ಜನರನ್ನು ರಕ್ಷಿಸುವ ಪ್ರಬಲ ಒಡನಾಡಿ” ಎಂದು ಹೇಳಿದ್ದರು.

ಈ ನಡುವೆ “ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಮುಕ್ತವಾಗಿರಬೇಕು. ನೀವು ನಿಮ್ಮ ದೇಶದ ಪ್ರಜೆಗಳಿಗೆ ಕಡ್ಡಾಯವಾಗಿ ಆಪ್‌ ಇನ್‌ಸ್ಟಾಲ್‌ ಮಾಡಿಕೊಳ್ಳಲು ಹೇಳುತ್ತಿರುವಾಗ, ಈ ಆಪ್‌ ಏನು ಮಾಡುತ್ತಿದೆ ಎಂಬುದನ್ನು ಅರಿಯುವ ಹಕ್ಕಿದೆ. ನಿಮಗೆ ನಿಜಕ್ಕೂ ದೇಶ ಪ್ರೇಮವಿದ್ದರೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸಿ” ಎಂದು ಫ್ರೆಂಚ್‌ ಮೂಲದ ಹ್ಯಾಕರ್‌, ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್‌ಸನ್‌ ಸವಾಲು ಹಾಕಿದ್ದಾರೆ.

ಸೋರ್ಸ್‌ ಆಪ್‌ನ ವಿನ್ಯಾಸವನ್ನು ರೂಪಿಸಲು ಬಳಸುವ ನಿರ್ದೇಶನಗಳ ಒಟ್ಟು ಗುಚ್ಚ. ಇದೇ ಆಪ್‌ ಕಾರ್ಯವಿಧಾನವನ್ನು ಬಿಚ್ಚಿಡುತ್ತದೆ. ಅದನ್ನ ಸರ್ಕಾರ ಮುಚ್ಚಿಡುತ್ತಿದೆ ಎಂಬುದು ಏಲಿಯಟ್‌ ಆಲ್ಡರ್ಸನ್‌ ತಕರಾರು ತೆಗೆದಿದ್ದಾರೆ.

ಅಲ್ಲದೇ ಪ್ರಧಾನಿ ಕಚೇರಿಯಲ್ಲಿ 5 ಮಂದಿಗೆ ಅನಾರೋಗ್ಯವಿದೆ, ಭಾರತೀಯ ಸೇನಾ ಮುಖ್ಯ ಕಚೇರಿಯಲ್ಲಿ ಇಬ್ಬರು ಅನಾರೋಗ್ಯ ಪೀಡಿತರು, ಭಾರತೀಯ ಸಂಸತ್ತಿನಲ್ಲಿ ಒಬ್ಬರಿಗೆ ಸೋಂಕಿದೆ ಗೃಹ ಕಚೇರಿಯಲ್ಲಿ ಮೂವರಿಗೆ ಸೋಂಕಿದೆ ಎಂಬ ಮಾಹಿತಿಯನ್ನು ತಮಗೆ ಸಿಕ್ಕಿದೆ. ಇನ್ನು ಮುಂದೆ ಹೇಳಬೇಕೆ ಎಂದು ಸವಾಲು ಹಾಕಿದ್ದಾರೆ.


ಇದನ್ನೂ ಓದಿ: ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

Also Read: Aarogya Setu: The COVID-19 tracking app, another Surveillance tool?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...