Homeಮುಖಪುಟಆರೋಗ್ಯ ಸೇತು ಆ್ಯಪ್ ಕಡ್ಡಾಯ ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ

ಆರೋಗ್ಯ ಸೇತು ಆ್ಯಪ್ ಕಡ್ಡಾಯ ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ

- Advertisement -
- Advertisement -

ಸಾರ್ವಜನಿಕ ಮತ್ತು ಖಾಸಗಿ ಉದ್ಯೋಗಿಗಳಿಗೆ ‘ಆರೋಗ್ಯ ಸೇತು’ ಆ್ಯಪ್ ಬಳಕೆಯನ್ನು ಕಡ್ಡಾಯಗೊಳಿಸುವಂತೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನಗಳನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಆರೋಗ್ಯ ಸೇತು ಆ್ಯಪ್ ಸುರಕ್ಷಿತವಲ್ಲ ಮತ್ತು ಖಾಸಗಿ ಮಾಹಿತಿಗಳ ಸೋರಿಕೆ ಹೆಚ್ಚು ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕಡ್ಡಾಯಗೊಳಿಸುವುದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ಮೇ 04 ರಿಂದ ದೇಶದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ನೌಕರರು ಆರೋಗ್ಯ ಸೇತು ಆ್ಯಪ್ ಅನ್ನು ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶಿಸಿತ್ತು. ಇದಕ್ಕೆ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅಪಸ್ವರ ಎತ್ತಿದ್ದರು.

ಆರೋಗ್ಯ ಸೇತು ಅಪ್ಲಿಕೇಶನ್, ಒಂದು ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದ್ದು, ಖಾಸಗಿ ಕಂಪನಿಗೆ ಇದರ ನಿಯಂತ್ರಣ ಜವಾಬ್ದಾರಿ ನೀಡಲಾಗಿದೆ. ಯಾವುದೇ ಸಾಂಸ್ಥಿಕ ಮೇಲ್ವಿಚಾರಣೆಯಿಲ್ಲದಿರುವುದರಿಂದ ದತ್ತಾಂಶ ಸುರಕ್ಷತೆ ಮತ್ತು ಗೌಪ್ಯತೆಯ ಕುರಿತು ಇದು ಗಂಭೀರವಾದ ಪ್ರಶ್ನೆಗಳನ್ನು ಎತ್ತುತ್ತದೆ. ತಂತ್ರಜ್ಞಾನವು ನಮ್ಮನ್ನು ಸುರಕ್ಷಿತವಾಗಿಡಲು ಸಹಾಯ ಮಾಡುತ್ತದೆ; ಆದರೆ ನಾಗರಿಕರನ್ನು ಅವರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ವಿಷಯಗಳನ್ನು ಪತ್ತೆಹಚ್ಚಲು ಬಳಕೆಯಾಗುವ ವಸ್ತುವಾಗಬಾರದು” ಎಂದು ರಾಹುಲ್ ಗಾಂಧಿ ಶನಿವಾರ ಟ್ವೀಟ್ ಮಾಡಿದ್ದರು.

ಸರ್ಕಾರದ ಪರವಾಗಿ ನೀತಿ ಆಯೋಗವು ಆ್ಯಪ್ ಬಳಕೆಯನ್ನು ಸಮರ್ಥಿಸಿಕೊಂಡಿದೆ. ಜಿಪಿಎಸ್ ಡೇಟಾ ಹೊಸ ಹಾಟ್‌ಸ್ಪಾಟ್‌ಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಸ್ಥಳದ ಡೇಟಾವನ್ನು ಅಪ್ಲಿಕೇಶನ್‌ನಿಂದ ವೈಯಕ್ತಿಕ ಆಧಾರದ ಮೇಲೆ ಬಳಸುವ ಬದಲಾಗಿ, ಒಟ್ಟು ಆಧಾರದ ಮೇಲೆ ಬಳಸಲಾಗುತ್ತದೆ ಎಂದು ಅದು ಹೇಳಿದೆ.

ರಾಹುಲ್‌ ಗಾಂಧಿಯವರ ಟೀಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಈ ಅಪ್ಲಿಕೇಶನ್ “ಜನರನ್ನು ರಕ್ಷಿಸುವ ಪ್ರಬಲ ಒಡನಾಡಿ” ಎಂದು ಹೇಳಿದ್ದರು.

ಈ ನಡುವೆ “ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಮುಕ್ತವಾಗಿರಬೇಕು. ನೀವು ನಿಮ್ಮ ದೇಶದ ಪ್ರಜೆಗಳಿಗೆ ಕಡ್ಡಾಯವಾಗಿ ಆಪ್‌ ಇನ್‌ಸ್ಟಾಲ್‌ ಮಾಡಿಕೊಳ್ಳಲು ಹೇಳುತ್ತಿರುವಾಗ, ಈ ಆಪ್‌ ಏನು ಮಾಡುತ್ತಿದೆ ಎಂಬುದನ್ನು ಅರಿಯುವ ಹಕ್ಕಿದೆ. ನಿಮಗೆ ನಿಜಕ್ಕೂ ದೇಶ ಪ್ರೇಮವಿದ್ದರೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸಿ” ಎಂದು ಫ್ರೆಂಚ್‌ ಮೂಲದ ಹ್ಯಾಕರ್‌, ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್‌ಸನ್‌ ಸವಾಲು ಹಾಕಿದ್ದಾರೆ.

ಸೋರ್ಸ್‌ ಆಪ್‌ನ ವಿನ್ಯಾಸವನ್ನು ರೂಪಿಸಲು ಬಳಸುವ ನಿರ್ದೇಶನಗಳ ಒಟ್ಟು ಗುಚ್ಚ. ಇದೇ ಆಪ್‌ ಕಾರ್ಯವಿಧಾನವನ್ನು ಬಿಚ್ಚಿಡುತ್ತದೆ. ಅದನ್ನ ಸರ್ಕಾರ ಮುಚ್ಚಿಡುತ್ತಿದೆ ಎಂಬುದು ಏಲಿಯಟ್‌ ಆಲ್ಡರ್ಸನ್‌ ತಕರಾರು ತೆಗೆದಿದ್ದಾರೆ.

ಅಲ್ಲದೇ ಪ್ರಧಾನಿ ಕಚೇರಿಯಲ್ಲಿ 5 ಮಂದಿಗೆ ಅನಾರೋಗ್ಯವಿದೆ, ಭಾರತೀಯ ಸೇನಾ ಮುಖ್ಯ ಕಚೇರಿಯಲ್ಲಿ ಇಬ್ಬರು ಅನಾರೋಗ್ಯ ಪೀಡಿತರು, ಭಾರತೀಯ ಸಂಸತ್ತಿನಲ್ಲಿ ಒಬ್ಬರಿಗೆ ಸೋಂಕಿದೆ ಗೃಹ ಕಚೇರಿಯಲ್ಲಿ ಮೂವರಿಗೆ ಸೋಂಕಿದೆ ಎಂಬ ಮಾಹಿತಿಯನ್ನು ತಮಗೆ ಸಿಕ್ಕಿದೆ. ಇನ್ನು ಮುಂದೆ ಹೇಳಬೇಕೆ ಎಂದು ಸವಾಲು ಹಾಕಿದ್ದಾರೆ.


ಇದನ್ನೂ ಓದಿ: ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

Also Read: Aarogya Setu: The COVID-19 tracking app, another Surveillance tool?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...