Homeಮುಖಪುಟಆರೋಗ್ಯ ಸೇತು ಆ್ಯಪ್ ಕಡ್ಡಾಯ ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ

ಆರೋಗ್ಯ ಸೇತು ಆ್ಯಪ್ ಕಡ್ಡಾಯ ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ

- Advertisement -
- Advertisement -

ಸಾರ್ವಜನಿಕ ಮತ್ತು ಖಾಸಗಿ ಉದ್ಯೋಗಿಗಳಿಗೆ ‘ಆರೋಗ್ಯ ಸೇತು’ ಆ್ಯಪ್ ಬಳಕೆಯನ್ನು ಕಡ್ಡಾಯಗೊಳಿಸುವಂತೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನಗಳನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಆರೋಗ್ಯ ಸೇತು ಆ್ಯಪ್ ಸುರಕ್ಷಿತವಲ್ಲ ಮತ್ತು ಖಾಸಗಿ ಮಾಹಿತಿಗಳ ಸೋರಿಕೆ ಹೆಚ್ಚು ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕಡ್ಡಾಯಗೊಳಿಸುವುದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ಮೇ 04 ರಿಂದ ದೇಶದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ನೌಕರರು ಆರೋಗ್ಯ ಸೇತು ಆ್ಯಪ್ ಅನ್ನು ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶಿಸಿತ್ತು. ಇದಕ್ಕೆ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅಪಸ್ವರ ಎತ್ತಿದ್ದರು.

ಆರೋಗ್ಯ ಸೇತು ಅಪ್ಲಿಕೇಶನ್, ಒಂದು ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದ್ದು, ಖಾಸಗಿ ಕಂಪನಿಗೆ ಇದರ ನಿಯಂತ್ರಣ ಜವಾಬ್ದಾರಿ ನೀಡಲಾಗಿದೆ. ಯಾವುದೇ ಸಾಂಸ್ಥಿಕ ಮೇಲ್ವಿಚಾರಣೆಯಿಲ್ಲದಿರುವುದರಿಂದ ದತ್ತಾಂಶ ಸುರಕ್ಷತೆ ಮತ್ತು ಗೌಪ್ಯತೆಯ ಕುರಿತು ಇದು ಗಂಭೀರವಾದ ಪ್ರಶ್ನೆಗಳನ್ನು ಎತ್ತುತ್ತದೆ. ತಂತ್ರಜ್ಞಾನವು ನಮ್ಮನ್ನು ಸುರಕ್ಷಿತವಾಗಿಡಲು ಸಹಾಯ ಮಾಡುತ್ತದೆ; ಆದರೆ ನಾಗರಿಕರನ್ನು ಅವರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ವಿಷಯಗಳನ್ನು ಪತ್ತೆಹಚ್ಚಲು ಬಳಕೆಯಾಗುವ ವಸ್ತುವಾಗಬಾರದು” ಎಂದು ರಾಹುಲ್ ಗಾಂಧಿ ಶನಿವಾರ ಟ್ವೀಟ್ ಮಾಡಿದ್ದರು.

ಸರ್ಕಾರದ ಪರವಾಗಿ ನೀತಿ ಆಯೋಗವು ಆ್ಯಪ್ ಬಳಕೆಯನ್ನು ಸಮರ್ಥಿಸಿಕೊಂಡಿದೆ. ಜಿಪಿಎಸ್ ಡೇಟಾ ಹೊಸ ಹಾಟ್‌ಸ್ಪಾಟ್‌ಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಸ್ಥಳದ ಡೇಟಾವನ್ನು ಅಪ್ಲಿಕೇಶನ್‌ನಿಂದ ವೈಯಕ್ತಿಕ ಆಧಾರದ ಮೇಲೆ ಬಳಸುವ ಬದಲಾಗಿ, ಒಟ್ಟು ಆಧಾರದ ಮೇಲೆ ಬಳಸಲಾಗುತ್ತದೆ ಎಂದು ಅದು ಹೇಳಿದೆ.

ರಾಹುಲ್‌ ಗಾಂಧಿಯವರ ಟೀಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಈ ಅಪ್ಲಿಕೇಶನ್ “ಜನರನ್ನು ರಕ್ಷಿಸುವ ಪ್ರಬಲ ಒಡನಾಡಿ” ಎಂದು ಹೇಳಿದ್ದರು.

ಈ ನಡುವೆ “ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಮುಕ್ತವಾಗಿರಬೇಕು. ನೀವು ನಿಮ್ಮ ದೇಶದ ಪ್ರಜೆಗಳಿಗೆ ಕಡ್ಡಾಯವಾಗಿ ಆಪ್‌ ಇನ್‌ಸ್ಟಾಲ್‌ ಮಾಡಿಕೊಳ್ಳಲು ಹೇಳುತ್ತಿರುವಾಗ, ಈ ಆಪ್‌ ಏನು ಮಾಡುತ್ತಿದೆ ಎಂಬುದನ್ನು ಅರಿಯುವ ಹಕ್ಕಿದೆ. ನಿಮಗೆ ನಿಜಕ್ಕೂ ದೇಶ ಪ್ರೇಮವಿದ್ದರೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸಿ” ಎಂದು ಫ್ರೆಂಚ್‌ ಮೂಲದ ಹ್ಯಾಕರ್‌, ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್‌ಸನ್‌ ಸವಾಲು ಹಾಕಿದ್ದಾರೆ.

ಸೋರ್ಸ್‌ ಆಪ್‌ನ ವಿನ್ಯಾಸವನ್ನು ರೂಪಿಸಲು ಬಳಸುವ ನಿರ್ದೇಶನಗಳ ಒಟ್ಟು ಗುಚ್ಚ. ಇದೇ ಆಪ್‌ ಕಾರ್ಯವಿಧಾನವನ್ನು ಬಿಚ್ಚಿಡುತ್ತದೆ. ಅದನ್ನ ಸರ್ಕಾರ ಮುಚ್ಚಿಡುತ್ತಿದೆ ಎಂಬುದು ಏಲಿಯಟ್‌ ಆಲ್ಡರ್ಸನ್‌ ತಕರಾರು ತೆಗೆದಿದ್ದಾರೆ.

ಅಲ್ಲದೇ ಪ್ರಧಾನಿ ಕಚೇರಿಯಲ್ಲಿ 5 ಮಂದಿಗೆ ಅನಾರೋಗ್ಯವಿದೆ, ಭಾರತೀಯ ಸೇನಾ ಮುಖ್ಯ ಕಚೇರಿಯಲ್ಲಿ ಇಬ್ಬರು ಅನಾರೋಗ್ಯ ಪೀಡಿತರು, ಭಾರತೀಯ ಸಂಸತ್ತಿನಲ್ಲಿ ಒಬ್ಬರಿಗೆ ಸೋಂಕಿದೆ ಗೃಹ ಕಚೇರಿಯಲ್ಲಿ ಮೂವರಿಗೆ ಸೋಂಕಿದೆ ಎಂಬ ಮಾಹಿತಿಯನ್ನು ತಮಗೆ ಸಿಕ್ಕಿದೆ. ಇನ್ನು ಮುಂದೆ ಹೇಳಬೇಕೆ ಎಂದು ಸವಾಲು ಹಾಕಿದ್ದಾರೆ.


ಇದನ್ನೂ ಓದಿ: ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

Also Read: Aarogya Setu: The COVID-19 tracking app, another Surveillance tool?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...