Homeಮುಖಪುಟಮೊರ್ಬಿ ಸೇತುವೆ ದುರಂತಕ್ಕೆ 1ವರ್ಷ: ಸಂತ್ರಸ್ತರ ಕುಟುಂಬಸ್ಥರಿಂದ ಪ್ರತಿಭಟನೆ

ಮೊರ್ಬಿ ಸೇತುವೆ ದುರಂತಕ್ಕೆ 1ವರ್ಷ: ಸಂತ್ರಸ್ತರ ಕುಟುಂಬಸ್ಥರಿಂದ ಪ್ರತಿಭಟನೆ

- Advertisement -
- Advertisement -

ಕಳೆದ ವರ್ಷ ಗುಜರಾತ್‌ನಲ್ಲಿ ಮೊರ್ಬಿ ಸೇತುವೆ ಕುಸಿತದಲ್ಲಿ ತಮ್ಮ ಕುಟುಂಬದ ಸದಸ್ಯರನ್ನು ಕಳೆದುಕೊಂಡ ಹಲವಾರು ಜನರು ಇಂದು ಅಹ್ಮದಾಬಾದ್‌ನ ಸಬರಮತಿ ಆಶ್ರಮದ ಬಳಿ ಜಮಾಯಿಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ ಮತ್ತು ದುರಂತಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿದ್ದಾರೆ.

10 ಮಂದಿಯ ಬಂಧನದ ಜೊತೆಗೆ ಎಸ್‌ಐಟಿ ತನಿಖೆಯಲ್ಲಿ ನಿರ್ಲಕ್ಷದ ಆರೋಪವನ್ನು ಮಾಡಿದ ಎಲ್ಲರನ್ನು ಬಂಧಿಸಿ ಶಿಕ್ಷಿಸಬೇಕು ಎಂದು ದುರಂತದಲ್ಲಿ ತನ್ನ 10 ವರ್ಷದ ಮಗಳನ್ನು ಕಳೆದುಕೊಂಡ ವ್ಯಕ್ತಿಯೊಬ್ಬರು ಆಗ್ರಹಿಸಿದ್ದಾರೆ.

ಘಟನೆಯಲ್ಲಿ ಮಗ ಮತ್ತು ಸೋದರಳಿಯನನ್ನು ಕಳೆದುಕೊಂಡ ವ್ಯಕ್ತಿಯೊಬ್ಬರು ಸೇತುವೆಯಲ್ಲಿ ಜನಸಂದಣಿಯನ್ನು ಸರಿಯಾಗಿ ನಿರ್ವಹಣೆ ಮಾಡಲಿಲ್ಲ ಎಂದು ಆರೋಪಿಸಿದ್ದಾರೆ.

ಕಳೆದ ವರ್ಷ ಅ.30ರಂದು ಗುಜರಾತ್‌ನ ಮೋರ್ಬಿ ಸೇತುವೆ ಕುಸಿದು 50 ಮಕ್ಕಳು ಸೇರಿದಂತೆ 135 ಜನರು ಮೃತಪಟ್ಟಿದ್ದರು. ಗುಜರಾತ್‌ ಹೈಕೋರ್ಟ್‌ಗೆ ಸಲ್ಲಿಕೆಯಾದ ವರದಿ ಪ್ರಕಾರ ಈ ದುರಂತದಿಂದಾಗಿ 20 ಮಕ್ಕಳು ಅನಾಥರಾಗಿದ್ದಾರೆ. 13 ಮಕ್ಕಳು ತಂದೆ–ತಾಯಿಯಲ್ಲಿ ಒಬ್ಬರನ್ನು ಕಳೆದುಕೊಂಡಿದ್ದಾರೆ. 7 ಮಕ್ಕಳು ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡಿದ್ದಾರೆ.

ಸಬರಮತಿ ಆಶ್ರಮದ ಎದುರು ಕುಟುಂಬದ ಸದಸ್ಯರನ್ನು ಕಳೆದುಕೊಂಡ ಸುಮಾರು 40 ಮಂದಿ ಮೋರ್ಬಿ ದುರಂತದ ಬಲಿಪಶುಗಳ ಒಕ್ಕೂಟ ಎನ್ನುವ ಬ್ಯಾನರ್‌ ಹಿಡಿದು ಪ್ರತಿಭಟನೆ ನಡೆಸಿದರು. ಈ ವೇಳೆ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಘಟನೆಯಲ್ಲಿ 10 ವರ್ಷದ ಮಗಳನ್ನು ಕಳೆದುಕೊಂಡಿರುವ ಒಕ್ಕೂಟದ ಅಧ್ಯಕ್ಷರೂ ಆಗಿರುವ ನರೇಂದ್ರ ಪಾರ್ಮರ್‌ ಅವರು ಈ ವೇಳೆ ಮಾತನಾಡಿದ್ದು, ಸಬರಮತಿ ಆಶ್ರಮದಿಂದ ಗಾಂಧಿನಗರದಲ್ಲಿರುವ ಮುಖ್ಯಮಂತ್ರಿ ನಿವಾಸದವರೆಗೆ ಮೆರವಣಿಗೆ ನಡೆಸುವ ಉದ್ದೇಶ ಇತ್ತು. ಆದರೆ ಅಧಿಕಾರಿಗಳು ಅದಕ್ಕೆ ಅನುಮತಿ ನೀಡಿಲ್ಲ. ಘಟನೆಯಲ್ಲಿ ಮೃತಪಟ್ಟ ಹೆಚ್ಚಿನವರು ಪರಿಶಿಷ್ಟ ಜಾತಿ ಹಾಗೂ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂದು ಹೇಳಿದ್ದಾರೆ.

ಮನೆ ಮನೆಗೆ ತೆರಳಿ ಕೆಲಸ ಮಾಡಿ ಮಗನನ್ನು ಬೆಳೆಸಿದೆ. ಸರ್ಕಾರದ ಯಾವುದೇ ಪರಿಹಾರದಿಂದ ನನಗೆ ಆಗಿರುವ ಗಾಯವನ್ನು ಅಳಿಸಲು ಸಾಧ್ಯವಿಲ್ಲ ಎಂದು ಘಟನೆಯಲ್ಲಿ ಮ‌ಗನನ್ನು ಕಳೆದುಕೊಂಡ ತಾಯಿಯೊಬ್ಬರು ದುಃಖದಿಂದ ಹೇಳಿದ್ದಾರೆ.

ಸೇತುವೆ ದುರಂತದಲ್ಲಿ ತನ್ನ 19 ವರ್ಷದ ಮಗ ಅಲ್ಫಾಜ್ ಖಾನ್‌ನನ್ನು ಕಳೆದುಕೊಂಡ ವಿಧವೆ ಶಬಾನಾ ಪಠಾಣ್ ಮಾತನಾಡುತ್ತಾ ನನಗೆ ನ್ಯಾಯ ಸಿಗುವವರೆಗೆ ಬರಿಗಾಲಿನಲ್ಲಿರುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ.

ಇದನ್ನು ಓದಿ: ಮಲಯಾಳಂ ನಟಿ ರೆಂಜೂಷಾ ಮೆನನ್ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...