Homeಆರೋಗ್ಯಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?

ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?

ಇಂತಹ ಒಂದು ಗಂಭೀರ ಸಾಂಕ್ರಾಮಿಕದ ಮಧ್ಯೆಯೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡಲು ನಿರಾಕರಿಸುತ್ತಿರುವ ರಾಜಕೀಯ ವರ್ಗ ನಮ್ಮನ್ನು ಆಳುತ್ತಿರುವುದು ನಮ್ಮ ದುರಾದೃಷ್ಟ.

- Advertisement -
- Advertisement -

ಅನೇಕ ವರ್ಷಗಳಿಂದ ಆರೋಗ್ಯ ಸೇವೆಗೆ ಅತಿ ಕಡಿಮೆ ಹಣ ಮೀಸಲಿಟ್ಟು ವ್ಯಯಿಸಿದ್ದರ ಕೆಟ್ಟ ಪರಿಣಾಮವನ್ನು ಕರ್ನಾಟಕ ಇಂದು ಕಾಣುತ್ತಿದೆ. ಯಡಿಯೂರಪ್ಪನವರು ಅಧಿಕಾರಕ್ಕೆ ಬಂದ ಮೇಲೂ ಇದರಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ. 2020-21 ರ ಬಜೆಟ್ಟಿನಲ್ಲಿ, ಆರೋಗ್ಯಕ್ಕೆ ಮೀಸಲಿಟ್ಟ ಹಣ 4.3% ಆಗಿತ್ತು. ಅಂದರೆ ಹಿಂದಿನ ಸರಕಾರಗಳು ಮೀಸಲಿಟ್ಟಷ್ಟೇ ಹಣವನ್ನು ಈ ಹೊಸ ಸರಕಾರವೂ ಮೀಸಲಿಟ್ಟಿತು. ಇದು ಇತರ ಎಲ್ಲಾ ರಾಜ್ಯಗಳ ಸರಾಸರಿಯಾದ 5.3% ಕ್ಕೆ ಹೋಲಿಸಿದರೆ ಬಹಳ ಕಡಿಮೆ. ಕಳೆದ ವರ್ಷ ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದಾಗ ನೀತಿ ಆಯೋಗವು ರಾಜ್ಯವಾರು ಆರೋಗ್ಯ ಅಂಕಿಅಂಶಗಳ ಎರಡನೇ ಸುತ್ತಿನ ವರದಿಯನ್ನು ಬಿಡುಗಡೆ ಮಾಡಿತು. ಈ ವರದಿಯು, ಕರ್ನಾಟಕದ ಪ್ರಾಥಮಿಕ ಆರೋಗ್ಯ ಸೇವೆಯು ದುರ್ಬಲವಾಗಿರುವುದನ್ನು ಬಹಿರಂಗಗೊಳಿಸಿತು.

ಪ್ರಾಥಮಿಕ ಆರೋಗ್ಯ ಸೇವೆಯೇ ರೋಗಗಳನ್ನು ತಡೆಯುವುದರಲ್ಲಿ ಮತ್ತು ಆರೋಗ್ಯ ಸುಧಾರಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯ ಉಪಕೇಂದ್ರಗಳಲ್ಲಿ ಎಎನ್‍ಎಮ್‍ಗಳ (Auxiliary Nursing Midwifery) ಹುದ್ದೆಗಳ ಖಾಲಿ ಪ್ರಮಾಣ 33.4% ಕ್ಕೆ ಏರಿದೆ. ಇದರಿಂದ ಬಾಣಂತಿಯರ ಮತ್ತು ಮಕ್ಕಳ ಆರೋಗ್ಯ ಸೇವೆಯಯಲ್ಲಿ ವ್ಯತ್ಯಯ ಉಂಟಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮತ್ತು ಸಿಎಚ್‍ಸಿಗಳ (ಸಮುದಾಯ ಆರೋಗ್ಯ ಕೇಂದ್ರಗಳು) ಬೆನ್ನೆಲುಬಾಗಿ ದುಡಿಯುವ ಸ್ಟಾಫ್ ನರ್ಸ್‍ಗಳ ಹುದ್ದೆಗಳಲ್ಲಿ ಸುಮಾರು 22% ಹುದ್ದೆಗಳು ಖಾಲಿಯಾಗಿ ಉಳಿದುಕೊಡಿವೆ. ಸಿಎಚ್‍ಸಿಗಳಲ್ಲಿ ಕೇವಲ 45% (ಆರೋಗ್ಯ ತುರ್ತಿನಲ್ಲಿ ಜೀವ ಉಳಿಸಲು ಪ್ರಮುಖ ಪಾತ್ರ ವಹಿಸುವ ಆರೋಗ್ಯ ಕೇಂದ್ರಗಳು) ಮಾತ್ರ ಕಾರ್ಯನಿರ್ವಹಿಸುತ್ತಿದ್ದವು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 37.7% ವಿಶೇಷಜ್ಞರ ಹುದ್ದೆಗಳು ಖಾಲಿಯಿದ್ದವು. ಹಾಗಾಗಿ, ನವಜಾತ ಶಿಶು ಮರಣದ ಪ್ರಮಾಣ 18% ಹಾಗೂ ಹೆಣ್ಣು-ಗಂಡು ಶಿಶುಗಳ ಲೈಂಗಿಕ ಅನುಪಾತದ ಪ್ರಮಾಣ 935 ಕ್ಕೆ ನಿಂತನೀರಾಗಿರುವುದು ಆಶ್ಚರ್ಯವಲ್ಲ. ಸಾಂಸ್ಥಿಕ ಹೆರಿಗೆಗಳ ಪ್ರಮಾಣ ಕೇವಲ 79.6% ಆಗಿತ್ತು, ಅದು ಸದ್ಯದ ಗುರಿಯಾದ 90%ಕ್ಕಿಂತ ಕಡಿಮೆ ಹಾಗೂ ಟಿಬಿ ರೋಗದ ಚಿಕಿತ್ಸೆಯ ಯಶಸ್ಸಿನ ಪ್ರಮಾಣ ಕೇವಲ 79.7% ಆಗಿ ಉಳಿದಿದೆ.

ಪ್ರಾಥಮಿಕ ಆರೋಗ್ಯ ಸೇವೆಯು ಯಾವುದೇ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಅಡಿಪಾಯ. ಹಾಗಾಗಿ ಒಂದು ದುರ್ಬಲ ಪ್ರಾಥಮಿಕ ಆರೋಗ್ಯ ವ್ಯವಸ್ಥೆಯು ರಾಜ್ಯದಲ್ಲಿ ಕೋವಿಡ್-19 ನಂತಹ ಸಾಂಕ್ರಾಮಿಕವನ್ನು ತಡೆಗಟ್ಟುವಲ್ಲಿ ಯಾವ ರೀತಿ ಭಾಧಿಸುತ್ತೆ ಎಂಬುದು ಈಗ ಜಗಜ್ಜಾಹಿರವಾಗಿದೆ. ಇಷ್ಟಾದರೂ, ಯಡಿಯೂರಪ್ಪನವರ ಸರಕಾರವು, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಿಗೊಟ್ಟು, ಖಾಸಗಿ ಆರೋಗ್ಯ ವಲಯವನ್ನು ಉತ್ತೇಜನ ನೀಡುವ ಅಪಾಯಕಾರಿ ನೀತಿಗಳನ್ನು ಅನುಸರಿಸುವುದನ್ನು ನಿಲ್ಲಿಸಿಲ್ಲ. ಇನ್ನೊಂದು ಹೆಜ್ಜೆ ಮುಂದೆ ಹೋಗಿ, ನೀತಿ ಆಯೋಗವು ಸೂಚಿಸಿರುವಂತೆ, ಜಿಲ್ಲಾ ಸರಕಾರಿ ಆಸ್ಪತ್ರೆಯ ನಿರ್ವಹಣೆಯಲ್ಲಿ ಖಾಸಗಿ ವಲಯವನ್ನು ತಂದು, ಸರಕಾರಿ ಆಸ್ಪತ್ರೆಗಳ ಖಾಸಗಿಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ. ಪ್ರಸಕ್ತ ಸರಕಾರದ ಹೆಚ್ಚಿನ ಆರೋಗ್ಯದ ಯೋಜನೆಗಳು ಪ್ರಾಥಮಿಕ ಮತ್ತು ಎರಡನೇ ಹಂತದ ಅರೋಗ್ಯ ಸೇವೆಗಳ ಮೇಲ್ಪಟ್ಟ ಮೂರನೇ ಹಂತದ ಆರೋಗ್ಯ ಸೇವೆಯ ಮೇಲೆಯೇ ಕೇಂದ್ರೀಕೃತವಾಗಿವೆ ಹಾಗೂ ಪಿಪಿಪಿ (ಖಾಸಗಿ, ಸರಕಾರಿ ಸಹಯೋಗ)ದ ಮಾದರಿಯಲ್ಲಿ ಯೋಜಿಸಲಾಗಿದೆ. ಅದರಲ್ಲಿ ಆರೋಗ್ಯ ತುರ್ತುಗಳನ್ನು ನಿರ್ವಹಿಸಲು 5 ತಾಲೂಕು ಆಸ್ಪತ್ರೆಗಳು, ಮಂಗಳೂರಿನಲ್ಲಿ ಮಕ್ಕಳ ಆರೋಗ್ಯ ಸೇವೆಯ ಪ್ರಾದೇಶಿಕ ಉನ್ನತ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ತೀವ್ರ ನಿಘಾ ಘಟಕಗಳನ್ನು ಸ್ಥಾಪಿಸುವುದಾಗಿದೆ. ಇದರಲ್ಲಿ ಗಮನಿಸಬೇಕಾದ ಅಂಶವೆಂದರೆ, ಈ ಎಲ್ಲಾ ಯೋಜನೆಗಳಲ್ಲಿ ಉಪಕರಣದ ಖರೀದಿಯಲ್ಲಿ ಮತ್ತು ನಿರ್ಮಾಣದಲ್ಲಿ ದೊಡ್ಡ ಮಟ್ಟದ ಹೂಡಿಕೆ ಮಾಡಬೇಕಾಗುತ್ತದೆ ಹಾಗೂ ಅದರಿಂದ ಭ್ರಷ್ಟಾಚಾರ ಮಾಡುವ ಅವಕಾಶ ಇರುತ್ತದೆ. ಅಂದರೆ, ವಿಶೇಷತಜ್ಞರ ಹುದ್ದೆಯನ್ನು ಭರ್ತಿ ಮಾಡದೇ ಐಸಿಯುಗಳನ್ನು ರಚಿಸುವುದು, ಎಎನ್‍ಎಮ್ ಮತ್ತು ಸ್ಟಾಫ್ ನರ್ಸಗಳ ಹುದ್ದೆಗಳನ್ನು ಭರ್ತಿ ಮಾಡದೇ ಪಿಎಚ್‍ಸಿಗಳಲ್ಲಿ ದೂರವಾಣಿ ಮೂಲಕ ಆರೋಗ್ಯ ಸೇವೆ ನೀಡುವುದು ಇತ್ಯಾದಿಗಳ ಅರ್ಥ ಸಾಯುತ್ತಿರುವ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ತೇಪೆ ಹೆಚ್ಚಿದಂತೆ ಆಗುತ್ತೆ ಹೊರತು ಮತ್ತೇನಿಲ್ಲ.

ಇನ್ನು ಗಾಯಕ್ಕೆ ಬರೆ ಹಾಕಿದಂತೆ, ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಸಂಬಳದಲ್ಲಿ ಕಡಿತ ಮಾಡಲಾಗಿದೆ. 3-5 ವರ್ಷಗಳ ಕಾಲ ಸೇವೆ ಸಲ್ಲಿಸಿದ ಆರೋಗ್ಯ ಸೇವೆಯ ಕಾರ್ಮಿಕರನ್ನು ಕಾಯಂ ಮಾಡಿಕೊಳ್ಳಲು ಸರಕಾರ ನಿರಾಕರಿಸಿದೆ ಮತ್ತು ‘ಸಮಾನ ಕೆಲಸಕ್ಕೆ ಸಮಾನ ವೇತನ’ದ ಬೇಡಿಕೆಗೂ ಕಿವಿಗೊಟ್ಟಿಲ್ಲ. ಈ ಸಾಂಕ್ರಾಮಿಕದ ನಡುವೆಯೇ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ವೈದ್ಯರು, ಸ್ಟಾಫ್ ನರ್ಸ್‍ಗಳು ಹಾಗೂ ಲ್ಯಾಬ್ ಟೆಕ್ನಿಷಿಯನ್ನರ ವೇತನಗಳನ್ನು ತಡೆಹಿಡಿಯಲಾಗಿದೆ. ಇದನ್ನು ನೋಡಿದರೆ, ಈ ಸರಕಾರವು ಇಂತಹ ಬಿಕ್ಕಟ್ಟಿನ ನಡುವೆಯೇ ತನ್ನದೇ ಆರೋಗ್ಯ ಸೇವೆಯ ವ್ಯವಸ್ಥೆಯನ್ನು ಉದ್ದೇಶಪೂರ್ವಕವಾಗಿ ನಾಶ ಮಾಡುತ್ತಿದೆ ಎಂದು ಕಾಣುತ್ತದೆ.

ಇಂತಹ ಕೆಟ್ಟ ಹೆಜ್ಜೆಗಳು ಈಗ ತಮ್ಮ ಪರಿಣಾಮಗಳನ್ನು ತೋರಿಸುತ್ತಿವೆ. ಸಾಂಕ್ರಾಮಿಕ ರೋಗಗಳು ಹೆಡೆಬಿಚ್ಚಿದಾಗ ಕೇವಲ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೆ ನಂಬಿಕೊಳ್ಳಬಹುದು ಎಂಬುದು ಈಗ ಸ್ಪಷ್ಟವಾಗುತ್ತಿದೆ ಹಾಗೂ ಖಾಸಗಿ ವಲಯಕ್ಕೆ ಎಷ್ಟೇ ‘ಪ್ರೋತ್ಸಾಹ’ಗಳನ್ನು ನೀಡಿದರೂ ಅದು ತನ್ನ ಹಿತಾಸಕ್ತಿಯನ್ನು ಮಾತ್ರ ನೋಡಿ, ಸಾರ್ವಜನಿಕರ ರಕ್ಷಣೆಗೆ ಬರಲಾರದು ಎಂಬುದೂ ಖಚಿತವಾಗಿದೆ. ಪರಿಸ್ಥಿತಿ ಎಷ್ಟೇ ಗಂಭೀರವಾಗಿರಲಿ, ಖಾಸಗಿ ಆರೋಗ್ಯ ಕ್ಷೇತ್ರವು ತನ್ನ ಲಾಭದ ಚಿಂತೆಯನ್ನಷ್ಟೇ ಮಾಡುತ್ತದೆ ಮತ್ತು ತನ್ನ ಸ್ವಾರ್ಥ ಹಿತಾಸಕ್ತಿಗಳನ್ನು ಕಾಪಾಡಲು ದುಡಿಯುತ್ತ, ಸರಕಾರವು ಖಾಸಗಿ ವಲಯಕ್ಕೆ ಮಾಡಿದ ‘ಅನ್ಯಾಯ’ಗಳ ಬಗ್ಗೆ ದೂರುವುದು, ಗಲಾಟೆ ಜಗಳ ಮಾಡುವುದನ್ನು ಮುಂದುವರೆಸುತ್ತದೆ ಎಂಬುದು ಸಾಬೀತಾಗಿದೆ.

ಇಂತಹ ಒಂದು ಗಂಭೀರ ಸಾಂಕ್ರಾಮಿಕದ ಮಧ್ಯೆಯೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡಲು ನಿರಾಕರಿಸುತ್ತಿರುವ ರಾಜಕೀಯ ವರ್ಗ ನಮ್ಮನ್ನು ಆಳುತ್ತಿರುವುದು ನಮ್ಮ ದುರಾದೃಷ್ಟ. ಉದಾಹರಣೆಗೆ, ಈ ಸಾಂಕ್ರಾಮಿಕದ ಬಿಕ್ಕಟ್ಟಿನಲ್ಲಿ, ತುರ್ತು ಪರಿಸ್ಥಿತಿಯ ಕಾನೂನುಗಳು ನೀಡುವ ನ್ಯಾಯಸಮ್ಮತ ಅಧಿಕಾರವನ್ನು ಬಳಸಿಕೊಂಡು ಖಾಸಗಿ ಆರೋಗ್ಯ ಸೇವೆಯ ಸೌಲಭ್ಯಗಳನ್ನು ತಾತ್ಕಾಲಿಕವಾಗಿ ಸ್ವಾಧೀನಪಡಿಸುವಲ್ಲಿ ಯಾವುದು ಅಡ್ಡಿ ಬರುತ್ತಿದೆ? ಸರಕಾರ ಉಚಿತ ಸೌಲಭ್ಯಗಳನ್ನು ನೀಡುತ್ತಿರುವಾಗ ಸಾರ್ವಜನಿಕರು ಕೋವಿಡ್ ಸೇವೆಗಳಿಗಾಗಿ ಖಾಸಗಿ ಸಂಸ್ಥೆಗಳಿಗೆ ಏಕೆ ಹಣ ತೆತ್ತಬೇಕು? ಸಾರ್ವಜನಿಕರ ಹಿತಾಸಕ್ತಿಯನ್ನು ಸರಕಾರ ಕಾಪಾಡದಿದ್ದರೆ ಮತ್ಯಾರು ಕಾಪಾಡಬೇಕು? ಈ ಸರಕಾರವನ್ನು, ಪ್ರತಿನಿಧಿಗಳನ್ನು ನಾವೇ ಆಯ್ಕೆ ಮಾಡಿ ಕಳುಹಿಸಿದ್ದೇವೆ ಎಂಬುದನ್ನು ನೆನಪಿಡಬೇಕಿದೆ ಹಾಗೂ ಸರಕಾರದ ತಪ್ಪುಗಳಿಗೆ ಅವರು ಹೊಣೆ ಹೊರುವಂತೆ ಮಾಡುವ ಸಮಯ ಬಂದಿದೆ. ಅದನ್ನು ಈಗ ಮಾಡದಿದ್ದರೆ ಯಾವಾಗ?

ಡಾ. ಅಖಿಲಾ ವಾಸನ್, ಜನಾರೋಗ್ಯ ಚಳವಳಿಯ ಮುಂಚೂಣಿ ಕಾರ್ಯಕರ್ತೆ ಮತ್ತು ಸಾರ್ವಜನಿಕ ಆರೋಗ್ಯದ ಸಂಶೋಧಕಿ


ಇದನ್ನು ಓದಿ: ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...