Homeಆರೋಗ್ಯಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?

ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?

ಇಂತಹ ಒಂದು ಗಂಭೀರ ಸಾಂಕ್ರಾಮಿಕದ ಮಧ್ಯೆಯೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡಲು ನಿರಾಕರಿಸುತ್ತಿರುವ ರಾಜಕೀಯ ವರ್ಗ ನಮ್ಮನ್ನು ಆಳುತ್ತಿರುವುದು ನಮ್ಮ ದುರಾದೃಷ್ಟ.

- Advertisement -
- Advertisement -

ಅನೇಕ ವರ್ಷಗಳಿಂದ ಆರೋಗ್ಯ ಸೇವೆಗೆ ಅತಿ ಕಡಿಮೆ ಹಣ ಮೀಸಲಿಟ್ಟು ವ್ಯಯಿಸಿದ್ದರ ಕೆಟ್ಟ ಪರಿಣಾಮವನ್ನು ಕರ್ನಾಟಕ ಇಂದು ಕಾಣುತ್ತಿದೆ. ಯಡಿಯೂರಪ್ಪನವರು ಅಧಿಕಾರಕ್ಕೆ ಬಂದ ಮೇಲೂ ಇದರಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ. 2020-21 ರ ಬಜೆಟ್ಟಿನಲ್ಲಿ, ಆರೋಗ್ಯಕ್ಕೆ ಮೀಸಲಿಟ್ಟ ಹಣ 4.3% ಆಗಿತ್ತು. ಅಂದರೆ ಹಿಂದಿನ ಸರಕಾರಗಳು ಮೀಸಲಿಟ್ಟಷ್ಟೇ ಹಣವನ್ನು ಈ ಹೊಸ ಸರಕಾರವೂ ಮೀಸಲಿಟ್ಟಿತು. ಇದು ಇತರ ಎಲ್ಲಾ ರಾಜ್ಯಗಳ ಸರಾಸರಿಯಾದ 5.3% ಕ್ಕೆ ಹೋಲಿಸಿದರೆ ಬಹಳ ಕಡಿಮೆ. ಕಳೆದ ವರ್ಷ ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದಾಗ ನೀತಿ ಆಯೋಗವು ರಾಜ್ಯವಾರು ಆರೋಗ್ಯ ಅಂಕಿಅಂಶಗಳ ಎರಡನೇ ಸುತ್ತಿನ ವರದಿಯನ್ನು ಬಿಡುಗಡೆ ಮಾಡಿತು. ಈ ವರದಿಯು, ಕರ್ನಾಟಕದ ಪ್ರಾಥಮಿಕ ಆರೋಗ್ಯ ಸೇವೆಯು ದುರ್ಬಲವಾಗಿರುವುದನ್ನು ಬಹಿರಂಗಗೊಳಿಸಿತು.

ಪ್ರಾಥಮಿಕ ಆರೋಗ್ಯ ಸೇವೆಯೇ ರೋಗಗಳನ್ನು ತಡೆಯುವುದರಲ್ಲಿ ಮತ್ತು ಆರೋಗ್ಯ ಸುಧಾರಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯ ಉಪಕೇಂದ್ರಗಳಲ್ಲಿ ಎಎನ್‍ಎಮ್‍ಗಳ (Auxiliary Nursing Midwifery) ಹುದ್ದೆಗಳ ಖಾಲಿ ಪ್ರಮಾಣ 33.4% ಕ್ಕೆ ಏರಿದೆ. ಇದರಿಂದ ಬಾಣಂತಿಯರ ಮತ್ತು ಮಕ್ಕಳ ಆರೋಗ್ಯ ಸೇವೆಯಯಲ್ಲಿ ವ್ಯತ್ಯಯ ಉಂಟಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮತ್ತು ಸಿಎಚ್‍ಸಿಗಳ (ಸಮುದಾಯ ಆರೋಗ್ಯ ಕೇಂದ್ರಗಳು) ಬೆನ್ನೆಲುಬಾಗಿ ದುಡಿಯುವ ಸ್ಟಾಫ್ ನರ್ಸ್‍ಗಳ ಹುದ್ದೆಗಳಲ್ಲಿ ಸುಮಾರು 22% ಹುದ್ದೆಗಳು ಖಾಲಿಯಾಗಿ ಉಳಿದುಕೊಡಿವೆ. ಸಿಎಚ್‍ಸಿಗಳಲ್ಲಿ ಕೇವಲ 45% (ಆರೋಗ್ಯ ತುರ್ತಿನಲ್ಲಿ ಜೀವ ಉಳಿಸಲು ಪ್ರಮುಖ ಪಾತ್ರ ವಹಿಸುವ ಆರೋಗ್ಯ ಕೇಂದ್ರಗಳು) ಮಾತ್ರ ಕಾರ್ಯನಿರ್ವಹಿಸುತ್ತಿದ್ದವು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 37.7% ವಿಶೇಷಜ್ಞರ ಹುದ್ದೆಗಳು ಖಾಲಿಯಿದ್ದವು. ಹಾಗಾಗಿ, ನವಜಾತ ಶಿಶು ಮರಣದ ಪ್ರಮಾಣ 18% ಹಾಗೂ ಹೆಣ್ಣು-ಗಂಡು ಶಿಶುಗಳ ಲೈಂಗಿಕ ಅನುಪಾತದ ಪ್ರಮಾಣ 935 ಕ್ಕೆ ನಿಂತನೀರಾಗಿರುವುದು ಆಶ್ಚರ್ಯವಲ್ಲ. ಸಾಂಸ್ಥಿಕ ಹೆರಿಗೆಗಳ ಪ್ರಮಾಣ ಕೇವಲ 79.6% ಆಗಿತ್ತು, ಅದು ಸದ್ಯದ ಗುರಿಯಾದ 90%ಕ್ಕಿಂತ ಕಡಿಮೆ ಹಾಗೂ ಟಿಬಿ ರೋಗದ ಚಿಕಿತ್ಸೆಯ ಯಶಸ್ಸಿನ ಪ್ರಮಾಣ ಕೇವಲ 79.7% ಆಗಿ ಉಳಿದಿದೆ.

ಪ್ರಾಥಮಿಕ ಆರೋಗ್ಯ ಸೇವೆಯು ಯಾವುದೇ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಅಡಿಪಾಯ. ಹಾಗಾಗಿ ಒಂದು ದುರ್ಬಲ ಪ್ರಾಥಮಿಕ ಆರೋಗ್ಯ ವ್ಯವಸ್ಥೆಯು ರಾಜ್ಯದಲ್ಲಿ ಕೋವಿಡ್-19 ನಂತಹ ಸಾಂಕ್ರಾಮಿಕವನ್ನು ತಡೆಗಟ್ಟುವಲ್ಲಿ ಯಾವ ರೀತಿ ಭಾಧಿಸುತ್ತೆ ಎಂಬುದು ಈಗ ಜಗಜ್ಜಾಹಿರವಾಗಿದೆ. ಇಷ್ಟಾದರೂ, ಯಡಿಯೂರಪ್ಪನವರ ಸರಕಾರವು, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಿಗೊಟ್ಟು, ಖಾಸಗಿ ಆರೋಗ್ಯ ವಲಯವನ್ನು ಉತ್ತೇಜನ ನೀಡುವ ಅಪಾಯಕಾರಿ ನೀತಿಗಳನ್ನು ಅನುಸರಿಸುವುದನ್ನು ನಿಲ್ಲಿಸಿಲ್ಲ. ಇನ್ನೊಂದು ಹೆಜ್ಜೆ ಮುಂದೆ ಹೋಗಿ, ನೀತಿ ಆಯೋಗವು ಸೂಚಿಸಿರುವಂತೆ, ಜಿಲ್ಲಾ ಸರಕಾರಿ ಆಸ್ಪತ್ರೆಯ ನಿರ್ವಹಣೆಯಲ್ಲಿ ಖಾಸಗಿ ವಲಯವನ್ನು ತಂದು, ಸರಕಾರಿ ಆಸ್ಪತ್ರೆಗಳ ಖಾಸಗಿಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ. ಪ್ರಸಕ್ತ ಸರಕಾರದ ಹೆಚ್ಚಿನ ಆರೋಗ್ಯದ ಯೋಜನೆಗಳು ಪ್ರಾಥಮಿಕ ಮತ್ತು ಎರಡನೇ ಹಂತದ ಅರೋಗ್ಯ ಸೇವೆಗಳ ಮೇಲ್ಪಟ್ಟ ಮೂರನೇ ಹಂತದ ಆರೋಗ್ಯ ಸೇವೆಯ ಮೇಲೆಯೇ ಕೇಂದ್ರೀಕೃತವಾಗಿವೆ ಹಾಗೂ ಪಿಪಿಪಿ (ಖಾಸಗಿ, ಸರಕಾರಿ ಸಹಯೋಗ)ದ ಮಾದರಿಯಲ್ಲಿ ಯೋಜಿಸಲಾಗಿದೆ. ಅದರಲ್ಲಿ ಆರೋಗ್ಯ ತುರ್ತುಗಳನ್ನು ನಿರ್ವಹಿಸಲು 5 ತಾಲೂಕು ಆಸ್ಪತ್ರೆಗಳು, ಮಂಗಳೂರಿನಲ್ಲಿ ಮಕ್ಕಳ ಆರೋಗ್ಯ ಸೇವೆಯ ಪ್ರಾದೇಶಿಕ ಉನ್ನತ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ತೀವ್ರ ನಿಘಾ ಘಟಕಗಳನ್ನು ಸ್ಥಾಪಿಸುವುದಾಗಿದೆ. ಇದರಲ್ಲಿ ಗಮನಿಸಬೇಕಾದ ಅಂಶವೆಂದರೆ, ಈ ಎಲ್ಲಾ ಯೋಜನೆಗಳಲ್ಲಿ ಉಪಕರಣದ ಖರೀದಿಯಲ್ಲಿ ಮತ್ತು ನಿರ್ಮಾಣದಲ್ಲಿ ದೊಡ್ಡ ಮಟ್ಟದ ಹೂಡಿಕೆ ಮಾಡಬೇಕಾಗುತ್ತದೆ ಹಾಗೂ ಅದರಿಂದ ಭ್ರಷ್ಟಾಚಾರ ಮಾಡುವ ಅವಕಾಶ ಇರುತ್ತದೆ. ಅಂದರೆ, ವಿಶೇಷತಜ್ಞರ ಹುದ್ದೆಯನ್ನು ಭರ್ತಿ ಮಾಡದೇ ಐಸಿಯುಗಳನ್ನು ರಚಿಸುವುದು, ಎಎನ್‍ಎಮ್ ಮತ್ತು ಸ್ಟಾಫ್ ನರ್ಸಗಳ ಹುದ್ದೆಗಳನ್ನು ಭರ್ತಿ ಮಾಡದೇ ಪಿಎಚ್‍ಸಿಗಳಲ್ಲಿ ದೂರವಾಣಿ ಮೂಲಕ ಆರೋಗ್ಯ ಸೇವೆ ನೀಡುವುದು ಇತ್ಯಾದಿಗಳ ಅರ್ಥ ಸಾಯುತ್ತಿರುವ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ತೇಪೆ ಹೆಚ್ಚಿದಂತೆ ಆಗುತ್ತೆ ಹೊರತು ಮತ್ತೇನಿಲ್ಲ.

ಇನ್ನು ಗಾಯಕ್ಕೆ ಬರೆ ಹಾಕಿದಂತೆ, ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಸಂಬಳದಲ್ಲಿ ಕಡಿತ ಮಾಡಲಾಗಿದೆ. 3-5 ವರ್ಷಗಳ ಕಾಲ ಸೇವೆ ಸಲ್ಲಿಸಿದ ಆರೋಗ್ಯ ಸೇವೆಯ ಕಾರ್ಮಿಕರನ್ನು ಕಾಯಂ ಮಾಡಿಕೊಳ್ಳಲು ಸರಕಾರ ನಿರಾಕರಿಸಿದೆ ಮತ್ತು ‘ಸಮಾನ ಕೆಲಸಕ್ಕೆ ಸಮಾನ ವೇತನ’ದ ಬೇಡಿಕೆಗೂ ಕಿವಿಗೊಟ್ಟಿಲ್ಲ. ಈ ಸಾಂಕ್ರಾಮಿಕದ ನಡುವೆಯೇ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ವೈದ್ಯರು, ಸ್ಟಾಫ್ ನರ್ಸ್‍ಗಳು ಹಾಗೂ ಲ್ಯಾಬ್ ಟೆಕ್ನಿಷಿಯನ್ನರ ವೇತನಗಳನ್ನು ತಡೆಹಿಡಿಯಲಾಗಿದೆ. ಇದನ್ನು ನೋಡಿದರೆ, ಈ ಸರಕಾರವು ಇಂತಹ ಬಿಕ್ಕಟ್ಟಿನ ನಡುವೆಯೇ ತನ್ನದೇ ಆರೋಗ್ಯ ಸೇವೆಯ ವ್ಯವಸ್ಥೆಯನ್ನು ಉದ್ದೇಶಪೂರ್ವಕವಾಗಿ ನಾಶ ಮಾಡುತ್ತಿದೆ ಎಂದು ಕಾಣುತ್ತದೆ.

ಇಂತಹ ಕೆಟ್ಟ ಹೆಜ್ಜೆಗಳು ಈಗ ತಮ್ಮ ಪರಿಣಾಮಗಳನ್ನು ತೋರಿಸುತ್ತಿವೆ. ಸಾಂಕ್ರಾಮಿಕ ರೋಗಗಳು ಹೆಡೆಬಿಚ್ಚಿದಾಗ ಕೇವಲ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೆ ನಂಬಿಕೊಳ್ಳಬಹುದು ಎಂಬುದು ಈಗ ಸ್ಪಷ್ಟವಾಗುತ್ತಿದೆ ಹಾಗೂ ಖಾಸಗಿ ವಲಯಕ್ಕೆ ಎಷ್ಟೇ ‘ಪ್ರೋತ್ಸಾಹ’ಗಳನ್ನು ನೀಡಿದರೂ ಅದು ತನ್ನ ಹಿತಾಸಕ್ತಿಯನ್ನು ಮಾತ್ರ ನೋಡಿ, ಸಾರ್ವಜನಿಕರ ರಕ್ಷಣೆಗೆ ಬರಲಾರದು ಎಂಬುದೂ ಖಚಿತವಾಗಿದೆ. ಪರಿಸ್ಥಿತಿ ಎಷ್ಟೇ ಗಂಭೀರವಾಗಿರಲಿ, ಖಾಸಗಿ ಆರೋಗ್ಯ ಕ್ಷೇತ್ರವು ತನ್ನ ಲಾಭದ ಚಿಂತೆಯನ್ನಷ್ಟೇ ಮಾಡುತ್ತದೆ ಮತ್ತು ತನ್ನ ಸ್ವಾರ್ಥ ಹಿತಾಸಕ್ತಿಗಳನ್ನು ಕಾಪಾಡಲು ದುಡಿಯುತ್ತ, ಸರಕಾರವು ಖಾಸಗಿ ವಲಯಕ್ಕೆ ಮಾಡಿದ ‘ಅನ್ಯಾಯ’ಗಳ ಬಗ್ಗೆ ದೂರುವುದು, ಗಲಾಟೆ ಜಗಳ ಮಾಡುವುದನ್ನು ಮುಂದುವರೆಸುತ್ತದೆ ಎಂಬುದು ಸಾಬೀತಾಗಿದೆ.

ಇಂತಹ ಒಂದು ಗಂಭೀರ ಸಾಂಕ್ರಾಮಿಕದ ಮಧ್ಯೆಯೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡಲು ನಿರಾಕರಿಸುತ್ತಿರುವ ರಾಜಕೀಯ ವರ್ಗ ನಮ್ಮನ್ನು ಆಳುತ್ತಿರುವುದು ನಮ್ಮ ದುರಾದೃಷ್ಟ. ಉದಾಹರಣೆಗೆ, ಈ ಸಾಂಕ್ರಾಮಿಕದ ಬಿಕ್ಕಟ್ಟಿನಲ್ಲಿ, ತುರ್ತು ಪರಿಸ್ಥಿತಿಯ ಕಾನೂನುಗಳು ನೀಡುವ ನ್ಯಾಯಸಮ್ಮತ ಅಧಿಕಾರವನ್ನು ಬಳಸಿಕೊಂಡು ಖಾಸಗಿ ಆರೋಗ್ಯ ಸೇವೆಯ ಸೌಲಭ್ಯಗಳನ್ನು ತಾತ್ಕಾಲಿಕವಾಗಿ ಸ್ವಾಧೀನಪಡಿಸುವಲ್ಲಿ ಯಾವುದು ಅಡ್ಡಿ ಬರುತ್ತಿದೆ? ಸರಕಾರ ಉಚಿತ ಸೌಲಭ್ಯಗಳನ್ನು ನೀಡುತ್ತಿರುವಾಗ ಸಾರ್ವಜನಿಕರು ಕೋವಿಡ್ ಸೇವೆಗಳಿಗಾಗಿ ಖಾಸಗಿ ಸಂಸ್ಥೆಗಳಿಗೆ ಏಕೆ ಹಣ ತೆತ್ತಬೇಕು? ಸಾರ್ವಜನಿಕರ ಹಿತಾಸಕ್ತಿಯನ್ನು ಸರಕಾರ ಕಾಪಾಡದಿದ್ದರೆ ಮತ್ಯಾರು ಕಾಪಾಡಬೇಕು? ಈ ಸರಕಾರವನ್ನು, ಪ್ರತಿನಿಧಿಗಳನ್ನು ನಾವೇ ಆಯ್ಕೆ ಮಾಡಿ ಕಳುಹಿಸಿದ್ದೇವೆ ಎಂಬುದನ್ನು ನೆನಪಿಡಬೇಕಿದೆ ಹಾಗೂ ಸರಕಾರದ ತಪ್ಪುಗಳಿಗೆ ಅವರು ಹೊಣೆ ಹೊರುವಂತೆ ಮಾಡುವ ಸಮಯ ಬಂದಿದೆ. ಅದನ್ನು ಈಗ ಮಾಡದಿದ್ದರೆ ಯಾವಾಗ?

ಡಾ. ಅಖಿಲಾ ವಾಸನ್, ಜನಾರೋಗ್ಯ ಚಳವಳಿಯ ಮುಂಚೂಣಿ ಕಾರ್ಯಕರ್ತೆ ಮತ್ತು ಸಾರ್ವಜನಿಕ ಆರೋಗ್ಯದ ಸಂಶೋಧಕಿ


ಇದನ್ನು ಓದಿ: ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...