Homeಆರೋಗ್ಯಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?

ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?

ಇಂತಹ ಒಂದು ಗಂಭೀರ ಸಾಂಕ್ರಾಮಿಕದ ಮಧ್ಯೆಯೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡಲು ನಿರಾಕರಿಸುತ್ತಿರುವ ರಾಜಕೀಯ ವರ್ಗ ನಮ್ಮನ್ನು ಆಳುತ್ತಿರುವುದು ನಮ್ಮ ದುರಾದೃಷ್ಟ.

- Advertisement -
- Advertisement -

ಅನೇಕ ವರ್ಷಗಳಿಂದ ಆರೋಗ್ಯ ಸೇವೆಗೆ ಅತಿ ಕಡಿಮೆ ಹಣ ಮೀಸಲಿಟ್ಟು ವ್ಯಯಿಸಿದ್ದರ ಕೆಟ್ಟ ಪರಿಣಾಮವನ್ನು ಕರ್ನಾಟಕ ಇಂದು ಕಾಣುತ್ತಿದೆ. ಯಡಿಯೂರಪ್ಪನವರು ಅಧಿಕಾರಕ್ಕೆ ಬಂದ ಮೇಲೂ ಇದರಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ. 2020-21 ರ ಬಜೆಟ್ಟಿನಲ್ಲಿ, ಆರೋಗ್ಯಕ್ಕೆ ಮೀಸಲಿಟ್ಟ ಹಣ 4.3% ಆಗಿತ್ತು. ಅಂದರೆ ಹಿಂದಿನ ಸರಕಾರಗಳು ಮೀಸಲಿಟ್ಟಷ್ಟೇ ಹಣವನ್ನು ಈ ಹೊಸ ಸರಕಾರವೂ ಮೀಸಲಿಟ್ಟಿತು. ಇದು ಇತರ ಎಲ್ಲಾ ರಾಜ್ಯಗಳ ಸರಾಸರಿಯಾದ 5.3% ಕ್ಕೆ ಹೋಲಿಸಿದರೆ ಬಹಳ ಕಡಿಮೆ. ಕಳೆದ ವರ್ಷ ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದಾಗ ನೀತಿ ಆಯೋಗವು ರಾಜ್ಯವಾರು ಆರೋಗ್ಯ ಅಂಕಿಅಂಶಗಳ ಎರಡನೇ ಸುತ್ತಿನ ವರದಿಯನ್ನು ಬಿಡುಗಡೆ ಮಾಡಿತು. ಈ ವರದಿಯು, ಕರ್ನಾಟಕದ ಪ್ರಾಥಮಿಕ ಆರೋಗ್ಯ ಸೇವೆಯು ದುರ್ಬಲವಾಗಿರುವುದನ್ನು ಬಹಿರಂಗಗೊಳಿಸಿತು.

ಪ್ರಾಥಮಿಕ ಆರೋಗ್ಯ ಸೇವೆಯೇ ರೋಗಗಳನ್ನು ತಡೆಯುವುದರಲ್ಲಿ ಮತ್ತು ಆರೋಗ್ಯ ಸುಧಾರಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯ ಉಪಕೇಂದ್ರಗಳಲ್ಲಿ ಎಎನ್‍ಎಮ್‍ಗಳ (Auxiliary Nursing Midwifery) ಹುದ್ದೆಗಳ ಖಾಲಿ ಪ್ರಮಾಣ 33.4% ಕ್ಕೆ ಏರಿದೆ. ಇದರಿಂದ ಬಾಣಂತಿಯರ ಮತ್ತು ಮಕ್ಕಳ ಆರೋಗ್ಯ ಸೇವೆಯಯಲ್ಲಿ ವ್ಯತ್ಯಯ ಉಂಟಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮತ್ತು ಸಿಎಚ್‍ಸಿಗಳ (ಸಮುದಾಯ ಆರೋಗ್ಯ ಕೇಂದ್ರಗಳು) ಬೆನ್ನೆಲುಬಾಗಿ ದುಡಿಯುವ ಸ್ಟಾಫ್ ನರ್ಸ್‍ಗಳ ಹುದ್ದೆಗಳಲ್ಲಿ ಸುಮಾರು 22% ಹುದ್ದೆಗಳು ಖಾಲಿಯಾಗಿ ಉಳಿದುಕೊಡಿವೆ. ಸಿಎಚ್‍ಸಿಗಳಲ್ಲಿ ಕೇವಲ 45% (ಆರೋಗ್ಯ ತುರ್ತಿನಲ್ಲಿ ಜೀವ ಉಳಿಸಲು ಪ್ರಮುಖ ಪಾತ್ರ ವಹಿಸುವ ಆರೋಗ್ಯ ಕೇಂದ್ರಗಳು) ಮಾತ್ರ ಕಾರ್ಯನಿರ್ವಹಿಸುತ್ತಿದ್ದವು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 37.7% ವಿಶೇಷಜ್ಞರ ಹುದ್ದೆಗಳು ಖಾಲಿಯಿದ್ದವು. ಹಾಗಾಗಿ, ನವಜಾತ ಶಿಶು ಮರಣದ ಪ್ರಮಾಣ 18% ಹಾಗೂ ಹೆಣ್ಣು-ಗಂಡು ಶಿಶುಗಳ ಲೈಂಗಿಕ ಅನುಪಾತದ ಪ್ರಮಾಣ 935 ಕ್ಕೆ ನಿಂತನೀರಾಗಿರುವುದು ಆಶ್ಚರ್ಯವಲ್ಲ. ಸಾಂಸ್ಥಿಕ ಹೆರಿಗೆಗಳ ಪ್ರಮಾಣ ಕೇವಲ 79.6% ಆಗಿತ್ತು, ಅದು ಸದ್ಯದ ಗುರಿಯಾದ 90%ಕ್ಕಿಂತ ಕಡಿಮೆ ಹಾಗೂ ಟಿಬಿ ರೋಗದ ಚಿಕಿತ್ಸೆಯ ಯಶಸ್ಸಿನ ಪ್ರಮಾಣ ಕೇವಲ 79.7% ಆಗಿ ಉಳಿದಿದೆ.

ಪ್ರಾಥಮಿಕ ಆರೋಗ್ಯ ಸೇವೆಯು ಯಾವುದೇ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಅಡಿಪಾಯ. ಹಾಗಾಗಿ ಒಂದು ದುರ್ಬಲ ಪ್ರಾಥಮಿಕ ಆರೋಗ್ಯ ವ್ಯವಸ್ಥೆಯು ರಾಜ್ಯದಲ್ಲಿ ಕೋವಿಡ್-19 ನಂತಹ ಸಾಂಕ್ರಾಮಿಕವನ್ನು ತಡೆಗಟ್ಟುವಲ್ಲಿ ಯಾವ ರೀತಿ ಭಾಧಿಸುತ್ತೆ ಎಂಬುದು ಈಗ ಜಗಜ್ಜಾಹಿರವಾಗಿದೆ. ಇಷ್ಟಾದರೂ, ಯಡಿಯೂರಪ್ಪನವರ ಸರಕಾರವು, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಿಗೊಟ್ಟು, ಖಾಸಗಿ ಆರೋಗ್ಯ ವಲಯವನ್ನು ಉತ್ತೇಜನ ನೀಡುವ ಅಪಾಯಕಾರಿ ನೀತಿಗಳನ್ನು ಅನುಸರಿಸುವುದನ್ನು ನಿಲ್ಲಿಸಿಲ್ಲ. ಇನ್ನೊಂದು ಹೆಜ್ಜೆ ಮುಂದೆ ಹೋಗಿ, ನೀತಿ ಆಯೋಗವು ಸೂಚಿಸಿರುವಂತೆ, ಜಿಲ್ಲಾ ಸರಕಾರಿ ಆಸ್ಪತ್ರೆಯ ನಿರ್ವಹಣೆಯಲ್ಲಿ ಖಾಸಗಿ ವಲಯವನ್ನು ತಂದು, ಸರಕಾರಿ ಆಸ್ಪತ್ರೆಗಳ ಖಾಸಗಿಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ. ಪ್ರಸಕ್ತ ಸರಕಾರದ ಹೆಚ್ಚಿನ ಆರೋಗ್ಯದ ಯೋಜನೆಗಳು ಪ್ರಾಥಮಿಕ ಮತ್ತು ಎರಡನೇ ಹಂತದ ಅರೋಗ್ಯ ಸೇವೆಗಳ ಮೇಲ್ಪಟ್ಟ ಮೂರನೇ ಹಂತದ ಆರೋಗ್ಯ ಸೇವೆಯ ಮೇಲೆಯೇ ಕೇಂದ್ರೀಕೃತವಾಗಿವೆ ಹಾಗೂ ಪಿಪಿಪಿ (ಖಾಸಗಿ, ಸರಕಾರಿ ಸಹಯೋಗ)ದ ಮಾದರಿಯಲ್ಲಿ ಯೋಜಿಸಲಾಗಿದೆ. ಅದರಲ್ಲಿ ಆರೋಗ್ಯ ತುರ್ತುಗಳನ್ನು ನಿರ್ವಹಿಸಲು 5 ತಾಲೂಕು ಆಸ್ಪತ್ರೆಗಳು, ಮಂಗಳೂರಿನಲ್ಲಿ ಮಕ್ಕಳ ಆರೋಗ್ಯ ಸೇವೆಯ ಪ್ರಾದೇಶಿಕ ಉನ್ನತ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ತೀವ್ರ ನಿಘಾ ಘಟಕಗಳನ್ನು ಸ್ಥಾಪಿಸುವುದಾಗಿದೆ. ಇದರಲ್ಲಿ ಗಮನಿಸಬೇಕಾದ ಅಂಶವೆಂದರೆ, ಈ ಎಲ್ಲಾ ಯೋಜನೆಗಳಲ್ಲಿ ಉಪಕರಣದ ಖರೀದಿಯಲ್ಲಿ ಮತ್ತು ನಿರ್ಮಾಣದಲ್ಲಿ ದೊಡ್ಡ ಮಟ್ಟದ ಹೂಡಿಕೆ ಮಾಡಬೇಕಾಗುತ್ತದೆ ಹಾಗೂ ಅದರಿಂದ ಭ್ರಷ್ಟಾಚಾರ ಮಾಡುವ ಅವಕಾಶ ಇರುತ್ತದೆ. ಅಂದರೆ, ವಿಶೇಷತಜ್ಞರ ಹುದ್ದೆಯನ್ನು ಭರ್ತಿ ಮಾಡದೇ ಐಸಿಯುಗಳನ್ನು ರಚಿಸುವುದು, ಎಎನ್‍ಎಮ್ ಮತ್ತು ಸ್ಟಾಫ್ ನರ್ಸಗಳ ಹುದ್ದೆಗಳನ್ನು ಭರ್ತಿ ಮಾಡದೇ ಪಿಎಚ್‍ಸಿಗಳಲ್ಲಿ ದೂರವಾಣಿ ಮೂಲಕ ಆರೋಗ್ಯ ಸೇವೆ ನೀಡುವುದು ಇತ್ಯಾದಿಗಳ ಅರ್ಥ ಸಾಯುತ್ತಿರುವ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ತೇಪೆ ಹೆಚ್ಚಿದಂತೆ ಆಗುತ್ತೆ ಹೊರತು ಮತ್ತೇನಿಲ್ಲ.

ಇನ್ನು ಗಾಯಕ್ಕೆ ಬರೆ ಹಾಕಿದಂತೆ, ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಸಂಬಳದಲ್ಲಿ ಕಡಿತ ಮಾಡಲಾಗಿದೆ. 3-5 ವರ್ಷಗಳ ಕಾಲ ಸೇವೆ ಸಲ್ಲಿಸಿದ ಆರೋಗ್ಯ ಸೇವೆಯ ಕಾರ್ಮಿಕರನ್ನು ಕಾಯಂ ಮಾಡಿಕೊಳ್ಳಲು ಸರಕಾರ ನಿರಾಕರಿಸಿದೆ ಮತ್ತು ‘ಸಮಾನ ಕೆಲಸಕ್ಕೆ ಸಮಾನ ವೇತನ’ದ ಬೇಡಿಕೆಗೂ ಕಿವಿಗೊಟ್ಟಿಲ್ಲ. ಈ ಸಾಂಕ್ರಾಮಿಕದ ನಡುವೆಯೇ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ವೈದ್ಯರು, ಸ್ಟಾಫ್ ನರ್ಸ್‍ಗಳು ಹಾಗೂ ಲ್ಯಾಬ್ ಟೆಕ್ನಿಷಿಯನ್ನರ ವೇತನಗಳನ್ನು ತಡೆಹಿಡಿಯಲಾಗಿದೆ. ಇದನ್ನು ನೋಡಿದರೆ, ಈ ಸರಕಾರವು ಇಂತಹ ಬಿಕ್ಕಟ್ಟಿನ ನಡುವೆಯೇ ತನ್ನದೇ ಆರೋಗ್ಯ ಸೇವೆಯ ವ್ಯವಸ್ಥೆಯನ್ನು ಉದ್ದೇಶಪೂರ್ವಕವಾಗಿ ನಾಶ ಮಾಡುತ್ತಿದೆ ಎಂದು ಕಾಣುತ್ತದೆ.

ಇಂತಹ ಕೆಟ್ಟ ಹೆಜ್ಜೆಗಳು ಈಗ ತಮ್ಮ ಪರಿಣಾಮಗಳನ್ನು ತೋರಿಸುತ್ತಿವೆ. ಸಾಂಕ್ರಾಮಿಕ ರೋಗಗಳು ಹೆಡೆಬಿಚ್ಚಿದಾಗ ಕೇವಲ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೆ ನಂಬಿಕೊಳ್ಳಬಹುದು ಎಂಬುದು ಈಗ ಸ್ಪಷ್ಟವಾಗುತ್ತಿದೆ ಹಾಗೂ ಖಾಸಗಿ ವಲಯಕ್ಕೆ ಎಷ್ಟೇ ‘ಪ್ರೋತ್ಸಾಹ’ಗಳನ್ನು ನೀಡಿದರೂ ಅದು ತನ್ನ ಹಿತಾಸಕ್ತಿಯನ್ನು ಮಾತ್ರ ನೋಡಿ, ಸಾರ್ವಜನಿಕರ ರಕ್ಷಣೆಗೆ ಬರಲಾರದು ಎಂಬುದೂ ಖಚಿತವಾಗಿದೆ. ಪರಿಸ್ಥಿತಿ ಎಷ್ಟೇ ಗಂಭೀರವಾಗಿರಲಿ, ಖಾಸಗಿ ಆರೋಗ್ಯ ಕ್ಷೇತ್ರವು ತನ್ನ ಲಾಭದ ಚಿಂತೆಯನ್ನಷ್ಟೇ ಮಾಡುತ್ತದೆ ಮತ್ತು ತನ್ನ ಸ್ವಾರ್ಥ ಹಿತಾಸಕ್ತಿಗಳನ್ನು ಕಾಪಾಡಲು ದುಡಿಯುತ್ತ, ಸರಕಾರವು ಖಾಸಗಿ ವಲಯಕ್ಕೆ ಮಾಡಿದ ‘ಅನ್ಯಾಯ’ಗಳ ಬಗ್ಗೆ ದೂರುವುದು, ಗಲಾಟೆ ಜಗಳ ಮಾಡುವುದನ್ನು ಮುಂದುವರೆಸುತ್ತದೆ ಎಂಬುದು ಸಾಬೀತಾಗಿದೆ.

ಇಂತಹ ಒಂದು ಗಂಭೀರ ಸಾಂಕ್ರಾಮಿಕದ ಮಧ್ಯೆಯೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡಲು ನಿರಾಕರಿಸುತ್ತಿರುವ ರಾಜಕೀಯ ವರ್ಗ ನಮ್ಮನ್ನು ಆಳುತ್ತಿರುವುದು ನಮ್ಮ ದುರಾದೃಷ್ಟ. ಉದಾಹರಣೆಗೆ, ಈ ಸಾಂಕ್ರಾಮಿಕದ ಬಿಕ್ಕಟ್ಟಿನಲ್ಲಿ, ತುರ್ತು ಪರಿಸ್ಥಿತಿಯ ಕಾನೂನುಗಳು ನೀಡುವ ನ್ಯಾಯಸಮ್ಮತ ಅಧಿಕಾರವನ್ನು ಬಳಸಿಕೊಂಡು ಖಾಸಗಿ ಆರೋಗ್ಯ ಸೇವೆಯ ಸೌಲಭ್ಯಗಳನ್ನು ತಾತ್ಕಾಲಿಕವಾಗಿ ಸ್ವಾಧೀನಪಡಿಸುವಲ್ಲಿ ಯಾವುದು ಅಡ್ಡಿ ಬರುತ್ತಿದೆ? ಸರಕಾರ ಉಚಿತ ಸೌಲಭ್ಯಗಳನ್ನು ನೀಡುತ್ತಿರುವಾಗ ಸಾರ್ವಜನಿಕರು ಕೋವಿಡ್ ಸೇವೆಗಳಿಗಾಗಿ ಖಾಸಗಿ ಸಂಸ್ಥೆಗಳಿಗೆ ಏಕೆ ಹಣ ತೆತ್ತಬೇಕು? ಸಾರ್ವಜನಿಕರ ಹಿತಾಸಕ್ತಿಯನ್ನು ಸರಕಾರ ಕಾಪಾಡದಿದ್ದರೆ ಮತ್ಯಾರು ಕಾಪಾಡಬೇಕು? ಈ ಸರಕಾರವನ್ನು, ಪ್ರತಿನಿಧಿಗಳನ್ನು ನಾವೇ ಆಯ್ಕೆ ಮಾಡಿ ಕಳುಹಿಸಿದ್ದೇವೆ ಎಂಬುದನ್ನು ನೆನಪಿಡಬೇಕಿದೆ ಹಾಗೂ ಸರಕಾರದ ತಪ್ಪುಗಳಿಗೆ ಅವರು ಹೊಣೆ ಹೊರುವಂತೆ ಮಾಡುವ ಸಮಯ ಬಂದಿದೆ. ಅದನ್ನು ಈಗ ಮಾಡದಿದ್ದರೆ ಯಾವಾಗ?

ಡಾ. ಅಖಿಲಾ ವಾಸನ್, ಜನಾರೋಗ್ಯ ಚಳವಳಿಯ ಮುಂಚೂಣಿ ಕಾರ್ಯಕರ್ತೆ ಮತ್ತು ಸಾರ್ವಜನಿಕ ಆರೋಗ್ಯದ ಸಂಶೋಧಕಿ


ಇದನ್ನು ಓದಿ: ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...