Homeಆರೋಗ್ಯಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?

ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?

ಇಂತಹ ಒಂದು ಗಂಭೀರ ಸಾಂಕ್ರಾಮಿಕದ ಮಧ್ಯೆಯೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡಲು ನಿರಾಕರಿಸುತ್ತಿರುವ ರಾಜಕೀಯ ವರ್ಗ ನಮ್ಮನ್ನು ಆಳುತ್ತಿರುವುದು ನಮ್ಮ ದುರಾದೃಷ್ಟ.

- Advertisement -
- Advertisement -

ಅನೇಕ ವರ್ಷಗಳಿಂದ ಆರೋಗ್ಯ ಸೇವೆಗೆ ಅತಿ ಕಡಿಮೆ ಹಣ ಮೀಸಲಿಟ್ಟು ವ್ಯಯಿಸಿದ್ದರ ಕೆಟ್ಟ ಪರಿಣಾಮವನ್ನು ಕರ್ನಾಟಕ ಇಂದು ಕಾಣುತ್ತಿದೆ. ಯಡಿಯೂರಪ್ಪನವರು ಅಧಿಕಾರಕ್ಕೆ ಬಂದ ಮೇಲೂ ಇದರಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ. 2020-21 ರ ಬಜೆಟ್ಟಿನಲ್ಲಿ, ಆರೋಗ್ಯಕ್ಕೆ ಮೀಸಲಿಟ್ಟ ಹಣ 4.3% ಆಗಿತ್ತು. ಅಂದರೆ ಹಿಂದಿನ ಸರಕಾರಗಳು ಮೀಸಲಿಟ್ಟಷ್ಟೇ ಹಣವನ್ನು ಈ ಹೊಸ ಸರಕಾರವೂ ಮೀಸಲಿಟ್ಟಿತು. ಇದು ಇತರ ಎಲ್ಲಾ ರಾಜ್ಯಗಳ ಸರಾಸರಿಯಾದ 5.3% ಕ್ಕೆ ಹೋಲಿಸಿದರೆ ಬಹಳ ಕಡಿಮೆ. ಕಳೆದ ವರ್ಷ ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದಾಗ ನೀತಿ ಆಯೋಗವು ರಾಜ್ಯವಾರು ಆರೋಗ್ಯ ಅಂಕಿಅಂಶಗಳ ಎರಡನೇ ಸುತ್ತಿನ ವರದಿಯನ್ನು ಬಿಡುಗಡೆ ಮಾಡಿತು. ಈ ವರದಿಯು, ಕರ್ನಾಟಕದ ಪ್ರಾಥಮಿಕ ಆರೋಗ್ಯ ಸೇವೆಯು ದುರ್ಬಲವಾಗಿರುವುದನ್ನು ಬಹಿರಂಗಗೊಳಿಸಿತು.

ಪ್ರಾಥಮಿಕ ಆರೋಗ್ಯ ಸೇವೆಯೇ ರೋಗಗಳನ್ನು ತಡೆಯುವುದರಲ್ಲಿ ಮತ್ತು ಆರೋಗ್ಯ ಸುಧಾರಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯ ಉಪಕೇಂದ್ರಗಳಲ್ಲಿ ಎಎನ್‍ಎಮ್‍ಗಳ (Auxiliary Nursing Midwifery) ಹುದ್ದೆಗಳ ಖಾಲಿ ಪ್ರಮಾಣ 33.4% ಕ್ಕೆ ಏರಿದೆ. ಇದರಿಂದ ಬಾಣಂತಿಯರ ಮತ್ತು ಮಕ್ಕಳ ಆರೋಗ್ಯ ಸೇವೆಯಯಲ್ಲಿ ವ್ಯತ್ಯಯ ಉಂಟಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮತ್ತು ಸಿಎಚ್‍ಸಿಗಳ (ಸಮುದಾಯ ಆರೋಗ್ಯ ಕೇಂದ್ರಗಳು) ಬೆನ್ನೆಲುಬಾಗಿ ದುಡಿಯುವ ಸ್ಟಾಫ್ ನರ್ಸ್‍ಗಳ ಹುದ್ದೆಗಳಲ್ಲಿ ಸುಮಾರು 22% ಹುದ್ದೆಗಳು ಖಾಲಿಯಾಗಿ ಉಳಿದುಕೊಡಿವೆ. ಸಿಎಚ್‍ಸಿಗಳಲ್ಲಿ ಕೇವಲ 45% (ಆರೋಗ್ಯ ತುರ್ತಿನಲ್ಲಿ ಜೀವ ಉಳಿಸಲು ಪ್ರಮುಖ ಪಾತ್ರ ವಹಿಸುವ ಆರೋಗ್ಯ ಕೇಂದ್ರಗಳು) ಮಾತ್ರ ಕಾರ್ಯನಿರ್ವಹಿಸುತ್ತಿದ್ದವು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 37.7% ವಿಶೇಷಜ್ಞರ ಹುದ್ದೆಗಳು ಖಾಲಿಯಿದ್ದವು. ಹಾಗಾಗಿ, ನವಜಾತ ಶಿಶು ಮರಣದ ಪ್ರಮಾಣ 18% ಹಾಗೂ ಹೆಣ್ಣು-ಗಂಡು ಶಿಶುಗಳ ಲೈಂಗಿಕ ಅನುಪಾತದ ಪ್ರಮಾಣ 935 ಕ್ಕೆ ನಿಂತನೀರಾಗಿರುವುದು ಆಶ್ಚರ್ಯವಲ್ಲ. ಸಾಂಸ್ಥಿಕ ಹೆರಿಗೆಗಳ ಪ್ರಮಾಣ ಕೇವಲ 79.6% ಆಗಿತ್ತು, ಅದು ಸದ್ಯದ ಗುರಿಯಾದ 90%ಕ್ಕಿಂತ ಕಡಿಮೆ ಹಾಗೂ ಟಿಬಿ ರೋಗದ ಚಿಕಿತ್ಸೆಯ ಯಶಸ್ಸಿನ ಪ್ರಮಾಣ ಕೇವಲ 79.7% ಆಗಿ ಉಳಿದಿದೆ.

ಪ್ರಾಥಮಿಕ ಆರೋಗ್ಯ ಸೇವೆಯು ಯಾವುದೇ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಅಡಿಪಾಯ. ಹಾಗಾಗಿ ಒಂದು ದುರ್ಬಲ ಪ್ರಾಥಮಿಕ ಆರೋಗ್ಯ ವ್ಯವಸ್ಥೆಯು ರಾಜ್ಯದಲ್ಲಿ ಕೋವಿಡ್-19 ನಂತಹ ಸಾಂಕ್ರಾಮಿಕವನ್ನು ತಡೆಗಟ್ಟುವಲ್ಲಿ ಯಾವ ರೀತಿ ಭಾಧಿಸುತ್ತೆ ಎಂಬುದು ಈಗ ಜಗಜ್ಜಾಹಿರವಾಗಿದೆ. ಇಷ್ಟಾದರೂ, ಯಡಿಯೂರಪ್ಪನವರ ಸರಕಾರವು, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಿಗೊಟ್ಟು, ಖಾಸಗಿ ಆರೋಗ್ಯ ವಲಯವನ್ನು ಉತ್ತೇಜನ ನೀಡುವ ಅಪಾಯಕಾರಿ ನೀತಿಗಳನ್ನು ಅನುಸರಿಸುವುದನ್ನು ನಿಲ್ಲಿಸಿಲ್ಲ. ಇನ್ನೊಂದು ಹೆಜ್ಜೆ ಮುಂದೆ ಹೋಗಿ, ನೀತಿ ಆಯೋಗವು ಸೂಚಿಸಿರುವಂತೆ, ಜಿಲ್ಲಾ ಸರಕಾರಿ ಆಸ್ಪತ್ರೆಯ ನಿರ್ವಹಣೆಯಲ್ಲಿ ಖಾಸಗಿ ವಲಯವನ್ನು ತಂದು, ಸರಕಾರಿ ಆಸ್ಪತ್ರೆಗಳ ಖಾಸಗಿಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ. ಪ್ರಸಕ್ತ ಸರಕಾರದ ಹೆಚ್ಚಿನ ಆರೋಗ್ಯದ ಯೋಜನೆಗಳು ಪ್ರಾಥಮಿಕ ಮತ್ತು ಎರಡನೇ ಹಂತದ ಅರೋಗ್ಯ ಸೇವೆಗಳ ಮೇಲ್ಪಟ್ಟ ಮೂರನೇ ಹಂತದ ಆರೋಗ್ಯ ಸೇವೆಯ ಮೇಲೆಯೇ ಕೇಂದ್ರೀಕೃತವಾಗಿವೆ ಹಾಗೂ ಪಿಪಿಪಿ (ಖಾಸಗಿ, ಸರಕಾರಿ ಸಹಯೋಗ)ದ ಮಾದರಿಯಲ್ಲಿ ಯೋಜಿಸಲಾಗಿದೆ. ಅದರಲ್ಲಿ ಆರೋಗ್ಯ ತುರ್ತುಗಳನ್ನು ನಿರ್ವಹಿಸಲು 5 ತಾಲೂಕು ಆಸ್ಪತ್ರೆಗಳು, ಮಂಗಳೂರಿನಲ್ಲಿ ಮಕ್ಕಳ ಆರೋಗ್ಯ ಸೇವೆಯ ಪ್ರಾದೇಶಿಕ ಉನ್ನತ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ತೀವ್ರ ನಿಘಾ ಘಟಕಗಳನ್ನು ಸ್ಥಾಪಿಸುವುದಾಗಿದೆ. ಇದರಲ್ಲಿ ಗಮನಿಸಬೇಕಾದ ಅಂಶವೆಂದರೆ, ಈ ಎಲ್ಲಾ ಯೋಜನೆಗಳಲ್ಲಿ ಉಪಕರಣದ ಖರೀದಿಯಲ್ಲಿ ಮತ್ತು ನಿರ್ಮಾಣದಲ್ಲಿ ದೊಡ್ಡ ಮಟ್ಟದ ಹೂಡಿಕೆ ಮಾಡಬೇಕಾಗುತ್ತದೆ ಹಾಗೂ ಅದರಿಂದ ಭ್ರಷ್ಟಾಚಾರ ಮಾಡುವ ಅವಕಾಶ ಇರುತ್ತದೆ. ಅಂದರೆ, ವಿಶೇಷತಜ್ಞರ ಹುದ್ದೆಯನ್ನು ಭರ್ತಿ ಮಾಡದೇ ಐಸಿಯುಗಳನ್ನು ರಚಿಸುವುದು, ಎಎನ್‍ಎಮ್ ಮತ್ತು ಸ್ಟಾಫ್ ನರ್ಸಗಳ ಹುದ್ದೆಗಳನ್ನು ಭರ್ತಿ ಮಾಡದೇ ಪಿಎಚ್‍ಸಿಗಳಲ್ಲಿ ದೂರವಾಣಿ ಮೂಲಕ ಆರೋಗ್ಯ ಸೇವೆ ನೀಡುವುದು ಇತ್ಯಾದಿಗಳ ಅರ್ಥ ಸಾಯುತ್ತಿರುವ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ತೇಪೆ ಹೆಚ್ಚಿದಂತೆ ಆಗುತ್ತೆ ಹೊರತು ಮತ್ತೇನಿಲ್ಲ.

ಇನ್ನು ಗಾಯಕ್ಕೆ ಬರೆ ಹಾಕಿದಂತೆ, ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಸಂಬಳದಲ್ಲಿ ಕಡಿತ ಮಾಡಲಾಗಿದೆ. 3-5 ವರ್ಷಗಳ ಕಾಲ ಸೇವೆ ಸಲ್ಲಿಸಿದ ಆರೋಗ್ಯ ಸೇವೆಯ ಕಾರ್ಮಿಕರನ್ನು ಕಾಯಂ ಮಾಡಿಕೊಳ್ಳಲು ಸರಕಾರ ನಿರಾಕರಿಸಿದೆ ಮತ್ತು ‘ಸಮಾನ ಕೆಲಸಕ್ಕೆ ಸಮಾನ ವೇತನ’ದ ಬೇಡಿಕೆಗೂ ಕಿವಿಗೊಟ್ಟಿಲ್ಲ. ಈ ಸಾಂಕ್ರಾಮಿಕದ ನಡುವೆಯೇ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ವೈದ್ಯರು, ಸ್ಟಾಫ್ ನರ್ಸ್‍ಗಳು ಹಾಗೂ ಲ್ಯಾಬ್ ಟೆಕ್ನಿಷಿಯನ್ನರ ವೇತನಗಳನ್ನು ತಡೆಹಿಡಿಯಲಾಗಿದೆ. ಇದನ್ನು ನೋಡಿದರೆ, ಈ ಸರಕಾರವು ಇಂತಹ ಬಿಕ್ಕಟ್ಟಿನ ನಡುವೆಯೇ ತನ್ನದೇ ಆರೋಗ್ಯ ಸೇವೆಯ ವ್ಯವಸ್ಥೆಯನ್ನು ಉದ್ದೇಶಪೂರ್ವಕವಾಗಿ ನಾಶ ಮಾಡುತ್ತಿದೆ ಎಂದು ಕಾಣುತ್ತದೆ.

ಇಂತಹ ಕೆಟ್ಟ ಹೆಜ್ಜೆಗಳು ಈಗ ತಮ್ಮ ಪರಿಣಾಮಗಳನ್ನು ತೋರಿಸುತ್ತಿವೆ. ಸಾಂಕ್ರಾಮಿಕ ರೋಗಗಳು ಹೆಡೆಬಿಚ್ಚಿದಾಗ ಕೇವಲ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೆ ನಂಬಿಕೊಳ್ಳಬಹುದು ಎಂಬುದು ಈಗ ಸ್ಪಷ್ಟವಾಗುತ್ತಿದೆ ಹಾಗೂ ಖಾಸಗಿ ವಲಯಕ್ಕೆ ಎಷ್ಟೇ ‘ಪ್ರೋತ್ಸಾಹ’ಗಳನ್ನು ನೀಡಿದರೂ ಅದು ತನ್ನ ಹಿತಾಸಕ್ತಿಯನ್ನು ಮಾತ್ರ ನೋಡಿ, ಸಾರ್ವಜನಿಕರ ರಕ್ಷಣೆಗೆ ಬರಲಾರದು ಎಂಬುದೂ ಖಚಿತವಾಗಿದೆ. ಪರಿಸ್ಥಿತಿ ಎಷ್ಟೇ ಗಂಭೀರವಾಗಿರಲಿ, ಖಾಸಗಿ ಆರೋಗ್ಯ ಕ್ಷೇತ್ರವು ತನ್ನ ಲಾಭದ ಚಿಂತೆಯನ್ನಷ್ಟೇ ಮಾಡುತ್ತದೆ ಮತ್ತು ತನ್ನ ಸ್ವಾರ್ಥ ಹಿತಾಸಕ್ತಿಗಳನ್ನು ಕಾಪಾಡಲು ದುಡಿಯುತ್ತ, ಸರಕಾರವು ಖಾಸಗಿ ವಲಯಕ್ಕೆ ಮಾಡಿದ ‘ಅನ್ಯಾಯ’ಗಳ ಬಗ್ಗೆ ದೂರುವುದು, ಗಲಾಟೆ ಜಗಳ ಮಾಡುವುದನ್ನು ಮುಂದುವರೆಸುತ್ತದೆ ಎಂಬುದು ಸಾಬೀತಾಗಿದೆ.

ಇಂತಹ ಒಂದು ಗಂಭೀರ ಸಾಂಕ್ರಾಮಿಕದ ಮಧ್ಯೆಯೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡಲು ನಿರಾಕರಿಸುತ್ತಿರುವ ರಾಜಕೀಯ ವರ್ಗ ನಮ್ಮನ್ನು ಆಳುತ್ತಿರುವುದು ನಮ್ಮ ದುರಾದೃಷ್ಟ. ಉದಾಹರಣೆಗೆ, ಈ ಸಾಂಕ್ರಾಮಿಕದ ಬಿಕ್ಕಟ್ಟಿನಲ್ಲಿ, ತುರ್ತು ಪರಿಸ್ಥಿತಿಯ ಕಾನೂನುಗಳು ನೀಡುವ ನ್ಯಾಯಸಮ್ಮತ ಅಧಿಕಾರವನ್ನು ಬಳಸಿಕೊಂಡು ಖಾಸಗಿ ಆರೋಗ್ಯ ಸೇವೆಯ ಸೌಲಭ್ಯಗಳನ್ನು ತಾತ್ಕಾಲಿಕವಾಗಿ ಸ್ವಾಧೀನಪಡಿಸುವಲ್ಲಿ ಯಾವುದು ಅಡ್ಡಿ ಬರುತ್ತಿದೆ? ಸರಕಾರ ಉಚಿತ ಸೌಲಭ್ಯಗಳನ್ನು ನೀಡುತ್ತಿರುವಾಗ ಸಾರ್ವಜನಿಕರು ಕೋವಿಡ್ ಸೇವೆಗಳಿಗಾಗಿ ಖಾಸಗಿ ಸಂಸ್ಥೆಗಳಿಗೆ ಏಕೆ ಹಣ ತೆತ್ತಬೇಕು? ಸಾರ್ವಜನಿಕರ ಹಿತಾಸಕ್ತಿಯನ್ನು ಸರಕಾರ ಕಾಪಾಡದಿದ್ದರೆ ಮತ್ಯಾರು ಕಾಪಾಡಬೇಕು? ಈ ಸರಕಾರವನ್ನು, ಪ್ರತಿನಿಧಿಗಳನ್ನು ನಾವೇ ಆಯ್ಕೆ ಮಾಡಿ ಕಳುಹಿಸಿದ್ದೇವೆ ಎಂಬುದನ್ನು ನೆನಪಿಡಬೇಕಿದೆ ಹಾಗೂ ಸರಕಾರದ ತಪ್ಪುಗಳಿಗೆ ಅವರು ಹೊಣೆ ಹೊರುವಂತೆ ಮಾಡುವ ಸಮಯ ಬಂದಿದೆ. ಅದನ್ನು ಈಗ ಮಾಡದಿದ್ದರೆ ಯಾವಾಗ?

ಡಾ. ಅಖಿಲಾ ವಾಸನ್, ಜನಾರೋಗ್ಯ ಚಳವಳಿಯ ಮುಂಚೂಣಿ ಕಾರ್ಯಕರ್ತೆ ಮತ್ತು ಸಾರ್ವಜನಿಕ ಆರೋಗ್ಯದ ಸಂಶೋಧಕಿ


ಇದನ್ನು ಓದಿ: ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...