Homeಮುಖಪುಟಮಣಿಪುರ ಹಿಂಸಾಚಾರಕ್ಕೆ ಒಂದು ವರ್ಷ: ನೆಮ್ಮದಿಯ ಬದುಕಿಗಾಗಿ ಇನ್ನೂ ಹೆಣಗಾಡುತ್ತಿರುವ ಜನರು

ಮಣಿಪುರ ಹಿಂಸಾಚಾರಕ್ಕೆ ಒಂದು ವರ್ಷ: ನೆಮ್ಮದಿಯ ಬದುಕಿಗಾಗಿ ಇನ್ನೂ ಹೆಣಗಾಡುತ್ತಿರುವ ಜನರು

- Advertisement -
- Advertisement -

ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭಗೊಂಡು ಇಂದಿಗೆ (ಮೇ 3, 2024) ಒಂದು ವರ್ಷ ಪೂರ್ಣಗೊಂಡಿದೆ. ಭಾರತದ ಈಶಾನ್ಯದಲ್ಲಿರುವ ಪ್ರಶಾಂತವಾದ ಬೆಟ್ಟ ಗುಡ್ಡಗಳಾವೃತ ಪುಟ್ಟ ರಾಜ್ಯದ ಮೇ 3, 2023ರಿಂದ ಹಿಂಸಾಚಾರದ ಸುಳಿಯಲ್ಲಿ ಸಿಲುಕಿ ಹೆಣಗಾಡುತ್ತಿದೆ. ರಾಜ್ಯದ ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ. ನೂರಾರು ಜನರು ಕೊಲ್ಲಲ್ಪಟ್ಟಿದ್ದಾರೆ. ಹಲವಾರು ಮಂದಿ ಇನ್ನೂ ಕಾಣೆಯಾಗಿದ್ದಾರೆ. ಒಂದು ವರ್ಷದ ಹಿಂಸಾಚಾರ ಜನರು ತಮ್ಮ ವ್ಯವಹಾರ, ಮನೆ, ಆಸ್ತಿ ಮತ್ತು ಪ್ರೀತಿ ಪಾತ್ರರನ್ನು ಕಳೆದುಕೊಳ್ಳುವಂತೆ ಮಾಡಿದೆ. ರಾಜ್ಯ ಈ ಹಿಂದಿನಂತೆ ಶಾಂತಿಯುತ ಸಹಜ ಸ್ಥಿತಿಗೆ ಮರಳುವ ಲಕ್ಷಣ ಇನ್ನೂ ಕಾಣುತ್ತಿಲ್ಲ.

ದಾಖಲೆಗಳ ಪ್ರಕಾರ, ಒಂದು ವರ್ಷದ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ದೌರ್ಜನ್ಯದ ವರದಿಗಳು ಅತ್ಯಂತ ಭೀಕರವಾಗಿದೆ. ಹಿಂಸಾಚಾರದಿಂದ ರಾಜ್ಯ ಎರಡು ಭಾಗಗಳಾಗಿದ್ದು, ಭೂಮಿ ಮತ್ತು ಇತರ ಸೌಲಭ್ಯಗಳು ಮೈತೇಯಿ ಮತ್ತು ಕುಕಿ ಎಂಬ ಎರಡು ಸಮುದಾಯಗಳ ನಡುವೆ ಧಾರ್ಮಿಕ ಮತ್ತು ಜನಾಂಗೀಯ ರೇಖೆಗಳಲ್ಲಿ ವಿಂಗಡಣೆಯಾಗಿದೆ.

ಮಣಿಪುರದ ಒಟ್ಟು ಜನ ಸಂಖ್ಯೆಯ ಶೇ. 53ರಷ್ಟು ಇರುವ ಮೈತೇಯಿ ಸಮುದಾಯವನ್ನು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಪಟ್ಟಿಗೆ ಸೇರಿಸಲು ಕಳೆದ ವರ್ಷ ಮಾರ್ಚ್‌ನಲ್ಲಿ ಹೈಕೋರ್ಟ್ ನೀಡಿದ ಆದೇಶದಿಂದ ಹಿಂಸಾಚಾರ ಭುಗಿಲೆದ್ಧಿತ್ತು.

ಆರಂಭದಲ್ಲಿ ಶಾಂತಿಯುತ ಪ್ರತಿಭಟನೆಗಳು ನಡೆದರೂ, ಬಳಿಕ ಅದು ಹಿಂಸಾಚಾರಕ್ಕೆ ತಿರುಗಿತು. ಸಿಎಂ ಬಿರೇನ್ ಸಿಂಗ್ ಅವರು ಏಪ್ರಿಲ್ 27 ರಂದು ಚುರಾಚಂದ್‌ಪುರಕ್ಕೆ ಭೇಟಿ ನೀಡುವ ಒಂದು ದಿನದ ಮೊದಲು, ಅವರು ಉದ್ಘಾಟಿಸಲು ಹೊರಟಿದ್ದ ಜಿಮ್‌ಗೆ ಬೆಂಕಿ ಹಚ್ಚಲಾಯಿತು. ಪರಿಣಾಮ ರಾಜ್ಯದ ವಿವಿದೆಡೆ ಕರ್ಫ್ಯೂ ವಿಧಿಸಲಾಯಿತು ಮತ್ತು ಇಂಟರ್ನೆಟ್ ಸ್ಥಗಿತಗೊಳಿಸಲಾಯಿತು. ಮಣಿಪುರದ ಆಲ್ ಟ್ರೈಬಲ್ ಸ್ಟೂಡೆಂಟ್ಸ್ ಯೂನಿಯನ್ (ಎಟಿಎಸ್‌ಯುಎಂ) ಆಯೋಜಿಸಿದ ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆಯ ನಂತರ ಉದ್ವಿಗ್ನತೆ ಉಲ್ಬಣಗೊಂಡಿತು. ಈ ಮೆರವಣಿಗೆಯಲ್ಲಿ ಸುಮಾರು 60,000 ಜನರು ಭಾಗವಹಿಸಿದ್ದರು ಎಂದು ಹೇಳಲಾಗುತ್ತಿದೆ.

ಹಿಂಸಾಚಾರ ಉಲ್ಬಣಗೊಂಡಾಗ, ಅದು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆಯಿತು. ಮಣಿಪುರ ಅಕ್ಷರಶಃ ಯುದ್ಧ ಭೂಮಿಯಾಗಿ ಮಾರ್ಪಟ್ಟಿತು. ಮೈತೇಯಿ ಮತ್ತು ಕುಕಿ-ಝೋ ಬುಡಕಟ್ಟುಗಳ ನಡುವಿನ ಬಿರುಕು ಮತ್ತಷ್ಟು ಆಳವಾಯಿತು. ಹಿಂಸಾಚಾರ ಇಂಫಾಲ್ ಮತ್ತು ಚುರಾಚಂದ್‌ಪುರದಿಂದ ಇಂಫಾಲ್ ಕಣಿವೆಯ ಹೊರ ಪ್ರದೇಶಗಳಿಗೂ ಹಬ್ಬಿತು. ಎರಡೂ ಕಡೆಯವರು ತೀವ್ರವಾದ ಗುಂಡಿನ ಚಕಮಕಿ ಮತ್ತು ಹೊಂಚುದಾಳಿಗಳನ್ನು ಪ್ರಾರಂಭಿಸಿದರು.

ಮೈತೇಯಿ ಮತ್ತು ಕುಕಿ ಝೋ ಸಮುದಾಯಗಳ ನಡುವಿನ ಸಂಘರ್ಷಕ್ಕೆ ಪ್ರಸ್ತುತ ಒಂದು ವರ್ಷ ತುಂಬಿದೆ. ಎರಡೂ ಸಮುದಾಯಗಳು ಜನಾಂಗೀಯ ರೇಖೆಗಳ ಮೇಲೆ ವಿಭಜಿಸಲ್ಪಟ್ಟಿವೆ. ಒಂದು ಸಮುದಾಯದ ಜನರು ಮತ್ತೊಂದು ಸಮುದಾಯದವರು ಇರುವ ಪ್ರದೇಶಗಳಿಗೆ ತೆರಳದಂತಹ ಪರಿಸ್ಥಿತಿಯಿದೆ. ಅನೇಕ ಪ್ರದೇಶಗಳನ್ನು ಸೂಕ್ಷ್ಮ ವಲಯಗಳು ಎಂದು ಗುರುತಿಸಿ ಸೇನಾ ಸಿಬ್ಬಂದಿಯನ್ನು ನೇಮಿಸಲಾಗಿದೆ.

ಮಣಿಪುರ ಹಿಂಸಾಚಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆ ದೆಹಲಿ, ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಕುಕಿ ಮತ್ತು ಮೈತೇಯಿ ಎರಡೂ ಸಮುದಾಯಗಳ ಜನರು ವಿಶೇಷ ಸಭೆ, ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದಾರೆ.

ಪ್ರಸ್ತುತ ಸುಮಾರು 50 ಸಾವಿರ ಆಂತರಿಕವಾಗಿ ಸ್ಥಳಾಂತರಗೊಂಡ ಜನರು ಇನ್ನೂ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಕನಿಷ್ಠ 13,247 ಕಟ್ಟಡಗಳನ್ನು ನಾಶಪಡಿಸಲಾಗಿದೆ ಅಥವಾ ನಾಶವಾಗಿವೆ. ಕಳೆದ 12 ತಿಂಗಳಲ್ಲಿ ಅಧಿಕೃತವಾಗಿ ಸುಮಾರು 28 ಜನರು ಕಾಣೆಯಾಗಿದ್ದಾರೆ, ಅಪಹರಣಕ್ಕೊಳಗಾಗಿದ್ದಾರೆ ಅಥವಾ ಕೊಲೆಯಾಗಿದ್ದಾರೆಂದು ಭಾವಿಸಲಾಗಿದೆ. ಪ್ರಸ್ತುತ ದೊಡ್ಡ ಮಟ್ಟದ ಸಂಘರ್ಷ ನಿಂತಿದೆ. ಆದರೆ, ರಾಜ್ಯದ ವಿವಿದೆಡೆ ಆಗಾಗ ಗಲಾಟೆಗಳು ವರದಿಯಾಗುತ್ತಿರುತ್ತವೆ.

12 ತಿಂಗಳ ಹಿಂಸಾಚಾರದಿಂದ ಸಾರಿಗೆ ಮತ್ತು ಸಂವಹನ ಸೇವೆಗಳಿಗೆ ಅಡಚಣೆಯಾಗಿದೆ. ವ್ಯಾಪಾರ, ಶಾಲಾ- ಕಾಲೇಜುಗಳು ಮತ್ತು ಇತರ ಸಂಸ್ಥೆಗಳ ಮೇಲೆ ದೊಡ್ಡ ಪರಿಣಾಮ ಬೀರಿದೆ. ಮಣಿಪುರದ ಆರ್ಥಿಕತೆಯ ಮುಖ್ಯ ಆಧಾರವೆಂದು ಪರಿಗಣಿಸಲಾದ ಕೃಷಿ ವಲಯದ ಮೇಲೂ ಪರಿಣಾಮ ಬೀರಿದೆ.

ಒಂದು ವರ್ಷದಲ್ಲಿ ನೂರಾರು ಅಪರಾಧ ಪ್ರಕರಣಗಳು ಬೆಳಕಿಗೆ ಬಂದಿವೆ. ಅವುಗಳಲ್ಲಿ ಹಲವು ಪ್ರಕರಣಗಳನ್ನು ಇನ್ನೂ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ 27 ಹಿಂಸಾಚಾರದ ಪ್ರಕರಣಗಳನ್ನು ರಾಜ್ಯ ಪೊಲೀಸರಿಂದ ಸಿಬಿಐಗೆ ವಹಿಸಲಾಗಿದೆ.

ಅವುಗಳಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಘಟನೆಯೂ ಸೇರಿದೆ. ಕಳೆದ ಜುಲೈನಲ್ಲಿ ಇಬ್ಬರು ಕುಕಿ ಮಹಿಳೆಯರನ್ನು ಮೈತೇಯಿ ಗುಂಪೊಂದು ಭತ್ತದ ಗದ್ದೆಯಲ್ಲಿ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿತ್ತು. ಅದರ ವಿಡಿಯೋ ವೈರಲ್ ಆಗಿತ್ತು. ಬಳಿಕ, ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಮೇ 4 ರಂದು ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ಬೆನ್ನಲ್ಲೇ ಈ ಘಟನೆ ನಡೆದಿದೆ ಎನ್ನಲಾಗಿದೆ.

ಮಣಿಪುರದಲ್ಲಿ ಶಾಂತಿ ಸ್ಥಾಪಿಸುವುದು, ಒಡೆದು ಹೋದ ಎರಡು ಸಮುದಾಯಗಳನ್ನು ಒಗ್ಗೂಡಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ನಾಗರಿಕರ ಬಳಿಯಿರುವ ಶಸ್ತ್ರಾಸ್ತ್ರಗಳನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳುವವರೆಗೆ ಅಲ್ಲಿ ಶಾಂತಿ ನೆಲಸುವುದಿಲ್ಲ ಎಂದು ವರದಿಗಳು ಅಭಿಪ್ರಾಯಪಟ್ಟಿವೆ.

ಸಂಘರ್ಷದ ಸಂದರ್ಭದಲ್ಲಿ ಭದ್ರತಾ ಸಂಸ್ಥೆಗಳು ಸುಮಾರು 2 ಸಾವಿರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಅಂದಾಜಿಸಿದ್ದಾರೆ. ಇನ್ನೂ 4 ಸಾವಿರ ನಾಗರಿಕರ ಕೈಯಲ್ಲಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಸ್ಸಾಂ ರೈಫಲ್ಸ್ ಅಧಿಕಾರಿಯೊಬ್ಬರು ಸಂಘರ್ಷಕ್ಕೆ “ರಾಜಕೀಯ ಪರಿಹಾರ” ದ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಆದರೆ “ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿಯು ಉದ್ವಿಗ್ನತೆಯನ್ನು ಉಂಟು ಮಾಡುತ್ತಿದೆ. ಇದು ಕಾನೂನು ಮತ್ತು ಸುವ್ಯವಸ್ಥೆಗೆ ಅಡಚಣೆಯಾಗಿದೆ ಎಂದು ಇಂಡಿಯನ್ ಎಕ್ಸ್‌ ಪ್ರೆಸ್ ವರದಿ ಹೇಳಿದೆ.

ಎರಡೂ ಸಮುದಾಯಗಳ ನಡುವಿನ ಸಂದಾನ ಮಾತುಗಳು ನಡೆದಿಲ್ಲ. ಕೇಂದ್ರ ಸರ್ಕಾರವೇ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು ಎಂದು ಸಮುದಾಯಗಳು ಆಗ್ರಹಿಸಿವೆ. ಆದರೆ, ಹಿಂಸಾಚಾರ ಪ್ರಾರಂಭಗೊಂಡು ವರ್ಷ ತುಂಬಿದರೂ ಪ್ರಧಾನಿ ಮೋದಿ ಮಣಿಪುರದ ಕಡೆ ತಲೆ ಹಾಕಿಲ್ಲ. ಹಿಂಸಾಚಾರದ ಬಗ್ಗೆ ಮಾತೆತ್ತಿಲ್ಲ.

ಮಣಿಪುರ ವಿಧಾನಸಭೆಯ 10 ಕುಕಿ-ಝೋಮಿ ಶಾಸಕರ ಜೊತೆಗೆ ಕುಕಿ-ಝೋಮಿ ಗುಂಪುಗಳು, ಕಳೆದ ವರ್ಷದ ಮೇ ತಿಂಗಳಿನಿಂದ ತಮಗೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಮಾಡುವುದು ಮಾತ್ರ ಸ್ವೀಕಾರಾರ್ಹ ಪರಿಹಾರ ಎಂದು ಹೇಳಿಕೊಳ್ಳುತ್ತಿದ್ದಾರೆ.

“ನಾವು ಒಂದೇ ಆಡಳಿತದಲ್ಲಿ ಒಟ್ಟಿಗೆ ಬದುಕಲು ಸಾಧ್ಯವಿಲ್ಲ ಎಂದು ಚೆನ್ನಾಗಿ ತಿಳಿದಿರುವ ಕೇಂದ್ರವು ನಮ್ಮ ಸಮಸ್ಯೆಯನ್ನು ಪರಿಹರಿಸಬೇಕು. ಯಾವುದೇ ರಾಜಿ ಸಾಧ್ಯವಿಲ್ಲ. ಮಣಿಪುರ ಸರ್ಕಾರವು ಅದರ ಬಗ್ಗೆ ಏನನ್ನೂ ಮಾಡುವುದಿಲ್ಲ ಎಂಬುದು ನಮಗೆ ಸ್ಪಷ್ಟವಾಗಿದೆ. ನಾವು ನಮ್ಮ ಭೂಮಿ ರಕ್ಷಿಸಲು ಕೇಂದ್ರ ಸರ್ಕಾರದೊಂದಿಗೆ ನಮ್ಮ ರಾಜಕೀಯ ಬೇಡಿಕೆಯನ್ನು ಒತ್ತಾಯಿಸುವುದನ್ನು ಮುಂದುವರಿಸುತ್ತೇವೆ” ಎಂದು ಚುರಚಂದಪುರ ಮೂಲದ ಕುಕಿ-ಜೋಮಿ ಸಮುದಾತದ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆಯ ಕಾರ್ಯದರ್ಶಿ ಮುವಾನ್ ಟಾಂಬಿಂಗ್ ಹೇಳಿದ್ದಾರೆ.

ಮತ್ತೊಂದೆಡೆ ಮೈತೇಯಿ ಸಮುದಾಯದ ಪರ ಸಂಘಟನೆ COCOMI ನ ವಕ್ತಾರರಾದ ಖುರೈಜಮ್ ಅಥೌಬಾ, ಕೇಂದ್ರವು ಕುಕಿ-ಝೋಮಿ ಬಂಡುಕೋರರ ಗುಂಪುಗಳ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅವರೊಂದಿಗೆ ಕದನ ವಿರಾಮದ ಮಾತುಕತೆಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ ಒಂದು ವರ್ಷದ ಹಿಂಸಾಚಾರದ ಬಳಿಕವೂ ರಾಜ್ಯ ಯಥಾ ಸ್ಥಿತಿಗೆ ಮರಳುವ ಲಕ್ಷಣ ಕಾಣುತ್ತಿಲ್ಲ. ಇದರಲ್ಲಿ ಜನರ ನಡುವಿನ ಸಂಘರ್ಷಕ್ಕಿಂತ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಉಕ್ರೇನ್-ರಷ್ಯಾ, ಇಸ್ರೇಲ್- ಪ್ಯಾಲೆಸ್ತೀನ್ ನಡುವಿನ ಯುದ್ಧ ನಿಲ್ಲಿಸುವ ಸಾಮಾರ್ಥ್ಯವಿದೆ ಎನ್ನುವ ಪ್ರಧಾನಿ, ನಮ್ಮದೇ ದೇಶದ ರಾಜ್ಯ ಹಿಂಸಾಚಾರದಿಂದ ನಲುಗಿದರೂ ಭೇಟಿ ನೀಡದಿರುವುದು ವಿಪರ್ಯಾಸವೇ ಸರಿ. ರಾಜಕೀಯ ಡೊಂಬರಾಟದ ನಡುವೆ ಅಮಾಯಕ ಜನರು ನೆಮ್ಮದಿಯ ಬದುಕಿನ ನಿರೀಕ್ಷೆಯಲ್ಲಿ ದಿನ ಕಳೆಯುತ್ತಿದ್ದಾರೆ.

ಇದನ್ನೂ ಓದಿ : ಬಿಜೆಪಿಯ ನವ ಭಾರತದಲ್ಲಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ: ಪರಕಾಲ ಪ್ರಭಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...