Homeಮುಖಪುಟಸ್ನೇಹಿತನ ತೊಡೆಮೇಲೆ ಪ್ರಾಣಬಿಟ್ಟ ಯುವಕ : ನಿಲ್ಲದ ವಲಸೆ ಕಾರ್ಮಿಕರ ಕಣ್ಣೀರ ಕಥೆಗಳು

ಸ್ನೇಹಿತನ ತೊಡೆಮೇಲೆ ಪ್ರಾಣಬಿಟ್ಟ ಯುವಕ : ನಿಲ್ಲದ ವಲಸೆ ಕಾರ್ಮಿಕರ ಕಣ್ಣೀರ ಕಥೆಗಳು

- Advertisement -
- Advertisement -

ಯಾಕೂಬ್‌ ಜ್ವರ ಮತ್ತು ವಾಂತಿಯಿಂದ ಬಳಲುತ್ತಿರುವ 24 ವರ್ಷದ ತನ್ನ ಸ್ನೇಹಿತ ಅಮೃತ್‌ನನ್ನು ತನ್ನ ತೊಡೆಮೇಲೆ ಮಲಗಿಸಿಕೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದಾನೆ. ಆದರೆ ಕೊರೊನಾ ಭಯದಿಂದ ಸಹಾಯ ಮಾಡಲು ಯಾರು ಮುಂದಾಗುತ್ತಿಲ್ಲ. ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿನ ಈ ಹೃದಯವಿದ್ರಾವಕ ಘಟನೆಯನ್ನು ದಾರಿಹೋಗನೊಬ್ಬ ಫೋಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾನೆ. ಅಮೃತ್‌ ತನ್ನ ಸ್ನೇಹಿತರ ತೊಡೆಮೇಲೆ ಮೃತಪಟ್ಟಿದ್ದಾನೆಂಬ ಈ ಫೋಟೊ ವೈರಲ್‌ ಆಗಿದೆ. ಆದರೆ ಕೊನೆಗೂ ಆಸ್ಪತ್ರೆಗೆ ದಾಖಲಾದ ಕೆಲವೇ ಗಂಟೆಗಳಲ್ಲಿ ತೀವ್ರ ಅನಾರೋಗ್ಯ, ಬಿಸಿಲಿನ ಝಳ ಮತ್ತು ಪ್ರಯಾಣದ ಆಯಾಸದಿಂದ ಅಮೃತ್‌ ಕೊನೆಯುಸಿರೆಳೆದಿದ್ದಾನೆ.

ಗುಜರಾತ್‌ನಿಂದ ತಮ್ಮ ಊರು ಉತ್ತರಪ್ರದೇಶಕ್ಕೆ ಹೊರಟ ವಲಸೆ ಕಾರ್ಮಿಕರ ಕಣ್ಣೀರ ಕತೆ ಇದು. ಸೂರತ್‌ನ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಈ ಸ್ನೇಹಿತರಿಬ್ಬರು ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ ಇನ್ನು ಸಾಕು ಎಂದು ಎಲ್ಲರಂತೆ ತಮ್ಮ ಊರಿಗೆ ವಾಪಸ್‌ ಹೊರಟಿದ್ದಾರೆ. ತಲಾ 4000 ರೂ ನೀಡಿ ಈಗಾಗಲೇ ತುಂಬಿಹೋಗಿದ್ದ ಟ್ರಕ್‌ವೊಂದರಲ್ಲಿ ನಿಂತುಕೊಂಡು ಹೋಗಲು ಅವಕಾಶ ಪಡೆದ ಇವರು ಪ್ರಯಾಣ ಹೊರಟಿದ್ದಾರೆ. ಈ ಮಧ್ಯೆ ಅಮೃತ್‌ಗೆ ತೀವ್ರ ಜ್ವರ ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಪ್ರಯಾಣ ಮುಂದುವರೆಸಲಾಗದೇ ಮಧ್ಯಪ್ರದೇಶದ ಶಿವಪುರಿಯಲ್ಲಿ ಇಳಿದುಕೊಂಡಿದ್ದಾನೆ. ಆಗ ಆತನ ಜೊತೆಗೆ ನಿಂತ ಏಕೈಕ ವ್ಯಕ್ತಿ ಆತನ ಸ್ನೇಹಿತ ಯಾಕೂಬ್‌.

ವೈರಲ್‌ ಚಿತ್ರದಲ್ಲಿ ಯಾಕೂಬ್‌ ತನ್ನ ಸ್ನೇಹಿತ ಅಮೃತ್‌ನಲ್ಲಿ ತೊಡಮೇಲೆ ಮಲಗಿಸಿಕೊಂಡು ಸಹಾಯಕ್ಕಾಗಿ ಮನವಿ ಮಾಡುತ್ತಿದ್ದಾನೆ. ಯಾರೂ ಅತ್ತ ಸುಳಿಯುತ್ತಿಲ್ಲ. ಅಮೃತ್‌ ತೀವ್ರ ಜ್ವರ ಮತ್ತು ವಾಂತಿಯಿಂದ ಸೊರಗಿದ್ದಾನೆ. ಆತನನ್ನು ಶಿವಪುರಿಯ ಆಸ್ಪತ್ರೆಗೆ ಸೇರಿಸಿದರೂ ಬದುಕುಳಿದಿಲ್ಲ. ಆತನ ಮತ್ತು ಯಾಕೂಬ್‌ ಇಬ್ಬರ ಮಾದರಿಗಳನ್ನು ಕೊರೊನಾ ಪರೀಕ್ಷೆಗೆ ಕಳಿಸಿದ್ದು ವರದಿಗಾಗಿ ಕಾಯಲಾಗುತ್ತಿದೆ. ಯಾಕೂಬ್‌ನನ್ನು ಶಿವಪುರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ ಎಂದು ಸರ್ಜನ್ ಪಿ.ಕೆ ಖಾರೆ ತಿಳಿಸಿದ್ದಾರೆ.

ಲಕ್ಷಾಂತರ ವಲಸೆ ಕಾರ್ಮಿಕರು ತಾವಿದ್ದ ಸ್ಥಳ ತೊರೆದು ತಮ್ಮ ಮೂಲ ಸ್ಥಳಗಳಿಗೆ ನಡೆದುಕೊಂಡೇ ತೆರಳುತ್ತಿರುವ ಹಲವಾರು ಚಿತ್ರಗಳು ದಿನನಿತ್ಯ ಕಾಣಸಿಗುತ್ತಿವೆ. ಈಗಾಗಲೇ ಹಲವಾರು ಮಂದಿ ಈ ನಡಿಗೆಯಲ್ಲಿ ಪ್ರಾಣತೆತ್ತಿದ್ದಾರೆ. ಅವರ ಗುಂಪಿಗೆ ಅಮೃತ್‌ ಹೊಸ ಸೇರ್ಪಡೆಯಾಗಿದ್ದಾನೆ. ಇವರೆಲ್ಲರಿಗೆ ಸೂಕ್ತ ಪ್ರಯಾಣ ವ್ಯವಸ್ಥೆ ಮಾಡಲು ಆಳುವ ಸರ್ಕಾರಗಳು ಸಂರ್ಪೂಣವಾಗಿ ವಿಫಲವಾಗಿವೆ.

ಈ ಕುರಿತು ಸುಪ್ರೀಂ ಕೋರ್ಟ್‌‌ನಲ್ಲಿ ಸಾಮಾಜಿಕ ಕಾರ್ಯಕರ್ತರು ಅರ್ಜಿ ಸಲ್ಲಿಸಿ “ನಡೆಯುತ್ತಿರುವ ವಲಸೆ ಕಾರ್ಮಿರಿಗೆ ಊಟ ಮತ್ತು ವಸತಿಯ ವ್ಯವಸ್ಥೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡಬೇಕು” ಎಂದು ವಾದಿಸಿದ್ದಾರೆ. ಆದರೆ ಸುಪ್ರೀಂ ಕೋರ್ಟ್‌ ಮಾತ್ರ ಯಾರು ನಡೆಯುತ್ತಿದ್ದಾರೆ, ಯಾರು ನಡೆಯುತ್ತಿಲ್ಲ ಎಂದು ತಿಳಿಯಲು ಮತ್ತು ತಡೆಯಲು ಸಾಧ್ಯವಿಲ್ಲ. ಈ ಕುರಿತು ಸರ್ಕಾರಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ಅದನ್ನು ರಾಜ್ಯಗಳು ನಿರ್ಧರಿಸಲಿ ಎಂದು ಹೇಳಿ ಕೈತೊಳೆದಕೊಂಡಿದೆ.


ಇದನ್ನೂ ಓದಿ: ಆತ್ಮಕ್ಕೆ ಬರ ಬಿದ್ದ ಆಡಳಿತದಲ್ಲಿ ಕೊರೊನಾ ಜೊತೆ ಬದುಕುವುದಾ ಕಲಿಯಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...