Homeಮುಖಪುಟಸ್ನೇಹಿತನ ತೊಡೆಮೇಲೆ ಪ್ರಾಣಬಿಟ್ಟ ಯುವಕ : ನಿಲ್ಲದ ವಲಸೆ ಕಾರ್ಮಿಕರ ಕಣ್ಣೀರ ಕಥೆಗಳು

ಸ್ನೇಹಿತನ ತೊಡೆಮೇಲೆ ಪ್ರಾಣಬಿಟ್ಟ ಯುವಕ : ನಿಲ್ಲದ ವಲಸೆ ಕಾರ್ಮಿಕರ ಕಣ್ಣೀರ ಕಥೆಗಳು

- Advertisement -
- Advertisement -

ಯಾಕೂಬ್‌ ಜ್ವರ ಮತ್ತು ವಾಂತಿಯಿಂದ ಬಳಲುತ್ತಿರುವ 24 ವರ್ಷದ ತನ್ನ ಸ್ನೇಹಿತ ಅಮೃತ್‌ನನ್ನು ತನ್ನ ತೊಡೆಮೇಲೆ ಮಲಗಿಸಿಕೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದಾನೆ. ಆದರೆ ಕೊರೊನಾ ಭಯದಿಂದ ಸಹಾಯ ಮಾಡಲು ಯಾರು ಮುಂದಾಗುತ್ತಿಲ್ಲ. ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿನ ಈ ಹೃದಯವಿದ್ರಾವಕ ಘಟನೆಯನ್ನು ದಾರಿಹೋಗನೊಬ್ಬ ಫೋಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾನೆ. ಅಮೃತ್‌ ತನ್ನ ಸ್ನೇಹಿತರ ತೊಡೆಮೇಲೆ ಮೃತಪಟ್ಟಿದ್ದಾನೆಂಬ ಈ ಫೋಟೊ ವೈರಲ್‌ ಆಗಿದೆ. ಆದರೆ ಕೊನೆಗೂ ಆಸ್ಪತ್ರೆಗೆ ದಾಖಲಾದ ಕೆಲವೇ ಗಂಟೆಗಳಲ್ಲಿ ತೀವ್ರ ಅನಾರೋಗ್ಯ, ಬಿಸಿಲಿನ ಝಳ ಮತ್ತು ಪ್ರಯಾಣದ ಆಯಾಸದಿಂದ ಅಮೃತ್‌ ಕೊನೆಯುಸಿರೆಳೆದಿದ್ದಾನೆ.

ಗುಜರಾತ್‌ನಿಂದ ತಮ್ಮ ಊರು ಉತ್ತರಪ್ರದೇಶಕ್ಕೆ ಹೊರಟ ವಲಸೆ ಕಾರ್ಮಿಕರ ಕಣ್ಣೀರ ಕತೆ ಇದು. ಸೂರತ್‌ನ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಈ ಸ್ನೇಹಿತರಿಬ್ಬರು ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ ಇನ್ನು ಸಾಕು ಎಂದು ಎಲ್ಲರಂತೆ ತಮ್ಮ ಊರಿಗೆ ವಾಪಸ್‌ ಹೊರಟಿದ್ದಾರೆ. ತಲಾ 4000 ರೂ ನೀಡಿ ಈಗಾಗಲೇ ತುಂಬಿಹೋಗಿದ್ದ ಟ್ರಕ್‌ವೊಂದರಲ್ಲಿ ನಿಂತುಕೊಂಡು ಹೋಗಲು ಅವಕಾಶ ಪಡೆದ ಇವರು ಪ್ರಯಾಣ ಹೊರಟಿದ್ದಾರೆ. ಈ ಮಧ್ಯೆ ಅಮೃತ್‌ಗೆ ತೀವ್ರ ಜ್ವರ ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಪ್ರಯಾಣ ಮುಂದುವರೆಸಲಾಗದೇ ಮಧ್ಯಪ್ರದೇಶದ ಶಿವಪುರಿಯಲ್ಲಿ ಇಳಿದುಕೊಂಡಿದ್ದಾನೆ. ಆಗ ಆತನ ಜೊತೆಗೆ ನಿಂತ ಏಕೈಕ ವ್ಯಕ್ತಿ ಆತನ ಸ್ನೇಹಿತ ಯಾಕೂಬ್‌.

ವೈರಲ್‌ ಚಿತ್ರದಲ್ಲಿ ಯಾಕೂಬ್‌ ತನ್ನ ಸ್ನೇಹಿತ ಅಮೃತ್‌ನಲ್ಲಿ ತೊಡಮೇಲೆ ಮಲಗಿಸಿಕೊಂಡು ಸಹಾಯಕ್ಕಾಗಿ ಮನವಿ ಮಾಡುತ್ತಿದ್ದಾನೆ. ಯಾರೂ ಅತ್ತ ಸುಳಿಯುತ್ತಿಲ್ಲ. ಅಮೃತ್‌ ತೀವ್ರ ಜ್ವರ ಮತ್ತು ವಾಂತಿಯಿಂದ ಸೊರಗಿದ್ದಾನೆ. ಆತನನ್ನು ಶಿವಪುರಿಯ ಆಸ್ಪತ್ರೆಗೆ ಸೇರಿಸಿದರೂ ಬದುಕುಳಿದಿಲ್ಲ. ಆತನ ಮತ್ತು ಯಾಕೂಬ್‌ ಇಬ್ಬರ ಮಾದರಿಗಳನ್ನು ಕೊರೊನಾ ಪರೀಕ್ಷೆಗೆ ಕಳಿಸಿದ್ದು ವರದಿಗಾಗಿ ಕಾಯಲಾಗುತ್ತಿದೆ. ಯಾಕೂಬ್‌ನನ್ನು ಶಿವಪುರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ ಎಂದು ಸರ್ಜನ್ ಪಿ.ಕೆ ಖಾರೆ ತಿಳಿಸಿದ್ದಾರೆ.

ಲಕ್ಷಾಂತರ ವಲಸೆ ಕಾರ್ಮಿಕರು ತಾವಿದ್ದ ಸ್ಥಳ ತೊರೆದು ತಮ್ಮ ಮೂಲ ಸ್ಥಳಗಳಿಗೆ ನಡೆದುಕೊಂಡೇ ತೆರಳುತ್ತಿರುವ ಹಲವಾರು ಚಿತ್ರಗಳು ದಿನನಿತ್ಯ ಕಾಣಸಿಗುತ್ತಿವೆ. ಈಗಾಗಲೇ ಹಲವಾರು ಮಂದಿ ಈ ನಡಿಗೆಯಲ್ಲಿ ಪ್ರಾಣತೆತ್ತಿದ್ದಾರೆ. ಅವರ ಗುಂಪಿಗೆ ಅಮೃತ್‌ ಹೊಸ ಸೇರ್ಪಡೆಯಾಗಿದ್ದಾನೆ. ಇವರೆಲ್ಲರಿಗೆ ಸೂಕ್ತ ಪ್ರಯಾಣ ವ್ಯವಸ್ಥೆ ಮಾಡಲು ಆಳುವ ಸರ್ಕಾರಗಳು ಸಂರ್ಪೂಣವಾಗಿ ವಿಫಲವಾಗಿವೆ.

ಈ ಕುರಿತು ಸುಪ್ರೀಂ ಕೋರ್ಟ್‌‌ನಲ್ಲಿ ಸಾಮಾಜಿಕ ಕಾರ್ಯಕರ್ತರು ಅರ್ಜಿ ಸಲ್ಲಿಸಿ “ನಡೆಯುತ್ತಿರುವ ವಲಸೆ ಕಾರ್ಮಿರಿಗೆ ಊಟ ಮತ್ತು ವಸತಿಯ ವ್ಯವಸ್ಥೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡಬೇಕು” ಎಂದು ವಾದಿಸಿದ್ದಾರೆ. ಆದರೆ ಸುಪ್ರೀಂ ಕೋರ್ಟ್‌ ಮಾತ್ರ ಯಾರು ನಡೆಯುತ್ತಿದ್ದಾರೆ, ಯಾರು ನಡೆಯುತ್ತಿಲ್ಲ ಎಂದು ತಿಳಿಯಲು ಮತ್ತು ತಡೆಯಲು ಸಾಧ್ಯವಿಲ್ಲ. ಈ ಕುರಿತು ಸರ್ಕಾರಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ಅದನ್ನು ರಾಜ್ಯಗಳು ನಿರ್ಧರಿಸಲಿ ಎಂದು ಹೇಳಿ ಕೈತೊಳೆದಕೊಂಡಿದೆ.


ಇದನ್ನೂ ಓದಿ: ಆತ್ಮಕ್ಕೆ ಬರ ಬಿದ್ದ ಆಡಳಿತದಲ್ಲಿ ಕೊರೊನಾ ಜೊತೆ ಬದುಕುವುದಾ ಕಲಿಯಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...