Homeಮುಖಪುಟಸ್ನೇಹಿತನ ತೊಡೆಮೇಲೆ ಪ್ರಾಣಬಿಟ್ಟ ಯುವಕ : ನಿಲ್ಲದ ವಲಸೆ ಕಾರ್ಮಿಕರ ಕಣ್ಣೀರ ಕಥೆಗಳು

ಸ್ನೇಹಿತನ ತೊಡೆಮೇಲೆ ಪ್ರಾಣಬಿಟ್ಟ ಯುವಕ : ನಿಲ್ಲದ ವಲಸೆ ಕಾರ್ಮಿಕರ ಕಣ್ಣೀರ ಕಥೆಗಳು

- Advertisement -
- Advertisement -

ಯಾಕೂಬ್‌ ಜ್ವರ ಮತ್ತು ವಾಂತಿಯಿಂದ ಬಳಲುತ್ತಿರುವ 24 ವರ್ಷದ ತನ್ನ ಸ್ನೇಹಿತ ಅಮೃತ್‌ನನ್ನು ತನ್ನ ತೊಡೆಮೇಲೆ ಮಲಗಿಸಿಕೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದಾನೆ. ಆದರೆ ಕೊರೊನಾ ಭಯದಿಂದ ಸಹಾಯ ಮಾಡಲು ಯಾರು ಮುಂದಾಗುತ್ತಿಲ್ಲ. ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿನ ಈ ಹೃದಯವಿದ್ರಾವಕ ಘಟನೆಯನ್ನು ದಾರಿಹೋಗನೊಬ್ಬ ಫೋಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾನೆ. ಅಮೃತ್‌ ತನ್ನ ಸ್ನೇಹಿತರ ತೊಡೆಮೇಲೆ ಮೃತಪಟ್ಟಿದ್ದಾನೆಂಬ ಈ ಫೋಟೊ ವೈರಲ್‌ ಆಗಿದೆ. ಆದರೆ ಕೊನೆಗೂ ಆಸ್ಪತ್ರೆಗೆ ದಾಖಲಾದ ಕೆಲವೇ ಗಂಟೆಗಳಲ್ಲಿ ತೀವ್ರ ಅನಾರೋಗ್ಯ, ಬಿಸಿಲಿನ ಝಳ ಮತ್ತು ಪ್ರಯಾಣದ ಆಯಾಸದಿಂದ ಅಮೃತ್‌ ಕೊನೆಯುಸಿರೆಳೆದಿದ್ದಾನೆ.

ಗುಜರಾತ್‌ನಿಂದ ತಮ್ಮ ಊರು ಉತ್ತರಪ್ರದೇಶಕ್ಕೆ ಹೊರಟ ವಲಸೆ ಕಾರ್ಮಿಕರ ಕಣ್ಣೀರ ಕತೆ ಇದು. ಸೂರತ್‌ನ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಈ ಸ್ನೇಹಿತರಿಬ್ಬರು ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ ಇನ್ನು ಸಾಕು ಎಂದು ಎಲ್ಲರಂತೆ ತಮ್ಮ ಊರಿಗೆ ವಾಪಸ್‌ ಹೊರಟಿದ್ದಾರೆ. ತಲಾ 4000 ರೂ ನೀಡಿ ಈಗಾಗಲೇ ತುಂಬಿಹೋಗಿದ್ದ ಟ್ರಕ್‌ವೊಂದರಲ್ಲಿ ನಿಂತುಕೊಂಡು ಹೋಗಲು ಅವಕಾಶ ಪಡೆದ ಇವರು ಪ್ರಯಾಣ ಹೊರಟಿದ್ದಾರೆ. ಈ ಮಧ್ಯೆ ಅಮೃತ್‌ಗೆ ತೀವ್ರ ಜ್ವರ ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಪ್ರಯಾಣ ಮುಂದುವರೆಸಲಾಗದೇ ಮಧ್ಯಪ್ರದೇಶದ ಶಿವಪುರಿಯಲ್ಲಿ ಇಳಿದುಕೊಂಡಿದ್ದಾನೆ. ಆಗ ಆತನ ಜೊತೆಗೆ ನಿಂತ ಏಕೈಕ ವ್ಯಕ್ತಿ ಆತನ ಸ್ನೇಹಿತ ಯಾಕೂಬ್‌.

ವೈರಲ್‌ ಚಿತ್ರದಲ್ಲಿ ಯಾಕೂಬ್‌ ತನ್ನ ಸ್ನೇಹಿತ ಅಮೃತ್‌ನಲ್ಲಿ ತೊಡಮೇಲೆ ಮಲಗಿಸಿಕೊಂಡು ಸಹಾಯಕ್ಕಾಗಿ ಮನವಿ ಮಾಡುತ್ತಿದ್ದಾನೆ. ಯಾರೂ ಅತ್ತ ಸುಳಿಯುತ್ತಿಲ್ಲ. ಅಮೃತ್‌ ತೀವ್ರ ಜ್ವರ ಮತ್ತು ವಾಂತಿಯಿಂದ ಸೊರಗಿದ್ದಾನೆ. ಆತನನ್ನು ಶಿವಪುರಿಯ ಆಸ್ಪತ್ರೆಗೆ ಸೇರಿಸಿದರೂ ಬದುಕುಳಿದಿಲ್ಲ. ಆತನ ಮತ್ತು ಯಾಕೂಬ್‌ ಇಬ್ಬರ ಮಾದರಿಗಳನ್ನು ಕೊರೊನಾ ಪರೀಕ್ಷೆಗೆ ಕಳಿಸಿದ್ದು ವರದಿಗಾಗಿ ಕಾಯಲಾಗುತ್ತಿದೆ. ಯಾಕೂಬ್‌ನನ್ನು ಶಿವಪುರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ ಎಂದು ಸರ್ಜನ್ ಪಿ.ಕೆ ಖಾರೆ ತಿಳಿಸಿದ್ದಾರೆ.

ಲಕ್ಷಾಂತರ ವಲಸೆ ಕಾರ್ಮಿಕರು ತಾವಿದ್ದ ಸ್ಥಳ ತೊರೆದು ತಮ್ಮ ಮೂಲ ಸ್ಥಳಗಳಿಗೆ ನಡೆದುಕೊಂಡೇ ತೆರಳುತ್ತಿರುವ ಹಲವಾರು ಚಿತ್ರಗಳು ದಿನನಿತ್ಯ ಕಾಣಸಿಗುತ್ತಿವೆ. ಈಗಾಗಲೇ ಹಲವಾರು ಮಂದಿ ಈ ನಡಿಗೆಯಲ್ಲಿ ಪ್ರಾಣತೆತ್ತಿದ್ದಾರೆ. ಅವರ ಗುಂಪಿಗೆ ಅಮೃತ್‌ ಹೊಸ ಸೇರ್ಪಡೆಯಾಗಿದ್ದಾನೆ. ಇವರೆಲ್ಲರಿಗೆ ಸೂಕ್ತ ಪ್ರಯಾಣ ವ್ಯವಸ್ಥೆ ಮಾಡಲು ಆಳುವ ಸರ್ಕಾರಗಳು ಸಂರ್ಪೂಣವಾಗಿ ವಿಫಲವಾಗಿವೆ.

ಈ ಕುರಿತು ಸುಪ್ರೀಂ ಕೋರ್ಟ್‌‌ನಲ್ಲಿ ಸಾಮಾಜಿಕ ಕಾರ್ಯಕರ್ತರು ಅರ್ಜಿ ಸಲ್ಲಿಸಿ “ನಡೆಯುತ್ತಿರುವ ವಲಸೆ ಕಾರ್ಮಿರಿಗೆ ಊಟ ಮತ್ತು ವಸತಿಯ ವ್ಯವಸ್ಥೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡಬೇಕು” ಎಂದು ವಾದಿಸಿದ್ದಾರೆ. ಆದರೆ ಸುಪ್ರೀಂ ಕೋರ್ಟ್‌ ಮಾತ್ರ ಯಾರು ನಡೆಯುತ್ತಿದ್ದಾರೆ, ಯಾರು ನಡೆಯುತ್ತಿಲ್ಲ ಎಂದು ತಿಳಿಯಲು ಮತ್ತು ತಡೆಯಲು ಸಾಧ್ಯವಿಲ್ಲ. ಈ ಕುರಿತು ಸರ್ಕಾರಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ಅದನ್ನು ರಾಜ್ಯಗಳು ನಿರ್ಧರಿಸಲಿ ಎಂದು ಹೇಳಿ ಕೈತೊಳೆದಕೊಂಡಿದೆ.


ಇದನ್ನೂ ಓದಿ: ಆತ್ಮಕ್ಕೆ ಬರ ಬಿದ್ದ ಆಡಳಿತದಲ್ಲಿ ಕೊರೊನಾ ಜೊತೆ ಬದುಕುವುದಾ ಕಲಿಯಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...