Homeಕರ್ನಾಟಕಮಾಜಿ ಪ್ರೇಯಸಿಗೆ ಅಶ್ಲೀಲ ಸಂದೇಶ; ಯುವಕನ ಬಟ್ಟೆ ಕಳಚಿ ರಾಡ್‌ನಿಂದ ಥಳಿಸಿದ ಗುಂಪು

ಮಾಜಿ ಪ್ರೇಯಸಿಗೆ ಅಶ್ಲೀಲ ಸಂದೇಶ; ಯುವಕನ ಬಟ್ಟೆ ಕಳಚಿ ರಾಡ್‌ನಿಂದ ಥಳಿಸಿದ ಗುಂಪು

- Advertisement -
- Advertisement -

ಬೆಂಗಳೂರಿನ ಹೊರವಲಯದ ಸೋಲದೇವನಹಳ್ಳಿ ಬಳಿಯಲ್ಲಿ ಕುಶಾಲ್ ಎಂಬ ಯುವಕನನ್ನು 8-10 ಜನರ ಗುಂಪು ಅಪಹರಿಸಿ ಅಮಾನವೀಯವಾಗಿ ಹಲ್ಲೆ ನಡೆಸಿರುವ ವಿಡಯೊ ವೈರಲ್ ಆಗಿದೆ. ಮಾಜಿ ಗೆಳತಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಕ್ಕೆ ಅವರ ಬೆತ್ತಲೆಗೊಳಿಸಿ ಥಳಿಸಿದ್ದಾರೆ ಎಂದು ವರದಿಯಾಗಿದೆ.

ಯುವಕರ ಗುಂಪು ಕುಶಾಲ್‌ನನ್ನು ವಿವಸ್ತ್ರಗೊಳಿಸಿ, ರಾಡ್‌ ಮತ್ತು ದೊಣ್ಣೆ ಬಳಸಿ ಆತನ ಖಾಸಗಿ ಭಾಗಗಳಿಗೆ ಹೊಡೆದು, ಸಂಪೂರ್ಣ ಹಲ್ಲೆಯನ್ನು ವೀಡಿಯೊದಲ್ಲಿ ದಾಖಲಿಸಿದ್ದಾರೆ.

ಮಾಜಿ ಪ್ರೇಯಸಿಗೆ ಸಂದೇಶ ಕಳುಹಿಸಿದ ವಿವಾದದಿಂದಾಗಿ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಎರಡು ವರ್ಷಗಳಿಗೂ ಹೆಚ್ಚು ಕಾಲ ಸಂಬಂಧದಲ್ಲಿದ್ದ ಕುಶಾಲ್‌ನ ಗೆಳತಿ ಇತ್ತೀಚೆಗೆ ಆತನಿಂದ ಬೇರ್ಪಟ್ಟಿ, ಇನ್ನೊಬ್ಬ ಹುಡುಗನೊಂದಿಗೆ ಹತ್ತಿರವಾಗಿದ್ದಳು ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡಿದ್ದ ಕುಶಾಲ್ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ.

ಪೊಲೀಸರ ಪ್ರಕಾರ, ಈ ಹಲ್ಲೆಯನ್ನು ಮಹಿಳೆಯ ಹಾಲಿ ಗೆಳೆಯ ಮತ್ತು ಅವನ ಸಹಚರರು ಸಂಚು ರೂಪಿಸಿ ನಡೆಸಿದ್ದಾರೆ. ಕುಶಾಲ್‌ನ ಸಂದೇಶ ಕಳುಹಿಸಿದ ನಂತರ ದಾಳಿಗೆ ಸಂಚು ರೂಪಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳು ವಿವಾದವನ್ನು ಪರಿಹರಿಸುವ ನೆಪದಲ್ಲಿ ಆತನನ್ನು ಕರೆಸಿ, ಕಾರಿನಲ್ಲಿ ಅಪಹರಿಸಿ, ಕೆರೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಆತನ ಖಾಸಗಿ ಭಾಗಗಳನ್ನು ಗುರಿಯಾಗಿಸಿಕೊಂಡು ಆತನನ್ನು ವಿವಸ್ತ್ರಗೊಳಿಸಿ ಥಳಿಸಿದ್ದಾರೆ; ಘಟನೆಯನ್ನು ಚಿತ್ರೀಕರಿಸಿದ್ದಾರೆ.

ಹಲ್ಲೆಯ ವೀಡಿಯೊದಲ್ಲಿ, ಆರೋಪಿಗಯೋರ್ವ ರೇಣುಕಸ್ವಾಮಿ ಕೊಲೆ ಪ್ರಕರಣವನ್ನು ಉಲ್ಲೇಖಿಸಿದ್ದಾನೆ. “ಇದು ಆ ಪ್ರಕರಣದಂತೆಯೇ ಆಗುತ್ತದೆ” ಎಂದು ಹೇಳುತ್ತಿರುವುದು ಕಂಡುಬರುತ್ತದೆ. ಆರೋಪಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ದೃಶ್ಯಾವಳಿಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಸೋಲದೇವನಹಳ್ಳಿ ಪೊಲೀಸರು ಹೇಮಂತ್, ಯಶವಂತ್, ಶಿವಶಂಕರ್ ಮತ್ತು ಶಶಾಂಕ್ ಗೌಡ ಎಂದು ಗುರುತಿಸಲಾದ ನಾಲ್ವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಇತರ ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಘಟನೆಯು ಕನ್ನಡ ನಟ ದರ್ಶನ್ ಒಳಗೊಂಡ 2024 ರ ಹೈ ಪ್ರೊಫೈಲ್ ಕೊಲೆ ಪ್ರಕರಣಕ್ಕೆ ಹೋಲಿಕೆಯಾಗಿದೆ. ಚಿತ್ರದುರ್ಗದ 33 ವರ್ಷದ ರೇಣುಕಸ್ವಾಮಿ ಬೆಂಗಳೂರಿನ ಸುಮನಹಳ್ಳಿಯ ಚರಂಡಿ ಬಳಿ ಬಹು ಗಾಯಗಳೊಂದಿಗೆ ಮೃತಪಟ್ಟಿರುವುದು ಪತ್ತೆಯಾಗಿತ್ತು. ದರ್ಶನ್ ಜೊತೆ ಸಂಪರ್ಕ ಹೊಂದಿರುವ ನಟಿ ಪವಿತ್ರಾ ಗೌಡಗೆ ಆತ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ. ಇದು ಆತನ ಅಪಹರಣ, ಚಿತ್ರಹಿಂಸೆ ಮತ್ತು ಕೊಲೆಗೆ ಕಾರಣವಾಯಿತು ಎಂದು ಆರೋಪಿಸಲಾಗಿದೆ.

ಹಣಕಾಸಿನ ವಿವಾದವನ್ನು ಉಲ್ಲೇಖಿಸಿ ನಾಲ್ವರು ಆರಂಭದಲ್ಲಿ ಪೊಲೀಸರಿಗೆ ಶರಣಾದರು. ಆದರೆ, ಅವರ ಹೇಳಿಕೆಗಳಲ್ಲಿನ ಭೀನ್ನತಯು ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರ 15 ಜನರನ್ನು ಒಳಗೊಂಡ ದೊಡ್ಡ ಪಿತೂರಿಯನ್ನು ಬಹಿರಂಗಪಡಿಸಿತು. ಕೊಲೆಯಲ್ಲಿ ಪಾತ್ರ ವಹಿಸಿದ್ದಕ್ಕಾಗಿ ದರ್ಶನ್ ಅವರನ್ನು ಜೂನ್ 11, 2024 ರಂದು ಬಂಧಿಸಲಾಯಿತು. ಇದೀಗ ಜಾಮೀನಿನ ಮೇಲೆ ಆರೋಪಿಗಳೆಲ್ಲರೂ ಹೊರಗಿದ್ದಾರೆ.

ಒಬಿಸಿ ಸಲಹಾ ಮಂಡಳಿ ಸದಸ್ಯರಲ್ಲಿ ಸಿದ್ದರಾಮಯ್ಯ ಕೂಡಾ ಒಬ್ಬರು: ಸಿಎಂ ಕಚೇರಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...