Homeಕರ್ನಾಟಕಮಾಜಿ ಪ್ರೇಯಸಿಗೆ ಅಶ್ಲೀಲ ಸಂದೇಶ; ಯುವಕನ ಬಟ್ಟೆ ಕಳಚಿ ರಾಡ್‌ನಿಂದ ಥಳಿಸಿದ ಗುಂಪು

ಮಾಜಿ ಪ್ರೇಯಸಿಗೆ ಅಶ್ಲೀಲ ಸಂದೇಶ; ಯುವಕನ ಬಟ್ಟೆ ಕಳಚಿ ರಾಡ್‌ನಿಂದ ಥಳಿಸಿದ ಗುಂಪು

- Advertisement -
- Advertisement -

ಬೆಂಗಳೂರಿನ ಹೊರವಲಯದ ಸೋಲದೇವನಹಳ್ಳಿ ಬಳಿಯಲ್ಲಿ ಕುಶಾಲ್ ಎಂಬ ಯುವಕನನ್ನು 8-10 ಜನರ ಗುಂಪು ಅಪಹರಿಸಿ ಅಮಾನವೀಯವಾಗಿ ಹಲ್ಲೆ ನಡೆಸಿರುವ ವಿಡಯೊ ವೈರಲ್ ಆಗಿದೆ. ಮಾಜಿ ಗೆಳತಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಕ್ಕೆ ಅವರ ಬೆತ್ತಲೆಗೊಳಿಸಿ ಥಳಿಸಿದ್ದಾರೆ ಎಂದು ವರದಿಯಾಗಿದೆ.

ಯುವಕರ ಗುಂಪು ಕುಶಾಲ್‌ನನ್ನು ವಿವಸ್ತ್ರಗೊಳಿಸಿ, ರಾಡ್‌ ಮತ್ತು ದೊಣ್ಣೆ ಬಳಸಿ ಆತನ ಖಾಸಗಿ ಭಾಗಗಳಿಗೆ ಹೊಡೆದು, ಸಂಪೂರ್ಣ ಹಲ್ಲೆಯನ್ನು ವೀಡಿಯೊದಲ್ಲಿ ದಾಖಲಿಸಿದ್ದಾರೆ.

ಮಾಜಿ ಪ್ರೇಯಸಿಗೆ ಸಂದೇಶ ಕಳುಹಿಸಿದ ವಿವಾದದಿಂದಾಗಿ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಎರಡು ವರ್ಷಗಳಿಗೂ ಹೆಚ್ಚು ಕಾಲ ಸಂಬಂಧದಲ್ಲಿದ್ದ ಕುಶಾಲ್‌ನ ಗೆಳತಿ ಇತ್ತೀಚೆಗೆ ಆತನಿಂದ ಬೇರ್ಪಟ್ಟಿ, ಇನ್ನೊಬ್ಬ ಹುಡುಗನೊಂದಿಗೆ ಹತ್ತಿರವಾಗಿದ್ದಳು ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡಿದ್ದ ಕುಶಾಲ್ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ.

ಪೊಲೀಸರ ಪ್ರಕಾರ, ಈ ಹಲ್ಲೆಯನ್ನು ಮಹಿಳೆಯ ಹಾಲಿ ಗೆಳೆಯ ಮತ್ತು ಅವನ ಸಹಚರರು ಸಂಚು ರೂಪಿಸಿ ನಡೆಸಿದ್ದಾರೆ. ಕುಶಾಲ್‌ನ ಸಂದೇಶ ಕಳುಹಿಸಿದ ನಂತರ ದಾಳಿಗೆ ಸಂಚು ರೂಪಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳು ವಿವಾದವನ್ನು ಪರಿಹರಿಸುವ ನೆಪದಲ್ಲಿ ಆತನನ್ನು ಕರೆಸಿ, ಕಾರಿನಲ್ಲಿ ಅಪಹರಿಸಿ, ಕೆರೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಆತನ ಖಾಸಗಿ ಭಾಗಗಳನ್ನು ಗುರಿಯಾಗಿಸಿಕೊಂಡು ಆತನನ್ನು ವಿವಸ್ತ್ರಗೊಳಿಸಿ ಥಳಿಸಿದ್ದಾರೆ; ಘಟನೆಯನ್ನು ಚಿತ್ರೀಕರಿಸಿದ್ದಾರೆ.

ಹಲ್ಲೆಯ ವೀಡಿಯೊದಲ್ಲಿ, ಆರೋಪಿಗಯೋರ್ವ ರೇಣುಕಸ್ವಾಮಿ ಕೊಲೆ ಪ್ರಕರಣವನ್ನು ಉಲ್ಲೇಖಿಸಿದ್ದಾನೆ. “ಇದು ಆ ಪ್ರಕರಣದಂತೆಯೇ ಆಗುತ್ತದೆ” ಎಂದು ಹೇಳುತ್ತಿರುವುದು ಕಂಡುಬರುತ್ತದೆ. ಆರೋಪಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ದೃಶ್ಯಾವಳಿಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಸೋಲದೇವನಹಳ್ಳಿ ಪೊಲೀಸರು ಹೇಮಂತ್, ಯಶವಂತ್, ಶಿವಶಂಕರ್ ಮತ್ತು ಶಶಾಂಕ್ ಗೌಡ ಎಂದು ಗುರುತಿಸಲಾದ ನಾಲ್ವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಇತರ ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಘಟನೆಯು ಕನ್ನಡ ನಟ ದರ್ಶನ್ ಒಳಗೊಂಡ 2024 ರ ಹೈ ಪ್ರೊಫೈಲ್ ಕೊಲೆ ಪ್ರಕರಣಕ್ಕೆ ಹೋಲಿಕೆಯಾಗಿದೆ. ಚಿತ್ರದುರ್ಗದ 33 ವರ್ಷದ ರೇಣುಕಸ್ವಾಮಿ ಬೆಂಗಳೂರಿನ ಸುಮನಹಳ್ಳಿಯ ಚರಂಡಿ ಬಳಿ ಬಹು ಗಾಯಗಳೊಂದಿಗೆ ಮೃತಪಟ್ಟಿರುವುದು ಪತ್ತೆಯಾಗಿತ್ತು. ದರ್ಶನ್ ಜೊತೆ ಸಂಪರ್ಕ ಹೊಂದಿರುವ ನಟಿ ಪವಿತ್ರಾ ಗೌಡಗೆ ಆತ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ. ಇದು ಆತನ ಅಪಹರಣ, ಚಿತ್ರಹಿಂಸೆ ಮತ್ತು ಕೊಲೆಗೆ ಕಾರಣವಾಯಿತು ಎಂದು ಆರೋಪಿಸಲಾಗಿದೆ.

ಹಣಕಾಸಿನ ವಿವಾದವನ್ನು ಉಲ್ಲೇಖಿಸಿ ನಾಲ್ವರು ಆರಂಭದಲ್ಲಿ ಪೊಲೀಸರಿಗೆ ಶರಣಾದರು. ಆದರೆ, ಅವರ ಹೇಳಿಕೆಗಳಲ್ಲಿನ ಭೀನ್ನತಯು ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರ 15 ಜನರನ್ನು ಒಳಗೊಂಡ ದೊಡ್ಡ ಪಿತೂರಿಯನ್ನು ಬಹಿರಂಗಪಡಿಸಿತು. ಕೊಲೆಯಲ್ಲಿ ಪಾತ್ರ ವಹಿಸಿದ್ದಕ್ಕಾಗಿ ದರ್ಶನ್ ಅವರನ್ನು ಜೂನ್ 11, 2024 ರಂದು ಬಂಧಿಸಲಾಯಿತು. ಇದೀಗ ಜಾಮೀನಿನ ಮೇಲೆ ಆರೋಪಿಗಳೆಲ್ಲರೂ ಹೊರಗಿದ್ದಾರೆ.

ಒಬಿಸಿ ಸಲಹಾ ಮಂಡಳಿ ಸದಸ್ಯರಲ್ಲಿ ಸಿದ್ದರಾಮಯ್ಯ ಕೂಡಾ ಒಬ್ಬರು: ಸಿಎಂ ಕಚೇರಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...