Homeಮುಖಪುಟಬೈಕ್‌ನಲ್ಲಿ ಬಂದು ಯುವತಿಗೆ ಗುಂಡು ಹಾರಿಸಿ ಹತ್ಯೆ; ಮತ್ತಷ್ಟು ಹದಗೆಟ್ಟ ಯುಪಿ ಕಾನೂನು ಸುವ್ಯವಸ್ಥೆ

ಬೈಕ್‌ನಲ್ಲಿ ಬಂದು ಯುವತಿಗೆ ಗುಂಡು ಹಾರಿಸಿ ಹತ್ಯೆ; ಮತ್ತಷ್ಟು ಹದಗೆಟ್ಟ ಯುಪಿ ಕಾನೂನು ಸುವ್ಯವಸ್ಥೆ

- Advertisement -
- Advertisement -

ಉತ್ತರ ಪ್ರದೇಶದ ಜಲೌನ್‌ನಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು 21 ವರ್ಷದ ಕಾಲೇಜು ವಿದ್ಯಾರ್ಥಿಯನ್ನು ಸಾರ್ವಜನಿಕವಾಗಿ ಸೋಮವಾರ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ವಿದ್ಯಾರ್ಥಿನಿ ರೋಶನಿ ಅಹಿರ್ವಾರ್ ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.

ಇಬ್ಬರು ದಾಳಿಕೋರರನ್ನು ರಾಜ್ ಅಹಿರ್ವಾರ್ ಅಲಿಯಾಸ್ ಆತಿಶ್ ಮತ್ತು ರೋಹಿತ್ ಅಲಿಯಾಸ್ ಗೋವಿಂದ ಎಂದು ಪೊಲೀಸರು ಗುರುತಿಸಿದ್ದಾರೆ.

ರೋಶ್ನಿ ಅಹಿರ್ವಾರ್ ಅವರ ಪೋಷಕರು ನೀಡಿದ ದೂರಿನಲ್ಲಿ ರಾಜ್ ಅಹಿರ್ವಾರ್ ಎಂದು ಹೆಸರಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಇರಾಜ್ ರಾಜಾ ತಿಳಿಸಿದ್ದಾರೆ. ಆತನನ್ನು ಬಂಧಿಸಲಾಗಿದ್ದು, ರೋಹಿತ್ ತಲೆಮರೆಸಿಕೊಂಡಿದ್ದಾನೆ.

“ಆಕೆಯೊಂದಿಗೆ ರಿಲೇಷನ್‌ಶಿಪ್‌ನಲ್ಲಿದ್ದೆ. ಕೆಲವು ಭಿನ್ನಾಭಿಪ್ರಾಯಗಳಿಂದಾಗಿ ಯುವತಿಯು ಸಂಬಂಧವನ್ನು ಕಳೆದುಕೊಂಡಿದ್ದಳು” ಎಂದು ರಾಜಾ ಅಹಿರ್ವಾರ್‌ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

“ಅವನು ಮತ್ತೆ ಯುವತಿಯೊಂದಿಗೆ ಸಂಪರ್ಕದಲ್ಲಿರಲು ಪ್ರಯತ್ನಿಸುತ್ತಿದ್ದನು. ಆದರೆ ಆಕೆ ನಿರಾಕರಿಸಿದಳು. ಆರೋಪಿಗಳು ಕೋಪಗೊಂಡಿದ್ದು, ಈ ಸಂಚು ರೂಪಿಸಿ ಆಕೆಯನ್ನು ಕೊಂದಿದ್ದಾರೆ” ಎಂದು ವರದಿಯಾಗಿದೆ.

ಅಹಿರ್ವಾರ್ ತನ್ನ ಮೋಟರ್‌ಸೈಕಲ್‌ನ ನಂಬರ್ ಪ್ಲೇಟ್ ಅನ್ನು ಮೋಟರ್‌ನ ಕೆಳಗೆ ಬಚ್ಚಿಟ್ಟು, ಗುರುತನ್ನು ಮರೆಮಾಡಲು ತನ್ನ ಬಟ್ಟೆಗಳನ್ನು ಬೆಟ್ವಾ ನದಿಯಲ್ಲಿ ಎಸೆದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಾಕ್ಷಿಗಳನ್ನು ಸಂಗ್ರಹಿಸಲು ರಾಜ್ ಅಹಿರ್ವಾರ್‌ನನ್ನು ಪೊಲೀಸರು ಕರೆದೊಯ್ದಾಗ, ಆತ ಇನ್ಸ್‌ಪೆಕ್ಟರ್‌ನ ಪಿಸ್ತೂಲ್ ಕಸಿದುಕೊಂಡು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಪ್ರತಿಯಾಗಿ ನಡೆದ ಗುಂಡಿನ ದಾಳಿಯಲ್ಲಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಇದರ ಜೊತೆಗೆ ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಮತ್ತಷ್ಟು ಹದಗೆಟ್ಟಿದೆ ಎಂದು ಹಲವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಯುಪಿ ಸರ್ಕಾರದ ಬಯಕೆಯಂತೆ ಗ್ಯಾಂಗ್‌ಸ್ಟರ್ ಅತೀಕ್, ಅಶ್ರಫ್ ಶೂಟೌಟ್: ಟ್ವೀಟ್ ಮಾಡಿ, ಡಿಲೀಟ್ ಮಾಡಿದ ಬಿಜೆಪಿ ಸಂಸದ

ಈ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ ಕೂಡ ಆದಿತ್ಯನಾಥ್ ನೇತೃತ್ವದ ಸರ್ಕಾರವನ್ನು ಟೀಕಿಸಿದೆ. “ಗೋದಿ ಮಾಧ್ಯಮಳೆಂಬ ತೋಳುಗಳು ಮತ್ತು ಬಿಜೆಪಿಯವರು ಈ ಸಾವನ್ನು ಸಂಭ್ರಮಿಸುತ್ತಾರೆಯೇ?” ಎಂದು ಪ್ರಶ್ನಿಸಿದೆ.

ಶನಿವಾರ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಾಜಿ ಸಂಸದ ಅತೀಕ್ ಅಹ್ಮದ್ ಹತ್ಯೆಯನ್ನು ರಾಷ್ಟ್ರೀಯ ಜನತಾ ದಳ ಉಲ್ಲೇಖಿಸಿದೆ. ಗ್ಯಾಂಗ್‌ಸ್ಟರ್‌-ರಾಜಕಾರಣಿ ಅತೀಕ್‌ ಮತ್ತು ಅವರ ಸಹೋದರ ಅಶ್ರಫ್ ಅವರು ಪೊಲೀಸರ ಜೊತೆಯಲ್ಲಿದ್ದಾಗಲೇ ಗುಂಡಿಗೆ ತುತ್ತಾಗಿದ್ದರು. ಪತ್ರಕರ್ತರೂ ಸ್ಥಳದಲ್ಲಿ ಹಾಜರಿದ್ದರು. ಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೆಲವೇ ದಿನಗಳಲ್ಲಿ ಮತ್ತೊಂದು ಇಂತಹದ್ದೇ ಘಟನೆ ಯುಪಿಯಲ್ಲಿ ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಮತ್ತಷ್ಟು ಹದಗೆಟ್ಟಿದೆ ಎಂಬ ಕಟು ಟೀಕೆಗಳು ವ್ಯಕ್ತವಾಗುತ್ತಿವೆ.

ಅತೀಕ್‌ ಪ್ರಕರಣದ ಬಳಿಕ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ವಿಚಾರವಾಗಿ ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷಗಳ ನಡುವೆ ಭಾರೀ ಚರ್ಚೆ ನಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...