Homeಮುಖಪುಟಕೊರೊನಾ ಚಿಕಿತ್ಸೆ, ಲಸಿಕೆ ಪಡೆಯಲು ಆಧಾರ್‌ ಕಾರ್ಡ್ ಕಡ್ಡಾಯವಲ್ಲ- UIDAI

ಕೊರೊನಾ ಚಿಕಿತ್ಸೆ, ಲಸಿಕೆ ಪಡೆಯಲು ಆಧಾರ್‌ ಕಾರ್ಡ್ ಕಡ್ಡಾಯವಲ್ಲ- UIDAI

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ವೈರಸ್‌ಗೆ ಲಸಿಕೆ ನೀಡಲು, ಚಿಕಿತ್ಸೆಗೆ ದಾಖಲಿಸುವುದು ಸೇರಿದಂತೆ ಯಾವುದೇ ಕೊರೊನಾ ಸಂಬಂಧಿತ ಸೇವೆಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಶನಿವಾರ ಸ್ಪಷ್ಟಪಡಿಸಿದೆ.

ಕೊರೊನಾ ಲಸಿಕೆಗಳು ಮತ್ತು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದು ಆಸ್ಪತ್ರೆಗೆಗಳು ಚಿಕಿತ್ಸೆ ನೀಡಲು ನಿರಾಕರಿಸಿರುವ ಬಗ್ಗೆ ಕೆಲವು ಮಾಧ್ಯಮಗಳ ವರದಿ ನಂತರ ಪ್ರಾಧಿಕಾರ ಈ ಕುರಿತು ಸ್ಪಷ್ಟನೆ ನೀಡಿದೆ.

“ಒಬ್ಬರ ಬಳಿ ಆಧಾರ್ ಕಾರ್ಡ್‌ ಇಲ್ಲದಿದ್ದರೆ ಅಥವಾ ಕೆಲವು ಕಾರಣಗಳಿಂದಾಗಿ ಆಧಾರ್ ಆನ್‌ಲೈನ್ ಪರಿಶೀಲನೆ ಯಶಸ್ವಿಯಾಗದಿದ್ದರೆ, ಸಂಬಂಧಪಟ್ಟ ಸಂಸ್ಥೆಗಳು ’ಆಧಾರ್ ಕಾಯ್ದೆ, 2016 ರ ಸೆಕ್ಷನ್ 7’ ಮತ್ತು 19 ಡಿಸೆಂಬರ್ 2017 ರ ಕ್ಯಾಬಿನೆಟ್ ಸೆಕ್ರೆಟರಿಯಟ್ OM ಪ್ರಕಾರ ಸೇವೆಯನ್ನು ಒದಗಿಸಬೇಕಾಗುತ್ತದೆ ” ಎಂದು ಯುಐಡಿಎಐ ಹೇಳಿಕೆ ನೀಡಿದೆ.

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? ಎಂದು ಪ್ರಶ್ನಿಸಿ ಪೋಸ್ಟರ್‌, 17 FIR, 15 ಮಂದಿ ಬಂಧನ

ಲಸಿಕೆ ನೋಂದಣಿಗೆ ಅಗತ್ಯವಾದ ಫೋಟೋ-ಗುರುತಿನ ಚೀಟಿಗಳಲ್ಲಿ ಆಧಾರ್ ಕಾರ್ಡ್ ಕೂಡ ಒಂದು. ಆದರೆ ಆಧಾರ್ ಕಾರ್ಡ್ ಇಲ್ಲದಿದ್ದರೆ ಇನ್ನೂ ಹಲವಾರು ದಾಖಲೆಗಳಿವೆ. ಲಸಿಕೆ ನೋಂದಣಿಗೆ ಪ್ಯಾನ್ ಕಾರ್ಡ್, ಚಾಲನಾ ಪರವಾನಗಿ, ಸರ್ಕಾರದ ಆರೋಗ್ಯ ವಿಮೆ ಕಾರ್ಡ್, ಪಿಂಚಣಿ ದಾಖಲೆ ಸಹ ಮಾನ್ಯವೆಂದು ಪರಿಗಣಿಸಲಾಗಿದೆ.

ಆಧಾರ್ ಕಾರ್ಡ್ ಸೇರಿದಂತೆ ಯಾವುದೇ ನಿಗದಿತ ಗುರುತಿನ ಚೀಟಿಗಳನ್ನು ಹೊಂದಿರದವರಿಗೂ ಲಸಿಕೆ ನೀಡುವ ಬಗ್ಗೆ ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳಲ್ಲಿಯೂ ಸಹ ಒಪ್ಪಿಗೆ ನೀಡಲಾಗಿದೆ.

ಯಾವುದೇ ಅಗತ್ಯ ಸೇವೆಯನ್ನು ನಿರಾಕರಿಸುವ ನೆಪವಾಗಿ ಆಧಾರ್ ಅನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ಯುಐಡಿಎಐ ಹೇಳಿಕೆ ನೀಡಿದೆ.

“ಆಧಾರ್‌ಗಾಗಿ ಸುಸ್ಥಾಪಿತ exception handling mechanism (EHM) ಇದೆ. ಆಧಾರ್  ಇಲ್ಲದೆಯೂ ಪ್ರಯೋಜನಗಳು ಮತ್ತು ಸೇವೆಗಳನ್ನು ತಲುಪಿಸುವುದಕ್ಕೆ ಇದನ್ನು ಅನುಸರಿಸಬೇಕು. ಒಬ್ಬ ವ್ಯಕ್ತಿಯು ಕೆಲವು ಕಾರಣಗಳಿಗಾಗಿ ಆಧಾರ್ ಹೊಂದಿಲ್ಲದಿದ್ದರೆ, ಆಧಾರ್ ಕಾಯ್ದೆಯ ಪ್ರಕಾರ ಅಗತ್ಯ ಸೇವೆಗಳನ್ನು ಆತನಿಗೆ ನಿರಾಕರಿಸುವಂತಿಲ್ಲ “ಎಂದು ತಿಳಿಸಲಾಗಿದೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು: ಮೇ 26 ರಂದು ಕಪ್ಪು ದಿನ ಆಚರಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...