Homeಕರ್ನಾಟಕಆಧಾರ್-ಪಾನ್ ಕಾರ್ಡ್ ಲಿಂಕ್‌ ಗಡುವು ಜೂನ್ 30ರವರೆಗೆ ವಿಸ್ತರಣೆ: ಕೇಂದ್ರ ಹಣಕಾಸು ಇಲಾಖೆ

ಆಧಾರ್-ಪಾನ್ ಕಾರ್ಡ್ ಲಿಂಕ್‌ ಗಡುವು ಜೂನ್ 30ರವರೆಗೆ ವಿಸ್ತರಣೆ: ಕೇಂದ್ರ ಹಣಕಾಸು ಇಲಾಖೆ

- Advertisement -
- Advertisement -

ಆಧಾರ್-ಪಾನ್ ಕಾರ್ಡ್ ಲಿಂಕ್ ಮಾಡುವ ಕೊನೆಯ ದಿನಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.

ಈ ಬಗ್ಗೆ ಮಂಗಳವಾರ ಇಲಾಖೆಯು ಪ್ರಕಟಣೆ ಹೊರಡಿಸಿದ್ದು, ”ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನು ಒದಗಿಸುವ ಸಲುವಾಗಿ, ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30, 2023ಕ್ಕೆ ವಿಸ್ತರಿಸಲಾಗಿದೆ” ಎಂದು ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಪ್ರಸ್ತುತ ಇರುವ ಗಡುವು ಮಾರ್ಚ್‌ 31ಕ್ಕೆ ಅಂತ್ಯಗೊಳ್ಳಲಿದೆ. ಆದರೆ, ಇನ್ನೂ ಸಾಕಷ್ಟು ಜನರು ಪಾನ್‌ ಕಾರ್ಡ್‌ ಜೊತೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡಿಲ್ಲ ಹಾಗಾಗಿ ದಿನಾಂಕ ವಿಸ್ತರಣೆ ಮಾಡುವ ನಿರ್ಧಾರ ಮಾಡಲಾಗಿದೆ. ಆಧಾರ್‌ನೊಂದಿಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ಜುಲೈ 1 ರಿಂದ ನಿಷ್ಕ್ರಿಯಗೊಳ್ಳುತ್ತವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

“ಆಧಾರ್‌ನೊಂದಿಗೆ ಪಾನ್ ಲಿಂಕ್ ಮಾಡದೇ ಹೋದರೆ ಅಂತಹ ಪಾನ್‌ಗಳ ವಿರುದ್ಧ ಯಾವುದೇ ಮರುಪಾವತಿಯನ್ನು ಮಾಡಲಾಗುವುದಿಲ್ಲ. ಪಾನ್ ನಿಷ್ಕ್ರಿಯಗೊಳಿಸಲಾಗುತ್ತದೆ. ಆ ಪಾನ್‌ಗಳಿಗೆ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ ಮತ್ತು ಟಿಡಿಎಸ್‌ ಮತ್ತು ಟಿಸಿಎಸ್‌ಅನ್ನು ಹೆಚ್ಚಿನ ದರದಲ್ಲಿ ಕಡಿತಗೊಳಿಸಲಾಗುತ್ತದೆ” ಎಂದು ಹಣಕಾಸು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ಅಸ್ಸಾಂ, ಮೇಘಾಲಯ ಮತ್ತು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಇರುವವರು ಪ್ಯಾನ್​ ಕಾರ್ಡ್-ಆಧಾರ್ ಕಾರ್ಡ್​ ಲಿಂಕ್ ಮಾಡಬೇಕಂತಿಲ್ಲ.

ಆದಾಯ ತೆರಿಗೆ ಕಾಯ್ದೆ, 1961 ಅಡಿಯಲ್ಲಿ ನಾನ್‌ ರೆಸಿಡೆನ್ಟ್ (ಅನಿವಾಸಿಗಳು) ಮತ್ತು ಹಿಂದಿನ ವರ್ಷದಿಂದ ಯಾವುದೇ ಸಮಯದಲ್ಲಿ ಎಂಬತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಈ ಪ್ಯಾನ್​-ಆಧಾರ್​ ಕಾರ್ಡ್ ಲಿಂಕ್​ ಮಾಡದಿದ್ದರೂ ತೊಂದರೆಯಿಲ್ಲ.

ಆದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿದ 1 ಸಾವಿರ ರೂಪಾಯಿ ಶುಲ್ಕವನ್ನು ಪಾವತಿಸುವ ಮೂಲಕ ಪಾನ್‌ ಮತ್ತು ಆಧಾರ್ ಲಿಂಕ್ ಮಾಡುವುದನ್ನು ಪೂರ್ಣ ಮಾಡಬಹುದಾಗಿದೆ.

ಆಧಾರ್-ಪಾನ್ ಕಾರ್ಡ್ ಜೋಡಣೆ ಶುಲ್ಕವೆಂದು ಪ್ರತಿಯೊಬ್ಬರಿಂದ 1000 ರೂ ದಂಡ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರದ ಈ ಬಾಬತ್ತಿನಲ್ಲಿ ಬರೋಬ್ಬರಿ 4,000 ಕೋಟಿ ರೂಗಳಿಗೆ ಅಧಿಕ ಹಣ ಸಂಗ್ರಹಿಸಿರುವುದಾಗಿ ವರದಿಯಾಗಿದೆ.

ಇಲ್ಲಿಯವರೆಗೆ 51 ಕೋಟಿಗೂ ಹೆಚ್ಚು ಪ್ಯಾನ್‌ಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲಾಗಿದೆ ಎಂದು ಹೇಳಲಾಗಿದೆ. ಕೆಳಗಿನ ಲಿಂಕ್ https://eportal.incometax.gov.in/iec/foservices/#/pre-login/bl-link-aadhaar ಅನ್ನು ಪ್ರವೇಶಿಸುವ ಮೂಲಕ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಬಹುದು.

 ಆಧಾರ್-ಪಾನ್ ಹೇಗೆ ಲಿಂಕ್ ಮಾಡುವುದು?

ಆಧಾಯ ತೆರಿಗೆ ಇಲಾಖೆ ಇ-ಪೋರ್ಟಲ್‌ಗೆ ಭೇಟಿ ನೀಡಿ https://www.incometax.gov.in/iec/foportal/
ಎಡ ಭಾಗದಲ್ಲಿ ಕಾಣುವ Quick Linksನಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ.

ನಿಮ್ಮ 10 ಡಿಜಿಟ್‌ನ ಪ್ಯಾನ್ ಸಂಖ್ಯೆಯನ್ನು ನಮೂದಿಸಿ

ನಿಮ್ಮ 12 ಡಿಜಿಟ್‌ನ ಆಧಾರ್ ಸಂಖ್ಯೆಯನ್ನು ನಮೂದಿಸಿ

View Link Aadhaar Status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪ್ಯಾನ್ ಆಧಾರ್ ಲಿಂಕ್ ಆಗಿದೆಯೇ ಎಂದು ತಿಳಿಯಲಿದೆ.

ಎಡಬದಿಯಲ್ಲಿ Quick Liks ಕಾಣಿಸುತ್ತದೆ. ಅಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ

ನಿಮ್ಮ ಪಾನ್ ಮತ್ತು ಆಧಾರ್ ನಂಬರ್ ಅನ್ನು ನಮೂದಿಸಿ, ಬಳಿಕ View Link Aadhaar Status ಮೇಲೆ ಕ್ಲಿಕ್ ಮಾಡಿ.

ನಿಮ್ಮ ಆಧಾರ್ ಮತ್ತು ಪಾನ್ ಜೋಡಣೆ ಆಗಿದ್ದರೆ, “Your PAN is already linked to given Aadhaar” (ನಿಮ್ಮ ಪಾನ್ ಈಗಾಗಲೇ ಈ ಆಧಾರ್ ಜೊತೆ ಲಿಂಕ್ ಆಗಿದೆ) ಎಂಬಂತಹ ಸಂದೇಶ ಬರುತ್ತದೆ.

ಇನ್ನು, ಇನ್ಕಮ್ ಟ್ಯಾಕ್ಸ್ ಇ ಫೈಲಿಂಗ್ ಪೋರ್ಟಲ್​ಗೆ https://incometaxindiaefiling.gov.in/ ಹೋಗಿ ಅಲ್ಲಿ ನೀವು ಲಾಗಿನ್ ಆಗಬೇಕು. ಅಲ್ಲಿ ಲಿಂಕ್ ಆಧಾರ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ ಪರಿಶೀಲನೆ ನಡೆಸಬಹುದು.

ಪಾನ್ ಜೊತೆ ನಿಮ್ಮ ಆಧಾರ್ ಲಿಂಕ್ ಅಗಿದ್ದರೆ ಆಧಾರ್ ನಂಬರ್ ಕಾಣುತ್ತದೆ. ಇಲ್ಲದಿದ್ದರೆ ಲಿಂಕ್ ಆಧಾರ್ ಸ್ಟೇಟಸ್ ಕಾಣುತ್ತದೆ. ನೀವು ಆಧಾರ್ ಮತ್ತು ಪಾನ್  ಲಿಂಕ್ ಮಾಡಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...