Homeಕರ್ನಾಟಕಆಧಾರ್-ಪಾನ್ ಕಾರ್ಡ್ ಲಿಂಕ್‌ ಗಡುವು ಜೂನ್ 30ರವರೆಗೆ ವಿಸ್ತರಣೆ: ಕೇಂದ್ರ ಹಣಕಾಸು ಇಲಾಖೆ

ಆಧಾರ್-ಪಾನ್ ಕಾರ್ಡ್ ಲಿಂಕ್‌ ಗಡುವು ಜೂನ್ 30ರವರೆಗೆ ವಿಸ್ತರಣೆ: ಕೇಂದ್ರ ಹಣಕಾಸು ಇಲಾಖೆ

- Advertisement -
- Advertisement -

ಆಧಾರ್-ಪಾನ್ ಕಾರ್ಡ್ ಲಿಂಕ್ ಮಾಡುವ ಕೊನೆಯ ದಿನಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.

ಈ ಬಗ್ಗೆ ಮಂಗಳವಾರ ಇಲಾಖೆಯು ಪ್ರಕಟಣೆ ಹೊರಡಿಸಿದ್ದು, ”ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನು ಒದಗಿಸುವ ಸಲುವಾಗಿ, ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30, 2023ಕ್ಕೆ ವಿಸ್ತರಿಸಲಾಗಿದೆ” ಎಂದು ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಪ್ರಸ್ತುತ ಇರುವ ಗಡುವು ಮಾರ್ಚ್‌ 31ಕ್ಕೆ ಅಂತ್ಯಗೊಳ್ಳಲಿದೆ. ಆದರೆ, ಇನ್ನೂ ಸಾಕಷ್ಟು ಜನರು ಪಾನ್‌ ಕಾರ್ಡ್‌ ಜೊತೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡಿಲ್ಲ ಹಾಗಾಗಿ ದಿನಾಂಕ ವಿಸ್ತರಣೆ ಮಾಡುವ ನಿರ್ಧಾರ ಮಾಡಲಾಗಿದೆ. ಆಧಾರ್‌ನೊಂದಿಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ಜುಲೈ 1 ರಿಂದ ನಿಷ್ಕ್ರಿಯಗೊಳ್ಳುತ್ತವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

“ಆಧಾರ್‌ನೊಂದಿಗೆ ಪಾನ್ ಲಿಂಕ್ ಮಾಡದೇ ಹೋದರೆ ಅಂತಹ ಪಾನ್‌ಗಳ ವಿರುದ್ಧ ಯಾವುದೇ ಮರುಪಾವತಿಯನ್ನು ಮಾಡಲಾಗುವುದಿಲ್ಲ. ಪಾನ್ ನಿಷ್ಕ್ರಿಯಗೊಳಿಸಲಾಗುತ್ತದೆ. ಆ ಪಾನ್‌ಗಳಿಗೆ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ ಮತ್ತು ಟಿಡಿಎಸ್‌ ಮತ್ತು ಟಿಸಿಎಸ್‌ಅನ್ನು ಹೆಚ್ಚಿನ ದರದಲ್ಲಿ ಕಡಿತಗೊಳಿಸಲಾಗುತ್ತದೆ” ಎಂದು ಹಣಕಾಸು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ಅಸ್ಸಾಂ, ಮೇಘಾಲಯ ಮತ್ತು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಇರುವವರು ಪ್ಯಾನ್​ ಕಾರ್ಡ್-ಆಧಾರ್ ಕಾರ್ಡ್​ ಲಿಂಕ್ ಮಾಡಬೇಕಂತಿಲ್ಲ.

ಆದಾಯ ತೆರಿಗೆ ಕಾಯ್ದೆ, 1961 ಅಡಿಯಲ್ಲಿ ನಾನ್‌ ರೆಸಿಡೆನ್ಟ್ (ಅನಿವಾಸಿಗಳು) ಮತ್ತು ಹಿಂದಿನ ವರ್ಷದಿಂದ ಯಾವುದೇ ಸಮಯದಲ್ಲಿ ಎಂಬತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಈ ಪ್ಯಾನ್​-ಆಧಾರ್​ ಕಾರ್ಡ್ ಲಿಂಕ್​ ಮಾಡದಿದ್ದರೂ ತೊಂದರೆಯಿಲ್ಲ.

ಆದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿದ 1 ಸಾವಿರ ರೂಪಾಯಿ ಶುಲ್ಕವನ್ನು ಪಾವತಿಸುವ ಮೂಲಕ ಪಾನ್‌ ಮತ್ತು ಆಧಾರ್ ಲಿಂಕ್ ಮಾಡುವುದನ್ನು ಪೂರ್ಣ ಮಾಡಬಹುದಾಗಿದೆ.

ಆಧಾರ್-ಪಾನ್ ಕಾರ್ಡ್ ಜೋಡಣೆ ಶುಲ್ಕವೆಂದು ಪ್ರತಿಯೊಬ್ಬರಿಂದ 1000 ರೂ ದಂಡ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರದ ಈ ಬಾಬತ್ತಿನಲ್ಲಿ ಬರೋಬ್ಬರಿ 4,000 ಕೋಟಿ ರೂಗಳಿಗೆ ಅಧಿಕ ಹಣ ಸಂಗ್ರಹಿಸಿರುವುದಾಗಿ ವರದಿಯಾಗಿದೆ.

ಇಲ್ಲಿಯವರೆಗೆ 51 ಕೋಟಿಗೂ ಹೆಚ್ಚು ಪ್ಯಾನ್‌ಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲಾಗಿದೆ ಎಂದು ಹೇಳಲಾಗಿದೆ. ಕೆಳಗಿನ ಲಿಂಕ್ https://eportal.incometax.gov.in/iec/foservices/#/pre-login/bl-link-aadhaar ಅನ್ನು ಪ್ರವೇಶಿಸುವ ಮೂಲಕ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಬಹುದು.

 ಆಧಾರ್-ಪಾನ್ ಹೇಗೆ ಲಿಂಕ್ ಮಾಡುವುದು?

ಆಧಾಯ ತೆರಿಗೆ ಇಲಾಖೆ ಇ-ಪೋರ್ಟಲ್‌ಗೆ ಭೇಟಿ ನೀಡಿ https://www.incometax.gov.in/iec/foportal/
ಎಡ ಭಾಗದಲ್ಲಿ ಕಾಣುವ Quick Linksನಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ.

ನಿಮ್ಮ 10 ಡಿಜಿಟ್‌ನ ಪ್ಯಾನ್ ಸಂಖ್ಯೆಯನ್ನು ನಮೂದಿಸಿ

ನಿಮ್ಮ 12 ಡಿಜಿಟ್‌ನ ಆಧಾರ್ ಸಂಖ್ಯೆಯನ್ನು ನಮೂದಿಸಿ

View Link Aadhaar Status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪ್ಯಾನ್ ಆಧಾರ್ ಲಿಂಕ್ ಆಗಿದೆಯೇ ಎಂದು ತಿಳಿಯಲಿದೆ.

ಎಡಬದಿಯಲ್ಲಿ Quick Liks ಕಾಣಿಸುತ್ತದೆ. ಅಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ

ನಿಮ್ಮ ಪಾನ್ ಮತ್ತು ಆಧಾರ್ ನಂಬರ್ ಅನ್ನು ನಮೂದಿಸಿ, ಬಳಿಕ View Link Aadhaar Status ಮೇಲೆ ಕ್ಲಿಕ್ ಮಾಡಿ.

ನಿಮ್ಮ ಆಧಾರ್ ಮತ್ತು ಪಾನ್ ಜೋಡಣೆ ಆಗಿದ್ದರೆ, “Your PAN is already linked to given Aadhaar” (ನಿಮ್ಮ ಪಾನ್ ಈಗಾಗಲೇ ಈ ಆಧಾರ್ ಜೊತೆ ಲಿಂಕ್ ಆಗಿದೆ) ಎಂಬಂತಹ ಸಂದೇಶ ಬರುತ್ತದೆ.

ಇನ್ನು, ಇನ್ಕಮ್ ಟ್ಯಾಕ್ಸ್ ಇ ಫೈಲಿಂಗ್ ಪೋರ್ಟಲ್​ಗೆ https://incometaxindiaefiling.gov.in/ ಹೋಗಿ ಅಲ್ಲಿ ನೀವು ಲಾಗಿನ್ ಆಗಬೇಕು. ಅಲ್ಲಿ ಲಿಂಕ್ ಆಧಾರ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ ಪರಿಶೀಲನೆ ನಡೆಸಬಹುದು.

ಪಾನ್ ಜೊತೆ ನಿಮ್ಮ ಆಧಾರ್ ಲಿಂಕ್ ಅಗಿದ್ದರೆ ಆಧಾರ್ ನಂಬರ್ ಕಾಣುತ್ತದೆ. ಇಲ್ಲದಿದ್ದರೆ ಲಿಂಕ್ ಆಧಾರ್ ಸ್ಟೇಟಸ್ ಕಾಣುತ್ತದೆ. ನೀವು ಆಧಾರ್ ಮತ್ತು ಪಾನ್  ಲಿಂಕ್ ಮಾಡಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...