Homeಕರ್ನಾಟಕಆಧಾರ್-ಪಾನ್ ಕಾರ್ಡ್ ಲಿಂಕ್‌ ಗಡುವು ಜೂನ್ 30ರವರೆಗೆ ವಿಸ್ತರಣೆ: ಕೇಂದ್ರ ಹಣಕಾಸು ಇಲಾಖೆ

ಆಧಾರ್-ಪಾನ್ ಕಾರ್ಡ್ ಲಿಂಕ್‌ ಗಡುವು ಜೂನ್ 30ರವರೆಗೆ ವಿಸ್ತರಣೆ: ಕೇಂದ್ರ ಹಣಕಾಸು ಇಲಾಖೆ

- Advertisement -
- Advertisement -

ಆಧಾರ್-ಪಾನ್ ಕಾರ್ಡ್ ಲಿಂಕ್ ಮಾಡುವ ಕೊನೆಯ ದಿನಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.

ಈ ಬಗ್ಗೆ ಮಂಗಳವಾರ ಇಲಾಖೆಯು ಪ್ರಕಟಣೆ ಹೊರಡಿಸಿದ್ದು, ”ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನು ಒದಗಿಸುವ ಸಲುವಾಗಿ, ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30, 2023ಕ್ಕೆ ವಿಸ್ತರಿಸಲಾಗಿದೆ” ಎಂದು ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಪ್ರಸ್ತುತ ಇರುವ ಗಡುವು ಮಾರ್ಚ್‌ 31ಕ್ಕೆ ಅಂತ್ಯಗೊಳ್ಳಲಿದೆ. ಆದರೆ, ಇನ್ನೂ ಸಾಕಷ್ಟು ಜನರು ಪಾನ್‌ ಕಾರ್ಡ್‌ ಜೊತೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡಿಲ್ಲ ಹಾಗಾಗಿ ದಿನಾಂಕ ವಿಸ್ತರಣೆ ಮಾಡುವ ನಿರ್ಧಾರ ಮಾಡಲಾಗಿದೆ. ಆಧಾರ್‌ನೊಂದಿಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ಜುಲೈ 1 ರಿಂದ ನಿಷ್ಕ್ರಿಯಗೊಳ್ಳುತ್ತವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

“ಆಧಾರ್‌ನೊಂದಿಗೆ ಪಾನ್ ಲಿಂಕ್ ಮಾಡದೇ ಹೋದರೆ ಅಂತಹ ಪಾನ್‌ಗಳ ವಿರುದ್ಧ ಯಾವುದೇ ಮರುಪಾವತಿಯನ್ನು ಮಾಡಲಾಗುವುದಿಲ್ಲ. ಪಾನ್ ನಿಷ್ಕ್ರಿಯಗೊಳಿಸಲಾಗುತ್ತದೆ. ಆ ಪಾನ್‌ಗಳಿಗೆ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ ಮತ್ತು ಟಿಡಿಎಸ್‌ ಮತ್ತು ಟಿಸಿಎಸ್‌ಅನ್ನು ಹೆಚ್ಚಿನ ದರದಲ್ಲಿ ಕಡಿತಗೊಳಿಸಲಾಗುತ್ತದೆ” ಎಂದು ಹಣಕಾಸು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ಅಸ್ಸಾಂ, ಮೇಘಾಲಯ ಮತ್ತು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಇರುವವರು ಪ್ಯಾನ್​ ಕಾರ್ಡ್-ಆಧಾರ್ ಕಾರ್ಡ್​ ಲಿಂಕ್ ಮಾಡಬೇಕಂತಿಲ್ಲ.

ಆದಾಯ ತೆರಿಗೆ ಕಾಯ್ದೆ, 1961 ಅಡಿಯಲ್ಲಿ ನಾನ್‌ ರೆಸಿಡೆನ್ಟ್ (ಅನಿವಾಸಿಗಳು) ಮತ್ತು ಹಿಂದಿನ ವರ್ಷದಿಂದ ಯಾವುದೇ ಸಮಯದಲ್ಲಿ ಎಂಬತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಈ ಪ್ಯಾನ್​-ಆಧಾರ್​ ಕಾರ್ಡ್ ಲಿಂಕ್​ ಮಾಡದಿದ್ದರೂ ತೊಂದರೆಯಿಲ್ಲ.

ಆದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿದ 1 ಸಾವಿರ ರೂಪಾಯಿ ಶುಲ್ಕವನ್ನು ಪಾವತಿಸುವ ಮೂಲಕ ಪಾನ್‌ ಮತ್ತು ಆಧಾರ್ ಲಿಂಕ್ ಮಾಡುವುದನ್ನು ಪೂರ್ಣ ಮಾಡಬಹುದಾಗಿದೆ.

ಆಧಾರ್-ಪಾನ್ ಕಾರ್ಡ್ ಜೋಡಣೆ ಶುಲ್ಕವೆಂದು ಪ್ರತಿಯೊಬ್ಬರಿಂದ 1000 ರೂ ದಂಡ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರದ ಈ ಬಾಬತ್ತಿನಲ್ಲಿ ಬರೋಬ್ಬರಿ 4,000 ಕೋಟಿ ರೂಗಳಿಗೆ ಅಧಿಕ ಹಣ ಸಂಗ್ರಹಿಸಿರುವುದಾಗಿ ವರದಿಯಾಗಿದೆ.

ಇಲ್ಲಿಯವರೆಗೆ 51 ಕೋಟಿಗೂ ಹೆಚ್ಚು ಪ್ಯಾನ್‌ಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲಾಗಿದೆ ಎಂದು ಹೇಳಲಾಗಿದೆ. ಕೆಳಗಿನ ಲಿಂಕ್ https://eportal.incometax.gov.in/iec/foservices/#/pre-login/bl-link-aadhaar ಅನ್ನು ಪ್ರವೇಶಿಸುವ ಮೂಲಕ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಬಹುದು.

 ಆಧಾರ್-ಪಾನ್ ಹೇಗೆ ಲಿಂಕ್ ಮಾಡುವುದು?

ಆಧಾಯ ತೆರಿಗೆ ಇಲಾಖೆ ಇ-ಪೋರ್ಟಲ್‌ಗೆ ಭೇಟಿ ನೀಡಿ https://www.incometax.gov.in/iec/foportal/
ಎಡ ಭಾಗದಲ್ಲಿ ಕಾಣುವ Quick Linksನಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ.

ನಿಮ್ಮ 10 ಡಿಜಿಟ್‌ನ ಪ್ಯಾನ್ ಸಂಖ್ಯೆಯನ್ನು ನಮೂದಿಸಿ

ನಿಮ್ಮ 12 ಡಿಜಿಟ್‌ನ ಆಧಾರ್ ಸಂಖ್ಯೆಯನ್ನು ನಮೂದಿಸಿ

View Link Aadhaar Status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪ್ಯಾನ್ ಆಧಾರ್ ಲಿಂಕ್ ಆಗಿದೆಯೇ ಎಂದು ತಿಳಿಯಲಿದೆ.

ಎಡಬದಿಯಲ್ಲಿ Quick Liks ಕಾಣಿಸುತ್ತದೆ. ಅಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ

ನಿಮ್ಮ ಪಾನ್ ಮತ್ತು ಆಧಾರ್ ನಂಬರ್ ಅನ್ನು ನಮೂದಿಸಿ, ಬಳಿಕ View Link Aadhaar Status ಮೇಲೆ ಕ್ಲಿಕ್ ಮಾಡಿ.

ನಿಮ್ಮ ಆಧಾರ್ ಮತ್ತು ಪಾನ್ ಜೋಡಣೆ ಆಗಿದ್ದರೆ, “Your PAN is already linked to given Aadhaar” (ನಿಮ್ಮ ಪಾನ್ ಈಗಾಗಲೇ ಈ ಆಧಾರ್ ಜೊತೆ ಲಿಂಕ್ ಆಗಿದೆ) ಎಂಬಂತಹ ಸಂದೇಶ ಬರುತ್ತದೆ.

ಇನ್ನು, ಇನ್ಕಮ್ ಟ್ಯಾಕ್ಸ್ ಇ ಫೈಲಿಂಗ್ ಪೋರ್ಟಲ್​ಗೆ https://incometaxindiaefiling.gov.in/ ಹೋಗಿ ಅಲ್ಲಿ ನೀವು ಲಾಗಿನ್ ಆಗಬೇಕು. ಅಲ್ಲಿ ಲಿಂಕ್ ಆಧಾರ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ ಪರಿಶೀಲನೆ ನಡೆಸಬಹುದು.

ಪಾನ್ ಜೊತೆ ನಿಮ್ಮ ಆಧಾರ್ ಲಿಂಕ್ ಅಗಿದ್ದರೆ ಆಧಾರ್ ನಂಬರ್ ಕಾಣುತ್ತದೆ. ಇಲ್ಲದಿದ್ದರೆ ಲಿಂಕ್ ಆಧಾರ್ ಸ್ಟೇಟಸ್ ಕಾಣುತ್ತದೆ. ನೀವು ಆಧಾರ್ ಮತ್ತು ಪಾನ್  ಲಿಂಕ್ ಮಾಡಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....